Homeಮುಖಪುಟ78ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಬಾಲಿವುಡ್ ಕ್ವೀನ್ ಆಶಾ ಪರೇಖ್

78ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಬಾಲಿವುಡ್ ಕ್ವೀನ್ ಆಶಾ ಪರೇಖ್

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಆಶಾ ಪರೇಖ್ ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಪ್ರಸ್ತುತ ನೃತ್ಯ ಅಕಾಡೆಮಿ `ಕಲಾ ಭವನ್' ಸ್ಥಾಪಿಸಿ,,ನೃತ್ಯದೊಂದಿಗೆ ಸಮಾಜ ಸೇವೆಯಲ್ಲೂ ನಿರತರಾಗಿದ್ದಾರೆ.

- Advertisement -
- Advertisement -

ಹಿಂದಿ ಚಿತ್ರರಂಗದ 60, 70 ದಶಕದ ಜನಪ್ರಿಯ ನಾಯಕನಟಿ ಆಶಾ ಪರೇಖ್ ಅವರಿಗೆ ಇಂದು 78ರ ಸಂಭ್ರಮ. ಬಾಲಿವುಡ್ ಸಿನಿಮಾಗಳ ದೊಡ್ಡ ಯಶಸ್ಸಿನೊಂದಿಗೆ ಜ್ಯುಬಿಲಿ ಹಿರೋಯಿನ್ ಎಂದೇ ಕರೆಸಿಕೊಂಡಿದ್ದ ಅವರು ‘ಶರವೇಗದ ಸರದಾರ’ ಎಂಬ ಕನ್ನಡ ಚಿತ್ರದಲ್ಲೂ ಅಭಿನಯಿಸಿದ್ದಾರೆ.

ಅರವತ್ತರ ದಶಕದ ಡ್ಯಾನ್ಸಿಂಗ್ ಕ್ವೀನ್ ಎಂದು ಕರೆಸಿಕೊಂಡವರು ಆಶಾ ಪರೇಖ್. ಅವರು ಚಿತ್ರರಂಗಕ್ಕೆ ಪರಿಚಯವಾದ ಸಂದರ್ಭದಲ್ಲಿ ಸಾಧನಾ, ನೂತನ್, ವಹೀದಾ ರೆಹಮಾನ್ ಸ್ಟಾರ್ ನಟಿಯರಾಗಿ ಮಿಂಚುತ್ತಿದ್ದರು. ಇವರೆಲ್ಲರ ನಡುವಿನ ಪೈಪೋಟಿಯನ್ನು ದಿಟ್ಟತನದಿಂದ ಎದುರಿಸಿದವರು ಆಶಾ.

ಆಶಾ ಪರೇಖ್ ಹುಟ್ಟಿದ್ದು 1942, ಅಕ್ಟೋಬರ್ 2ರಂದು ಬೆಂಗಳೂರಿನಲ್ಲಿ. ತಂದೆ ಗುಜರಾತಿ ಮತ್ತು ತಾಯಿ ಮುಸ್ಲಿಂ ಸಮುದಾಯದವರು. ಮಧ್ಯಮ ವರ್ಗದ ಕುಟುಂಬದ ಏಕೈಕ ಪುತ್ರಿಯಾದ ಅವರಿಗೆ ಅಕ್ಕರೆಯ ಬಾಲ್ಯ ಸಿಕ್ಕಿತು. ಚಿಕ್ಕಂದಿನಲ್ಲೇ ಅವರಿಗೆ ನೃತ್ಯದ ತರಬೇತಿಯಾಗಿತ್ತು. ಶಾಲೆಯ ಕಾರ್ಯಕ್ರಮವೊಂದರಲ್ಲಿ ಆಶಾ ನೃತ್ಯ ಕಾರ್ಯಕ್ರಮ ನೀಡುತ್ತಿದ್ದಾಗ, ನಿರ್ದೇಶಕ ಬಿಮಲ್ ರಾಯ್ ಕಣ್ಣಿಗೆ ಬಿದ್ದರು. ಒಮ್ಮೆಗೇ ಆಕರ್ಷಿತರಾದ ರಾಯ್ ತಮ್ಮ`ಬಾಪ್ ಬೇಟಿ’ (1954) ಚಿತ್ರದಲ್ಲಿ ಬಾಲನಟಿಯಾಗುವಂತೆ ಆಶಾರನ್ನು ಕೇಳಿದರು. ಅಲ್ಲಿಂದ ಮುಂದೆ ವಿದ್ಯಾಭ್ಯಾಸದ ಜೊತೆಗೆ ಕೆಲವು ಚಿತ್ರಗಳಲ್ಲಿ ಬಾಲನಟಿಯಾಗಿ ನಟಿಸಿದರು.

ಇದನ್ನೂ ಓದಿ: ನಿರಾಶ್ರಿತರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಈ ಐದು ಚಲನಚಿತ್ರಗಳು

ಖ್ಯಾತ ನಿರ್ದೇಶಕ ವಿಜಯ್ ಭಟ್ ತಮ್ಮ `ಗೂಂಜ್ ಉಠಿ ಶೆಹನಾಯ್’ ಚಿತ್ರದ ನಾಯಕಿ ಪಾತ್ರಕ್ಕೆ ಆಶಾರನ್ನು ಆಯ್ಕೆ ಮಾಡಿದರು. ಆಗಿನ್ನೂ ಆಶಾಗೆ ಹದಿನಾರರ ಹರೆಯ. ಆಶಾ ಪರೇಖ್ ಸ್ಟಾರ್ ನಾಯಕಿಯಲ್ಲ ಎಂದು ಚಿತ್ರದ ನಿರ್ಮಾಪಕರು ಆಕೆಯನ್ನು ಬೇಡವೆಂದರು. ಇದರಿಂದ ನಿರಾಶರಾದ ಆಶಾ ಒಂದಷ್ಟು ಸಮಯ ಸಿನಿಮಾದಿಂದ ದೂರವುಳಿದು, ತಮ್ಮ ನೆಚ್ಚಿನ ಹವ್ಯಾಸ ನೃತ್ಯದಲ್ಲಿ ತೊಡಗಿಸಿಕೊಂಡರು.

1959ರಲ್ಲಿ ಆಶಾಗೆ ಸಿನಿ ಜೀವನಕ್ಕೆ ದೊಡ್ಡ ತಿರುವು ಸಿಕ್ಕಿತು. ರೊಮ್ಯಾಂಟಿಕ್ ಹೀರೋ ಶಮ್ಮಿ ಕಪೂರ್ ಜೊತೆಗಿನ `ದಿಲ್ ದೇಕೆ ದೇಖೋ’ ಚಿತ್ರ ಅವರಿಗೆ ಹೆಸರು ತಂದುಕೊಟ್ಟಿತು. ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದ ಸಿನಿಮಾ ಬಾಕ್ಸ್ ಆಫೀಸಲ್ಲಿ ಮೋಡಿ ಮಾಡಿತು. ಈ ಚಿತ್ರದ ನಂತರ ಆಶಾ ಹಿಂದಿರುಗಿ ನೋಡಲೇ ಇಲ್ಲ. `ಜಬ್ ಪ್ಯಾರ್ ಕಿಸೀ ಸೆ ಹೋತಾ ಹೈ’, `ಫಿರ್ ವೊಹಿ ದಿಲ್ ಲಾಯಾ ಹೂ’, `ಜಿದ್ದಿ’, `ಮೇರೆ ಸನಂ’, `ತೀಸ್ರಿ ಮಂಜಿಲ್’ ಸೇರಿದಂತೆ ಮ್ಯೂಸಿಕಲ್ ಹಿಟ್ ಚಿತ್ರಗಳೊಂದಿಗೆ ಆಶಾ ಸ್ಟಾರ್ ನಾಯಕಿಯಾದರು.

ಆಶಾಗೆ ಹಟ್ಟಿ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಬೇಕೆನ್ನುವ ಅಪೇಕ್ಷೆಯಿತ್ತು. ಆದರೆ ರೊಮ್ಯಾಂಟಿಕ್ ಕಾಮಿಡಿ ಚಿತ್ರಗಳಲ್ಲಿ ಆಶಾಗೆ ಗಂಭೀರ ಪಾತ್ರಗಳಿರಲಿಲ್ಲ. ಮನೋಜ್ ಕುಮಾರ್ ಜೊತೆಗಿನ `ದೋ ಬದನ್’ (1966) ಚಿತ್ರದೊಂದಿಗೆ ಗಂಭೀರ ಪಾತ್ರಗಳತ್ತ ಹೊರಳಿದರು.


ಇದನ್ನೂ ಓದಿ: ನಟ ಸೋನು ಸೂದ್ ಮಾನವೀಯ ಕಾರ್ಯಕ್ಕೆ ವಿಶ್ವಸಂಸ್ಥೆಯ ಗೌರವ


ಮುಂದೆ ಅವರು ಹತ್ತಾರು ಅರ್ಥಪೂರ್ಣ ಪ್ರಯೋಗಗಳಲ್ಲಿ ಕಾಣಿಸಿಕೊಂಡದ್ದು ವಿಶೇಷ. ಇವುಗಳ ಪೈಕಿ `ಕನ್ಯಾದಾನ್’, `ಚಿರಾಗ್’, `ಪಗ್ಲಾ ಕಹೀ ಕಾ’, `ಕಟೀ ಪಂತಗ್’, `ಮೇ ತುಲ್ಸಿ ತೇರೇ ಆಂಗನ್ ಕಿ’ ಪ್ರಮುಖ ಪ್ರಯೋಗಗಳು. ನಟನೆಯ ಜೊತೆಗೆ ಚಿತ್ರ ವಿತರಣೆಯಲ್ಲೂ ಆಶಾಗೆ ಯಶಸ್ಸು ಸಿಕ್ಕಿತ್ತು. ಸುಮಾರು ಎರಡು ದಶಕಗಳ ಕಾಲ ಅವರು ಚಿತ್ರ ವಿತರಣೆಯಲ್ಲಿ ತೊಡಗಿಸಿಕೊಂಡಿದ್ದರು. ಸಮಾಜ ಸೇವಾಕಾರ್ಯಗಳಲ್ಲೂ ಅವರದು ಮುಂಚೂಣಿ ಹೆಸರು.

1971, ಅವರ ಸಿನಿಮಾ ಜೀವನದ ಅದೃಷ್ಟದ ವರ್ಷ. ಆ ವರ್ಷದಲ್ಲಿ ತೆರೆಕಂಡ ಅವರ `ಕಟಿ ಪಂತಗ್’, `ಆನ್ ಮಿಲೋ ಸಜ್ನಾ’, `ಮೇರಾ ಗಾವೋ ಮೇರಾ ದೇಶ್’, `ಕಾರವಾನ್’ ಚಿತ್ರಗಳು ಸೂಪರ್‌ ಹಿಟ್ ಎನಿಸಿದವು. `ಕಟಿ ಪತಂಗ್’ ಚಿತ್ರದ ಉತ್ತಮ ಅಭಿನಯಕ್ಕಾಗಿ ಅವರು ಫಿಲಂಫೇರ್‌ ಪುರಸ್ಕಾರಕ್ಕೂ ಪ್ರಾಪ್ತರಾದರು. ವೃತ್ತಿ ಜೀವನದ ಉತ್ತುಂಗದಲ್ಲಿದ್ದಾಗಲೇ ನೃತ್ಯ ಪ್ರದರ್ಶನಕ್ಕೆಂದು ಆಶಾ ವಿದೇಶಕ್ಕೆ ತೆರಳಿದ್ದರು.

ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಆಶಾ ನೃತ್ಯ ಅಕಾಡೆಮಿ `ಕಲಾ ಭವನ್’ ಸ್ಥಾಪಿಸಿದ್ದಾರೆ. ಇಲ್ಲಿ ವಿವಿಧ ಪ್ರಕಾರಗಳ ನೃತ್ಯಗಳನ್ನು ಕಲಿಸಲಾಗುತ್ತದೆ. ನೃತ್ಯದೊಂದಿಗೆ ಈ ಹೊತ್ತಿಗೂ ಅವರು ಸಮಾಜ ಸೇವೆಯಲ್ಲಿ ನಿರತರಾಗಿದ್ದಾರೆ. 1995ರಲ್ಲಿ ನಟನೆಯಿಂದ ದೂರ ಉಳಿದ ನಟಿ ಟೆಲಿವಿಷನ್ ಧಾರಾವಾಹಿಗಳ ನಿರ್ದೇಶನ ಮತ್ತು ನಿರ್ಮಾಣಕ್ಕೆ ಕೈ ಹಾಕಿದರು.

Iconic Actress: Asha Parekh - Sentinelassam

1992ರಲ್ಲಿ ಭಾರತ ಸರ್ಕಾರದ ಪದ್ಮಶ್ರೀ ಗೌರವಕ್ಕೆ ಪಾತ್ರರಾಗಿದ್ದಾರೆ. ಪರೇಖ್ 2002 ರಲ್ಲಿ ಫಿಲ್ಮ್‌ಫೇರ್ ಜೀವಮಾನ ಸಾಧನೆ ಪ್ರಶಸ್ತಿಯನ್ನು ಪಡೆದರು.  2004 ರಲ್ಲಿ ಕಲಾಕರ್ ಪ್ರಶಸ್ತಿ, 2006 ರಲ್ಲಿ ಅಂತರರಾಷ್ಟ್ರೀಯ ಭಾರತೀಯ ಚಲನಚಿತ್ರ ಅಕಾಡೆಮಿ ಪ್ರಶಸ್ತಿಗಳು, 2007 ರಲ್ಲಿ ಪುಣೆ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ, ಮತ್ತು2007ರಲ್ಲಿ ಒಂಬತ್ತನೇ ವಾರ್ಷಿಕ ಬಾಲಿವುಡ್ ಪ್ರಶಸ್ತಿ ಲಾಂಗ್ ಐಲ್ಯಾಂಡ್ ಪ್ರಶಸ್ತಿ, ಫೆಡರೇಶನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿಯಿಂದ (ಎಫ್‌ಐಸಿಸಿಐ) ಅವರು ಲಿವಿಂಗ್ ಲೆಜೆಂಡ್ ಪ್ರಶಸ್ತಿಯನ್ನು ಪಡೆದಿದ್ದಾರೆ.

2017ರಲ್ಲಿ ಖಾಲಿದ್ ಮೊಹಮದ್ ಬರೆದಿರುವ ಆಶಾ ಪರೇಖ್ ಅವರ ಆತ್ಮಕತೆ ‘ದಿ ಹಿಟ್‌ ಗರ್ಲ್‌’ ಬಿಡುಗಡೆಯಾಗಿದೆ.


ಇದನ್ನೂ ಓದಿ: ನಟಿ, ನೃತ್ಯಗಾರ್ತಿ ಜೊಹ್ರಾ ಸೆಹಗಲ್‌ಗೆ ಗೂಗಲ್ ಡೂಡಲ್ ನಮನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತ 6ನೇ ಅತ್ಯಂತ ಕಲುಷಿತ ರಾಷ್ಟ್ರ; ಉತ್ತರ ಪ್ರದೇಶದ ಲೋನಿ ವಿಶ್ವದ ಅತ್ಯಂತ ಕಲುಷಿತ ನಗರ: ವರದಿ

ಪ್ರಮುಖ ವಾಯು ಮಾಲಿನ್ಯಕಾರಕ ಸೂಕ್ಷ್ಮ ಕಣಗಳ ಮಟ್ಟದಲ್ಲಿ ಭಾರತ ಆರನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, ಉತ್ತರ ಪ್ರದೇಶದ ಲೋನಿ ಜಗತ್ತಿನಾದ್ಯಂತ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಿಶ್ವ ವಾಯು...

ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಭಾರತದ ಮೊದಲ ವ್ಯಕ್ತಿ ಹರೀಶ್ ರಾಣಾ ದೆಹಲಿ ಏಮ್ಸ್‌ನಲ್ಲಿ ನಿಧನ

ಕಳೆದ 13 ವರ್ಷಗಳಿಂದ ಕೋಮಾದಲ್ಲಿದ್ದು ಜೀವನ್ಮರಣ ಹೋರಾಟ ನಡೆಸಿ, ಅಂತಿಮವಾಗಿ 2026ರ ಮಾರ್ಚ್ 11ರಂದು ನಿಷ್ಕ್ರಿಯ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ನಿಂದ ಅನುಮತಿ ಪಡೆದ 32 ವರ್ಷದ ಯುವಕ ಹರೀಶ್ ರಾಣಾ, ಮಂಗಳವಾರ (ಮಾ.24)...

ಪಶ್ಚಿಮ ಏಷ್ಯಾ ಸಂಘರ್ಷ: ಪಾಕಿಸ್ತಾನ ಮಧ್ಯವರ್ತಿಯಾದರೆ ಅದು ಭಾರತದ ರಾಜತಾಂತ್ರಿಕ ಹಿನ್ನೆಡೆಯಾಗಬಹುದು; ಕಾಂಗ್ರೆಸ್ 

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂವಹನದಲ್ಲಿ ಪಾಕಿಸ್ತಾನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ವರದಿಗಳು ದೃಢಪಟ್ಟರೆ ಭಾರತಕ್ಕೆ ರಾಜತಾಂತ್ರಿಕ ಹಿನ್ನಡೆಯಾಗಬಹುದು ಎಂದು ಕಾಂಗ್ರೆಸ್ ಪಕ್ಷ ಮಂಗಳವಾರ ಹೇಳಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ,...

ಭಯೋತ್ಪಾದಕ ಚಟುವಟಿಕೆಗಳ ಆರೋಪ; ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ

ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳ ಆರೋಪದ ಮೇಲೆ ದೆಹಲಿಯ ವಿಶೇಷ ನ್ಯಾಯಾಲಯವು ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಆಕೆಯ ಸಹಚರರಾದ ಸೋಫಿ...

ಬಿಜೆಪಿ ಸೀಲ್ ಇರುವ ಚು.ಆಯೋಗದ ಪತ್ರದ ಕುರಿತ ಪೋಸ್ಟ್‌ಗಳನ್ನು ತೆಗೆದು ಹಾಕಲು ಕೇರಳ ಪೊಲೀಸರಿಂದ ಸೂಚನೆ

ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ಕೇರಳ ರಾಜ್ಯ ಘಟಕದ ಸೀಲ್ ಇದ್ದ ಬಗ್ಗೆ ಸೋಮವಾರದಿಂದ (ಮಾ.23) ಭಾರೀ ಚರ್ಚೆಯಾಗುತ್ತಿದೆ. ಸಿಪಿಐ(ಎಂ), ಕಾಂಗ್ರೆಸ್, ಟಿಎಂಸಿ ಸೇರಿದಂತೆ ಪ್ರತಿಪಕ್ಷಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ಚುನಾವಣಾ...

ಪಂಜಾಬ್: ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳಕ್ಕೆ ಅಧಿಕಾರಿ ಆತ್ಮಹತ್ಯೆ; ಅಮೃತಸರದಲ್ಲಿ ಶವಪರೀಕ್ಷೆಗೆ ಕುಟುಂಬ ಒಪ್ಪಿಗೆ

ಪಂಜಾಬ್‌ನ ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡ ಗೋದಾಮು ನಿಗಮದ ಅಧಿಕಾರಿ ಗಗನ್‌ದೀಪ್ ಸಿಂಗ್ ರಾಂಧವ ಅವರ ಮರಣೋತ್ತರ ಪರೀಕ್ಷೆಯನ್ನು ಮಂಗಳವಾರ ಅಮೃತಸರದಲ್ಲಿ ನಡೆಸಲಾಗುವುದು...

ಮುಸ್ಲಿಂ ಮಹಿಳೆಯರು ‘ನಮಾಜ್’ ಮಾಡುತ್ತಿದ್ದ ಕೊಠಡಿಯಲ್ಲಿ ಮಂತ್ರ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ

ತೆಲಂಗಾಣದ ಭಾರತೀಯ ಜನತಾ ಪಕ್ಷದ (ಬಿಜೆಪಿ)ದ ವಿವಾದಾತ್ಮಕ ನಾಯಕಿ ಮಾಧವಿ ಲತಾ ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿಯಾಗಿದ್ದಾರೆ. ನಮಾಜ್‌ ಮಾಡುತ್ತಿದ್ದವರ ಹಿಂದೆ ಮಂತ್ರ ಪಠಿಸುತ್ತಿರುವ ಅವರ ವೀಡಿಯೊವೊಂದು ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್...

ತೂತುಕುಡಿ ಸಾತನ್‌ಕುಳಂ ತಂದೆ ಮಗನ ಕಸ್ಟಡಿ ಸಾವು ಪ್ರಕರಣ : ಒಂಬತ್ತು ಪೊಲೀಸರು ದೋಷಿಗಳು ಎಂದ ಕೋರ್ಟ್

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

4 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ; ಗುರುಗ್ರಾಮ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಹರಿಯಾಣದ ಗುರುಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ನಿರ್ವಹಿಸಿದ ಬಗ್ಗೆ ಹರಿಯಾಣ ಪೊಲೀಸರು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಮಗುವಿನೊಂದಿಗೆ...

ದಾವಣಗೆರೆ: ನಿಮ್ಮ ದೇಶಭಕ್ತಿ ಪ್ರಶ್ನಿಸುವ ಅಯೋಗ್ಯರಿಗೆ ಮತ ಹಾಕಬೇಡಿ; ಮುಸ್ಲಿಮರಿಗೆ ಪ್ರದೀಪ್ ಈಶ್ವರ್ ಮನವಿ

ದಾವಣಗೆರೆ: ಮುಸ್ಲಿಮರ ದೇಶಭಕ್ತಿಯನ್ನು ಪ್ರಶ್ನಿಸಿದ, ಅವರ ಕುಟುಂಬಗಳ ಮಹಿಳೆಯರ ಬಗ್ಗೆ ಹೀನಾಯವಾಗಿ ಮಾತನಾಡಿದ್ದು ಬಿಜೆಪಿ. ಇವತ್ತು ಯಾವುದೋ ಅಸಮಾಧಾನಕ್ಕೆ ಬಿಜೆಪಿಗೆ ಮತ ಹಾಕದರೆ ನಿಮ್ಮ ಅಸ್ತಿತ್ವಕ್ಕೆ ಕುತ್ತು ಬರುತ್ತದೆ. ಇಂತಹ ಅಯೋಗ್ಯರಿಗೆ ಮತ...