Homeಸಿನಿಮಾಕ್ರೀಡೆಸೋಲೆ ಗೆಲುವಿನ ಸೋಪಾನ: T20 ಕ್ರಿಕೆಟ್‌ನಲ್ಲಿ ಭಾರತ ತಂಡವನ್ನು ಹುರಿದುಂಬಿಸಿದ ಬಾಲಿವುಡ್‌ ಮಂದಿ

ಸೋಲೆ ಗೆಲುವಿನ ಸೋಪಾನ: T20 ಕ್ರಿಕೆಟ್‌ನಲ್ಲಿ ಭಾರತ ತಂಡವನ್ನು ಹುರಿದುಂಬಿಸಿದ ಬಾಲಿವುಡ್‌ ಮಂದಿ

- Advertisement -
- Advertisement -

2021ರ ಐಸಿಸಿ ಪುರುಷರ T20 ವಿಶ್ವಕಪ್‌ನ ಆರಂಭಿಕ ಪಂದ್ಯದಲ್ಲಿ ಭಾರತವು ಪಾಕಿಸ್ತಾನದ ವಿರುದ್ಧ ಸೋತ ನಂತರ ತಾಪ್ಸಿ ಪನ್ನು, ರಿಚಾ ಚಡ್ಡ, ಪ್ರೀತಿ ಜಿಂಟಾ ಸೇರಿದಂತೆ ಬಾಲಿವುಡ್‌ನಲ್ಲಿರುವ ಕ್ರೀಡಾ ಪ್ರೇಮಿಗಳು ಭಾರತ ತಂಡವನ್ನು ಬೆಂಬಲಿಸಿ ಟ್ವೀಟ್‌ ಮಾಡಿದ್ದಾರೆ.

ಬಾಜಿಗರ್‌ ಸಿನಿಮಾದ ಶಾರುಖ್‌ ಖಾನ್‌ ಅವರ ಸಂಭಾಷಣೆಯನ್ನು ನೆನಪಿಸಿಕೊಂಡಿರುವ ನಟಿ ತಾಪ್ಸಿ ಪನ್ನು, ‘ಸೋತು ಗೆದ್ದವರನ್ನು ಬಾಜಿಗರ್‌ ಎಂದು ಕರೆಯಲಾಗುತ್ತದೆ (ಹರ್‌ ಕೆ ಜೀತ್ನೆ ವಾಲೆ ಕೊ ಬಾಜಿಗರ್‌ ಕೆಹ್ತೆ ಹೈ)’ ಎಂದು ಟ್ವಿಟ್‌ ಮಾಡಿದ್ದಾರೆ.

ನಟಿ ರಿಚಾ ಚಡ್ಡಾ, ‘ಅಮೀರ್‌ ಖಾನ್‌ ಅವರ ವಿವಿಧ ಭಾವನೆಗಳನ್ನು ಒಳಗೊಂಡ ಮಿಮ್‌ ಒಂದನ್ನು ಹಂಚಿಕೊಂಡಿದ್ದು, ಕೆಲವು ಸಲ ಹೀಗಾಗುತ್ತದೆ (ಹೋ ಜಾತಾ ಹೈ ಕಬಿ ಕಬಿ)’ ಎಂದು ಟ್ವಿಟ್‌ ಮಾಡಿದ್ದಾರೆ.

ಭಾರತ-ಪಾಕಿಸ್ತಾನ ನಡುವಿನ ಪಂದ್ಯವನ್ನು ಕ್ರೀಡಾಂಗಣದಲ್ಲಿಯೇ ನೇರವಾಗಿ ವೀಕ್ಷಿಸಿರುವ ಪ್ರೀತಿ ಜಿಂಟಾ ಮತ್ತವರ ಪತಿ ಜೀನ್‌ ಗುಡೆನಫ್‌ ಅವರು ಪಂದ್ಯದ ನಂತರ ಟ್ವೀಟ್ ಮಾಡಿದ್ದು, ‘Tonight We were outplayed so well played Pakistan. ನಾನೊಬ್ಬ ಕ್ರಿಕೆಟ್‌ ಅಭಿಮಾನಿಯಾಗಿ, ನಾನು ಯಾವಾಗಲೂ ನಮ್ಮ ತಂಡವನ್ನು ಬೆಂಬಲಿಸುತ್ತೇನೆ. ನನ್ನ ಹೃದಯವು ಯಾವಾಗಲೂ ತಂಡದ ಪರವಾಗಿರುತ್ತದೆ. ನೀವು ನನ್ನಂತೆ ನಿಜವಾದ ಕ್ರಿಕೆಟ್‌ ಅಭಿಮಾನಿಯಾಗಿದ್ದರೆ ನೀವು ಅದೇ ರೀತಿ ಮಾಡುತ್ತೀರಿ. ಇದು ಕೇವಲ ಟೂರ್ನಿಯ ಆರಂಭವಷ್ಟೆ. #INDvsPAK ಪಂದ್ಯದ ಉಳಿದ ಆಟಗಳಿಗೆ ಶುಭವಾಗಲಿ ಎಂದು ಬರೆದಿದ್ದಾರೆ.

“ಪಾಕಿಸ್ತಾನದ ವಿರುದ್ಧ ಸೋತಿದ್ದಕ್ಕಾಗಿ ಭಾರತದ ಕ್ರಿಕೆಟ್‌ ತಂಡದ ಮೇಲೆ ನಡೆಯುತ್ತಿರುವ ಮೌಕಿಕ ದಾಳಿಯನ್ನು ಖಂಡಿಸಿರುವ ಪ್ರೀತಿ, ‘2021ರ T20 ವರ್ಲ್ಡ್‌ ಕಪ್‌ನ ಮೊದಲ ಪಂದ್ಯದಲ್ಲಿ ಭಾರತವು ಸೋತಿದ್ದಕ್ಕೆ ನಿರಾಶೆಗೊಂಡಿದ್ದೇನೆ. ಆದರೆ, ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಕೆಟ್‌ ಅಭಿಮಾನಿಗಳು ಆಟಗಾರರ ಬಗ್ಗೆ ಮಾಡಿದ ನಿಂದನೆಯನ್ನು ನೋಡಿ ಇನ್ನಷ್ಟು ನಿರಾಶೆಗೊಂಡಿದ್ದೇನೆ. ಇದು ಆಟವಷ್ಟೆ. ಆಟಗಾರರೆಲ್ಲರೂ ಮನುಷ್ಯರು” ಎಂದು ಟ್ವೀಟ್ ಮಾಡಿದ್ದಾರೆ.

ಮತ್ತೊಬ್ಬ ನಟ ಅರ್ಜುನ್‌ ರಾಂಪಾಲ್‌ ಭಾರತ ತಂಡವನ್ನು ಹಾರೈಸಿ ಟ್ವಿಟ್‌ ಮಾಡಿದ್ದು, ‘ಹಿನ್ನೆಡೆಯು ಮುಂದೆ ನಡೆಯಲಿರುವ ಅದ್ಭುತವಾದ ಪುನರಾಗಮನದ ಸಂಕೇತವಾಗಿರುತ್ತದೆ. ನಮ್ಮ ತಂಡದ ಮುನ್ನಡೆಯನ್ನು ನೋಡಲು ಕಾತರನಾಗಿದ್ದೇನೆ. ಉಳಿದ ಎಲ್ಲಾ ಪಂದ್ಯಗಳಿಗಳಲ್ಲಿ ಉತ್ತಮ ಪ್ರದರ್ಶನ ನೀಡಲಿ. ಒಳ್ಳಯದಾಗಲಿ. ನಿಮ್ಮೆಲ್ಲರನ್ನು ಪ್ರೀತಿಸುತ್ತೇನೆ. ಅದ್ಭುತ ಗೆಲುವಿಗೆ ಪಾಕಿಸ್ತಾನಕ್ಕೆ ಅಭಿನಂದನೆಗಳು’ ಎಂದು ಟ್ವೀಟ್ ಮಾಡಿದ್ದಾರೆ.

ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್ ಆಯ್ದುಕೊಂಡಿತು. ಪಾಕಿಸ್ತಾನದ ಬೌಲರ್‌ಗಳ ಶಿಸ್ತುಬದ್ಧ ದಾಳಿಗೆ ಭಾರತದ ಆರಂಭಿಕ ಬ್ಯಾಟ್ಸ್‌ಮನ್‌ಗಳು ತತ್ತರಿಸಿದರು. 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡ ಭಾರತ 151 ರನ್ ಪೇರಿಸಲಷ್ಟೇ ಸಾಧ್ಯವಾಯಿತು. ಅದಕ್ಕೆ ಪ್ರತಿಯಾಗಿ ಪಾಕಿಸ್ತಾನ ಯಾವುದೇ ವಿಕೆಟ್ ನಷ್ಟವಿಲ್ಲದೆ 152 ರನ್ ಗಳಿಸಿ ಗೆಲುವಿನ ಸಿಹಿ ಉಂಡಿತು. ಆ ಮೂಲಕ ಪಾಕಿಸ್ತಾನ ತಂಡವು ವಿಶ್ವಕಪ್ ಪಂದ್ಯಾವಳಿಗಳಲ್ಲಿ ಮೊದಲ ಬಾರಿಗೆ ಭಾರತದ ಎದುರು ಜಯ ದಾಖಲಿಸಿತು. ಬಾಬರ್ ಅಜಂ ಮತ್ತು ಮೊಹಮ್ಮದ್ ರಿಜ್ವಾನ್‌ ಅದ್ಭುತ ಜೊತೆಯಾಟವಾಡಿದರು.


ಇದನ್ನೂ ಓದಿ: ಪಂದ್ಯ ಸೋತರೂ ಕೋಟ್ಯಾಂತರ ಅಭಿಮಾನಿಗಳ ಮನಗೆದ್ದ ಕೊಹ್ಲಿ, ಧೋನಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...