Homeಸಿನಿಮಾಕ್ರೀಡೆಸೋಲೆ ಗೆಲುವಿನ ಸೋಪಾನ: T20 ಕ್ರಿಕೆಟ್‌ನಲ್ಲಿ ಭಾರತ ತಂಡವನ್ನು ಹುರಿದುಂಬಿಸಿದ ಬಾಲಿವುಡ್‌ ಮಂದಿ

ಸೋಲೆ ಗೆಲುವಿನ ಸೋಪಾನ: T20 ಕ್ರಿಕೆಟ್‌ನಲ್ಲಿ ಭಾರತ ತಂಡವನ್ನು ಹುರಿದುಂಬಿಸಿದ ಬಾಲಿವುಡ್‌ ಮಂದಿ

- Advertisement -
- Advertisement -

2021ರ ಐಸಿಸಿ ಪುರುಷರ T20 ವಿಶ್ವಕಪ್‌ನ ಆರಂಭಿಕ ಪಂದ್ಯದಲ್ಲಿ ಭಾರತವು ಪಾಕಿಸ್ತಾನದ ವಿರುದ್ಧ ಸೋತ ನಂತರ ತಾಪ್ಸಿ ಪನ್ನು, ರಿಚಾ ಚಡ್ಡ, ಪ್ರೀತಿ ಜಿಂಟಾ ಸೇರಿದಂತೆ ಬಾಲಿವುಡ್‌ನಲ್ಲಿರುವ ಕ್ರೀಡಾ ಪ್ರೇಮಿಗಳು ಭಾರತ ತಂಡವನ್ನು ಬೆಂಬಲಿಸಿ ಟ್ವೀಟ್‌ ಮಾಡಿದ್ದಾರೆ.

ಬಾಜಿಗರ್‌ ಸಿನಿಮಾದ ಶಾರುಖ್‌ ಖಾನ್‌ ಅವರ ಸಂಭಾಷಣೆಯನ್ನು ನೆನಪಿಸಿಕೊಂಡಿರುವ ನಟಿ ತಾಪ್ಸಿ ಪನ್ನು, ‘ಸೋತು ಗೆದ್ದವರನ್ನು ಬಾಜಿಗರ್‌ ಎಂದು ಕರೆಯಲಾಗುತ್ತದೆ (ಹರ್‌ ಕೆ ಜೀತ್ನೆ ವಾಲೆ ಕೊ ಬಾಜಿಗರ್‌ ಕೆಹ್ತೆ ಹೈ)’ ಎಂದು ಟ್ವಿಟ್‌ ಮಾಡಿದ್ದಾರೆ.

ನಟಿ ರಿಚಾ ಚಡ್ಡಾ, ‘ಅಮೀರ್‌ ಖಾನ್‌ ಅವರ ವಿವಿಧ ಭಾವನೆಗಳನ್ನು ಒಳಗೊಂಡ ಮಿಮ್‌ ಒಂದನ್ನು ಹಂಚಿಕೊಂಡಿದ್ದು, ಕೆಲವು ಸಲ ಹೀಗಾಗುತ್ತದೆ (ಹೋ ಜಾತಾ ಹೈ ಕಬಿ ಕಬಿ)’ ಎಂದು ಟ್ವಿಟ್‌ ಮಾಡಿದ್ದಾರೆ.

ಭಾರತ-ಪಾಕಿಸ್ತಾನ ನಡುವಿನ ಪಂದ್ಯವನ್ನು ಕ್ರೀಡಾಂಗಣದಲ್ಲಿಯೇ ನೇರವಾಗಿ ವೀಕ್ಷಿಸಿರುವ ಪ್ರೀತಿ ಜಿಂಟಾ ಮತ್ತವರ ಪತಿ ಜೀನ್‌ ಗುಡೆನಫ್‌ ಅವರು ಪಂದ್ಯದ ನಂತರ ಟ್ವೀಟ್ ಮಾಡಿದ್ದು, ‘Tonight We were outplayed so well played Pakistan. ನಾನೊಬ್ಬ ಕ್ರಿಕೆಟ್‌ ಅಭಿಮಾನಿಯಾಗಿ, ನಾನು ಯಾವಾಗಲೂ ನಮ್ಮ ತಂಡವನ್ನು ಬೆಂಬಲಿಸುತ್ತೇನೆ. ನನ್ನ ಹೃದಯವು ಯಾವಾಗಲೂ ತಂಡದ ಪರವಾಗಿರುತ್ತದೆ. ನೀವು ನನ್ನಂತೆ ನಿಜವಾದ ಕ್ರಿಕೆಟ್‌ ಅಭಿಮಾನಿಯಾಗಿದ್ದರೆ ನೀವು ಅದೇ ರೀತಿ ಮಾಡುತ್ತೀರಿ. ಇದು ಕೇವಲ ಟೂರ್ನಿಯ ಆರಂಭವಷ್ಟೆ. #INDvsPAK ಪಂದ್ಯದ ಉಳಿದ ಆಟಗಳಿಗೆ ಶುಭವಾಗಲಿ ಎಂದು ಬರೆದಿದ್ದಾರೆ.

“ಪಾಕಿಸ್ತಾನದ ವಿರುದ್ಧ ಸೋತಿದ್ದಕ್ಕಾಗಿ ಭಾರತದ ಕ್ರಿಕೆಟ್‌ ತಂಡದ ಮೇಲೆ ನಡೆಯುತ್ತಿರುವ ಮೌಕಿಕ ದಾಳಿಯನ್ನು ಖಂಡಿಸಿರುವ ಪ್ರೀತಿ, ‘2021ರ T20 ವರ್ಲ್ಡ್‌ ಕಪ್‌ನ ಮೊದಲ ಪಂದ್ಯದಲ್ಲಿ ಭಾರತವು ಸೋತಿದ್ದಕ್ಕೆ ನಿರಾಶೆಗೊಂಡಿದ್ದೇನೆ. ಆದರೆ, ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಕೆಟ್‌ ಅಭಿಮಾನಿಗಳು ಆಟಗಾರರ ಬಗ್ಗೆ ಮಾಡಿದ ನಿಂದನೆಯನ್ನು ನೋಡಿ ಇನ್ನಷ್ಟು ನಿರಾಶೆಗೊಂಡಿದ್ದೇನೆ. ಇದು ಆಟವಷ್ಟೆ. ಆಟಗಾರರೆಲ್ಲರೂ ಮನುಷ್ಯರು” ಎಂದು ಟ್ವೀಟ್ ಮಾಡಿದ್ದಾರೆ.

ಮತ್ತೊಬ್ಬ ನಟ ಅರ್ಜುನ್‌ ರಾಂಪಾಲ್‌ ಭಾರತ ತಂಡವನ್ನು ಹಾರೈಸಿ ಟ್ವಿಟ್‌ ಮಾಡಿದ್ದು, ‘ಹಿನ್ನೆಡೆಯು ಮುಂದೆ ನಡೆಯಲಿರುವ ಅದ್ಭುತವಾದ ಪುನರಾಗಮನದ ಸಂಕೇತವಾಗಿರುತ್ತದೆ. ನಮ್ಮ ತಂಡದ ಮುನ್ನಡೆಯನ್ನು ನೋಡಲು ಕಾತರನಾಗಿದ್ದೇನೆ. ಉಳಿದ ಎಲ್ಲಾ ಪಂದ್ಯಗಳಿಗಳಲ್ಲಿ ಉತ್ತಮ ಪ್ರದರ್ಶನ ನೀಡಲಿ. ಒಳ್ಳಯದಾಗಲಿ. ನಿಮ್ಮೆಲ್ಲರನ್ನು ಪ್ರೀತಿಸುತ್ತೇನೆ. ಅದ್ಭುತ ಗೆಲುವಿಗೆ ಪಾಕಿಸ್ತಾನಕ್ಕೆ ಅಭಿನಂದನೆಗಳು’ ಎಂದು ಟ್ವೀಟ್ ಮಾಡಿದ್ದಾರೆ.

ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್ ಆಯ್ದುಕೊಂಡಿತು. ಪಾಕಿಸ್ತಾನದ ಬೌಲರ್‌ಗಳ ಶಿಸ್ತುಬದ್ಧ ದಾಳಿಗೆ ಭಾರತದ ಆರಂಭಿಕ ಬ್ಯಾಟ್ಸ್‌ಮನ್‌ಗಳು ತತ್ತರಿಸಿದರು. 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡ ಭಾರತ 151 ರನ್ ಪೇರಿಸಲಷ್ಟೇ ಸಾಧ್ಯವಾಯಿತು. ಅದಕ್ಕೆ ಪ್ರತಿಯಾಗಿ ಪಾಕಿಸ್ತಾನ ಯಾವುದೇ ವಿಕೆಟ್ ನಷ್ಟವಿಲ್ಲದೆ 152 ರನ್ ಗಳಿಸಿ ಗೆಲುವಿನ ಸಿಹಿ ಉಂಡಿತು. ಆ ಮೂಲಕ ಪಾಕಿಸ್ತಾನ ತಂಡವು ವಿಶ್ವಕಪ್ ಪಂದ್ಯಾವಳಿಗಳಲ್ಲಿ ಮೊದಲ ಬಾರಿಗೆ ಭಾರತದ ಎದುರು ಜಯ ದಾಖಲಿಸಿತು. ಬಾಬರ್ ಅಜಂ ಮತ್ತು ಮೊಹಮ್ಮದ್ ರಿಜ್ವಾನ್‌ ಅದ್ಭುತ ಜೊತೆಯಾಟವಾಡಿದರು.


ಇದನ್ನೂ ಓದಿ: ಪಂದ್ಯ ಸೋತರೂ ಕೋಟ್ಯಾಂತರ ಅಭಿಮಾನಿಗಳ ಮನಗೆದ್ದ ಕೊಹ್ಲಿ, ಧೋನಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...