Homeಸಿನಿಮಾಕ್ರೀಡೆಸೋಲೆ ಗೆಲುವಿನ ಸೋಪಾನ: T20 ಕ್ರಿಕೆಟ್‌ನಲ್ಲಿ ಭಾರತ ತಂಡವನ್ನು ಹುರಿದುಂಬಿಸಿದ ಬಾಲಿವುಡ್‌ ಮಂದಿ

ಸೋಲೆ ಗೆಲುವಿನ ಸೋಪಾನ: T20 ಕ್ರಿಕೆಟ್‌ನಲ್ಲಿ ಭಾರತ ತಂಡವನ್ನು ಹುರಿದುಂಬಿಸಿದ ಬಾಲಿವುಡ್‌ ಮಂದಿ

- Advertisement -
- Advertisement -

2021ರ ಐಸಿಸಿ ಪುರುಷರ T20 ವಿಶ್ವಕಪ್‌ನ ಆರಂಭಿಕ ಪಂದ್ಯದಲ್ಲಿ ಭಾರತವು ಪಾಕಿಸ್ತಾನದ ವಿರುದ್ಧ ಸೋತ ನಂತರ ತಾಪ್ಸಿ ಪನ್ನು, ರಿಚಾ ಚಡ್ಡ, ಪ್ರೀತಿ ಜಿಂಟಾ ಸೇರಿದಂತೆ ಬಾಲಿವುಡ್‌ನಲ್ಲಿರುವ ಕ್ರೀಡಾ ಪ್ರೇಮಿಗಳು ಭಾರತ ತಂಡವನ್ನು ಬೆಂಬಲಿಸಿ ಟ್ವೀಟ್‌ ಮಾಡಿದ್ದಾರೆ.

ಬಾಜಿಗರ್‌ ಸಿನಿಮಾದ ಶಾರುಖ್‌ ಖಾನ್‌ ಅವರ ಸಂಭಾಷಣೆಯನ್ನು ನೆನಪಿಸಿಕೊಂಡಿರುವ ನಟಿ ತಾಪ್ಸಿ ಪನ್ನು, ‘ಸೋತು ಗೆದ್ದವರನ್ನು ಬಾಜಿಗರ್‌ ಎಂದು ಕರೆಯಲಾಗುತ್ತದೆ (ಹರ್‌ ಕೆ ಜೀತ್ನೆ ವಾಲೆ ಕೊ ಬಾಜಿಗರ್‌ ಕೆಹ್ತೆ ಹೈ)’ ಎಂದು ಟ್ವಿಟ್‌ ಮಾಡಿದ್ದಾರೆ.

ನಟಿ ರಿಚಾ ಚಡ್ಡಾ, ‘ಅಮೀರ್‌ ಖಾನ್‌ ಅವರ ವಿವಿಧ ಭಾವನೆಗಳನ್ನು ಒಳಗೊಂಡ ಮಿಮ್‌ ಒಂದನ್ನು ಹಂಚಿಕೊಂಡಿದ್ದು, ಕೆಲವು ಸಲ ಹೀಗಾಗುತ್ತದೆ (ಹೋ ಜಾತಾ ಹೈ ಕಬಿ ಕಬಿ)’ ಎಂದು ಟ್ವಿಟ್‌ ಮಾಡಿದ್ದಾರೆ.

ಭಾರತ-ಪಾಕಿಸ್ತಾನ ನಡುವಿನ ಪಂದ್ಯವನ್ನು ಕ್ರೀಡಾಂಗಣದಲ್ಲಿಯೇ ನೇರವಾಗಿ ವೀಕ್ಷಿಸಿರುವ ಪ್ರೀತಿ ಜಿಂಟಾ ಮತ್ತವರ ಪತಿ ಜೀನ್‌ ಗುಡೆನಫ್‌ ಅವರು ಪಂದ್ಯದ ನಂತರ ಟ್ವೀಟ್ ಮಾಡಿದ್ದು, ‘Tonight We were outplayed so well played Pakistan. ನಾನೊಬ್ಬ ಕ್ರಿಕೆಟ್‌ ಅಭಿಮಾನಿಯಾಗಿ, ನಾನು ಯಾವಾಗಲೂ ನಮ್ಮ ತಂಡವನ್ನು ಬೆಂಬಲಿಸುತ್ತೇನೆ. ನನ್ನ ಹೃದಯವು ಯಾವಾಗಲೂ ತಂಡದ ಪರವಾಗಿರುತ್ತದೆ. ನೀವು ನನ್ನಂತೆ ನಿಜವಾದ ಕ್ರಿಕೆಟ್‌ ಅಭಿಮಾನಿಯಾಗಿದ್ದರೆ ನೀವು ಅದೇ ರೀತಿ ಮಾಡುತ್ತೀರಿ. ಇದು ಕೇವಲ ಟೂರ್ನಿಯ ಆರಂಭವಷ್ಟೆ. #INDvsPAK ಪಂದ್ಯದ ಉಳಿದ ಆಟಗಳಿಗೆ ಶುಭವಾಗಲಿ ಎಂದು ಬರೆದಿದ್ದಾರೆ.

“ಪಾಕಿಸ್ತಾನದ ವಿರುದ್ಧ ಸೋತಿದ್ದಕ್ಕಾಗಿ ಭಾರತದ ಕ್ರಿಕೆಟ್‌ ತಂಡದ ಮೇಲೆ ನಡೆಯುತ್ತಿರುವ ಮೌಕಿಕ ದಾಳಿಯನ್ನು ಖಂಡಿಸಿರುವ ಪ್ರೀತಿ, ‘2021ರ T20 ವರ್ಲ್ಡ್‌ ಕಪ್‌ನ ಮೊದಲ ಪಂದ್ಯದಲ್ಲಿ ಭಾರತವು ಸೋತಿದ್ದಕ್ಕೆ ನಿರಾಶೆಗೊಂಡಿದ್ದೇನೆ. ಆದರೆ, ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಕೆಟ್‌ ಅಭಿಮಾನಿಗಳು ಆಟಗಾರರ ಬಗ್ಗೆ ಮಾಡಿದ ನಿಂದನೆಯನ್ನು ನೋಡಿ ಇನ್ನಷ್ಟು ನಿರಾಶೆಗೊಂಡಿದ್ದೇನೆ. ಇದು ಆಟವಷ್ಟೆ. ಆಟಗಾರರೆಲ್ಲರೂ ಮನುಷ್ಯರು” ಎಂದು ಟ್ವೀಟ್ ಮಾಡಿದ್ದಾರೆ.

ಮತ್ತೊಬ್ಬ ನಟ ಅರ್ಜುನ್‌ ರಾಂಪಾಲ್‌ ಭಾರತ ತಂಡವನ್ನು ಹಾರೈಸಿ ಟ್ವಿಟ್‌ ಮಾಡಿದ್ದು, ‘ಹಿನ್ನೆಡೆಯು ಮುಂದೆ ನಡೆಯಲಿರುವ ಅದ್ಭುತವಾದ ಪುನರಾಗಮನದ ಸಂಕೇತವಾಗಿರುತ್ತದೆ. ನಮ್ಮ ತಂಡದ ಮುನ್ನಡೆಯನ್ನು ನೋಡಲು ಕಾತರನಾಗಿದ್ದೇನೆ. ಉಳಿದ ಎಲ್ಲಾ ಪಂದ್ಯಗಳಿಗಳಲ್ಲಿ ಉತ್ತಮ ಪ್ರದರ್ಶನ ನೀಡಲಿ. ಒಳ್ಳಯದಾಗಲಿ. ನಿಮ್ಮೆಲ್ಲರನ್ನು ಪ್ರೀತಿಸುತ್ತೇನೆ. ಅದ್ಭುತ ಗೆಲುವಿಗೆ ಪಾಕಿಸ್ತಾನಕ್ಕೆ ಅಭಿನಂದನೆಗಳು’ ಎಂದು ಟ್ವೀಟ್ ಮಾಡಿದ್ದಾರೆ.

ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್ ಆಯ್ದುಕೊಂಡಿತು. ಪಾಕಿಸ್ತಾನದ ಬೌಲರ್‌ಗಳ ಶಿಸ್ತುಬದ್ಧ ದಾಳಿಗೆ ಭಾರತದ ಆರಂಭಿಕ ಬ್ಯಾಟ್ಸ್‌ಮನ್‌ಗಳು ತತ್ತರಿಸಿದರು. 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡ ಭಾರತ 151 ರನ್ ಪೇರಿಸಲಷ್ಟೇ ಸಾಧ್ಯವಾಯಿತು. ಅದಕ್ಕೆ ಪ್ರತಿಯಾಗಿ ಪಾಕಿಸ್ತಾನ ಯಾವುದೇ ವಿಕೆಟ್ ನಷ್ಟವಿಲ್ಲದೆ 152 ರನ್ ಗಳಿಸಿ ಗೆಲುವಿನ ಸಿಹಿ ಉಂಡಿತು. ಆ ಮೂಲಕ ಪಾಕಿಸ್ತಾನ ತಂಡವು ವಿಶ್ವಕಪ್ ಪಂದ್ಯಾವಳಿಗಳಲ್ಲಿ ಮೊದಲ ಬಾರಿಗೆ ಭಾರತದ ಎದುರು ಜಯ ದಾಖಲಿಸಿತು. ಬಾಬರ್ ಅಜಂ ಮತ್ತು ಮೊಹಮ್ಮದ್ ರಿಜ್ವಾನ್‌ ಅದ್ಭುತ ಜೊತೆಯಾಟವಾಡಿದರು.


ಇದನ್ನೂ ಓದಿ: ಪಂದ್ಯ ಸೋತರೂ ಕೋಟ್ಯಾಂತರ ಅಭಿಮಾನಿಗಳ ಮನಗೆದ್ದ ಕೊಹ್ಲಿ, ಧೋನಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...