Homeಮುಖಪುಟ78ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಬಾಲಿವುಡ್ ಕ್ವೀನ್ ಆಶಾ ಪರೇಖ್

78ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಬಾಲಿವುಡ್ ಕ್ವೀನ್ ಆಶಾ ಪರೇಖ್

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಆಶಾ ಪರೇಖ್ ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಪ್ರಸ್ತುತ ನೃತ್ಯ ಅಕಾಡೆಮಿ `ಕಲಾ ಭವನ್' ಸ್ಥಾಪಿಸಿ,,ನೃತ್ಯದೊಂದಿಗೆ ಸಮಾಜ ಸೇವೆಯಲ್ಲೂ ನಿರತರಾಗಿದ್ದಾರೆ.

- Advertisement -
- Advertisement -

ಹಿಂದಿ ಚಿತ್ರರಂಗದ 60, 70 ದಶಕದ ಜನಪ್ರಿಯ ನಾಯಕನಟಿ ಆಶಾ ಪರೇಖ್ ಅವರಿಗೆ ಇಂದು 78ರ ಸಂಭ್ರಮ. ಬಾಲಿವುಡ್ ಸಿನಿಮಾಗಳ ದೊಡ್ಡ ಯಶಸ್ಸಿನೊಂದಿಗೆ ಜ್ಯುಬಿಲಿ ಹಿರೋಯಿನ್ ಎಂದೇ ಕರೆಸಿಕೊಂಡಿದ್ದ ಅವರು ‘ಶರವೇಗದ ಸರದಾರ’ ಎಂಬ ಕನ್ನಡ ಚಿತ್ರದಲ್ಲೂ ಅಭಿನಯಿಸಿದ್ದಾರೆ.

ಅರವತ್ತರ ದಶಕದ ಡ್ಯಾನ್ಸಿಂಗ್ ಕ್ವೀನ್ ಎಂದು ಕರೆಸಿಕೊಂಡವರು ಆಶಾ ಪರೇಖ್. ಅವರು ಚಿತ್ರರಂಗಕ್ಕೆ ಪರಿಚಯವಾದ ಸಂದರ್ಭದಲ್ಲಿ ಸಾಧನಾ, ನೂತನ್, ವಹೀದಾ ರೆಹಮಾನ್ ಸ್ಟಾರ್ ನಟಿಯರಾಗಿ ಮಿಂಚುತ್ತಿದ್ದರು. ಇವರೆಲ್ಲರ ನಡುವಿನ ಪೈಪೋಟಿಯನ್ನು ದಿಟ್ಟತನದಿಂದ ಎದುರಿಸಿದವರು ಆಶಾ.

ಆಶಾ ಪರೇಖ್ ಹುಟ್ಟಿದ್ದು 1942, ಅಕ್ಟೋಬರ್ 2ರಂದು ಬೆಂಗಳೂರಿನಲ್ಲಿ. ತಂದೆ ಗುಜರಾತಿ ಮತ್ತು ತಾಯಿ ಮುಸ್ಲಿಂ ಸಮುದಾಯದವರು. ಮಧ್ಯಮ ವರ್ಗದ ಕುಟುಂಬದ ಏಕೈಕ ಪುತ್ರಿಯಾದ ಅವರಿಗೆ ಅಕ್ಕರೆಯ ಬಾಲ್ಯ ಸಿಕ್ಕಿತು. ಚಿಕ್ಕಂದಿನಲ್ಲೇ ಅವರಿಗೆ ನೃತ್ಯದ ತರಬೇತಿಯಾಗಿತ್ತು. ಶಾಲೆಯ ಕಾರ್ಯಕ್ರಮವೊಂದರಲ್ಲಿ ಆಶಾ ನೃತ್ಯ ಕಾರ್ಯಕ್ರಮ ನೀಡುತ್ತಿದ್ದಾಗ, ನಿರ್ದೇಶಕ ಬಿಮಲ್ ರಾಯ್ ಕಣ್ಣಿಗೆ ಬಿದ್ದರು. ಒಮ್ಮೆಗೇ ಆಕರ್ಷಿತರಾದ ರಾಯ್ ತಮ್ಮ`ಬಾಪ್ ಬೇಟಿ’ (1954) ಚಿತ್ರದಲ್ಲಿ ಬಾಲನಟಿಯಾಗುವಂತೆ ಆಶಾರನ್ನು ಕೇಳಿದರು. ಅಲ್ಲಿಂದ ಮುಂದೆ ವಿದ್ಯಾಭ್ಯಾಸದ ಜೊತೆಗೆ ಕೆಲವು ಚಿತ್ರಗಳಲ್ಲಿ ಬಾಲನಟಿಯಾಗಿ ನಟಿಸಿದರು.

ಇದನ್ನೂ ಓದಿ: ನಿರಾಶ್ರಿತರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಈ ಐದು ಚಲನಚಿತ್ರಗಳು

ಖ್ಯಾತ ನಿರ್ದೇಶಕ ವಿಜಯ್ ಭಟ್ ತಮ್ಮ `ಗೂಂಜ್ ಉಠಿ ಶೆಹನಾಯ್’ ಚಿತ್ರದ ನಾಯಕಿ ಪಾತ್ರಕ್ಕೆ ಆಶಾರನ್ನು ಆಯ್ಕೆ ಮಾಡಿದರು. ಆಗಿನ್ನೂ ಆಶಾಗೆ ಹದಿನಾರರ ಹರೆಯ. ಆಶಾ ಪರೇಖ್ ಸ್ಟಾರ್ ನಾಯಕಿಯಲ್ಲ ಎಂದು ಚಿತ್ರದ ನಿರ್ಮಾಪಕರು ಆಕೆಯನ್ನು ಬೇಡವೆಂದರು. ಇದರಿಂದ ನಿರಾಶರಾದ ಆಶಾ ಒಂದಷ್ಟು ಸಮಯ ಸಿನಿಮಾದಿಂದ ದೂರವುಳಿದು, ತಮ್ಮ ನೆಚ್ಚಿನ ಹವ್ಯಾಸ ನೃತ್ಯದಲ್ಲಿ ತೊಡಗಿಸಿಕೊಂಡರು.

1959ರಲ್ಲಿ ಆಶಾಗೆ ಸಿನಿ ಜೀವನಕ್ಕೆ ದೊಡ್ಡ ತಿರುವು ಸಿಕ್ಕಿತು. ರೊಮ್ಯಾಂಟಿಕ್ ಹೀರೋ ಶಮ್ಮಿ ಕಪೂರ್ ಜೊತೆಗಿನ `ದಿಲ್ ದೇಕೆ ದೇಖೋ’ ಚಿತ್ರ ಅವರಿಗೆ ಹೆಸರು ತಂದುಕೊಟ್ಟಿತು. ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದ ಸಿನಿಮಾ ಬಾಕ್ಸ್ ಆಫೀಸಲ್ಲಿ ಮೋಡಿ ಮಾಡಿತು. ಈ ಚಿತ್ರದ ನಂತರ ಆಶಾ ಹಿಂದಿರುಗಿ ನೋಡಲೇ ಇಲ್ಲ. `ಜಬ್ ಪ್ಯಾರ್ ಕಿಸೀ ಸೆ ಹೋತಾ ಹೈ’, `ಫಿರ್ ವೊಹಿ ದಿಲ್ ಲಾಯಾ ಹೂ’, `ಜಿದ್ದಿ’, `ಮೇರೆ ಸನಂ’, `ತೀಸ್ರಿ ಮಂಜಿಲ್’ ಸೇರಿದಂತೆ ಮ್ಯೂಸಿಕಲ್ ಹಿಟ್ ಚಿತ್ರಗಳೊಂದಿಗೆ ಆಶಾ ಸ್ಟಾರ್ ನಾಯಕಿಯಾದರು.

ಆಶಾಗೆ ಹಟ್ಟಿ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಬೇಕೆನ್ನುವ ಅಪೇಕ್ಷೆಯಿತ್ತು. ಆದರೆ ರೊಮ್ಯಾಂಟಿಕ್ ಕಾಮಿಡಿ ಚಿತ್ರಗಳಲ್ಲಿ ಆಶಾಗೆ ಗಂಭೀರ ಪಾತ್ರಗಳಿರಲಿಲ್ಲ. ಮನೋಜ್ ಕುಮಾರ್ ಜೊತೆಗಿನ `ದೋ ಬದನ್’ (1966) ಚಿತ್ರದೊಂದಿಗೆ ಗಂಭೀರ ಪಾತ್ರಗಳತ್ತ ಹೊರಳಿದರು.


ಇದನ್ನೂ ಓದಿ: ನಟ ಸೋನು ಸೂದ್ ಮಾನವೀಯ ಕಾರ್ಯಕ್ಕೆ ವಿಶ್ವಸಂಸ್ಥೆಯ ಗೌರವ


ಮುಂದೆ ಅವರು ಹತ್ತಾರು ಅರ್ಥಪೂರ್ಣ ಪ್ರಯೋಗಗಳಲ್ಲಿ ಕಾಣಿಸಿಕೊಂಡದ್ದು ವಿಶೇಷ. ಇವುಗಳ ಪೈಕಿ `ಕನ್ಯಾದಾನ್’, `ಚಿರಾಗ್’, `ಪಗ್ಲಾ ಕಹೀ ಕಾ’, `ಕಟೀ ಪಂತಗ್’, `ಮೇ ತುಲ್ಸಿ ತೇರೇ ಆಂಗನ್ ಕಿ’ ಪ್ರಮುಖ ಪ್ರಯೋಗಗಳು. ನಟನೆಯ ಜೊತೆಗೆ ಚಿತ್ರ ವಿತರಣೆಯಲ್ಲೂ ಆಶಾಗೆ ಯಶಸ್ಸು ಸಿಕ್ಕಿತ್ತು. ಸುಮಾರು ಎರಡು ದಶಕಗಳ ಕಾಲ ಅವರು ಚಿತ್ರ ವಿತರಣೆಯಲ್ಲಿ ತೊಡಗಿಸಿಕೊಂಡಿದ್ದರು. ಸಮಾಜ ಸೇವಾಕಾರ್ಯಗಳಲ್ಲೂ ಅವರದು ಮುಂಚೂಣಿ ಹೆಸರು.

1971, ಅವರ ಸಿನಿಮಾ ಜೀವನದ ಅದೃಷ್ಟದ ವರ್ಷ. ಆ ವರ್ಷದಲ್ಲಿ ತೆರೆಕಂಡ ಅವರ `ಕಟಿ ಪಂತಗ್’, `ಆನ್ ಮಿಲೋ ಸಜ್ನಾ’, `ಮೇರಾ ಗಾವೋ ಮೇರಾ ದೇಶ್’, `ಕಾರವಾನ್’ ಚಿತ್ರಗಳು ಸೂಪರ್‌ ಹಿಟ್ ಎನಿಸಿದವು. `ಕಟಿ ಪತಂಗ್’ ಚಿತ್ರದ ಉತ್ತಮ ಅಭಿನಯಕ್ಕಾಗಿ ಅವರು ಫಿಲಂಫೇರ್‌ ಪುರಸ್ಕಾರಕ್ಕೂ ಪ್ರಾಪ್ತರಾದರು. ವೃತ್ತಿ ಜೀವನದ ಉತ್ತುಂಗದಲ್ಲಿದ್ದಾಗಲೇ ನೃತ್ಯ ಪ್ರದರ್ಶನಕ್ಕೆಂದು ಆಶಾ ವಿದೇಶಕ್ಕೆ ತೆರಳಿದ್ದರು.

ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಆಶಾ ನೃತ್ಯ ಅಕಾಡೆಮಿ `ಕಲಾ ಭವನ್’ ಸ್ಥಾಪಿಸಿದ್ದಾರೆ. ಇಲ್ಲಿ ವಿವಿಧ ಪ್ರಕಾರಗಳ ನೃತ್ಯಗಳನ್ನು ಕಲಿಸಲಾಗುತ್ತದೆ. ನೃತ್ಯದೊಂದಿಗೆ ಈ ಹೊತ್ತಿಗೂ ಅವರು ಸಮಾಜ ಸೇವೆಯಲ್ಲಿ ನಿರತರಾಗಿದ್ದಾರೆ. 1995ರಲ್ಲಿ ನಟನೆಯಿಂದ ದೂರ ಉಳಿದ ನಟಿ ಟೆಲಿವಿಷನ್ ಧಾರಾವಾಹಿಗಳ ನಿರ್ದೇಶನ ಮತ್ತು ನಿರ್ಮಾಣಕ್ಕೆ ಕೈ ಹಾಕಿದರು.

Iconic Actress: Asha Parekh - Sentinelassam

1992ರಲ್ಲಿ ಭಾರತ ಸರ್ಕಾರದ ಪದ್ಮಶ್ರೀ ಗೌರವಕ್ಕೆ ಪಾತ್ರರಾಗಿದ್ದಾರೆ. ಪರೇಖ್ 2002 ರಲ್ಲಿ ಫಿಲ್ಮ್‌ಫೇರ್ ಜೀವಮಾನ ಸಾಧನೆ ಪ್ರಶಸ್ತಿಯನ್ನು ಪಡೆದರು.  2004 ರಲ್ಲಿ ಕಲಾಕರ್ ಪ್ರಶಸ್ತಿ, 2006 ರಲ್ಲಿ ಅಂತರರಾಷ್ಟ್ರೀಯ ಭಾರತೀಯ ಚಲನಚಿತ್ರ ಅಕಾಡೆಮಿ ಪ್ರಶಸ್ತಿಗಳು, 2007 ರಲ್ಲಿ ಪುಣೆ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ, ಮತ್ತು2007ರಲ್ಲಿ ಒಂಬತ್ತನೇ ವಾರ್ಷಿಕ ಬಾಲಿವುಡ್ ಪ್ರಶಸ್ತಿ ಲಾಂಗ್ ಐಲ್ಯಾಂಡ್ ಪ್ರಶಸ್ತಿ, ಫೆಡರೇಶನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿಯಿಂದ (ಎಫ್‌ಐಸಿಸಿಐ) ಅವರು ಲಿವಿಂಗ್ ಲೆಜೆಂಡ್ ಪ್ರಶಸ್ತಿಯನ್ನು ಪಡೆದಿದ್ದಾರೆ.

2017ರಲ್ಲಿ ಖಾಲಿದ್ ಮೊಹಮದ್ ಬರೆದಿರುವ ಆಶಾ ಪರೇಖ್ ಅವರ ಆತ್ಮಕತೆ ‘ದಿ ಹಿಟ್‌ ಗರ್ಲ್‌’ ಬಿಡುಗಡೆಯಾಗಿದೆ.


ಇದನ್ನೂ ಓದಿ: ನಟಿ, ನೃತ್ಯಗಾರ್ತಿ ಜೊಹ್ರಾ ಸೆಹಗಲ್‌ಗೆ ಗೂಗಲ್ ಡೂಡಲ್ ನಮನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...