HomeUncategorizedಬಾಲಿವುಡ್ ಡ್ರಗ್ ಮಾಫಿಯಾ: ಜಯಾ ಬಚ್ಚನ್ ವಿರುದ್ಧ ನೆಟ್ಟಿಗರ ಆಕ್ರೋಶ!

ಬಾಲಿವುಡ್ ಡ್ರಗ್ ಮಾಫಿಯಾ: ಜಯಾ ಬಚ್ಚನ್ ವಿರುದ್ಧ ನೆಟ್ಟಿಗರ ಆಕ್ರೋಶ!

ಸಾಮಾಜಿಕ ಜಾಲತಾಣಗಳಲ್ಲಿ ಮನರಂಜನಾ ಕ್ಷೇತ್ರವನ್ನು ಗುರಿಮಾಡಿಕೊಂಡು ಕಟುವಾಗಿ ದಾಳಿ ಮಾಡಲಾಗುತ್ತಿದೆ. ಇಂಥಹ ಸಂದರ್ಭದಲ್ಲಿ ಸರ್ಕಾರ ಸಿನಿಮಾ ಕ್ಷೇತ್ರದ ರಕ್ಷಣೆಗೆ ಮುಂದಾಗಬೇಕು- ಜಯಾ ಬಚ್ಚನ್

- Advertisement -
- Advertisement -

ಸಂಸತ್ತಿನಲ್ಲಿ ನಡೆಯುತ್ತಿರುವ ಮಾನ್ಸೂನ್ ಅಧಿವೇಶನದಲ್ಲಿ ಜಯಾ ಬಚ್ಚನ್, ಬಾಲಿವುಡ್ ಡ್ರಗ್ ಮಾಫಿಯಾಗೆ ಸಂಬಂಧಿಸಿದಂತೆ ನೀಡಿರುವ ಹೇಳಿಕೆಯನ್ನು ಖಂಡಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಲಿವುಡ್ ಅನ್ನು ಟೀಕಿಸುವವರ ವಿರುದ್ಧ ಮಂಗಳವಾರದ ಅಧಿವೇಶನದಲ್ಲಿ ಅವರು ಕಿಡಿಕಾರಿದ್ದರು.

“ಸಿನಿಮಾ ಕ್ಷೇತ್ರದಲ್ಲಿ ಮಾದಕವಸ್ತು ವ್ಯಸನದ ಸಮಸ್ಯೆ ಇದೆ” ಎಂದು ಬಿಜೆಪಿ ಸಂಸದ ಮತ್ತು ನಟ ರವಿ ಕಿಶನ್ ಆರೋಪಿಸಿದ್ದರು. ಇತ್ತೀಚೆಗೆ ಬಾಲಿವುಡ್ ಅನ್ನು ‘ಚರಂಡಿ’ಗೆ ಹೋಲಿಸಿ ಕಂಗನಾ ರಣಾವತ್ ಟೀಕಿಸಿದ್ದರು.

ಇದಕ್ಕೆ ಪ್ರತಿಕ್ರಿಯೆಯಾಗಿ ಜಯಾ ಬಚ್ಚನ್, “ಇದೇ ಕ್ಷೇತ್ರದಲ್ಲಿ ಇದ್ದು, ಹೆಸರು ಮಾಡಿರುವವರೂ ಸಹ ಈಗ ಈ ಕ್ಷೇತ್ರವನ್ನು ಚರಂಡಿ ಎನ್ನುತ್ತಿದ್ದಾರೆ. ಇನ್ನು, ಸಿನಿಮಾ ಕ್ಷೇತ್ರದಿಂದ ಬಂದು ಈಗ ಸಂಸದರಾಗಿರುವವರೊಬ್ಬರು ಇದರ ಬಗ್ಗೆ ಮಾತನಾಡಿದ್ದಾರೆ” ಎಂದು ಯಾರ ಹೆಸರನ್ನೂ ಹೇಳದೇ ತಿರುಗೇಟು ನೀಡಿದ್ದರು.

“ಸಿನಿಮಾ ಕ್ಷೇತ್ರವು ನಿತ್ಯ 5 ಲಕ್ಷ ಜನರಿಗೆ ನೇರ ಉದ್ಯೋಗ ನೀಡುತ್ತಿದೆ. ಪರೋಕ್ಷವಾಗಿ ಸುಮಾರು 50 ಲಕ್ಷ ಜನರಿಗೆ ಉದ್ಯೋಗವನ್ನು ನೀಡಿದೆ. ಈ ಸಾಂಕ್ರಾಮಿಕ ಪಿಡುಗಿನ ಕಾರಣದಿಂದಾಗಿ ಆರ್ಥಿಕ ಸಂಕಷ್ಟ ಎದುರಾಗಿದೆ. ಈ ಸಂದರ್ಭದಲ್ಲಿ ಜನರ ದಿಕ್ಕುತಪ್ಪಿಸಲು ಸಾಮಾಜಿಕ ಜಾಲತಾಣಗಳಲ್ಲಿ ಸಿನಿಮಾ ಕ್ಷೇತ್ರವನ್ನು ಟೀಕಿಸಲಾಗುತ್ತಿದೆ. ನಮಗೆ ಸರ್ಕಾರದ ಬೆಂಬಲವೂ ಸಿಗುತ್ತಿಲ್ಲ” ಎಂದು ಹೇಳಿದ್ದರು.

ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ನೋಟಿಸ್

ಜಯಾ ಬಚ್ಚನ್ ಅವರ ಈ ಹೇಳಿಕೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರವಾದ ವಿರೋಧ ವ್ಯಕ್ತವಾಗಿದ್ದು, #JayaBachchanShamlessLady ಎಂದು ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್ ಆಗುತ್ತಿದ್ದು, ಟ್ರೆಂಡಿಂಗ್‌ನಲ್ಲಿ 2ನೇ ಸ್ಥಾನದಲ್ಲಿದೆ. ಈ ವರದಿ ಬರೆಯುವ ವೇಳೆಗೆ ಸುಮಾರು 59 ಸಾವಿರ ಟ್ವೀಟ್‌ಗಳನ್ನು ಮಾಡಲಾಗಿದೆ.

 

ಜಯಾ ಬಚ್ಚನ್ ಅವರ ಈ ಹೇಳಿಕೆಯನ್ನು ಕಂಗನಾ ರಣಾವತ್ ಖಂಡಿಸಿ ಟ್ವೀಟ್ ಮಾಡಿದ್ದಾರೆ. “ಜಯಾ ಜೀ, ನನ್ನ ಜಾಗದಲ್ಲಿ ನಿಮ್ಮ ಮಗಳು ಇದ್ದಿದ್ದರೆ, ಆಗಲೂ ನಿಮ್ಮ ಅಭಿಪ್ರಾಯ ಇದೇ ಆಗಿರುತ್ತಿತ್ತೇ? ಅವಳು ಹದಿಹರೆಯದವಳಾಗಿದ್ದು, ಮದಕ ವ್ಯಸನಿಯಾಗಿ ಕಿರುಕುಳಕ್ಕೆ ಒಳಗಾಗಿದ್ದರೆ, ಅಭಿಷೇಕ್ ನಿರಂತರವಾಗಿ ಬೆದರಿಕೆ ಮತ್ತು ಕಿರುಕುಳದ ಬಗ್ಗೆ ಆರೋಪಿಸಿದ್ದರೆ? ಹಾಗೂ ಹಿಂದಿನ ದಿನ ನೇಣುಬಿಗಿದುಕೊಂಡಿದ್ದರೆ? ನೀವು ಆಗಲೂ ಇದೇ ಮಾತುಗಳನ್ನು ಹೇಳುವಿರಾ?” ಎಂದು ಟ್ವೀಟ್ ಮಾಡಿದ್ದಾರೆ.

ಆದರೆ, ಅಷ್ಟೇ ಜನರು ಜಯಾ ಅವರನ್ನು ಸಮರ್ಥಿಸಿಕೊಳ್ಳುವವರೂ ಇದ್ದಾರೆ. ಬಾಲಿವುಡ್‌ನ ಖ್ಯಾತ ನಟಿ ತಾಪ್ಸಿ ಪನ್ನು ಜಯಾ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡು, “ನಮ್ಮ ಸಿನಿಮಾ ಕ್ಷೇತ್ರದಿಂದ ಮತ್ತೊಬ್ಬ ಮಹಿಳೆ ದನಿಯೆತ್ತಿರುವುದಕ್ಕೆ ಶ್ಲಾಘಿಸಬೇಕು” ಎಂದು ಟ್ವೀಟ್ ಮಾಡಿದ್ದಾರೆ.

“ಜಯಾ ಅವರು ಸರಿಯಾಗಿಯೇ ಮಾತನಾಡಿದ್ದು, ಕೇವಲ ಒಂದೆರಡು ಪ್ರಕರಣಗಳನ್ನಿಟ್ಟುಕೊಂಡು ಇಡೀ ಉದ್ಯಮವನ್ನೇ ದೂರುವುದು ಸರಿಯಲ್ಲ” ಎಂಬ ಅಭಿಪ್ರಾಯವನ್ನು ಹೇಮಾ ಮಾಲಿನಿ, Producers Guild of India ಸೇರಿದಂತೆ ಬಾಲಿವುಡ್‌ನ ಹಲವರು ಜಯಾ ಬಚ್ಚನ್ ಅವರ ಪರವಾಗಿ ಟ್ವೀಟ್ ಮಾಡಿದ್ದಾರೆ.

ಮತ್ತೊಂದು ಕಡೆ, ಬಾಲಿವುಡ್ ಮೇಲೆ ನಡೆಯುತ್ತಿರುವ ಕಟುವಾದ ಟೀಕೆಗಳನ್ನು ಎದುರಿಸಿ, ಉದ್ಯಮದ ಪರವಾಗಿ ಅದರ ರಕ್ಷಣೆಗೆ ನಿಂತಿರುವುದು ಕೇವಲ ಮಹಿಳೆಯರು ಮಾತ್ರ! ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ. ಹೀಗೆ ದನಿಯೆತ್ತುವವರ ವಿರುದ್ಧ ಕಾಣದ ಕೈಗಳು ಕೆಲಸ ಮಾಡಿ, ಸಾಮಾಜಿಕ ಮಾದ್ಯಮಗಳಲ್ಲಿ ತೇಜೋವಧೆ ಮಾಡಲಾಗುತ್ತಿದೆ. ಆ ಮೂಲಕ ಅವರ ಎಂದು ಹಲವರು ಆರೋಪಿಸಿದ್ದಾರೆ.


ಇದನ್ನೂ ಓದಿ: ಡ್ರಗ್ಸ್ ಕೇಸ್: ನಟ ದಿಗಂತ್, ನಟಿ ಐಂದ್ರಿತಾಗೆ ಸಿಸಿಬಿ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...