Homeಮುಖಪುಟಬಾಲಿವುಡ್ ನ ಖ್ಯಾತ ಸಂಗೀತ ನಿರ್ದೇಶಕ ವಾಜಿದ್ ಖಾನ್(42) ನಿಧನ

ಬಾಲಿವುಡ್ ನ ಖ್ಯಾತ ಸಂಗೀತ ನಿರ್ದೇಶಕ ವಾಜಿದ್ ಖಾನ್(42) ನಿಧನ

- Advertisement -
- Advertisement -

ಬಾಲಿವುಡ್‌ನ ಖ್ಯಾತ ಸಂಗೀತ ನಿರ್ದೇಶಕ ವಾಜಿದ್ ಖಾನ್ (42) ಇಂದು ಮುಂಜಾನೆ ನಿಧನರಾಗಿದ್ದಾರೆ. ಗಾಯಕ ಸೋನು ನಿಗಮ್ ಇನ್‌ಸ್ಟಾಗ್ರಾಂನಲ್ಲಿ ಇದನ್ನು ಪ್ರಕಟಿಸಿದ್ದು, ನನ್ನ ಸಹೋದರ ವಾಜಿದ್ ನಮ್ಮನ್ನಗಲಿದ್ದಾರೆ ಎಂದು ಹೇಳಿದ್ದಾರೆ.

ವಾಜಿದ್‌ಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿತ್ತು ಎಂದು ಸೋನು ನಿಗಮ್ ದೃಢಪಡಿಸಿದ್ದಾಗಿ ಪತ್ರಕರ್ತ ಫರಿದೂನ್ ಶಹರಿಯಾರ್ ಟ್ವೀಟ್ ಮಾಡಿದ್ದಾರೆ.

ಅವರಿಗೆ ಹಲವಾರು ಆರೋಗ್ಯ ಸಮಸ್ಯೆ ಇದ್ದು, ಕಿಡ್ನಿ ಕಸಿ ನಡೆದಿತ್ತು ಎನ್ನಲಾಗಿದೆ. ಇತ್ತೀಚೆಗೆ ಅವರಿಗೆ ಕಿಡ್ನಿ ಸೋಂಕು ಕೂಡಾ ತಗುಲಿತ್ತು. ಕಳೆದ ನಾಲ್ಕು ದಿನಗಳಿಂದ ಅವರು ವೆಂಟಿಲೇಟರ್‌ನಲ್ಲಿದ್ದರೆಂದು ಸಂಗೀತ ನಿರ್ದೇಶಕ ಸಲೀಂ ಮರ್ಚೆಂಟ್ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

View this post on Instagram

My Brother Wajid left us.

A post shared by Sonu Nigam (@sonunigamofficial) on

ವಾಜಿದ್ ನಿಧನಕ್ಕೆ ಮಹಾರಾಷ್ಟ್ರ ಸರ್ಕಾರದ ಸಚಿವರು ಸೇರಿದಂತೆ, ಬಾಲಿವುಡ್ ಚಿತ್ರರಂಗ ಕಂಬನಿ ಮಿಡಿದಿದೆ. ನಟಿ ಪರಿಣಿತಿ ಚೋಪ್ರ “ವಾಜಿದ್ ಭಾಯ್ ನೀವು ಒಳ್ಳೆಯ ಮನುಷ್ಯ. ಯಾವಾಗಲೂ ನಗುತ್ತಾ,  ಹಾಡುತ್ತಿದ್ದವರು” ಎಂದು ಟ್ವೀಟ್ ಮಾಡಿದ್ಧಾರೆ.

ಬಾಲಿವುಡ್ ನ ಖ್ಯಾತ ನಟ ಅಮಿತಾಬ್ ಬಚ್ಚನ್ ” ವಾಜಿದ್ ಖಾನ್ ಅವರ ನಿಧನದ ಸುದ್ದಿಗೆ ಆಘಾತಕ್ಕೊಳಗಾಗಿದ್ದೇನೆ. ಉಜ್ವಲ ನಗುತ್ತಿರುವ ಪ್ರತಿಭೆ ನಮ್ಮಿಂದ ಅಗಲಿದೆ. ಅವರಿಗೆ ನನ್ನ ಸಂತಾಪ” ಎಂದು ಹೇಳಿದ್ದಾರೆ.

ವಾಜಿದ್ ಖಾನ್ ಸೂಫಿ ಸಂಗೀತದಲ್ಲಿ ಕೂಡಾ ನಿಪುಣರಾಗಿದ್ದರು. ಐಪಿಎಲ್ 4 ಧ್ಯೇಯ ಗೀತೆ ಧೂಮ್ ಧೂಮ್ ಧೂಮ್ ದಡ್ಕಾಗೆ ಸಂಗೀತ ಸಂಯೋಜನೆ ಮಾಡಿದ್ದರು. 1998ರಲ್ಲಿ ಸಲ್ಮಾನ್ ಖಾನ್ ನಟನೆಯ ‘ಪ್ಯಾರ್ ಕೀಯಾ ತೋ ಡರ್‌ನಾ ಕ್ಯಾ’ ಎಂಬ ಸಿನಿಮಾಕ್ಕೆ ಸಂಗೀತ ನಿರ್ದೇಶನ ಮಾಡುವ ಮೂಲಕ ಬಾಲಿವುಡ್‌ಗೆ ಪ್ರವೇಶಿಸಿದ್ದ ಇವರು, ದಬಾಂಗ್, ಚೋರಿ ಚೋರಿ, ಹಲೋ ಬ್ರದರ್, ವಾಂಟೆಡ್ ಮುಂತಾದ ಸಿನಿಮಾಗಳಿಗೆ ಸಂಗೀತ ನೀಡಿದ್ದಾರೆ.

ಸಲ್ಮಾನ್ ಖಾನ್ ಅವರ ಬಹುತೇಕ ಸಿನಿಮಾಗಳಲ್ಲಿ ಹಾಡಿರುವ ವಾಜಿದ್ ಖಾನ್, ಉತ್ತಮ ಗಾಯಕರೂ ಆಗಿದ್ದರು. ವಾಜಿದ್ ಅವರು ತಮ್ಮ ಸಹೋದರ ಸಾಜಿದ್ ಜತೆ ಸ ರಿ ಗ ಮ ಪ-2012 ಮತ್ತು ಸ ರಿ ಗ ಮ ಪ ಸಿಂಗಿಂಗ್ ಸೂಪರ್ ‌ಸ್ಟಾರ್‌ನಂಥ ರಿಯಾಲಿಟಿ ಷೋಗಳಲ್ಲಿ ಮಾರ್ಗದರ್ಶಕರಾಗಿಯೂ ಹೆಸರು ಗಳಿಸಿದ್ದರು.


ಓದಿ: ಸೋನು ಸೂದ್‌ ನಂತರ ಕಾರ್ಮಿಕರಿಗೆ ಸಹಾಯ ಮಾಡಲು ಪಣತೊಟ್ಟ ಸ್ವರ ಭಾಸ್ಕರ್‌


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರ್ದೇಶನ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.9) ಹಲವಾರು ನಿರ್ದೇಶನಗಳನ್ನು ನೀಡಿದೆ. ಚುನಾವಣಾ ಆಯೋಗವು ನಿಯೋಜಿಸಿರುವ ಮೈಕ್ರೋ-ಅಬ್ಸರ್ವರ್‌ಗಳ (ಸೂಕ್ಷ್ಮ ವೀಕ್ಷಕರು) ಬದಲಿಗೆ ಗ್ರೂಪ್...

ಮುಸ್ಲಿಮರಿಗೆ ಗುಂಡಿಕ್ಕುವಂತೆ ವಿಡಿಯೋ ಹಂಚಿಕೆ: ಅಸ್ಸಾಂ ಸಿಎಂ ವಿರುದ್ಧ ಓವೈಸಿ ದೂರು: ದ್ವೇಷ ಭಾಷಣ ಆದೇಶ ಉಲ್ಲೇಖ 

ಅಸ್ಸಾಂ ಬಿಜೆಪಿ ಘಟಕದ ಅಧಿಕೃತ 'ಎಕ್ಸ್' ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಲಾದ ಮತ್ತು ಈಗ ಅಳಿಸಲಾದ ವೀಡಿಯೊದಲ್ಲಿ, ಮುಸ್ಲಿಮರ ಮೇಲೆ ಸಾಂಕೇತಿಕವಾಗಿ ಗುಂಡು ಹಾರಿಸುತ್ತಿರುವುದನ್ನು ತೋರಿಸಲಾಗಿದೆ ಎಂದು ಆರೋಪಿಸಿ ಹಿಮಂತ ಬಿಸ್ವಾ ಶರ್ಮಾ ವಿರುದ್ಧ...

ನರವಾಣೆ ಪುಸ್ತಕಕ್ಕೆ ಹೆದರಿ ಪ್ರಧಾನಿ ಲೋಕಸಭೆಗೆ ಬರುತ್ತಿಲ್ಲ : ರಾಹುಲ್ ಗಾಂಧಿ

ಪ್ರತಿಪಕ್ಷಗಳು ಎತ್ತಿರುವ ವಿಷಯಗಳಿಂದ, ವಿಶೇಷವಾಗಿ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಪುಸ್ತಕದ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಭಯಗೊಂಡಿದ್ದಾರೆ. ಹಾಗಾಗಿ, ಅವರು ರಾಷ್ಟ್ರಪತಿಯ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ...

ಡಿಜಿಟಲ್ ‘ಡಕಾಯಿತಿ’: 54,000 ಕೋಟಿಗೂ ಹೆಚ್ಚಿನ ಹಣ ವಂಚನೆ: ಎಸ್‌ಒಪಿ ರಚಿಸಲು ಕೇಂದ್ರಕ್ಕೆ ಸೂಚನೆ ನೀಡಿದ ಸುಪ್ರೀಂ

ನವದೆಹಲಿ: ಡಿಜಿಟಲ್ ವಂಚನೆಯಿಂದ 54,000 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವಂಚಿಸುವುದು ಸಂಪೂರ್ಣ "ದರೋಡೆ ಅಥವಾ ಡಕಾಯಿತಿ" ಎಂದು ಸುಪ್ರೀಂ ಕೋರ್ಟ್ ಸೋಮವಾರ ಬಣ್ಣಿಸಿದೆ ಮತ್ತು ಅಂತಹ ಪ್ರಕರಣಗಳನ್ನು ನಿಭಾಯಿಸಲು ಆರ್‌ಬಿಐ, ಬ್ಯಾಂಕುಗಳು...

ಪಾಕಿಸ್ತಾನ ನಂಟು : ಸಿಎಂ ಶರ್ಮಾ ಆರೋಪ ನಿರಾಧಾರ, ಸಿ-ಗ್ರೇಡ್ ಸಿನಿಮಾ ಎಂದ ಗೌರವ್ ಗೊಗೊಯ್

ತಮಗೂ ಪಾಕಿಸ್ತಾನಕ್ಕೂ ಸಂಬಂಧವಿದೆ ಎಂಬ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಆರೋಪಗಳನ್ನು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ತಳ್ಳಿಹಾಕಿದ್ದು, ಎಸ್‌ಐಟಿ ವರದಿಯು ಕಳೆದ ಆರು ತಿಂಗಳಿನಿಂದ ಮುಖ್ಯಮಂತ್ರಿ ಬಳಿಯೇ ಇದೆ....

ಪಂಜಾಬ್: ತರಗತಿಯೊಳಗೆ ವಿದ್ಯಾರ್ಥಿನಿಯನ್ನು ಕೊಂದು, ತಾನು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಕಾನೂನು ವಿದ್ಯಾರ್ಥಿ

ಚಂಡೀಗಢ: ಪಂಜಾಬ್‌ನ ತರ್ನ್ ತರಣ್ ಜಿಲ್ಲೆಯಲ್ಲಿ ಕಾನೂನು ವಿದ್ಯಾರ್ಥಿಯೊಬ್ಬ ಶಾಲಾ ಕೋಣೆಯೊಳಗೆ ವಿದ್ಯಾರ್ಥಿನಿಯ ತಲೆಗೆ ಗುಂಡು ಹಾರಿಸಿ ಕೊಂದ ಘಟನೆ ಸೋಮವಾರ ನಡೆದಿದೆ. ಸಹಪಾಠಿಗಳು ಭಯಭೀತರಾಗಿ ನೋಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಿದ್ಯಾರ್ಥಿನಿಯನ್ನು...

ಅಸ್ಸಾಂ ಸಿಎಂ ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ : ಗೌರವ್ ಗೊಗೊಯ್

ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಮುಸ್ಲಿಮರ ವಿರುದ್ದ ದ್ವೇಷ ಹರಡುತ್ತಿದ್ದಾರೆ, ಅವರ ಜನಾಂಗೀಯ ಹತ್ಯೆಗೆ ಪ್ರಚೋದಿಸುತ್ತಿದ್ದಾರೆ ಎಂದು ಅಸ್ಸಾಂ ರಾಜ್ಯ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಹಾಗೂ ಸಂಸದ ಗೌರವ್ ಗೊಗೊಯ್ ಹೇಳಿದ್ದಾರೆ. ಅಸ್ಸಾಂ...

‘ಎಂಡಿಎಂಎ ಡ್ರಗ್ಸ್ ಕೇಂದ್ರವಾಗಿ ಮಾರ್ಪಟ್ಟ ಮಧ್ಯಪ್ರದೇಶ-ರಾಜಸ್ಥಾನ ಗಡಿ’: 13ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದ ಪೊಲೀಸರು. 

ಭೋಪಾಲ್: ದೇಶದ ಅಫೀಮು ಕೃಷಿ ಮತ್ತು ಕಳ್ಳಸಾಗಣೆ ಮಾರ್ಗವಾಗಿ ದೀರ್ಘಕಾಲದಿಂದ ಕುಖ್ಯಾತಿ ಗಳಿಸಿರುವ ಪಶ್ಚಿಮ ಮಧ್ಯಪ್ರದೇಶ ಮತ್ತು ಪಕ್ಕದ ಆಗ್ನೇಯ ರಾಜಸ್ಥಾನದ ಜಿಲ್ಲೆಗಳು ಈಗ MDMA ಸಂಶ್ಲೇಷಿತ ಡ್ರಗ್ಸ್ ಅಕ್ರಮ ಉತ್ಪಾದನೆ ಮತ್ತು...

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾದ ವಿರೋಧ ಪಕ್ಷಗಳು: ವರದಿ

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ವಿಪಕ್ಷ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ 'ಅನಿರೀಕ್ಷಿತ ಕೃತ್ಯ' ಎಸಗಲು ಸಂಚು...

ಮೆಟಾ-ವಾಟ್ಸಾಪ್ ಗೌಪ್ಯತೆ ನೀತಿ ಪ್ರಕರಣ: ಸುಪ್ರೀಂ ಕೋರ್ಟ್ ವಿಚಾರಣೆ ಫೆಬ್ರವರಿ 23ಕ್ಕೆ ಮುಂದೂಡಿಕೆ 

ನವದೆಹಲಿ: ಗೌಪ್ಯತೆ ನೀತಿಯ ಮೇಲೆ 213.14 ಕೋಟಿ ರೂ. ದಂಡ ವಿಧಿಸಿದ ಭಾರತೀಯ ಸ್ಪರ್ಧಾ ಆಯೋಗದ (ಸಿಸಿಐ) ಆದೇಶದ ವಿರುದ್ಧ ಮೆಟಾ ಪ್ಲಾಟ್‌ಫಾರ್ಮ್ಸ್ ಇಂಕ್ ಮತ್ತು ವಾಟ್ಸಾಪ್ ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್...