Homeಮುಖಪುಟ78ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಬಾಲಿವುಡ್ ಕ್ವೀನ್ ಆಶಾ ಪರೇಖ್

78ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಬಾಲಿವುಡ್ ಕ್ವೀನ್ ಆಶಾ ಪರೇಖ್

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಆಶಾ ಪರೇಖ್ ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಪ್ರಸ್ತುತ ನೃತ್ಯ ಅಕಾಡೆಮಿ `ಕಲಾ ಭವನ್' ಸ್ಥಾಪಿಸಿ,,ನೃತ್ಯದೊಂದಿಗೆ ಸಮಾಜ ಸೇವೆಯಲ್ಲೂ ನಿರತರಾಗಿದ್ದಾರೆ.

- Advertisement -
- Advertisement -

ಹಿಂದಿ ಚಿತ್ರರಂಗದ 60, 70 ದಶಕದ ಜನಪ್ರಿಯ ನಾಯಕನಟಿ ಆಶಾ ಪರೇಖ್ ಅವರಿಗೆ ಇಂದು 78ರ ಸಂಭ್ರಮ. ಬಾಲಿವುಡ್ ಸಿನಿಮಾಗಳ ದೊಡ್ಡ ಯಶಸ್ಸಿನೊಂದಿಗೆ ಜ್ಯುಬಿಲಿ ಹಿರೋಯಿನ್ ಎಂದೇ ಕರೆಸಿಕೊಂಡಿದ್ದ ಅವರು ‘ಶರವೇಗದ ಸರದಾರ’ ಎಂಬ ಕನ್ನಡ ಚಿತ್ರದಲ್ಲೂ ಅಭಿನಯಿಸಿದ್ದಾರೆ.

ಅರವತ್ತರ ದಶಕದ ಡ್ಯಾನ್ಸಿಂಗ್ ಕ್ವೀನ್ ಎಂದು ಕರೆಸಿಕೊಂಡವರು ಆಶಾ ಪರೇಖ್. ಅವರು ಚಿತ್ರರಂಗಕ್ಕೆ ಪರಿಚಯವಾದ ಸಂದರ್ಭದಲ್ಲಿ ಸಾಧನಾ, ನೂತನ್, ವಹೀದಾ ರೆಹಮಾನ್ ಸ್ಟಾರ್ ನಟಿಯರಾಗಿ ಮಿಂಚುತ್ತಿದ್ದರು. ಇವರೆಲ್ಲರ ನಡುವಿನ ಪೈಪೋಟಿಯನ್ನು ದಿಟ್ಟತನದಿಂದ ಎದುರಿಸಿದವರು ಆಶಾ.

ಆಶಾ ಪರೇಖ್ ಹುಟ್ಟಿದ್ದು 1942, ಅಕ್ಟೋಬರ್ 2ರಂದು ಬೆಂಗಳೂರಿನಲ್ಲಿ. ತಂದೆ ಗುಜರಾತಿ ಮತ್ತು ತಾಯಿ ಮುಸ್ಲಿಂ ಸಮುದಾಯದವರು. ಮಧ್ಯಮ ವರ್ಗದ ಕುಟುಂಬದ ಏಕೈಕ ಪುತ್ರಿಯಾದ ಅವರಿಗೆ ಅಕ್ಕರೆಯ ಬಾಲ್ಯ ಸಿಕ್ಕಿತು. ಚಿಕ್ಕಂದಿನಲ್ಲೇ ಅವರಿಗೆ ನೃತ್ಯದ ತರಬೇತಿಯಾಗಿತ್ತು. ಶಾಲೆಯ ಕಾರ್ಯಕ್ರಮವೊಂದರಲ್ಲಿ ಆಶಾ ನೃತ್ಯ ಕಾರ್ಯಕ್ರಮ ನೀಡುತ್ತಿದ್ದಾಗ, ನಿರ್ದೇಶಕ ಬಿಮಲ್ ರಾಯ್ ಕಣ್ಣಿಗೆ ಬಿದ್ದರು. ಒಮ್ಮೆಗೇ ಆಕರ್ಷಿತರಾದ ರಾಯ್ ತಮ್ಮ`ಬಾಪ್ ಬೇಟಿ’ (1954) ಚಿತ್ರದಲ್ಲಿ ಬಾಲನಟಿಯಾಗುವಂತೆ ಆಶಾರನ್ನು ಕೇಳಿದರು. ಅಲ್ಲಿಂದ ಮುಂದೆ ವಿದ್ಯಾಭ್ಯಾಸದ ಜೊತೆಗೆ ಕೆಲವು ಚಿತ್ರಗಳಲ್ಲಿ ಬಾಲನಟಿಯಾಗಿ ನಟಿಸಿದರು.

ಇದನ್ನೂ ಓದಿ: ನಿರಾಶ್ರಿತರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಈ ಐದು ಚಲನಚಿತ್ರಗಳು

ಖ್ಯಾತ ನಿರ್ದೇಶಕ ವಿಜಯ್ ಭಟ್ ತಮ್ಮ `ಗೂಂಜ್ ಉಠಿ ಶೆಹನಾಯ್’ ಚಿತ್ರದ ನಾಯಕಿ ಪಾತ್ರಕ್ಕೆ ಆಶಾರನ್ನು ಆಯ್ಕೆ ಮಾಡಿದರು. ಆಗಿನ್ನೂ ಆಶಾಗೆ ಹದಿನಾರರ ಹರೆಯ. ಆಶಾ ಪರೇಖ್ ಸ್ಟಾರ್ ನಾಯಕಿಯಲ್ಲ ಎಂದು ಚಿತ್ರದ ನಿರ್ಮಾಪಕರು ಆಕೆಯನ್ನು ಬೇಡವೆಂದರು. ಇದರಿಂದ ನಿರಾಶರಾದ ಆಶಾ ಒಂದಷ್ಟು ಸಮಯ ಸಿನಿಮಾದಿಂದ ದೂರವುಳಿದು, ತಮ್ಮ ನೆಚ್ಚಿನ ಹವ್ಯಾಸ ನೃತ್ಯದಲ್ಲಿ ತೊಡಗಿಸಿಕೊಂಡರು.

1959ರಲ್ಲಿ ಆಶಾಗೆ ಸಿನಿ ಜೀವನಕ್ಕೆ ದೊಡ್ಡ ತಿರುವು ಸಿಕ್ಕಿತು. ರೊಮ್ಯಾಂಟಿಕ್ ಹೀರೋ ಶಮ್ಮಿ ಕಪೂರ್ ಜೊತೆಗಿನ `ದಿಲ್ ದೇಕೆ ದೇಖೋ’ ಚಿತ್ರ ಅವರಿಗೆ ಹೆಸರು ತಂದುಕೊಟ್ಟಿತು. ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದ ಸಿನಿಮಾ ಬಾಕ್ಸ್ ಆಫೀಸಲ್ಲಿ ಮೋಡಿ ಮಾಡಿತು. ಈ ಚಿತ್ರದ ನಂತರ ಆಶಾ ಹಿಂದಿರುಗಿ ನೋಡಲೇ ಇಲ್ಲ. `ಜಬ್ ಪ್ಯಾರ್ ಕಿಸೀ ಸೆ ಹೋತಾ ಹೈ’, `ಫಿರ್ ವೊಹಿ ದಿಲ್ ಲಾಯಾ ಹೂ’, `ಜಿದ್ದಿ’, `ಮೇರೆ ಸನಂ’, `ತೀಸ್ರಿ ಮಂಜಿಲ್’ ಸೇರಿದಂತೆ ಮ್ಯೂಸಿಕಲ್ ಹಿಟ್ ಚಿತ್ರಗಳೊಂದಿಗೆ ಆಶಾ ಸ್ಟಾರ್ ನಾಯಕಿಯಾದರು.

ಆಶಾಗೆ ಹಟ್ಟಿ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಬೇಕೆನ್ನುವ ಅಪೇಕ್ಷೆಯಿತ್ತು. ಆದರೆ ರೊಮ್ಯಾಂಟಿಕ್ ಕಾಮಿಡಿ ಚಿತ್ರಗಳಲ್ಲಿ ಆಶಾಗೆ ಗಂಭೀರ ಪಾತ್ರಗಳಿರಲಿಲ್ಲ. ಮನೋಜ್ ಕುಮಾರ್ ಜೊತೆಗಿನ `ದೋ ಬದನ್’ (1966) ಚಿತ್ರದೊಂದಿಗೆ ಗಂಭೀರ ಪಾತ್ರಗಳತ್ತ ಹೊರಳಿದರು.


ಇದನ್ನೂ ಓದಿ: ನಟ ಸೋನು ಸೂದ್ ಮಾನವೀಯ ಕಾರ್ಯಕ್ಕೆ ವಿಶ್ವಸಂಸ್ಥೆಯ ಗೌರವ


ಮುಂದೆ ಅವರು ಹತ್ತಾರು ಅರ್ಥಪೂರ್ಣ ಪ್ರಯೋಗಗಳಲ್ಲಿ ಕಾಣಿಸಿಕೊಂಡದ್ದು ವಿಶೇಷ. ಇವುಗಳ ಪೈಕಿ `ಕನ್ಯಾದಾನ್’, `ಚಿರಾಗ್’, `ಪಗ್ಲಾ ಕಹೀ ಕಾ’, `ಕಟೀ ಪಂತಗ್’, `ಮೇ ತುಲ್ಸಿ ತೇರೇ ಆಂಗನ್ ಕಿ’ ಪ್ರಮುಖ ಪ್ರಯೋಗಗಳು. ನಟನೆಯ ಜೊತೆಗೆ ಚಿತ್ರ ವಿತರಣೆಯಲ್ಲೂ ಆಶಾಗೆ ಯಶಸ್ಸು ಸಿಕ್ಕಿತ್ತು. ಸುಮಾರು ಎರಡು ದಶಕಗಳ ಕಾಲ ಅವರು ಚಿತ್ರ ವಿತರಣೆಯಲ್ಲಿ ತೊಡಗಿಸಿಕೊಂಡಿದ್ದರು. ಸಮಾಜ ಸೇವಾಕಾರ್ಯಗಳಲ್ಲೂ ಅವರದು ಮುಂಚೂಣಿ ಹೆಸರು.

1971, ಅವರ ಸಿನಿಮಾ ಜೀವನದ ಅದೃಷ್ಟದ ವರ್ಷ. ಆ ವರ್ಷದಲ್ಲಿ ತೆರೆಕಂಡ ಅವರ `ಕಟಿ ಪಂತಗ್’, `ಆನ್ ಮಿಲೋ ಸಜ್ನಾ’, `ಮೇರಾ ಗಾವೋ ಮೇರಾ ದೇಶ್’, `ಕಾರವಾನ್’ ಚಿತ್ರಗಳು ಸೂಪರ್‌ ಹಿಟ್ ಎನಿಸಿದವು. `ಕಟಿ ಪತಂಗ್’ ಚಿತ್ರದ ಉತ್ತಮ ಅಭಿನಯಕ್ಕಾಗಿ ಅವರು ಫಿಲಂಫೇರ್‌ ಪುರಸ್ಕಾರಕ್ಕೂ ಪ್ರಾಪ್ತರಾದರು. ವೃತ್ತಿ ಜೀವನದ ಉತ್ತುಂಗದಲ್ಲಿದ್ದಾಗಲೇ ನೃತ್ಯ ಪ್ರದರ್ಶನಕ್ಕೆಂದು ಆಶಾ ವಿದೇಶಕ್ಕೆ ತೆರಳಿದ್ದರು.

ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಆಶಾ ನೃತ್ಯ ಅಕಾಡೆಮಿ `ಕಲಾ ಭವನ್’ ಸ್ಥಾಪಿಸಿದ್ದಾರೆ. ಇಲ್ಲಿ ವಿವಿಧ ಪ್ರಕಾರಗಳ ನೃತ್ಯಗಳನ್ನು ಕಲಿಸಲಾಗುತ್ತದೆ. ನೃತ್ಯದೊಂದಿಗೆ ಈ ಹೊತ್ತಿಗೂ ಅವರು ಸಮಾಜ ಸೇವೆಯಲ್ಲಿ ನಿರತರಾಗಿದ್ದಾರೆ. 1995ರಲ್ಲಿ ನಟನೆಯಿಂದ ದೂರ ಉಳಿದ ನಟಿ ಟೆಲಿವಿಷನ್ ಧಾರಾವಾಹಿಗಳ ನಿರ್ದೇಶನ ಮತ್ತು ನಿರ್ಮಾಣಕ್ಕೆ ಕೈ ಹಾಕಿದರು.

Iconic Actress: Asha Parekh - Sentinelassam

1992ರಲ್ಲಿ ಭಾರತ ಸರ್ಕಾರದ ಪದ್ಮಶ್ರೀ ಗೌರವಕ್ಕೆ ಪಾತ್ರರಾಗಿದ್ದಾರೆ. ಪರೇಖ್ 2002 ರಲ್ಲಿ ಫಿಲ್ಮ್‌ಫೇರ್ ಜೀವಮಾನ ಸಾಧನೆ ಪ್ರಶಸ್ತಿಯನ್ನು ಪಡೆದರು.  2004 ರಲ್ಲಿ ಕಲಾಕರ್ ಪ್ರಶಸ್ತಿ, 2006 ರಲ್ಲಿ ಅಂತರರಾಷ್ಟ್ರೀಯ ಭಾರತೀಯ ಚಲನಚಿತ್ರ ಅಕಾಡೆಮಿ ಪ್ರಶಸ್ತಿಗಳು, 2007 ರಲ್ಲಿ ಪುಣೆ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ, ಮತ್ತು2007ರಲ್ಲಿ ಒಂಬತ್ತನೇ ವಾರ್ಷಿಕ ಬಾಲಿವುಡ್ ಪ್ರಶಸ್ತಿ ಲಾಂಗ್ ಐಲ್ಯಾಂಡ್ ಪ್ರಶಸ್ತಿ, ಫೆಡರೇಶನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿಯಿಂದ (ಎಫ್‌ಐಸಿಸಿಐ) ಅವರು ಲಿವಿಂಗ್ ಲೆಜೆಂಡ್ ಪ್ರಶಸ್ತಿಯನ್ನು ಪಡೆದಿದ್ದಾರೆ.

2017ರಲ್ಲಿ ಖಾಲಿದ್ ಮೊಹಮದ್ ಬರೆದಿರುವ ಆಶಾ ಪರೇಖ್ ಅವರ ಆತ್ಮಕತೆ ‘ದಿ ಹಿಟ್‌ ಗರ್ಲ್‌’ ಬಿಡುಗಡೆಯಾಗಿದೆ.


ಇದನ್ನೂ ಓದಿ: ನಟಿ, ನೃತ್ಯಗಾರ್ತಿ ಜೊಹ್ರಾ ಸೆಹಗಲ್‌ಗೆ ಗೂಗಲ್ ಡೂಡಲ್ ನಮನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...