Homeಮುಖಪುಟ78ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಬಾಲಿವುಡ್ ಕ್ವೀನ್ ಆಶಾ ಪರೇಖ್

78ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಬಾಲಿವುಡ್ ಕ್ವೀನ್ ಆಶಾ ಪರೇಖ್

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಆಶಾ ಪರೇಖ್ ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಪ್ರಸ್ತುತ ನೃತ್ಯ ಅಕಾಡೆಮಿ `ಕಲಾ ಭವನ್' ಸ್ಥಾಪಿಸಿ,,ನೃತ್ಯದೊಂದಿಗೆ ಸಮಾಜ ಸೇವೆಯಲ್ಲೂ ನಿರತರಾಗಿದ್ದಾರೆ.

- Advertisement -
- Advertisement -

ಹಿಂದಿ ಚಿತ್ರರಂಗದ 60, 70 ದಶಕದ ಜನಪ್ರಿಯ ನಾಯಕನಟಿ ಆಶಾ ಪರೇಖ್ ಅವರಿಗೆ ಇಂದು 78ರ ಸಂಭ್ರಮ. ಬಾಲಿವುಡ್ ಸಿನಿಮಾಗಳ ದೊಡ್ಡ ಯಶಸ್ಸಿನೊಂದಿಗೆ ಜ್ಯುಬಿಲಿ ಹಿರೋಯಿನ್ ಎಂದೇ ಕರೆಸಿಕೊಂಡಿದ್ದ ಅವರು ‘ಶರವೇಗದ ಸರದಾರ’ ಎಂಬ ಕನ್ನಡ ಚಿತ್ರದಲ್ಲೂ ಅಭಿನಯಿಸಿದ್ದಾರೆ.

ಅರವತ್ತರ ದಶಕದ ಡ್ಯಾನ್ಸಿಂಗ್ ಕ್ವೀನ್ ಎಂದು ಕರೆಸಿಕೊಂಡವರು ಆಶಾ ಪರೇಖ್. ಅವರು ಚಿತ್ರರಂಗಕ್ಕೆ ಪರಿಚಯವಾದ ಸಂದರ್ಭದಲ್ಲಿ ಸಾಧನಾ, ನೂತನ್, ವಹೀದಾ ರೆಹಮಾನ್ ಸ್ಟಾರ್ ನಟಿಯರಾಗಿ ಮಿಂಚುತ್ತಿದ್ದರು. ಇವರೆಲ್ಲರ ನಡುವಿನ ಪೈಪೋಟಿಯನ್ನು ದಿಟ್ಟತನದಿಂದ ಎದುರಿಸಿದವರು ಆಶಾ.

ಆಶಾ ಪರೇಖ್ ಹುಟ್ಟಿದ್ದು 1942, ಅಕ್ಟೋಬರ್ 2ರಂದು ಬೆಂಗಳೂರಿನಲ್ಲಿ. ತಂದೆ ಗುಜರಾತಿ ಮತ್ತು ತಾಯಿ ಮುಸ್ಲಿಂ ಸಮುದಾಯದವರು. ಮಧ್ಯಮ ವರ್ಗದ ಕುಟುಂಬದ ಏಕೈಕ ಪುತ್ರಿಯಾದ ಅವರಿಗೆ ಅಕ್ಕರೆಯ ಬಾಲ್ಯ ಸಿಕ್ಕಿತು. ಚಿಕ್ಕಂದಿನಲ್ಲೇ ಅವರಿಗೆ ನೃತ್ಯದ ತರಬೇತಿಯಾಗಿತ್ತು. ಶಾಲೆಯ ಕಾರ್ಯಕ್ರಮವೊಂದರಲ್ಲಿ ಆಶಾ ನೃತ್ಯ ಕಾರ್ಯಕ್ರಮ ನೀಡುತ್ತಿದ್ದಾಗ, ನಿರ್ದೇಶಕ ಬಿಮಲ್ ರಾಯ್ ಕಣ್ಣಿಗೆ ಬಿದ್ದರು. ಒಮ್ಮೆಗೇ ಆಕರ್ಷಿತರಾದ ರಾಯ್ ತಮ್ಮ`ಬಾಪ್ ಬೇಟಿ’ (1954) ಚಿತ್ರದಲ್ಲಿ ಬಾಲನಟಿಯಾಗುವಂತೆ ಆಶಾರನ್ನು ಕೇಳಿದರು. ಅಲ್ಲಿಂದ ಮುಂದೆ ವಿದ್ಯಾಭ್ಯಾಸದ ಜೊತೆಗೆ ಕೆಲವು ಚಿತ್ರಗಳಲ್ಲಿ ಬಾಲನಟಿಯಾಗಿ ನಟಿಸಿದರು.

ಇದನ್ನೂ ಓದಿ: ನಿರಾಶ್ರಿತರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಈ ಐದು ಚಲನಚಿತ್ರಗಳು

ಖ್ಯಾತ ನಿರ್ದೇಶಕ ವಿಜಯ್ ಭಟ್ ತಮ್ಮ `ಗೂಂಜ್ ಉಠಿ ಶೆಹನಾಯ್’ ಚಿತ್ರದ ನಾಯಕಿ ಪಾತ್ರಕ್ಕೆ ಆಶಾರನ್ನು ಆಯ್ಕೆ ಮಾಡಿದರು. ಆಗಿನ್ನೂ ಆಶಾಗೆ ಹದಿನಾರರ ಹರೆಯ. ಆಶಾ ಪರೇಖ್ ಸ್ಟಾರ್ ನಾಯಕಿಯಲ್ಲ ಎಂದು ಚಿತ್ರದ ನಿರ್ಮಾಪಕರು ಆಕೆಯನ್ನು ಬೇಡವೆಂದರು. ಇದರಿಂದ ನಿರಾಶರಾದ ಆಶಾ ಒಂದಷ್ಟು ಸಮಯ ಸಿನಿಮಾದಿಂದ ದೂರವುಳಿದು, ತಮ್ಮ ನೆಚ್ಚಿನ ಹವ್ಯಾಸ ನೃತ್ಯದಲ್ಲಿ ತೊಡಗಿಸಿಕೊಂಡರು.

1959ರಲ್ಲಿ ಆಶಾಗೆ ಸಿನಿ ಜೀವನಕ್ಕೆ ದೊಡ್ಡ ತಿರುವು ಸಿಕ್ಕಿತು. ರೊಮ್ಯಾಂಟಿಕ್ ಹೀರೋ ಶಮ್ಮಿ ಕಪೂರ್ ಜೊತೆಗಿನ `ದಿಲ್ ದೇಕೆ ದೇಖೋ’ ಚಿತ್ರ ಅವರಿಗೆ ಹೆಸರು ತಂದುಕೊಟ್ಟಿತು. ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದ ಸಿನಿಮಾ ಬಾಕ್ಸ್ ಆಫೀಸಲ್ಲಿ ಮೋಡಿ ಮಾಡಿತು. ಈ ಚಿತ್ರದ ನಂತರ ಆಶಾ ಹಿಂದಿರುಗಿ ನೋಡಲೇ ಇಲ್ಲ. `ಜಬ್ ಪ್ಯಾರ್ ಕಿಸೀ ಸೆ ಹೋತಾ ಹೈ’, `ಫಿರ್ ವೊಹಿ ದಿಲ್ ಲಾಯಾ ಹೂ’, `ಜಿದ್ದಿ’, `ಮೇರೆ ಸನಂ’, `ತೀಸ್ರಿ ಮಂಜಿಲ್’ ಸೇರಿದಂತೆ ಮ್ಯೂಸಿಕಲ್ ಹಿಟ್ ಚಿತ್ರಗಳೊಂದಿಗೆ ಆಶಾ ಸ್ಟಾರ್ ನಾಯಕಿಯಾದರು.

ಆಶಾಗೆ ಹಟ್ಟಿ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಬೇಕೆನ್ನುವ ಅಪೇಕ್ಷೆಯಿತ್ತು. ಆದರೆ ರೊಮ್ಯಾಂಟಿಕ್ ಕಾಮಿಡಿ ಚಿತ್ರಗಳಲ್ಲಿ ಆಶಾಗೆ ಗಂಭೀರ ಪಾತ್ರಗಳಿರಲಿಲ್ಲ. ಮನೋಜ್ ಕುಮಾರ್ ಜೊತೆಗಿನ `ದೋ ಬದನ್’ (1966) ಚಿತ್ರದೊಂದಿಗೆ ಗಂಭೀರ ಪಾತ್ರಗಳತ್ತ ಹೊರಳಿದರು.


ಇದನ್ನೂ ಓದಿ: ನಟ ಸೋನು ಸೂದ್ ಮಾನವೀಯ ಕಾರ್ಯಕ್ಕೆ ವಿಶ್ವಸಂಸ್ಥೆಯ ಗೌರವ


ಮುಂದೆ ಅವರು ಹತ್ತಾರು ಅರ್ಥಪೂರ್ಣ ಪ್ರಯೋಗಗಳಲ್ಲಿ ಕಾಣಿಸಿಕೊಂಡದ್ದು ವಿಶೇಷ. ಇವುಗಳ ಪೈಕಿ `ಕನ್ಯಾದಾನ್’, `ಚಿರಾಗ್’, `ಪಗ್ಲಾ ಕಹೀ ಕಾ’, `ಕಟೀ ಪಂತಗ್’, `ಮೇ ತುಲ್ಸಿ ತೇರೇ ಆಂಗನ್ ಕಿ’ ಪ್ರಮುಖ ಪ್ರಯೋಗಗಳು. ನಟನೆಯ ಜೊತೆಗೆ ಚಿತ್ರ ವಿತರಣೆಯಲ್ಲೂ ಆಶಾಗೆ ಯಶಸ್ಸು ಸಿಕ್ಕಿತ್ತು. ಸುಮಾರು ಎರಡು ದಶಕಗಳ ಕಾಲ ಅವರು ಚಿತ್ರ ವಿತರಣೆಯಲ್ಲಿ ತೊಡಗಿಸಿಕೊಂಡಿದ್ದರು. ಸಮಾಜ ಸೇವಾಕಾರ್ಯಗಳಲ್ಲೂ ಅವರದು ಮುಂಚೂಣಿ ಹೆಸರು.

1971, ಅವರ ಸಿನಿಮಾ ಜೀವನದ ಅದೃಷ್ಟದ ವರ್ಷ. ಆ ವರ್ಷದಲ್ಲಿ ತೆರೆಕಂಡ ಅವರ `ಕಟಿ ಪಂತಗ್’, `ಆನ್ ಮಿಲೋ ಸಜ್ನಾ’, `ಮೇರಾ ಗಾವೋ ಮೇರಾ ದೇಶ್’, `ಕಾರವಾನ್’ ಚಿತ್ರಗಳು ಸೂಪರ್‌ ಹಿಟ್ ಎನಿಸಿದವು. `ಕಟಿ ಪತಂಗ್’ ಚಿತ್ರದ ಉತ್ತಮ ಅಭಿನಯಕ್ಕಾಗಿ ಅವರು ಫಿಲಂಫೇರ್‌ ಪುರಸ್ಕಾರಕ್ಕೂ ಪ್ರಾಪ್ತರಾದರು. ವೃತ್ತಿ ಜೀವನದ ಉತ್ತುಂಗದಲ್ಲಿದ್ದಾಗಲೇ ನೃತ್ಯ ಪ್ರದರ್ಶನಕ್ಕೆಂದು ಆಶಾ ವಿದೇಶಕ್ಕೆ ತೆರಳಿದ್ದರು.

ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಆಶಾ ನೃತ್ಯ ಅಕಾಡೆಮಿ `ಕಲಾ ಭವನ್’ ಸ್ಥಾಪಿಸಿದ್ದಾರೆ. ಇಲ್ಲಿ ವಿವಿಧ ಪ್ರಕಾರಗಳ ನೃತ್ಯಗಳನ್ನು ಕಲಿಸಲಾಗುತ್ತದೆ. ನೃತ್ಯದೊಂದಿಗೆ ಈ ಹೊತ್ತಿಗೂ ಅವರು ಸಮಾಜ ಸೇವೆಯಲ್ಲಿ ನಿರತರಾಗಿದ್ದಾರೆ. 1995ರಲ್ಲಿ ನಟನೆಯಿಂದ ದೂರ ಉಳಿದ ನಟಿ ಟೆಲಿವಿಷನ್ ಧಾರಾವಾಹಿಗಳ ನಿರ್ದೇಶನ ಮತ್ತು ನಿರ್ಮಾಣಕ್ಕೆ ಕೈ ಹಾಕಿದರು.

Iconic Actress: Asha Parekh - Sentinelassam

1992ರಲ್ಲಿ ಭಾರತ ಸರ್ಕಾರದ ಪದ್ಮಶ್ರೀ ಗೌರವಕ್ಕೆ ಪಾತ್ರರಾಗಿದ್ದಾರೆ. ಪರೇಖ್ 2002 ರಲ್ಲಿ ಫಿಲ್ಮ್‌ಫೇರ್ ಜೀವಮಾನ ಸಾಧನೆ ಪ್ರಶಸ್ತಿಯನ್ನು ಪಡೆದರು.  2004 ರಲ್ಲಿ ಕಲಾಕರ್ ಪ್ರಶಸ್ತಿ, 2006 ರಲ್ಲಿ ಅಂತರರಾಷ್ಟ್ರೀಯ ಭಾರತೀಯ ಚಲನಚಿತ್ರ ಅಕಾಡೆಮಿ ಪ್ರಶಸ್ತಿಗಳು, 2007 ರಲ್ಲಿ ಪುಣೆ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ, ಮತ್ತು2007ರಲ್ಲಿ ಒಂಬತ್ತನೇ ವಾರ್ಷಿಕ ಬಾಲಿವುಡ್ ಪ್ರಶಸ್ತಿ ಲಾಂಗ್ ಐಲ್ಯಾಂಡ್ ಪ್ರಶಸ್ತಿ, ಫೆಡರೇಶನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿಯಿಂದ (ಎಫ್‌ಐಸಿಸಿಐ) ಅವರು ಲಿವಿಂಗ್ ಲೆಜೆಂಡ್ ಪ್ರಶಸ್ತಿಯನ್ನು ಪಡೆದಿದ್ದಾರೆ.

2017ರಲ್ಲಿ ಖಾಲಿದ್ ಮೊಹಮದ್ ಬರೆದಿರುವ ಆಶಾ ಪರೇಖ್ ಅವರ ಆತ್ಮಕತೆ ‘ದಿ ಹಿಟ್‌ ಗರ್ಲ್‌’ ಬಿಡುಗಡೆಯಾಗಿದೆ.


ಇದನ್ನೂ ಓದಿ: ನಟಿ, ನೃತ್ಯಗಾರ್ತಿ ಜೊಹ್ರಾ ಸೆಹಗಲ್‌ಗೆ ಗೂಗಲ್ ಡೂಡಲ್ ನಮನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...