Homeಮುಖಪುಟ78ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಬಾಲಿವುಡ್ ಕ್ವೀನ್ ಆಶಾ ಪರೇಖ್

78ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಬಾಲಿವುಡ್ ಕ್ವೀನ್ ಆಶಾ ಪರೇಖ್

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಆಶಾ ಪರೇಖ್ ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಪ್ರಸ್ತುತ ನೃತ್ಯ ಅಕಾಡೆಮಿ `ಕಲಾ ಭವನ್' ಸ್ಥಾಪಿಸಿ,,ನೃತ್ಯದೊಂದಿಗೆ ಸಮಾಜ ಸೇವೆಯಲ್ಲೂ ನಿರತರಾಗಿದ್ದಾರೆ.

- Advertisement -
- Advertisement -

ಹಿಂದಿ ಚಿತ್ರರಂಗದ 60, 70 ದಶಕದ ಜನಪ್ರಿಯ ನಾಯಕನಟಿ ಆಶಾ ಪರೇಖ್ ಅವರಿಗೆ ಇಂದು 78ರ ಸಂಭ್ರಮ. ಬಾಲಿವುಡ್ ಸಿನಿಮಾಗಳ ದೊಡ್ಡ ಯಶಸ್ಸಿನೊಂದಿಗೆ ಜ್ಯುಬಿಲಿ ಹಿರೋಯಿನ್ ಎಂದೇ ಕರೆಸಿಕೊಂಡಿದ್ದ ಅವರು ‘ಶರವೇಗದ ಸರದಾರ’ ಎಂಬ ಕನ್ನಡ ಚಿತ್ರದಲ್ಲೂ ಅಭಿನಯಿಸಿದ್ದಾರೆ.

ಅರವತ್ತರ ದಶಕದ ಡ್ಯಾನ್ಸಿಂಗ್ ಕ್ವೀನ್ ಎಂದು ಕರೆಸಿಕೊಂಡವರು ಆಶಾ ಪರೇಖ್. ಅವರು ಚಿತ್ರರಂಗಕ್ಕೆ ಪರಿಚಯವಾದ ಸಂದರ್ಭದಲ್ಲಿ ಸಾಧನಾ, ನೂತನ್, ವಹೀದಾ ರೆಹಮಾನ್ ಸ್ಟಾರ್ ನಟಿಯರಾಗಿ ಮಿಂಚುತ್ತಿದ್ದರು. ಇವರೆಲ್ಲರ ನಡುವಿನ ಪೈಪೋಟಿಯನ್ನು ದಿಟ್ಟತನದಿಂದ ಎದುರಿಸಿದವರು ಆಶಾ.

ಆಶಾ ಪರೇಖ್ ಹುಟ್ಟಿದ್ದು 1942, ಅಕ್ಟೋಬರ್ 2ರಂದು ಬೆಂಗಳೂರಿನಲ್ಲಿ. ತಂದೆ ಗುಜರಾತಿ ಮತ್ತು ತಾಯಿ ಮುಸ್ಲಿಂ ಸಮುದಾಯದವರು. ಮಧ್ಯಮ ವರ್ಗದ ಕುಟುಂಬದ ಏಕೈಕ ಪುತ್ರಿಯಾದ ಅವರಿಗೆ ಅಕ್ಕರೆಯ ಬಾಲ್ಯ ಸಿಕ್ಕಿತು. ಚಿಕ್ಕಂದಿನಲ್ಲೇ ಅವರಿಗೆ ನೃತ್ಯದ ತರಬೇತಿಯಾಗಿತ್ತು. ಶಾಲೆಯ ಕಾರ್ಯಕ್ರಮವೊಂದರಲ್ಲಿ ಆಶಾ ನೃತ್ಯ ಕಾರ್ಯಕ್ರಮ ನೀಡುತ್ತಿದ್ದಾಗ, ನಿರ್ದೇಶಕ ಬಿಮಲ್ ರಾಯ್ ಕಣ್ಣಿಗೆ ಬಿದ್ದರು. ಒಮ್ಮೆಗೇ ಆಕರ್ಷಿತರಾದ ರಾಯ್ ತಮ್ಮ`ಬಾಪ್ ಬೇಟಿ’ (1954) ಚಿತ್ರದಲ್ಲಿ ಬಾಲನಟಿಯಾಗುವಂತೆ ಆಶಾರನ್ನು ಕೇಳಿದರು. ಅಲ್ಲಿಂದ ಮುಂದೆ ವಿದ್ಯಾಭ್ಯಾಸದ ಜೊತೆಗೆ ಕೆಲವು ಚಿತ್ರಗಳಲ್ಲಿ ಬಾಲನಟಿಯಾಗಿ ನಟಿಸಿದರು.

ಇದನ್ನೂ ಓದಿ: ನಿರಾಶ್ರಿತರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಈ ಐದು ಚಲನಚಿತ್ರಗಳು

ಖ್ಯಾತ ನಿರ್ದೇಶಕ ವಿಜಯ್ ಭಟ್ ತಮ್ಮ `ಗೂಂಜ್ ಉಠಿ ಶೆಹನಾಯ್’ ಚಿತ್ರದ ನಾಯಕಿ ಪಾತ್ರಕ್ಕೆ ಆಶಾರನ್ನು ಆಯ್ಕೆ ಮಾಡಿದರು. ಆಗಿನ್ನೂ ಆಶಾಗೆ ಹದಿನಾರರ ಹರೆಯ. ಆಶಾ ಪರೇಖ್ ಸ್ಟಾರ್ ನಾಯಕಿಯಲ್ಲ ಎಂದು ಚಿತ್ರದ ನಿರ್ಮಾಪಕರು ಆಕೆಯನ್ನು ಬೇಡವೆಂದರು. ಇದರಿಂದ ನಿರಾಶರಾದ ಆಶಾ ಒಂದಷ್ಟು ಸಮಯ ಸಿನಿಮಾದಿಂದ ದೂರವುಳಿದು, ತಮ್ಮ ನೆಚ್ಚಿನ ಹವ್ಯಾಸ ನೃತ್ಯದಲ್ಲಿ ತೊಡಗಿಸಿಕೊಂಡರು.

1959ರಲ್ಲಿ ಆಶಾಗೆ ಸಿನಿ ಜೀವನಕ್ಕೆ ದೊಡ್ಡ ತಿರುವು ಸಿಕ್ಕಿತು. ರೊಮ್ಯಾಂಟಿಕ್ ಹೀರೋ ಶಮ್ಮಿ ಕಪೂರ್ ಜೊತೆಗಿನ `ದಿಲ್ ದೇಕೆ ದೇಖೋ’ ಚಿತ್ರ ಅವರಿಗೆ ಹೆಸರು ತಂದುಕೊಟ್ಟಿತು. ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದ ಸಿನಿಮಾ ಬಾಕ್ಸ್ ಆಫೀಸಲ್ಲಿ ಮೋಡಿ ಮಾಡಿತು. ಈ ಚಿತ್ರದ ನಂತರ ಆಶಾ ಹಿಂದಿರುಗಿ ನೋಡಲೇ ಇಲ್ಲ. `ಜಬ್ ಪ್ಯಾರ್ ಕಿಸೀ ಸೆ ಹೋತಾ ಹೈ’, `ಫಿರ್ ವೊಹಿ ದಿಲ್ ಲಾಯಾ ಹೂ’, `ಜಿದ್ದಿ’, `ಮೇರೆ ಸನಂ’, `ತೀಸ್ರಿ ಮಂಜಿಲ್’ ಸೇರಿದಂತೆ ಮ್ಯೂಸಿಕಲ್ ಹಿಟ್ ಚಿತ್ರಗಳೊಂದಿಗೆ ಆಶಾ ಸ್ಟಾರ್ ನಾಯಕಿಯಾದರು.

ಆಶಾಗೆ ಹಟ್ಟಿ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಬೇಕೆನ್ನುವ ಅಪೇಕ್ಷೆಯಿತ್ತು. ಆದರೆ ರೊಮ್ಯಾಂಟಿಕ್ ಕಾಮಿಡಿ ಚಿತ್ರಗಳಲ್ಲಿ ಆಶಾಗೆ ಗಂಭೀರ ಪಾತ್ರಗಳಿರಲಿಲ್ಲ. ಮನೋಜ್ ಕುಮಾರ್ ಜೊತೆಗಿನ `ದೋ ಬದನ್’ (1966) ಚಿತ್ರದೊಂದಿಗೆ ಗಂಭೀರ ಪಾತ್ರಗಳತ್ತ ಹೊರಳಿದರು.


ಇದನ್ನೂ ಓದಿ: ನಟ ಸೋನು ಸೂದ್ ಮಾನವೀಯ ಕಾರ್ಯಕ್ಕೆ ವಿಶ್ವಸಂಸ್ಥೆಯ ಗೌರವ


ಮುಂದೆ ಅವರು ಹತ್ತಾರು ಅರ್ಥಪೂರ್ಣ ಪ್ರಯೋಗಗಳಲ್ಲಿ ಕಾಣಿಸಿಕೊಂಡದ್ದು ವಿಶೇಷ. ಇವುಗಳ ಪೈಕಿ `ಕನ್ಯಾದಾನ್’, `ಚಿರಾಗ್’, `ಪಗ್ಲಾ ಕಹೀ ಕಾ’, `ಕಟೀ ಪಂತಗ್’, `ಮೇ ತುಲ್ಸಿ ತೇರೇ ಆಂಗನ್ ಕಿ’ ಪ್ರಮುಖ ಪ್ರಯೋಗಗಳು. ನಟನೆಯ ಜೊತೆಗೆ ಚಿತ್ರ ವಿತರಣೆಯಲ್ಲೂ ಆಶಾಗೆ ಯಶಸ್ಸು ಸಿಕ್ಕಿತ್ತು. ಸುಮಾರು ಎರಡು ದಶಕಗಳ ಕಾಲ ಅವರು ಚಿತ್ರ ವಿತರಣೆಯಲ್ಲಿ ತೊಡಗಿಸಿಕೊಂಡಿದ್ದರು. ಸಮಾಜ ಸೇವಾಕಾರ್ಯಗಳಲ್ಲೂ ಅವರದು ಮುಂಚೂಣಿ ಹೆಸರು.

1971, ಅವರ ಸಿನಿಮಾ ಜೀವನದ ಅದೃಷ್ಟದ ವರ್ಷ. ಆ ವರ್ಷದಲ್ಲಿ ತೆರೆಕಂಡ ಅವರ `ಕಟಿ ಪಂತಗ್’, `ಆನ್ ಮಿಲೋ ಸಜ್ನಾ’, `ಮೇರಾ ಗಾವೋ ಮೇರಾ ದೇಶ್’, `ಕಾರವಾನ್’ ಚಿತ್ರಗಳು ಸೂಪರ್‌ ಹಿಟ್ ಎನಿಸಿದವು. `ಕಟಿ ಪತಂಗ್’ ಚಿತ್ರದ ಉತ್ತಮ ಅಭಿನಯಕ್ಕಾಗಿ ಅವರು ಫಿಲಂಫೇರ್‌ ಪುರಸ್ಕಾರಕ್ಕೂ ಪ್ರಾಪ್ತರಾದರು. ವೃತ್ತಿ ಜೀವನದ ಉತ್ತುಂಗದಲ್ಲಿದ್ದಾಗಲೇ ನೃತ್ಯ ಪ್ರದರ್ಶನಕ್ಕೆಂದು ಆಶಾ ವಿದೇಶಕ್ಕೆ ತೆರಳಿದ್ದರು.

ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಆಶಾ ನೃತ್ಯ ಅಕಾಡೆಮಿ `ಕಲಾ ಭವನ್’ ಸ್ಥಾಪಿಸಿದ್ದಾರೆ. ಇಲ್ಲಿ ವಿವಿಧ ಪ್ರಕಾರಗಳ ನೃತ್ಯಗಳನ್ನು ಕಲಿಸಲಾಗುತ್ತದೆ. ನೃತ್ಯದೊಂದಿಗೆ ಈ ಹೊತ್ತಿಗೂ ಅವರು ಸಮಾಜ ಸೇವೆಯಲ್ಲಿ ನಿರತರಾಗಿದ್ದಾರೆ. 1995ರಲ್ಲಿ ನಟನೆಯಿಂದ ದೂರ ಉಳಿದ ನಟಿ ಟೆಲಿವಿಷನ್ ಧಾರಾವಾಹಿಗಳ ನಿರ್ದೇಶನ ಮತ್ತು ನಿರ್ಮಾಣಕ್ಕೆ ಕೈ ಹಾಕಿದರು.

Iconic Actress: Asha Parekh - Sentinelassam

1992ರಲ್ಲಿ ಭಾರತ ಸರ್ಕಾರದ ಪದ್ಮಶ್ರೀ ಗೌರವಕ್ಕೆ ಪಾತ್ರರಾಗಿದ್ದಾರೆ. ಪರೇಖ್ 2002 ರಲ್ಲಿ ಫಿಲ್ಮ್‌ಫೇರ್ ಜೀವಮಾನ ಸಾಧನೆ ಪ್ರಶಸ್ತಿಯನ್ನು ಪಡೆದರು.  2004 ರಲ್ಲಿ ಕಲಾಕರ್ ಪ್ರಶಸ್ತಿ, 2006 ರಲ್ಲಿ ಅಂತರರಾಷ್ಟ್ರೀಯ ಭಾರತೀಯ ಚಲನಚಿತ್ರ ಅಕಾಡೆಮಿ ಪ್ರಶಸ್ತಿಗಳು, 2007 ರಲ್ಲಿ ಪುಣೆ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ, ಮತ್ತು2007ರಲ್ಲಿ ಒಂಬತ್ತನೇ ವಾರ್ಷಿಕ ಬಾಲಿವುಡ್ ಪ್ರಶಸ್ತಿ ಲಾಂಗ್ ಐಲ್ಯಾಂಡ್ ಪ್ರಶಸ್ತಿ, ಫೆಡರೇಶನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿಯಿಂದ (ಎಫ್‌ಐಸಿಸಿಐ) ಅವರು ಲಿವಿಂಗ್ ಲೆಜೆಂಡ್ ಪ್ರಶಸ್ತಿಯನ್ನು ಪಡೆದಿದ್ದಾರೆ.

2017ರಲ್ಲಿ ಖಾಲಿದ್ ಮೊಹಮದ್ ಬರೆದಿರುವ ಆಶಾ ಪರೇಖ್ ಅವರ ಆತ್ಮಕತೆ ‘ದಿ ಹಿಟ್‌ ಗರ್ಲ್‌’ ಬಿಡುಗಡೆಯಾಗಿದೆ.


ಇದನ್ನೂ ಓದಿ: ನಟಿ, ನೃತ್ಯಗಾರ್ತಿ ಜೊಹ್ರಾ ಸೆಹಗಲ್‌ಗೆ ಗೂಗಲ್ ಡೂಡಲ್ ನಮನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...

ಎಸ್‌ಐಆರ್‌ ಕರಡು ತಿರಸ್ಕರಿಸಿದ ನಾಗರಿಕ ಸಂಘಟನೆಗಳು; ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ

ಆಗಸ್ಟ್ 24 ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮತದಾರರ ಎಸ್‌ಐಆರ್‌ ಕರಡು ಪಟ್ಟಿಯನ್ನು ಕರ್ನಾಟಕದ ನಾಗರಿಕ ಸಂಘಟನೆಗಳು ತಿರಸ್ಕರಿಸಿದ್ದು, ಲಕ್ಷಾಂತರ ಮತದಾರರಿಗೆ ನೋಟಿಸ್‌ ಕೊಡಲು ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ...

‘ಕೇಂದ್ರ ಸರ್ಕಾರ ಜಾತಿ ಗಣತಿಗೆ ರೂಪಿಸಿರುವ ಪ್ರಶ್ನಾವಳಿ ವಿಧಾನ ದಾರಿತಪ್ಪಿಸುವಂತಿವೆ’: ಹೊಸ ಪ್ರಶ್ನಾವಳಿ ರಚಿಸಲು ಪ್ರಧಾನಿ ಮೋದಿಗೆ ಖರ್ಗೆ-ರಾಹುಲ್ ಪತ್ರ

ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ದತ್ತಾಂಶ ಸಂಗ್ರಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರೂಪಿಸಿರುವ ಪ್ರಶ್ನಾವಳಿಯ ವಿಧಾನವು ಅತ್ಯಂತ ದಾರಿತಪ್ಪಿಸುವಂತಿದೆ ಎಂದು ಗಂಭೀರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ...

ಪತ್ರಕರ್ತ ಅಭಿಷೇಕ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಸುಪ್ರೀಂ ಕೋರ್ಟ್ ಆದೇಶ

ರಾಮ ಮಂದಿರ ದೇಣಿಗೆ ಅಕ್ರಮದ ಕುರಿತು ವರದಿ ಮಾಡಿದ್ದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದ್ದು,...

2027ರ ಜನಗಣತಿಯಲ್ಲಿ ಪೋಷಕರ ಧರ್ಮ, ಜನ್ಮಸ್ಥಳದ ವಿವರ ಏಕೆ? ಕೇಂದ್ರದ ವಿರುದ್ಧ ಸಿಪಿಐ(ಎಂ) ಆಕ್ರೋಶ

2027ರ ಜನಗಣತಿ ಪ್ರಶ್ನಾವಳಿಯಲ್ಲಿ ಪೋಷಕರ ಧರ್ಮ ಹಾಗೂ ಜನ್ಮಸ್ಥಳದ ಕುರಿತಾದ ವಿವರಗಳನ್ನು ಸಂಗ್ರಹಿಸಲು ಉದ್ದೇಶಿಸಿರುವುದರ ವಿರುದ್ಧ ಸಿಪಿಐ(ಎಂ) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಕ್ರಮವು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರುವ...

ಟಿಎಂಸಿ ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಶಾಕ್: 20 ಎಂಪಿಗಳಿಗೆ ನೋಟಿಸ್ ಜಾರಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು, ಎನ್‌ಸಿಪಿಐ (NCPI) ಎಂಬ ಅಷ್ಟಾಗಿ ಜನಪ್ರಿಯವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಒಕ್ಕೂಟವನ್ನು ಸೇರಿಕೊಂಡಿರುವ 20 ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಟಿಎಂಸಿ ಪ್ರಧಾನ...

ಹನೂರ್ ‘ಶೂಟೌಟ್’: ದಾಖಲೆಗಳನ್ನು ಬಿಡುಗಡೆ ಮಾಡಿದ ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ: ಸಿಬಿಐ ತನಿಖೆಗೆ ಆಗ್ರಹ 

ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ವ್ಯಾಪ್ತಿಯಲ್ಲಿ ನಡೆದ ಮೂವರ ಸಾವು ಮತ್ತು ಗುಂಡಿನ ಚಕಮಕಿ ಪ್ರಕರಣ ಇದೀಗ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಆಗಸ್ಟ್ 15ರಂದು ಹನೂರಿನ ಮರಿಯಮಂಗಲ ಬಿಟ್ ಅರಣ್ಯ...

ಬಿಜೆಪಿ MLC ರವಿಕುಮಾರ್‌ ವಿರುದ್ಧ ಜಾಮೀನು ರಹಿತ ವಾರಂಟ್‌

ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನಮ್ ವಿರುದ್ಧ ಅವಹೇಳನಕಾರಿ ಹಾಗೂ ಕೋಮು ಪ್ರಚೋದಕ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ, ವಿಚಾರಣೆಗೆ ಹಾಜರಾಗದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ವಿರುದ್ಧ ಬೆಂಗಳೂರಿನ...

20 ಬಂಡಾಯ ಸಂಸದರ ಅನರ್ಹತೆಗೆ ಒತ್ತಾಯ: ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿಎಂಸಿ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ

ತಮ್ಮ ಪಕ್ಷದಿಂದ ಪ್ರತ್ಯೇಕಗೊಂಡಿರುವ 20 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಶೀಘ್ರ ನಿರ್ಧಾರ ಕೈಗೊಳ್ಳುವಂತೆ ನಿರ್ದೇಶನ ನೀಡಲು ಕೋರಿ ತೃಣಮೂಲ ಕಾಂಗ್ರೆಸ್...