Homeಮುಖಪುಟ78ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಬಾಲಿವುಡ್ ಕ್ವೀನ್ ಆಶಾ ಪರೇಖ್

78ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಬಾಲಿವುಡ್ ಕ್ವೀನ್ ಆಶಾ ಪರೇಖ್

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಆಶಾ ಪರೇಖ್ ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಪ್ರಸ್ತುತ ನೃತ್ಯ ಅಕಾಡೆಮಿ `ಕಲಾ ಭವನ್' ಸ್ಥಾಪಿಸಿ,,ನೃತ್ಯದೊಂದಿಗೆ ಸಮಾಜ ಸೇವೆಯಲ್ಲೂ ನಿರತರಾಗಿದ್ದಾರೆ.

- Advertisement -
- Advertisement -

ಹಿಂದಿ ಚಿತ್ರರಂಗದ 60, 70 ದಶಕದ ಜನಪ್ರಿಯ ನಾಯಕನಟಿ ಆಶಾ ಪರೇಖ್ ಅವರಿಗೆ ಇಂದು 78ರ ಸಂಭ್ರಮ. ಬಾಲಿವುಡ್ ಸಿನಿಮಾಗಳ ದೊಡ್ಡ ಯಶಸ್ಸಿನೊಂದಿಗೆ ಜ್ಯುಬಿಲಿ ಹಿರೋಯಿನ್ ಎಂದೇ ಕರೆಸಿಕೊಂಡಿದ್ದ ಅವರು ‘ಶರವೇಗದ ಸರದಾರ’ ಎಂಬ ಕನ್ನಡ ಚಿತ್ರದಲ್ಲೂ ಅಭಿನಯಿಸಿದ್ದಾರೆ.

ಅರವತ್ತರ ದಶಕದ ಡ್ಯಾನ್ಸಿಂಗ್ ಕ್ವೀನ್ ಎಂದು ಕರೆಸಿಕೊಂಡವರು ಆಶಾ ಪರೇಖ್. ಅವರು ಚಿತ್ರರಂಗಕ್ಕೆ ಪರಿಚಯವಾದ ಸಂದರ್ಭದಲ್ಲಿ ಸಾಧನಾ, ನೂತನ್, ವಹೀದಾ ರೆಹಮಾನ್ ಸ್ಟಾರ್ ನಟಿಯರಾಗಿ ಮಿಂಚುತ್ತಿದ್ದರು. ಇವರೆಲ್ಲರ ನಡುವಿನ ಪೈಪೋಟಿಯನ್ನು ದಿಟ್ಟತನದಿಂದ ಎದುರಿಸಿದವರು ಆಶಾ.

ಆಶಾ ಪರೇಖ್ ಹುಟ್ಟಿದ್ದು 1942, ಅಕ್ಟೋಬರ್ 2ರಂದು ಬೆಂಗಳೂರಿನಲ್ಲಿ. ತಂದೆ ಗುಜರಾತಿ ಮತ್ತು ತಾಯಿ ಮುಸ್ಲಿಂ ಸಮುದಾಯದವರು. ಮಧ್ಯಮ ವರ್ಗದ ಕುಟುಂಬದ ಏಕೈಕ ಪುತ್ರಿಯಾದ ಅವರಿಗೆ ಅಕ್ಕರೆಯ ಬಾಲ್ಯ ಸಿಕ್ಕಿತು. ಚಿಕ್ಕಂದಿನಲ್ಲೇ ಅವರಿಗೆ ನೃತ್ಯದ ತರಬೇತಿಯಾಗಿತ್ತು. ಶಾಲೆಯ ಕಾರ್ಯಕ್ರಮವೊಂದರಲ್ಲಿ ಆಶಾ ನೃತ್ಯ ಕಾರ್ಯಕ್ರಮ ನೀಡುತ್ತಿದ್ದಾಗ, ನಿರ್ದೇಶಕ ಬಿಮಲ್ ರಾಯ್ ಕಣ್ಣಿಗೆ ಬಿದ್ದರು. ಒಮ್ಮೆಗೇ ಆಕರ್ಷಿತರಾದ ರಾಯ್ ತಮ್ಮ`ಬಾಪ್ ಬೇಟಿ’ (1954) ಚಿತ್ರದಲ್ಲಿ ಬಾಲನಟಿಯಾಗುವಂತೆ ಆಶಾರನ್ನು ಕೇಳಿದರು. ಅಲ್ಲಿಂದ ಮುಂದೆ ವಿದ್ಯಾಭ್ಯಾಸದ ಜೊತೆಗೆ ಕೆಲವು ಚಿತ್ರಗಳಲ್ಲಿ ಬಾಲನಟಿಯಾಗಿ ನಟಿಸಿದರು.

ಇದನ್ನೂ ಓದಿ: ನಿರಾಶ್ರಿತರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಈ ಐದು ಚಲನಚಿತ್ರಗಳು

ಖ್ಯಾತ ನಿರ್ದೇಶಕ ವಿಜಯ್ ಭಟ್ ತಮ್ಮ `ಗೂಂಜ್ ಉಠಿ ಶೆಹನಾಯ್’ ಚಿತ್ರದ ನಾಯಕಿ ಪಾತ್ರಕ್ಕೆ ಆಶಾರನ್ನು ಆಯ್ಕೆ ಮಾಡಿದರು. ಆಗಿನ್ನೂ ಆಶಾಗೆ ಹದಿನಾರರ ಹರೆಯ. ಆಶಾ ಪರೇಖ್ ಸ್ಟಾರ್ ನಾಯಕಿಯಲ್ಲ ಎಂದು ಚಿತ್ರದ ನಿರ್ಮಾಪಕರು ಆಕೆಯನ್ನು ಬೇಡವೆಂದರು. ಇದರಿಂದ ನಿರಾಶರಾದ ಆಶಾ ಒಂದಷ್ಟು ಸಮಯ ಸಿನಿಮಾದಿಂದ ದೂರವುಳಿದು, ತಮ್ಮ ನೆಚ್ಚಿನ ಹವ್ಯಾಸ ನೃತ್ಯದಲ್ಲಿ ತೊಡಗಿಸಿಕೊಂಡರು.

1959ರಲ್ಲಿ ಆಶಾಗೆ ಸಿನಿ ಜೀವನಕ್ಕೆ ದೊಡ್ಡ ತಿರುವು ಸಿಕ್ಕಿತು. ರೊಮ್ಯಾಂಟಿಕ್ ಹೀರೋ ಶಮ್ಮಿ ಕಪೂರ್ ಜೊತೆಗಿನ `ದಿಲ್ ದೇಕೆ ದೇಖೋ’ ಚಿತ್ರ ಅವರಿಗೆ ಹೆಸರು ತಂದುಕೊಟ್ಟಿತು. ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದ ಸಿನಿಮಾ ಬಾಕ್ಸ್ ಆಫೀಸಲ್ಲಿ ಮೋಡಿ ಮಾಡಿತು. ಈ ಚಿತ್ರದ ನಂತರ ಆಶಾ ಹಿಂದಿರುಗಿ ನೋಡಲೇ ಇಲ್ಲ. `ಜಬ್ ಪ್ಯಾರ್ ಕಿಸೀ ಸೆ ಹೋತಾ ಹೈ’, `ಫಿರ್ ವೊಹಿ ದಿಲ್ ಲಾಯಾ ಹೂ’, `ಜಿದ್ದಿ’, `ಮೇರೆ ಸನಂ’, `ತೀಸ್ರಿ ಮಂಜಿಲ್’ ಸೇರಿದಂತೆ ಮ್ಯೂಸಿಕಲ್ ಹಿಟ್ ಚಿತ್ರಗಳೊಂದಿಗೆ ಆಶಾ ಸ್ಟಾರ್ ನಾಯಕಿಯಾದರು.

ಆಶಾಗೆ ಹಟ್ಟಿ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಬೇಕೆನ್ನುವ ಅಪೇಕ್ಷೆಯಿತ್ತು. ಆದರೆ ರೊಮ್ಯಾಂಟಿಕ್ ಕಾಮಿಡಿ ಚಿತ್ರಗಳಲ್ಲಿ ಆಶಾಗೆ ಗಂಭೀರ ಪಾತ್ರಗಳಿರಲಿಲ್ಲ. ಮನೋಜ್ ಕುಮಾರ್ ಜೊತೆಗಿನ `ದೋ ಬದನ್’ (1966) ಚಿತ್ರದೊಂದಿಗೆ ಗಂಭೀರ ಪಾತ್ರಗಳತ್ತ ಹೊರಳಿದರು.


ಇದನ್ನೂ ಓದಿ: ನಟ ಸೋನು ಸೂದ್ ಮಾನವೀಯ ಕಾರ್ಯಕ್ಕೆ ವಿಶ್ವಸಂಸ್ಥೆಯ ಗೌರವ


ಮುಂದೆ ಅವರು ಹತ್ತಾರು ಅರ್ಥಪೂರ್ಣ ಪ್ರಯೋಗಗಳಲ್ಲಿ ಕಾಣಿಸಿಕೊಂಡದ್ದು ವಿಶೇಷ. ಇವುಗಳ ಪೈಕಿ `ಕನ್ಯಾದಾನ್’, `ಚಿರಾಗ್’, `ಪಗ್ಲಾ ಕಹೀ ಕಾ’, `ಕಟೀ ಪಂತಗ್’, `ಮೇ ತುಲ್ಸಿ ತೇರೇ ಆಂಗನ್ ಕಿ’ ಪ್ರಮುಖ ಪ್ರಯೋಗಗಳು. ನಟನೆಯ ಜೊತೆಗೆ ಚಿತ್ರ ವಿತರಣೆಯಲ್ಲೂ ಆಶಾಗೆ ಯಶಸ್ಸು ಸಿಕ್ಕಿತ್ತು. ಸುಮಾರು ಎರಡು ದಶಕಗಳ ಕಾಲ ಅವರು ಚಿತ್ರ ವಿತರಣೆಯಲ್ಲಿ ತೊಡಗಿಸಿಕೊಂಡಿದ್ದರು. ಸಮಾಜ ಸೇವಾಕಾರ್ಯಗಳಲ್ಲೂ ಅವರದು ಮುಂಚೂಣಿ ಹೆಸರು.

1971, ಅವರ ಸಿನಿಮಾ ಜೀವನದ ಅದೃಷ್ಟದ ವರ್ಷ. ಆ ವರ್ಷದಲ್ಲಿ ತೆರೆಕಂಡ ಅವರ `ಕಟಿ ಪಂತಗ್’, `ಆನ್ ಮಿಲೋ ಸಜ್ನಾ’, `ಮೇರಾ ಗಾವೋ ಮೇರಾ ದೇಶ್’, `ಕಾರವಾನ್’ ಚಿತ್ರಗಳು ಸೂಪರ್‌ ಹಿಟ್ ಎನಿಸಿದವು. `ಕಟಿ ಪತಂಗ್’ ಚಿತ್ರದ ಉತ್ತಮ ಅಭಿನಯಕ್ಕಾಗಿ ಅವರು ಫಿಲಂಫೇರ್‌ ಪುರಸ್ಕಾರಕ್ಕೂ ಪ್ರಾಪ್ತರಾದರು. ವೃತ್ತಿ ಜೀವನದ ಉತ್ತುಂಗದಲ್ಲಿದ್ದಾಗಲೇ ನೃತ್ಯ ಪ್ರದರ್ಶನಕ್ಕೆಂದು ಆಶಾ ವಿದೇಶಕ್ಕೆ ತೆರಳಿದ್ದರು.

ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಆಶಾ ನೃತ್ಯ ಅಕಾಡೆಮಿ `ಕಲಾ ಭವನ್’ ಸ್ಥಾಪಿಸಿದ್ದಾರೆ. ಇಲ್ಲಿ ವಿವಿಧ ಪ್ರಕಾರಗಳ ನೃತ್ಯಗಳನ್ನು ಕಲಿಸಲಾಗುತ್ತದೆ. ನೃತ್ಯದೊಂದಿಗೆ ಈ ಹೊತ್ತಿಗೂ ಅವರು ಸಮಾಜ ಸೇವೆಯಲ್ಲಿ ನಿರತರಾಗಿದ್ದಾರೆ. 1995ರಲ್ಲಿ ನಟನೆಯಿಂದ ದೂರ ಉಳಿದ ನಟಿ ಟೆಲಿವಿಷನ್ ಧಾರಾವಾಹಿಗಳ ನಿರ್ದೇಶನ ಮತ್ತು ನಿರ್ಮಾಣಕ್ಕೆ ಕೈ ಹಾಕಿದರು.

Iconic Actress: Asha Parekh - Sentinelassam

1992ರಲ್ಲಿ ಭಾರತ ಸರ್ಕಾರದ ಪದ್ಮಶ್ರೀ ಗೌರವಕ್ಕೆ ಪಾತ್ರರಾಗಿದ್ದಾರೆ. ಪರೇಖ್ 2002 ರಲ್ಲಿ ಫಿಲ್ಮ್‌ಫೇರ್ ಜೀವಮಾನ ಸಾಧನೆ ಪ್ರಶಸ್ತಿಯನ್ನು ಪಡೆದರು.  2004 ರಲ್ಲಿ ಕಲಾಕರ್ ಪ್ರಶಸ್ತಿ, 2006 ರಲ್ಲಿ ಅಂತರರಾಷ್ಟ್ರೀಯ ಭಾರತೀಯ ಚಲನಚಿತ್ರ ಅಕಾಡೆಮಿ ಪ್ರಶಸ್ತಿಗಳು, 2007 ರಲ್ಲಿ ಪುಣೆ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ, ಮತ್ತು2007ರಲ್ಲಿ ಒಂಬತ್ತನೇ ವಾರ್ಷಿಕ ಬಾಲಿವುಡ್ ಪ್ರಶಸ್ತಿ ಲಾಂಗ್ ಐಲ್ಯಾಂಡ್ ಪ್ರಶಸ್ತಿ, ಫೆಡರೇಶನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿಯಿಂದ (ಎಫ್‌ಐಸಿಸಿಐ) ಅವರು ಲಿವಿಂಗ್ ಲೆಜೆಂಡ್ ಪ್ರಶಸ್ತಿಯನ್ನು ಪಡೆದಿದ್ದಾರೆ.

2017ರಲ್ಲಿ ಖಾಲಿದ್ ಮೊಹಮದ್ ಬರೆದಿರುವ ಆಶಾ ಪರೇಖ್ ಅವರ ಆತ್ಮಕತೆ ‘ದಿ ಹಿಟ್‌ ಗರ್ಲ್‌’ ಬಿಡುಗಡೆಯಾಗಿದೆ.


ಇದನ್ನೂ ಓದಿ: ನಟಿ, ನೃತ್ಯಗಾರ್ತಿ ಜೊಹ್ರಾ ಸೆಹಗಲ್‌ಗೆ ಗೂಗಲ್ ಡೂಡಲ್ ನಮನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....