Homeಮುಖಪುಟಬಾಲಿವುಡ್ ನ ಖ್ಯಾತ ಸಂಗೀತ ನಿರ್ದೇಶಕ ವಾಜಿದ್ ಖಾನ್(42) ನಿಧನ

ಬಾಲಿವುಡ್ ನ ಖ್ಯಾತ ಸಂಗೀತ ನಿರ್ದೇಶಕ ವಾಜಿದ್ ಖಾನ್(42) ನಿಧನ

- Advertisement -
- Advertisement -

ಬಾಲಿವುಡ್‌ನ ಖ್ಯಾತ ಸಂಗೀತ ನಿರ್ದೇಶಕ ವಾಜಿದ್ ಖಾನ್ (42) ಇಂದು ಮುಂಜಾನೆ ನಿಧನರಾಗಿದ್ದಾರೆ. ಗಾಯಕ ಸೋನು ನಿಗಮ್ ಇನ್‌ಸ್ಟಾಗ್ರಾಂನಲ್ಲಿ ಇದನ್ನು ಪ್ರಕಟಿಸಿದ್ದು, ನನ್ನ ಸಹೋದರ ವಾಜಿದ್ ನಮ್ಮನ್ನಗಲಿದ್ದಾರೆ ಎಂದು ಹೇಳಿದ್ದಾರೆ.

ವಾಜಿದ್‌ಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿತ್ತು ಎಂದು ಸೋನು ನಿಗಮ್ ದೃಢಪಡಿಸಿದ್ದಾಗಿ ಪತ್ರಕರ್ತ ಫರಿದೂನ್ ಶಹರಿಯಾರ್ ಟ್ವೀಟ್ ಮಾಡಿದ್ದಾರೆ.

ಅವರಿಗೆ ಹಲವಾರು ಆರೋಗ್ಯ ಸಮಸ್ಯೆ ಇದ್ದು, ಕಿಡ್ನಿ ಕಸಿ ನಡೆದಿತ್ತು ಎನ್ನಲಾಗಿದೆ. ಇತ್ತೀಚೆಗೆ ಅವರಿಗೆ ಕಿಡ್ನಿ ಸೋಂಕು ಕೂಡಾ ತಗುಲಿತ್ತು. ಕಳೆದ ನಾಲ್ಕು ದಿನಗಳಿಂದ ಅವರು ವೆಂಟಿಲೇಟರ್‌ನಲ್ಲಿದ್ದರೆಂದು ಸಂಗೀತ ನಿರ್ದೇಶಕ ಸಲೀಂ ಮರ್ಚೆಂಟ್ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

View this post on Instagram

My Brother Wajid left us.

A post shared by Sonu Nigam (@sonunigamofficial) on

ವಾಜಿದ್ ನಿಧನಕ್ಕೆ ಮಹಾರಾಷ್ಟ್ರ ಸರ್ಕಾರದ ಸಚಿವರು ಸೇರಿದಂತೆ, ಬಾಲಿವುಡ್ ಚಿತ್ರರಂಗ ಕಂಬನಿ ಮಿಡಿದಿದೆ. ನಟಿ ಪರಿಣಿತಿ ಚೋಪ್ರ “ವಾಜಿದ್ ಭಾಯ್ ನೀವು ಒಳ್ಳೆಯ ಮನುಷ್ಯ. ಯಾವಾಗಲೂ ನಗುತ್ತಾ,  ಹಾಡುತ್ತಿದ್ದವರು” ಎಂದು ಟ್ವೀಟ್ ಮಾಡಿದ್ಧಾರೆ.

ಬಾಲಿವುಡ್ ನ ಖ್ಯಾತ ನಟ ಅಮಿತಾಬ್ ಬಚ್ಚನ್ ” ವಾಜಿದ್ ಖಾನ್ ಅವರ ನಿಧನದ ಸುದ್ದಿಗೆ ಆಘಾತಕ್ಕೊಳಗಾಗಿದ್ದೇನೆ. ಉಜ್ವಲ ನಗುತ್ತಿರುವ ಪ್ರತಿಭೆ ನಮ್ಮಿಂದ ಅಗಲಿದೆ. ಅವರಿಗೆ ನನ್ನ ಸಂತಾಪ” ಎಂದು ಹೇಳಿದ್ದಾರೆ.

ವಾಜಿದ್ ಖಾನ್ ಸೂಫಿ ಸಂಗೀತದಲ್ಲಿ ಕೂಡಾ ನಿಪುಣರಾಗಿದ್ದರು. ಐಪಿಎಲ್ 4 ಧ್ಯೇಯ ಗೀತೆ ಧೂಮ್ ಧೂಮ್ ಧೂಮ್ ದಡ್ಕಾಗೆ ಸಂಗೀತ ಸಂಯೋಜನೆ ಮಾಡಿದ್ದರು. 1998ರಲ್ಲಿ ಸಲ್ಮಾನ್ ಖಾನ್ ನಟನೆಯ ‘ಪ್ಯಾರ್ ಕೀಯಾ ತೋ ಡರ್‌ನಾ ಕ್ಯಾ’ ಎಂಬ ಸಿನಿಮಾಕ್ಕೆ ಸಂಗೀತ ನಿರ್ದೇಶನ ಮಾಡುವ ಮೂಲಕ ಬಾಲಿವುಡ್‌ಗೆ ಪ್ರವೇಶಿಸಿದ್ದ ಇವರು, ದಬಾಂಗ್, ಚೋರಿ ಚೋರಿ, ಹಲೋ ಬ್ರದರ್, ವಾಂಟೆಡ್ ಮುಂತಾದ ಸಿನಿಮಾಗಳಿಗೆ ಸಂಗೀತ ನೀಡಿದ್ದಾರೆ.

ಸಲ್ಮಾನ್ ಖಾನ್ ಅವರ ಬಹುತೇಕ ಸಿನಿಮಾಗಳಲ್ಲಿ ಹಾಡಿರುವ ವಾಜಿದ್ ಖಾನ್, ಉತ್ತಮ ಗಾಯಕರೂ ಆಗಿದ್ದರು. ವಾಜಿದ್ ಅವರು ತಮ್ಮ ಸಹೋದರ ಸಾಜಿದ್ ಜತೆ ಸ ರಿ ಗ ಮ ಪ-2012 ಮತ್ತು ಸ ರಿ ಗ ಮ ಪ ಸಿಂಗಿಂಗ್ ಸೂಪರ್ ‌ಸ್ಟಾರ್‌ನಂಥ ರಿಯಾಲಿಟಿ ಷೋಗಳಲ್ಲಿ ಮಾರ್ಗದರ್ಶಕರಾಗಿಯೂ ಹೆಸರು ಗಳಿಸಿದ್ದರು.


ಓದಿ: ಸೋನು ಸೂದ್‌ ನಂತರ ಕಾರ್ಮಿಕರಿಗೆ ಸಹಾಯ ಮಾಡಲು ಪಣತೊಟ್ಟ ಸ್ವರ ಭಾಸ್ಕರ್‌


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...