HomeUncategorizedಬಾಲಿವುಡ್ ಡ್ರಗ್ ಮಾಫಿಯಾ: ಜಯಾ ಬಚ್ಚನ್ ವಿರುದ್ಧ ನೆಟ್ಟಿಗರ ಆಕ್ರೋಶ!

ಬಾಲಿವುಡ್ ಡ್ರಗ್ ಮಾಫಿಯಾ: ಜಯಾ ಬಚ್ಚನ್ ವಿರುದ್ಧ ನೆಟ್ಟಿಗರ ಆಕ್ರೋಶ!

ಸಾಮಾಜಿಕ ಜಾಲತಾಣಗಳಲ್ಲಿ ಮನರಂಜನಾ ಕ್ಷೇತ್ರವನ್ನು ಗುರಿಮಾಡಿಕೊಂಡು ಕಟುವಾಗಿ ದಾಳಿ ಮಾಡಲಾಗುತ್ತಿದೆ. ಇಂಥಹ ಸಂದರ್ಭದಲ್ಲಿ ಸರ್ಕಾರ ಸಿನಿಮಾ ಕ್ಷೇತ್ರದ ರಕ್ಷಣೆಗೆ ಮುಂದಾಗಬೇಕು- ಜಯಾ ಬಚ್ಚನ್

- Advertisement -
- Advertisement -

ಸಂಸತ್ತಿನಲ್ಲಿ ನಡೆಯುತ್ತಿರುವ ಮಾನ್ಸೂನ್ ಅಧಿವೇಶನದಲ್ಲಿ ಜಯಾ ಬಚ್ಚನ್, ಬಾಲಿವುಡ್ ಡ್ರಗ್ ಮಾಫಿಯಾಗೆ ಸಂಬಂಧಿಸಿದಂತೆ ನೀಡಿರುವ ಹೇಳಿಕೆಯನ್ನು ಖಂಡಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಲಿವುಡ್ ಅನ್ನು ಟೀಕಿಸುವವರ ವಿರುದ್ಧ ಮಂಗಳವಾರದ ಅಧಿವೇಶನದಲ್ಲಿ ಅವರು ಕಿಡಿಕಾರಿದ್ದರು.

“ಸಿನಿಮಾ ಕ್ಷೇತ್ರದಲ್ಲಿ ಮಾದಕವಸ್ತು ವ್ಯಸನದ ಸಮಸ್ಯೆ ಇದೆ” ಎಂದು ಬಿಜೆಪಿ ಸಂಸದ ಮತ್ತು ನಟ ರವಿ ಕಿಶನ್ ಆರೋಪಿಸಿದ್ದರು. ಇತ್ತೀಚೆಗೆ ಬಾಲಿವುಡ್ ಅನ್ನು ‘ಚರಂಡಿ’ಗೆ ಹೋಲಿಸಿ ಕಂಗನಾ ರಣಾವತ್ ಟೀಕಿಸಿದ್ದರು.

ಇದಕ್ಕೆ ಪ್ರತಿಕ್ರಿಯೆಯಾಗಿ ಜಯಾ ಬಚ್ಚನ್, “ಇದೇ ಕ್ಷೇತ್ರದಲ್ಲಿ ಇದ್ದು, ಹೆಸರು ಮಾಡಿರುವವರೂ ಸಹ ಈಗ ಈ ಕ್ಷೇತ್ರವನ್ನು ಚರಂಡಿ ಎನ್ನುತ್ತಿದ್ದಾರೆ. ಇನ್ನು, ಸಿನಿಮಾ ಕ್ಷೇತ್ರದಿಂದ ಬಂದು ಈಗ ಸಂಸದರಾಗಿರುವವರೊಬ್ಬರು ಇದರ ಬಗ್ಗೆ ಮಾತನಾಡಿದ್ದಾರೆ” ಎಂದು ಯಾರ ಹೆಸರನ್ನೂ ಹೇಳದೇ ತಿರುಗೇಟು ನೀಡಿದ್ದರು.

“ಸಿನಿಮಾ ಕ್ಷೇತ್ರವು ನಿತ್ಯ 5 ಲಕ್ಷ ಜನರಿಗೆ ನೇರ ಉದ್ಯೋಗ ನೀಡುತ್ತಿದೆ. ಪರೋಕ್ಷವಾಗಿ ಸುಮಾರು 50 ಲಕ್ಷ ಜನರಿಗೆ ಉದ್ಯೋಗವನ್ನು ನೀಡಿದೆ. ಈ ಸಾಂಕ್ರಾಮಿಕ ಪಿಡುಗಿನ ಕಾರಣದಿಂದಾಗಿ ಆರ್ಥಿಕ ಸಂಕಷ್ಟ ಎದುರಾಗಿದೆ. ಈ ಸಂದರ್ಭದಲ್ಲಿ ಜನರ ದಿಕ್ಕುತಪ್ಪಿಸಲು ಸಾಮಾಜಿಕ ಜಾಲತಾಣಗಳಲ್ಲಿ ಸಿನಿಮಾ ಕ್ಷೇತ್ರವನ್ನು ಟೀಕಿಸಲಾಗುತ್ತಿದೆ. ನಮಗೆ ಸರ್ಕಾರದ ಬೆಂಬಲವೂ ಸಿಗುತ್ತಿಲ್ಲ” ಎಂದು ಹೇಳಿದ್ದರು.

ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ನೋಟಿಸ್

ಜಯಾ ಬಚ್ಚನ್ ಅವರ ಈ ಹೇಳಿಕೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರವಾದ ವಿರೋಧ ವ್ಯಕ್ತವಾಗಿದ್ದು, #JayaBachchanShamlessLady ಎಂದು ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್ ಆಗುತ್ತಿದ್ದು, ಟ್ರೆಂಡಿಂಗ್‌ನಲ್ಲಿ 2ನೇ ಸ್ಥಾನದಲ್ಲಿದೆ. ಈ ವರದಿ ಬರೆಯುವ ವೇಳೆಗೆ ಸುಮಾರು 59 ಸಾವಿರ ಟ್ವೀಟ್‌ಗಳನ್ನು ಮಾಡಲಾಗಿದೆ.

 

ಜಯಾ ಬಚ್ಚನ್ ಅವರ ಈ ಹೇಳಿಕೆಯನ್ನು ಕಂಗನಾ ರಣಾವತ್ ಖಂಡಿಸಿ ಟ್ವೀಟ್ ಮಾಡಿದ್ದಾರೆ. “ಜಯಾ ಜೀ, ನನ್ನ ಜಾಗದಲ್ಲಿ ನಿಮ್ಮ ಮಗಳು ಇದ್ದಿದ್ದರೆ, ಆಗಲೂ ನಿಮ್ಮ ಅಭಿಪ್ರಾಯ ಇದೇ ಆಗಿರುತ್ತಿತ್ತೇ? ಅವಳು ಹದಿಹರೆಯದವಳಾಗಿದ್ದು, ಮದಕ ವ್ಯಸನಿಯಾಗಿ ಕಿರುಕುಳಕ್ಕೆ ಒಳಗಾಗಿದ್ದರೆ, ಅಭಿಷೇಕ್ ನಿರಂತರವಾಗಿ ಬೆದರಿಕೆ ಮತ್ತು ಕಿರುಕುಳದ ಬಗ್ಗೆ ಆರೋಪಿಸಿದ್ದರೆ? ಹಾಗೂ ಹಿಂದಿನ ದಿನ ನೇಣುಬಿಗಿದುಕೊಂಡಿದ್ದರೆ? ನೀವು ಆಗಲೂ ಇದೇ ಮಾತುಗಳನ್ನು ಹೇಳುವಿರಾ?” ಎಂದು ಟ್ವೀಟ್ ಮಾಡಿದ್ದಾರೆ.

ಆದರೆ, ಅಷ್ಟೇ ಜನರು ಜಯಾ ಅವರನ್ನು ಸಮರ್ಥಿಸಿಕೊಳ್ಳುವವರೂ ಇದ್ದಾರೆ. ಬಾಲಿವುಡ್‌ನ ಖ್ಯಾತ ನಟಿ ತಾಪ್ಸಿ ಪನ್ನು ಜಯಾ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡು, “ನಮ್ಮ ಸಿನಿಮಾ ಕ್ಷೇತ್ರದಿಂದ ಮತ್ತೊಬ್ಬ ಮಹಿಳೆ ದನಿಯೆತ್ತಿರುವುದಕ್ಕೆ ಶ್ಲಾಘಿಸಬೇಕು” ಎಂದು ಟ್ವೀಟ್ ಮಾಡಿದ್ದಾರೆ.

“ಜಯಾ ಅವರು ಸರಿಯಾಗಿಯೇ ಮಾತನಾಡಿದ್ದು, ಕೇವಲ ಒಂದೆರಡು ಪ್ರಕರಣಗಳನ್ನಿಟ್ಟುಕೊಂಡು ಇಡೀ ಉದ್ಯಮವನ್ನೇ ದೂರುವುದು ಸರಿಯಲ್ಲ” ಎಂಬ ಅಭಿಪ್ರಾಯವನ್ನು ಹೇಮಾ ಮಾಲಿನಿ, Producers Guild of India ಸೇರಿದಂತೆ ಬಾಲಿವುಡ್‌ನ ಹಲವರು ಜಯಾ ಬಚ್ಚನ್ ಅವರ ಪರವಾಗಿ ಟ್ವೀಟ್ ಮಾಡಿದ್ದಾರೆ.

ಮತ್ತೊಂದು ಕಡೆ, ಬಾಲಿವುಡ್ ಮೇಲೆ ನಡೆಯುತ್ತಿರುವ ಕಟುವಾದ ಟೀಕೆಗಳನ್ನು ಎದುರಿಸಿ, ಉದ್ಯಮದ ಪರವಾಗಿ ಅದರ ರಕ್ಷಣೆಗೆ ನಿಂತಿರುವುದು ಕೇವಲ ಮಹಿಳೆಯರು ಮಾತ್ರ! ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ. ಹೀಗೆ ದನಿಯೆತ್ತುವವರ ವಿರುದ್ಧ ಕಾಣದ ಕೈಗಳು ಕೆಲಸ ಮಾಡಿ, ಸಾಮಾಜಿಕ ಮಾದ್ಯಮಗಳಲ್ಲಿ ತೇಜೋವಧೆ ಮಾಡಲಾಗುತ್ತಿದೆ. ಆ ಮೂಲಕ ಅವರ ಎಂದು ಹಲವರು ಆರೋಪಿಸಿದ್ದಾರೆ.


ಇದನ್ನೂ ಓದಿ: ಡ್ರಗ್ಸ್ ಕೇಸ್: ನಟ ದಿಗಂತ್, ನಟಿ ಐಂದ್ರಿತಾಗೆ ಸಿಸಿಬಿ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...