Homeಮುಖಪುಟ78ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಬಾಲಿವುಡ್ ಕ್ವೀನ್ ಆಶಾ ಪರೇಖ್

78ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಬಾಲಿವುಡ್ ಕ್ವೀನ್ ಆಶಾ ಪರೇಖ್

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಆಶಾ ಪರೇಖ್ ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಪ್ರಸ್ತುತ ನೃತ್ಯ ಅಕಾಡೆಮಿ `ಕಲಾ ಭವನ್' ಸ್ಥಾಪಿಸಿ,,ನೃತ್ಯದೊಂದಿಗೆ ಸಮಾಜ ಸೇವೆಯಲ್ಲೂ ನಿರತರಾಗಿದ್ದಾರೆ.

- Advertisement -
- Advertisement -

ಹಿಂದಿ ಚಿತ್ರರಂಗದ 60, 70 ದಶಕದ ಜನಪ್ರಿಯ ನಾಯಕನಟಿ ಆಶಾ ಪರೇಖ್ ಅವರಿಗೆ ಇಂದು 78ರ ಸಂಭ್ರಮ. ಬಾಲಿವುಡ್ ಸಿನಿಮಾಗಳ ದೊಡ್ಡ ಯಶಸ್ಸಿನೊಂದಿಗೆ ಜ್ಯುಬಿಲಿ ಹಿರೋಯಿನ್ ಎಂದೇ ಕರೆಸಿಕೊಂಡಿದ್ದ ಅವರು ‘ಶರವೇಗದ ಸರದಾರ’ ಎಂಬ ಕನ್ನಡ ಚಿತ್ರದಲ್ಲೂ ಅಭಿನಯಿಸಿದ್ದಾರೆ.

ಅರವತ್ತರ ದಶಕದ ಡ್ಯಾನ್ಸಿಂಗ್ ಕ್ವೀನ್ ಎಂದು ಕರೆಸಿಕೊಂಡವರು ಆಶಾ ಪರೇಖ್. ಅವರು ಚಿತ್ರರಂಗಕ್ಕೆ ಪರಿಚಯವಾದ ಸಂದರ್ಭದಲ್ಲಿ ಸಾಧನಾ, ನೂತನ್, ವಹೀದಾ ರೆಹಮಾನ್ ಸ್ಟಾರ್ ನಟಿಯರಾಗಿ ಮಿಂಚುತ್ತಿದ್ದರು. ಇವರೆಲ್ಲರ ನಡುವಿನ ಪೈಪೋಟಿಯನ್ನು ದಿಟ್ಟತನದಿಂದ ಎದುರಿಸಿದವರು ಆಶಾ.

ಆಶಾ ಪರೇಖ್ ಹುಟ್ಟಿದ್ದು 1942, ಅಕ್ಟೋಬರ್ 2ರಂದು ಬೆಂಗಳೂರಿನಲ್ಲಿ. ತಂದೆ ಗುಜರಾತಿ ಮತ್ತು ತಾಯಿ ಮುಸ್ಲಿಂ ಸಮುದಾಯದವರು. ಮಧ್ಯಮ ವರ್ಗದ ಕುಟುಂಬದ ಏಕೈಕ ಪುತ್ರಿಯಾದ ಅವರಿಗೆ ಅಕ್ಕರೆಯ ಬಾಲ್ಯ ಸಿಕ್ಕಿತು. ಚಿಕ್ಕಂದಿನಲ್ಲೇ ಅವರಿಗೆ ನೃತ್ಯದ ತರಬೇತಿಯಾಗಿತ್ತು. ಶಾಲೆಯ ಕಾರ್ಯಕ್ರಮವೊಂದರಲ್ಲಿ ಆಶಾ ನೃತ್ಯ ಕಾರ್ಯಕ್ರಮ ನೀಡುತ್ತಿದ್ದಾಗ, ನಿರ್ದೇಶಕ ಬಿಮಲ್ ರಾಯ್ ಕಣ್ಣಿಗೆ ಬಿದ್ದರು. ಒಮ್ಮೆಗೇ ಆಕರ್ಷಿತರಾದ ರಾಯ್ ತಮ್ಮ`ಬಾಪ್ ಬೇಟಿ’ (1954) ಚಿತ್ರದಲ್ಲಿ ಬಾಲನಟಿಯಾಗುವಂತೆ ಆಶಾರನ್ನು ಕೇಳಿದರು. ಅಲ್ಲಿಂದ ಮುಂದೆ ವಿದ್ಯಾಭ್ಯಾಸದ ಜೊತೆಗೆ ಕೆಲವು ಚಿತ್ರಗಳಲ್ಲಿ ಬಾಲನಟಿಯಾಗಿ ನಟಿಸಿದರು.

ಇದನ್ನೂ ಓದಿ: ನಿರಾಶ್ರಿತರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಈ ಐದು ಚಲನಚಿತ್ರಗಳು

ಖ್ಯಾತ ನಿರ್ದೇಶಕ ವಿಜಯ್ ಭಟ್ ತಮ್ಮ `ಗೂಂಜ್ ಉಠಿ ಶೆಹನಾಯ್’ ಚಿತ್ರದ ನಾಯಕಿ ಪಾತ್ರಕ್ಕೆ ಆಶಾರನ್ನು ಆಯ್ಕೆ ಮಾಡಿದರು. ಆಗಿನ್ನೂ ಆಶಾಗೆ ಹದಿನಾರರ ಹರೆಯ. ಆಶಾ ಪರೇಖ್ ಸ್ಟಾರ್ ನಾಯಕಿಯಲ್ಲ ಎಂದು ಚಿತ್ರದ ನಿರ್ಮಾಪಕರು ಆಕೆಯನ್ನು ಬೇಡವೆಂದರು. ಇದರಿಂದ ನಿರಾಶರಾದ ಆಶಾ ಒಂದಷ್ಟು ಸಮಯ ಸಿನಿಮಾದಿಂದ ದೂರವುಳಿದು, ತಮ್ಮ ನೆಚ್ಚಿನ ಹವ್ಯಾಸ ನೃತ್ಯದಲ್ಲಿ ತೊಡಗಿಸಿಕೊಂಡರು.

1959ರಲ್ಲಿ ಆಶಾಗೆ ಸಿನಿ ಜೀವನಕ್ಕೆ ದೊಡ್ಡ ತಿರುವು ಸಿಕ್ಕಿತು. ರೊಮ್ಯಾಂಟಿಕ್ ಹೀರೋ ಶಮ್ಮಿ ಕಪೂರ್ ಜೊತೆಗಿನ `ದಿಲ್ ದೇಕೆ ದೇಖೋ’ ಚಿತ್ರ ಅವರಿಗೆ ಹೆಸರು ತಂದುಕೊಟ್ಟಿತು. ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದ ಸಿನಿಮಾ ಬಾಕ್ಸ್ ಆಫೀಸಲ್ಲಿ ಮೋಡಿ ಮಾಡಿತು. ಈ ಚಿತ್ರದ ನಂತರ ಆಶಾ ಹಿಂದಿರುಗಿ ನೋಡಲೇ ಇಲ್ಲ. `ಜಬ್ ಪ್ಯಾರ್ ಕಿಸೀ ಸೆ ಹೋತಾ ಹೈ’, `ಫಿರ್ ವೊಹಿ ದಿಲ್ ಲಾಯಾ ಹೂ’, `ಜಿದ್ದಿ’, `ಮೇರೆ ಸನಂ’, `ತೀಸ್ರಿ ಮಂಜಿಲ್’ ಸೇರಿದಂತೆ ಮ್ಯೂಸಿಕಲ್ ಹಿಟ್ ಚಿತ್ರಗಳೊಂದಿಗೆ ಆಶಾ ಸ್ಟಾರ್ ನಾಯಕಿಯಾದರು.

ಆಶಾಗೆ ಹಟ್ಟಿ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಬೇಕೆನ್ನುವ ಅಪೇಕ್ಷೆಯಿತ್ತು. ಆದರೆ ರೊಮ್ಯಾಂಟಿಕ್ ಕಾಮಿಡಿ ಚಿತ್ರಗಳಲ್ಲಿ ಆಶಾಗೆ ಗಂಭೀರ ಪಾತ್ರಗಳಿರಲಿಲ್ಲ. ಮನೋಜ್ ಕುಮಾರ್ ಜೊತೆಗಿನ `ದೋ ಬದನ್’ (1966) ಚಿತ್ರದೊಂದಿಗೆ ಗಂಭೀರ ಪಾತ್ರಗಳತ್ತ ಹೊರಳಿದರು.


ಇದನ್ನೂ ಓದಿ: ನಟ ಸೋನು ಸೂದ್ ಮಾನವೀಯ ಕಾರ್ಯಕ್ಕೆ ವಿಶ್ವಸಂಸ್ಥೆಯ ಗೌರವ


ಮುಂದೆ ಅವರು ಹತ್ತಾರು ಅರ್ಥಪೂರ್ಣ ಪ್ರಯೋಗಗಳಲ್ಲಿ ಕಾಣಿಸಿಕೊಂಡದ್ದು ವಿಶೇಷ. ಇವುಗಳ ಪೈಕಿ `ಕನ್ಯಾದಾನ್’, `ಚಿರಾಗ್’, `ಪಗ್ಲಾ ಕಹೀ ಕಾ’, `ಕಟೀ ಪಂತಗ್’, `ಮೇ ತುಲ್ಸಿ ತೇರೇ ಆಂಗನ್ ಕಿ’ ಪ್ರಮುಖ ಪ್ರಯೋಗಗಳು. ನಟನೆಯ ಜೊತೆಗೆ ಚಿತ್ರ ವಿತರಣೆಯಲ್ಲೂ ಆಶಾಗೆ ಯಶಸ್ಸು ಸಿಕ್ಕಿತ್ತು. ಸುಮಾರು ಎರಡು ದಶಕಗಳ ಕಾಲ ಅವರು ಚಿತ್ರ ವಿತರಣೆಯಲ್ಲಿ ತೊಡಗಿಸಿಕೊಂಡಿದ್ದರು. ಸಮಾಜ ಸೇವಾಕಾರ್ಯಗಳಲ್ಲೂ ಅವರದು ಮುಂಚೂಣಿ ಹೆಸರು.

1971, ಅವರ ಸಿನಿಮಾ ಜೀವನದ ಅದೃಷ್ಟದ ವರ್ಷ. ಆ ವರ್ಷದಲ್ಲಿ ತೆರೆಕಂಡ ಅವರ `ಕಟಿ ಪಂತಗ್’, `ಆನ್ ಮಿಲೋ ಸಜ್ನಾ’, `ಮೇರಾ ಗಾವೋ ಮೇರಾ ದೇಶ್’, `ಕಾರವಾನ್’ ಚಿತ್ರಗಳು ಸೂಪರ್‌ ಹಿಟ್ ಎನಿಸಿದವು. `ಕಟಿ ಪತಂಗ್’ ಚಿತ್ರದ ಉತ್ತಮ ಅಭಿನಯಕ್ಕಾಗಿ ಅವರು ಫಿಲಂಫೇರ್‌ ಪುರಸ್ಕಾರಕ್ಕೂ ಪ್ರಾಪ್ತರಾದರು. ವೃತ್ತಿ ಜೀವನದ ಉತ್ತುಂಗದಲ್ಲಿದ್ದಾಗಲೇ ನೃತ್ಯ ಪ್ರದರ್ಶನಕ್ಕೆಂದು ಆಶಾ ವಿದೇಶಕ್ಕೆ ತೆರಳಿದ್ದರು.

ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಆಶಾ ನೃತ್ಯ ಅಕಾಡೆಮಿ `ಕಲಾ ಭವನ್’ ಸ್ಥಾಪಿಸಿದ್ದಾರೆ. ಇಲ್ಲಿ ವಿವಿಧ ಪ್ರಕಾರಗಳ ನೃತ್ಯಗಳನ್ನು ಕಲಿಸಲಾಗುತ್ತದೆ. ನೃತ್ಯದೊಂದಿಗೆ ಈ ಹೊತ್ತಿಗೂ ಅವರು ಸಮಾಜ ಸೇವೆಯಲ್ಲಿ ನಿರತರಾಗಿದ್ದಾರೆ. 1995ರಲ್ಲಿ ನಟನೆಯಿಂದ ದೂರ ಉಳಿದ ನಟಿ ಟೆಲಿವಿಷನ್ ಧಾರಾವಾಹಿಗಳ ನಿರ್ದೇಶನ ಮತ್ತು ನಿರ್ಮಾಣಕ್ಕೆ ಕೈ ಹಾಕಿದರು.

Iconic Actress: Asha Parekh - Sentinelassam

1992ರಲ್ಲಿ ಭಾರತ ಸರ್ಕಾರದ ಪದ್ಮಶ್ರೀ ಗೌರವಕ್ಕೆ ಪಾತ್ರರಾಗಿದ್ದಾರೆ. ಪರೇಖ್ 2002 ರಲ್ಲಿ ಫಿಲ್ಮ್‌ಫೇರ್ ಜೀವಮಾನ ಸಾಧನೆ ಪ್ರಶಸ್ತಿಯನ್ನು ಪಡೆದರು.  2004 ರಲ್ಲಿ ಕಲಾಕರ್ ಪ್ರಶಸ್ತಿ, 2006 ರಲ್ಲಿ ಅಂತರರಾಷ್ಟ್ರೀಯ ಭಾರತೀಯ ಚಲನಚಿತ್ರ ಅಕಾಡೆಮಿ ಪ್ರಶಸ್ತಿಗಳು, 2007 ರಲ್ಲಿ ಪುಣೆ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ, ಮತ್ತು2007ರಲ್ಲಿ ಒಂಬತ್ತನೇ ವಾರ್ಷಿಕ ಬಾಲಿವುಡ್ ಪ್ರಶಸ್ತಿ ಲಾಂಗ್ ಐಲ್ಯಾಂಡ್ ಪ್ರಶಸ್ತಿ, ಫೆಡರೇಶನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿಯಿಂದ (ಎಫ್‌ಐಸಿಸಿಐ) ಅವರು ಲಿವಿಂಗ್ ಲೆಜೆಂಡ್ ಪ್ರಶಸ್ತಿಯನ್ನು ಪಡೆದಿದ್ದಾರೆ.

2017ರಲ್ಲಿ ಖಾಲಿದ್ ಮೊಹಮದ್ ಬರೆದಿರುವ ಆಶಾ ಪರೇಖ್ ಅವರ ಆತ್ಮಕತೆ ‘ದಿ ಹಿಟ್‌ ಗರ್ಲ್‌’ ಬಿಡುಗಡೆಯಾಗಿದೆ.


ಇದನ್ನೂ ಓದಿ: ನಟಿ, ನೃತ್ಯಗಾರ್ತಿ ಜೊಹ್ರಾ ಸೆಹಗಲ್‌ಗೆ ಗೂಗಲ್ ಡೂಡಲ್ ನಮನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಜಿ ರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಇಡಿ ಒತ್ತಡ : ತನ್ನ ಹೊಸ ಪುಸ್ತಕದಲ್ಲಿ ಸಂಜಯ್ ರಾವುತ್ ಆರೋಪ

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಮೋದಿ ಸರ್ಕಾರದ ವಿರುದ್ಧ ಕೈಗೊಂಡ ಸ್ವತಂತ್ರ ರಾಜಕೀಯ ನಡೆಗಳಿಗೆ ಪ್ರತಿಯಾಗಿ, ಜಾರಿ ನಿರ್ದೇಶನಾಲಯದ (ಇಡಿ) ಒತ್ತಡಕ್ಕೆ ಮಣಿದು 2025ರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು...

ಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ ಖಂಡನೆ

ಶುಕ್ರವಾರ (ಮಾ.20) ರಾತ್ರಿ ದೆಹಲಿ ಪೊಲೀಸರು ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‌ಐ) ಸುದ್ದಿ ಸಂಸ್ಥೆಯ ಕಚೇರಿಗೆ ಬೀಗ ಜಡಿದ ರೀತಿಗೆ ಪತ್ರಕರ್ತರ ಸಂಘಗಳು ಮತ್ತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ದೆಹಲಿಯ...

ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್: ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್

ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರ ತೀವ್ರ ವಿರೋಧದ ನಡುವೆಯೂ ಕೃಷಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ಅವರ...

ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಆರು ಮಂದಿ ಶಾಸಕರನ್ನು ಅಮಾನತುಗೊಳಿಸಿದ ಬಿಜೆಡಿ

ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಮಂದಿ ಶಾಸಕರನ್ನು ಒಡಿಶಾದ ಬಿಜು ಜನತಾದಳ (ಬಿಜೆಡಿ) ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಒಟ್ಟು 8 ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ....

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ಳನ್ನು ಇಸ್ರೇಲಿ ಸೈನಿಕರು ಸುಮಾರು 300 ಸುತ್ತು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಕಥೆಯನ್ನು ಹೇಳುವ, 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರದ ಪ್ರದರ್ಶನಕ್ಕೆ...

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...