Homeಮುಖಪುಟಬಾಲಿವುಡ್ ನ ಖ್ಯಾತ ಸಂಗೀತ ನಿರ್ದೇಶಕ ವಾಜಿದ್ ಖಾನ್(42) ನಿಧನ

ಬಾಲಿವುಡ್ ನ ಖ್ಯಾತ ಸಂಗೀತ ನಿರ್ದೇಶಕ ವಾಜಿದ್ ಖಾನ್(42) ನಿಧನ

- Advertisement -
- Advertisement -

ಬಾಲಿವುಡ್‌ನ ಖ್ಯಾತ ಸಂಗೀತ ನಿರ್ದೇಶಕ ವಾಜಿದ್ ಖಾನ್ (42) ಇಂದು ಮುಂಜಾನೆ ನಿಧನರಾಗಿದ್ದಾರೆ. ಗಾಯಕ ಸೋನು ನಿಗಮ್ ಇನ್‌ಸ್ಟಾಗ್ರಾಂನಲ್ಲಿ ಇದನ್ನು ಪ್ರಕಟಿಸಿದ್ದು, ನನ್ನ ಸಹೋದರ ವಾಜಿದ್ ನಮ್ಮನ್ನಗಲಿದ್ದಾರೆ ಎಂದು ಹೇಳಿದ್ದಾರೆ.

ವಾಜಿದ್‌ಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿತ್ತು ಎಂದು ಸೋನು ನಿಗಮ್ ದೃಢಪಡಿಸಿದ್ದಾಗಿ ಪತ್ರಕರ್ತ ಫರಿದೂನ್ ಶಹರಿಯಾರ್ ಟ್ವೀಟ್ ಮಾಡಿದ್ದಾರೆ.

ಅವರಿಗೆ ಹಲವಾರು ಆರೋಗ್ಯ ಸಮಸ್ಯೆ ಇದ್ದು, ಕಿಡ್ನಿ ಕಸಿ ನಡೆದಿತ್ತು ಎನ್ನಲಾಗಿದೆ. ಇತ್ತೀಚೆಗೆ ಅವರಿಗೆ ಕಿಡ್ನಿ ಸೋಂಕು ಕೂಡಾ ತಗುಲಿತ್ತು. ಕಳೆದ ನಾಲ್ಕು ದಿನಗಳಿಂದ ಅವರು ವೆಂಟಿಲೇಟರ್‌ನಲ್ಲಿದ್ದರೆಂದು ಸಂಗೀತ ನಿರ್ದೇಶಕ ಸಲೀಂ ಮರ್ಚೆಂಟ್ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

View this post on Instagram

My Brother Wajid left us.

A post shared by Sonu Nigam (@sonunigamofficial) on

ವಾಜಿದ್ ನಿಧನಕ್ಕೆ ಮಹಾರಾಷ್ಟ್ರ ಸರ್ಕಾರದ ಸಚಿವರು ಸೇರಿದಂತೆ, ಬಾಲಿವುಡ್ ಚಿತ್ರರಂಗ ಕಂಬನಿ ಮಿಡಿದಿದೆ. ನಟಿ ಪರಿಣಿತಿ ಚೋಪ್ರ “ವಾಜಿದ್ ಭಾಯ್ ನೀವು ಒಳ್ಳೆಯ ಮನುಷ್ಯ. ಯಾವಾಗಲೂ ನಗುತ್ತಾ,  ಹಾಡುತ್ತಿದ್ದವರು” ಎಂದು ಟ್ವೀಟ್ ಮಾಡಿದ್ಧಾರೆ.

ಬಾಲಿವುಡ್ ನ ಖ್ಯಾತ ನಟ ಅಮಿತಾಬ್ ಬಚ್ಚನ್ ” ವಾಜಿದ್ ಖಾನ್ ಅವರ ನಿಧನದ ಸುದ್ದಿಗೆ ಆಘಾತಕ್ಕೊಳಗಾಗಿದ್ದೇನೆ. ಉಜ್ವಲ ನಗುತ್ತಿರುವ ಪ್ರತಿಭೆ ನಮ್ಮಿಂದ ಅಗಲಿದೆ. ಅವರಿಗೆ ನನ್ನ ಸಂತಾಪ” ಎಂದು ಹೇಳಿದ್ದಾರೆ.

ವಾಜಿದ್ ಖಾನ್ ಸೂಫಿ ಸಂಗೀತದಲ್ಲಿ ಕೂಡಾ ನಿಪುಣರಾಗಿದ್ದರು. ಐಪಿಎಲ್ 4 ಧ್ಯೇಯ ಗೀತೆ ಧೂಮ್ ಧೂಮ್ ಧೂಮ್ ದಡ್ಕಾಗೆ ಸಂಗೀತ ಸಂಯೋಜನೆ ಮಾಡಿದ್ದರು. 1998ರಲ್ಲಿ ಸಲ್ಮಾನ್ ಖಾನ್ ನಟನೆಯ ‘ಪ್ಯಾರ್ ಕೀಯಾ ತೋ ಡರ್‌ನಾ ಕ್ಯಾ’ ಎಂಬ ಸಿನಿಮಾಕ್ಕೆ ಸಂಗೀತ ನಿರ್ದೇಶನ ಮಾಡುವ ಮೂಲಕ ಬಾಲಿವುಡ್‌ಗೆ ಪ್ರವೇಶಿಸಿದ್ದ ಇವರು, ದಬಾಂಗ್, ಚೋರಿ ಚೋರಿ, ಹಲೋ ಬ್ರದರ್, ವಾಂಟೆಡ್ ಮುಂತಾದ ಸಿನಿಮಾಗಳಿಗೆ ಸಂಗೀತ ನೀಡಿದ್ದಾರೆ.

ಸಲ್ಮಾನ್ ಖಾನ್ ಅವರ ಬಹುತೇಕ ಸಿನಿಮಾಗಳಲ್ಲಿ ಹಾಡಿರುವ ವಾಜಿದ್ ಖಾನ್, ಉತ್ತಮ ಗಾಯಕರೂ ಆಗಿದ್ದರು. ವಾಜಿದ್ ಅವರು ತಮ್ಮ ಸಹೋದರ ಸಾಜಿದ್ ಜತೆ ಸ ರಿ ಗ ಮ ಪ-2012 ಮತ್ತು ಸ ರಿ ಗ ಮ ಪ ಸಿಂಗಿಂಗ್ ಸೂಪರ್ ‌ಸ್ಟಾರ್‌ನಂಥ ರಿಯಾಲಿಟಿ ಷೋಗಳಲ್ಲಿ ಮಾರ್ಗದರ್ಶಕರಾಗಿಯೂ ಹೆಸರು ಗಳಿಸಿದ್ದರು.


ಓದಿ: ಸೋನು ಸೂದ್‌ ನಂತರ ಕಾರ್ಮಿಕರಿಗೆ ಸಹಾಯ ಮಾಡಲು ಪಣತೊಟ್ಟ ಸ್ವರ ಭಾಸ್ಕರ್‌


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...