Homeಮುಖಪುಟ78ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಬಾಲಿವುಡ್ ಕ್ವೀನ್ ಆಶಾ ಪರೇಖ್

78ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಬಾಲಿವುಡ್ ಕ್ವೀನ್ ಆಶಾ ಪರೇಖ್

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಆಶಾ ಪರೇಖ್ ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಪ್ರಸ್ತುತ ನೃತ್ಯ ಅಕಾಡೆಮಿ `ಕಲಾ ಭವನ್' ಸ್ಥಾಪಿಸಿ,,ನೃತ್ಯದೊಂದಿಗೆ ಸಮಾಜ ಸೇವೆಯಲ್ಲೂ ನಿರತರಾಗಿದ್ದಾರೆ.

- Advertisement -
- Advertisement -

ಹಿಂದಿ ಚಿತ್ರರಂಗದ 60, 70 ದಶಕದ ಜನಪ್ರಿಯ ನಾಯಕನಟಿ ಆಶಾ ಪರೇಖ್ ಅವರಿಗೆ ಇಂದು 78ರ ಸಂಭ್ರಮ. ಬಾಲಿವುಡ್ ಸಿನಿಮಾಗಳ ದೊಡ್ಡ ಯಶಸ್ಸಿನೊಂದಿಗೆ ಜ್ಯುಬಿಲಿ ಹಿರೋಯಿನ್ ಎಂದೇ ಕರೆಸಿಕೊಂಡಿದ್ದ ಅವರು ‘ಶರವೇಗದ ಸರದಾರ’ ಎಂಬ ಕನ್ನಡ ಚಿತ್ರದಲ್ಲೂ ಅಭಿನಯಿಸಿದ್ದಾರೆ.

ಅರವತ್ತರ ದಶಕದ ಡ್ಯಾನ್ಸಿಂಗ್ ಕ್ವೀನ್ ಎಂದು ಕರೆಸಿಕೊಂಡವರು ಆಶಾ ಪರೇಖ್. ಅವರು ಚಿತ್ರರಂಗಕ್ಕೆ ಪರಿಚಯವಾದ ಸಂದರ್ಭದಲ್ಲಿ ಸಾಧನಾ, ನೂತನ್, ವಹೀದಾ ರೆಹಮಾನ್ ಸ್ಟಾರ್ ನಟಿಯರಾಗಿ ಮಿಂಚುತ್ತಿದ್ದರು. ಇವರೆಲ್ಲರ ನಡುವಿನ ಪೈಪೋಟಿಯನ್ನು ದಿಟ್ಟತನದಿಂದ ಎದುರಿಸಿದವರು ಆಶಾ.

ಆಶಾ ಪರೇಖ್ ಹುಟ್ಟಿದ್ದು 1942, ಅಕ್ಟೋಬರ್ 2ರಂದು ಬೆಂಗಳೂರಿನಲ್ಲಿ. ತಂದೆ ಗುಜರಾತಿ ಮತ್ತು ತಾಯಿ ಮುಸ್ಲಿಂ ಸಮುದಾಯದವರು. ಮಧ್ಯಮ ವರ್ಗದ ಕುಟುಂಬದ ಏಕೈಕ ಪುತ್ರಿಯಾದ ಅವರಿಗೆ ಅಕ್ಕರೆಯ ಬಾಲ್ಯ ಸಿಕ್ಕಿತು. ಚಿಕ್ಕಂದಿನಲ್ಲೇ ಅವರಿಗೆ ನೃತ್ಯದ ತರಬೇತಿಯಾಗಿತ್ತು. ಶಾಲೆಯ ಕಾರ್ಯಕ್ರಮವೊಂದರಲ್ಲಿ ಆಶಾ ನೃತ್ಯ ಕಾರ್ಯಕ್ರಮ ನೀಡುತ್ತಿದ್ದಾಗ, ನಿರ್ದೇಶಕ ಬಿಮಲ್ ರಾಯ್ ಕಣ್ಣಿಗೆ ಬಿದ್ದರು. ಒಮ್ಮೆಗೇ ಆಕರ್ಷಿತರಾದ ರಾಯ್ ತಮ್ಮ`ಬಾಪ್ ಬೇಟಿ’ (1954) ಚಿತ್ರದಲ್ಲಿ ಬಾಲನಟಿಯಾಗುವಂತೆ ಆಶಾರನ್ನು ಕೇಳಿದರು. ಅಲ್ಲಿಂದ ಮುಂದೆ ವಿದ್ಯಾಭ್ಯಾಸದ ಜೊತೆಗೆ ಕೆಲವು ಚಿತ್ರಗಳಲ್ಲಿ ಬಾಲನಟಿಯಾಗಿ ನಟಿಸಿದರು.

ಇದನ್ನೂ ಓದಿ: ನಿರಾಶ್ರಿತರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಈ ಐದು ಚಲನಚಿತ್ರಗಳು

ಖ್ಯಾತ ನಿರ್ದೇಶಕ ವಿಜಯ್ ಭಟ್ ತಮ್ಮ `ಗೂಂಜ್ ಉಠಿ ಶೆಹನಾಯ್’ ಚಿತ್ರದ ನಾಯಕಿ ಪಾತ್ರಕ್ಕೆ ಆಶಾರನ್ನು ಆಯ್ಕೆ ಮಾಡಿದರು. ಆಗಿನ್ನೂ ಆಶಾಗೆ ಹದಿನಾರರ ಹರೆಯ. ಆಶಾ ಪರೇಖ್ ಸ್ಟಾರ್ ನಾಯಕಿಯಲ್ಲ ಎಂದು ಚಿತ್ರದ ನಿರ್ಮಾಪಕರು ಆಕೆಯನ್ನು ಬೇಡವೆಂದರು. ಇದರಿಂದ ನಿರಾಶರಾದ ಆಶಾ ಒಂದಷ್ಟು ಸಮಯ ಸಿನಿಮಾದಿಂದ ದೂರವುಳಿದು, ತಮ್ಮ ನೆಚ್ಚಿನ ಹವ್ಯಾಸ ನೃತ್ಯದಲ್ಲಿ ತೊಡಗಿಸಿಕೊಂಡರು.

1959ರಲ್ಲಿ ಆಶಾಗೆ ಸಿನಿ ಜೀವನಕ್ಕೆ ದೊಡ್ಡ ತಿರುವು ಸಿಕ್ಕಿತು. ರೊಮ್ಯಾಂಟಿಕ್ ಹೀರೋ ಶಮ್ಮಿ ಕಪೂರ್ ಜೊತೆಗಿನ `ದಿಲ್ ದೇಕೆ ದೇಖೋ’ ಚಿತ್ರ ಅವರಿಗೆ ಹೆಸರು ತಂದುಕೊಟ್ಟಿತು. ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದ ಸಿನಿಮಾ ಬಾಕ್ಸ್ ಆಫೀಸಲ್ಲಿ ಮೋಡಿ ಮಾಡಿತು. ಈ ಚಿತ್ರದ ನಂತರ ಆಶಾ ಹಿಂದಿರುಗಿ ನೋಡಲೇ ಇಲ್ಲ. `ಜಬ್ ಪ್ಯಾರ್ ಕಿಸೀ ಸೆ ಹೋತಾ ಹೈ’, `ಫಿರ್ ವೊಹಿ ದಿಲ್ ಲಾಯಾ ಹೂ’, `ಜಿದ್ದಿ’, `ಮೇರೆ ಸನಂ’, `ತೀಸ್ರಿ ಮಂಜಿಲ್’ ಸೇರಿದಂತೆ ಮ್ಯೂಸಿಕಲ್ ಹಿಟ್ ಚಿತ್ರಗಳೊಂದಿಗೆ ಆಶಾ ಸ್ಟಾರ್ ನಾಯಕಿಯಾದರು.

ಆಶಾಗೆ ಹಟ್ಟಿ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಬೇಕೆನ್ನುವ ಅಪೇಕ್ಷೆಯಿತ್ತು. ಆದರೆ ರೊಮ್ಯಾಂಟಿಕ್ ಕಾಮಿಡಿ ಚಿತ್ರಗಳಲ್ಲಿ ಆಶಾಗೆ ಗಂಭೀರ ಪಾತ್ರಗಳಿರಲಿಲ್ಲ. ಮನೋಜ್ ಕುಮಾರ್ ಜೊತೆಗಿನ `ದೋ ಬದನ್’ (1966) ಚಿತ್ರದೊಂದಿಗೆ ಗಂಭೀರ ಪಾತ್ರಗಳತ್ತ ಹೊರಳಿದರು.


ಇದನ್ನೂ ಓದಿ: ನಟ ಸೋನು ಸೂದ್ ಮಾನವೀಯ ಕಾರ್ಯಕ್ಕೆ ವಿಶ್ವಸಂಸ್ಥೆಯ ಗೌರವ


ಮುಂದೆ ಅವರು ಹತ್ತಾರು ಅರ್ಥಪೂರ್ಣ ಪ್ರಯೋಗಗಳಲ್ಲಿ ಕಾಣಿಸಿಕೊಂಡದ್ದು ವಿಶೇಷ. ಇವುಗಳ ಪೈಕಿ `ಕನ್ಯಾದಾನ್’, `ಚಿರಾಗ್’, `ಪಗ್ಲಾ ಕಹೀ ಕಾ’, `ಕಟೀ ಪಂತಗ್’, `ಮೇ ತುಲ್ಸಿ ತೇರೇ ಆಂಗನ್ ಕಿ’ ಪ್ರಮುಖ ಪ್ರಯೋಗಗಳು. ನಟನೆಯ ಜೊತೆಗೆ ಚಿತ್ರ ವಿತರಣೆಯಲ್ಲೂ ಆಶಾಗೆ ಯಶಸ್ಸು ಸಿಕ್ಕಿತ್ತು. ಸುಮಾರು ಎರಡು ದಶಕಗಳ ಕಾಲ ಅವರು ಚಿತ್ರ ವಿತರಣೆಯಲ್ಲಿ ತೊಡಗಿಸಿಕೊಂಡಿದ್ದರು. ಸಮಾಜ ಸೇವಾಕಾರ್ಯಗಳಲ್ಲೂ ಅವರದು ಮುಂಚೂಣಿ ಹೆಸರು.

1971, ಅವರ ಸಿನಿಮಾ ಜೀವನದ ಅದೃಷ್ಟದ ವರ್ಷ. ಆ ವರ್ಷದಲ್ಲಿ ತೆರೆಕಂಡ ಅವರ `ಕಟಿ ಪಂತಗ್’, `ಆನ್ ಮಿಲೋ ಸಜ್ನಾ’, `ಮೇರಾ ಗಾವೋ ಮೇರಾ ದೇಶ್’, `ಕಾರವಾನ್’ ಚಿತ್ರಗಳು ಸೂಪರ್‌ ಹಿಟ್ ಎನಿಸಿದವು. `ಕಟಿ ಪತಂಗ್’ ಚಿತ್ರದ ಉತ್ತಮ ಅಭಿನಯಕ್ಕಾಗಿ ಅವರು ಫಿಲಂಫೇರ್‌ ಪುರಸ್ಕಾರಕ್ಕೂ ಪ್ರಾಪ್ತರಾದರು. ವೃತ್ತಿ ಜೀವನದ ಉತ್ತುಂಗದಲ್ಲಿದ್ದಾಗಲೇ ನೃತ್ಯ ಪ್ರದರ್ಶನಕ್ಕೆಂದು ಆಶಾ ವಿದೇಶಕ್ಕೆ ತೆರಳಿದ್ದರು.

ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಆಶಾ ನೃತ್ಯ ಅಕಾಡೆಮಿ `ಕಲಾ ಭವನ್’ ಸ್ಥಾಪಿಸಿದ್ದಾರೆ. ಇಲ್ಲಿ ವಿವಿಧ ಪ್ರಕಾರಗಳ ನೃತ್ಯಗಳನ್ನು ಕಲಿಸಲಾಗುತ್ತದೆ. ನೃತ್ಯದೊಂದಿಗೆ ಈ ಹೊತ್ತಿಗೂ ಅವರು ಸಮಾಜ ಸೇವೆಯಲ್ಲಿ ನಿರತರಾಗಿದ್ದಾರೆ. 1995ರಲ್ಲಿ ನಟನೆಯಿಂದ ದೂರ ಉಳಿದ ನಟಿ ಟೆಲಿವಿಷನ್ ಧಾರಾವಾಹಿಗಳ ನಿರ್ದೇಶನ ಮತ್ತು ನಿರ್ಮಾಣಕ್ಕೆ ಕೈ ಹಾಕಿದರು.

Iconic Actress: Asha Parekh - Sentinelassam

1992ರಲ್ಲಿ ಭಾರತ ಸರ್ಕಾರದ ಪದ್ಮಶ್ರೀ ಗೌರವಕ್ಕೆ ಪಾತ್ರರಾಗಿದ್ದಾರೆ. ಪರೇಖ್ 2002 ರಲ್ಲಿ ಫಿಲ್ಮ್‌ಫೇರ್ ಜೀವಮಾನ ಸಾಧನೆ ಪ್ರಶಸ್ತಿಯನ್ನು ಪಡೆದರು.  2004 ರಲ್ಲಿ ಕಲಾಕರ್ ಪ್ರಶಸ್ತಿ, 2006 ರಲ್ಲಿ ಅಂತರರಾಷ್ಟ್ರೀಯ ಭಾರತೀಯ ಚಲನಚಿತ್ರ ಅಕಾಡೆಮಿ ಪ್ರಶಸ್ತಿಗಳು, 2007 ರಲ್ಲಿ ಪುಣೆ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ, ಮತ್ತು2007ರಲ್ಲಿ ಒಂಬತ್ತನೇ ವಾರ್ಷಿಕ ಬಾಲಿವುಡ್ ಪ್ರಶಸ್ತಿ ಲಾಂಗ್ ಐಲ್ಯಾಂಡ್ ಪ್ರಶಸ್ತಿ, ಫೆಡರೇಶನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿಯಿಂದ (ಎಫ್‌ಐಸಿಸಿಐ) ಅವರು ಲಿವಿಂಗ್ ಲೆಜೆಂಡ್ ಪ್ರಶಸ್ತಿಯನ್ನು ಪಡೆದಿದ್ದಾರೆ.

2017ರಲ್ಲಿ ಖಾಲಿದ್ ಮೊಹಮದ್ ಬರೆದಿರುವ ಆಶಾ ಪರೇಖ್ ಅವರ ಆತ್ಮಕತೆ ‘ದಿ ಹಿಟ್‌ ಗರ್ಲ್‌’ ಬಿಡುಗಡೆಯಾಗಿದೆ.


ಇದನ್ನೂ ಓದಿ: ನಟಿ, ನೃತ್ಯಗಾರ್ತಿ ಜೊಹ್ರಾ ಸೆಹಗಲ್‌ಗೆ ಗೂಗಲ್ ಡೂಡಲ್ ನಮನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...