Homeಮುಖಪುಟವಿವಾದಗಳಿಂದ ಸುದ್ದಿಯಾಗಿದ್ದ ಗಂಗೂಬಾಯಿ ಕಾಥಿಯಾವಾಡಿ ಚಿತ್ರ ಬಿಡುಗಡೆ ದಿನಾಂಕ ಫಿಕ್ಸ್

ವಿವಾದಗಳಿಂದ ಸುದ್ದಿಯಾಗಿದ್ದ ಗಂಗೂಬಾಯಿ ಕಾಥಿಯಾವಾಡಿ ಚಿತ್ರ ಬಿಡುಗಡೆ ದಿನಾಂಕ ಫಿಕ್ಸ್

- Advertisement -
- Advertisement -

ಬಾಲಿವುಡ್ ನಟಿ ಆಲಿಯಾ ಭಟ್ ಅಭಿನಯದ ಮತ್ತು ಚಲನಚಿತ್ರ ನಿರ್ಮಾಪಕ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಬಹುನಿರೀಕ್ಷಿತ ಗಂಗೂಬಾಯಿ ಕಾಥಿಯಾವಾಡಿ ಚಲನಚಿತ್ರ ಬಿಡುಗಡೆಗೆ ಕೊನೆಗೂ ದಿನಾಂಕ ನಿಗದಿಯಾಗಿದೆ.

ವಿವಾದಗಳಿಂದ ಸುದ್ದಿಯಾಗಿದ್ದ ಈ ಚಿತ್ರವು ಮುಂದಿನ ವರ್ಷ ಜನವರಿ 6 ರಂದು ಚಿತ್ರಮಂದಿರಗಳಿಗೆ ಲಗ್ಗೆ ಇಡಲಿದೆ ಎಂದು ಚಿತ್ರ ತಂಡ ಘೋಷಿಸಿದೆ.  ಕೊರೊನಾ ಕಾರಣದಿಮದ ಮುಚ್ಚಲ್ಪಟ್ಟಿದ್ದ ಚಿತ್ರಮಂದಿರಗಳು ತೆರೆಯುವ ಘೋಷಣೆಯಾಗುತ್ತಿದಂತೆ ಸಾಲು ಸಾಲು ಚಿತ್ರಗಳು ತೆರೆ ಕಾಣಲು ಸಜ್ಜಾಗಿವೆ.

ಗಂಗೂಬಾಯಿ ಕಾಥಿಯಾವಾಡಿ ಚಿತ್ರ ಈ ವರ್ಷದ ಜುಲೈ 30 ರಂದು ಬಿಡುಗಡೆಯಾಗಬೇಕಿತ್ತು, ಆದರೆ ಮುಂದೂಡಲ್ಪಟ್ಟಿತ್ತು. ಈ ಚಿತ್ರ ಓಟಿಟಿ ವೇದಿಕೆಗಳಲ್ಲಿ ಬಿಡುಗಡೆಯಾಗುವ ವದಂತಿಗಳು ಹರಡಿದ್ದ ಹಿನ್ನೆಲೆ ಸ್ಪಷ್ಟನೆ ನೀಡಿದ್ದ ಚಿತ್ರ ನಿರ್ಮಾಣ ಸಂಸ್ಥೆ ಪಿಇಎನ್ ಇಂಡಿಯಾ ಲಿಮಿಟೆಡ್ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿತ್ತು.

ಇದನ್ನೂ ಓದಿ: ಕನ್ನಡದ ಮೊದಲ ಲೆಸ್ಬಿಯನ್ ಚಿತ್ರ ’ನಾನು ಲೇಡಿಸ್’ ತಸ್ವೀರ್ ದಕ್ಷಿಣ ಏಷ್ಯಾ ಚಿತ್ರೋತ್ಸವಕ್ಕೆ ಆಯ್ಕೆ

ಗಂಗೂಬಾಯಿ ಕಾಥಿಯಾವಾಡಿ ಚಿತ್ರದಲ್ಲಿ ನಟಿ ಆಲಿಯಾ ಭಟ್ ಗಂಗೂಬಾಯಿಯಾಗಿ ಕಾಣಿಸಿಕೊಂಡಿದ್ದಾರೆ. 1960 ರ ಸಮಯದಲ್ಲಿ ಮುಂಬೈನ ಕಾಮಾಟಿಪುರದ ಅತ್ಯಂತ ಶಕ್ತಿಶಾಲಿ, ಪ್ರೀತಿಪಾತ್ರ ಮತ್ತು ಗೌರವಾನ್ವಿತರಲ್ಲಿ ಒಬ್ಬರು ಗಂಗೂಬಾಯಿ ಎನ್ನಲಾಗಿದೆ. ಈ ಚಲನಚಿತ್ರವು ಎಸ್. ಹುಸೇನ್ ಜೈದಿ ಅವರ “ದಿ ಮಾಫಿಯಾ ಕ್ವೀನ್ಸ್ ಆಫ್ ಮುಂಬಯಿ” ಕಾದಂಬರಿಯಿಂದ ಸ್ಫೂರ್ತಿ ಪಡೆದಿದೆ.

ಈ ವರ್ಷದ ಮಾರ್ಚ್‌ನಲ್ಲಿ ಗಂಗೂಬಾಯಿ ಕಾಥಿಯಾವಾಡಿಯವರ ದತ್ತು ಪುತ್ರ ಎಂದು ಹೇಳಿಕೊಳ್ಳುವ ಬಾಬೂಜೀ ಶಾ, ಬಾಲಿವುಡ್ ನಟಿ ಆಲಿಯಾ ಭಟ್, ಚಲನಚಿತ್ರ ನಿರ್ಮಾಪಕ ಸಂಜಯ್ ಲೀಲಾ ಬನ್ಸಾಲಿ ಮತ್ತು ಬನ್ಸಾಲಿ ಪ್ರೊಡಕ್ಷನ್ಸ್ ಪ್ರೈವೇಟ್ ಲಿಮಿಟೆಡ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಈ ಚಲನಚಿತ್ರವು “ದಿ ಮಾಫಿಯಾ ಕ್ವೀನ್ಸ್ ಆಫ್ ಮುಂಬಯಿ” ಕಾದಂಬರಿಯಿಂದ ಸ್ಫೂರ್ತಿ ಪಡೆದಿದೆ ಎಂದು ಬಾಬೂಜೀ ಶಾ ಹೇಳಿದ್ದಾರೆ. ಈ ಕಾದಂಬರಿಯ ಕೆಲವು ಭಾಗಗಳು ಮಾನಹಾನಿಕರವಾಗಿದ್ದು, ಗಂಗೂಬಾಯಿ ಕಾಥಿಯಾವಾಡಿಯವರ ಪ್ರತಿಷ್ಠೆಗೆ ಕಳಂಕ ತರುತ್ತವೆ. ಆಕೆಯ ಖಾಸಗಿತನದ ಹಕ್ಕಿಗೆ ಧಕ್ಕೆ ತಂದಿವೆ ಎಂದು ಆರೋಪಿಸಿದ್ದರು.

All about 'Matriarch of Kamathipura' Gangubai Kathiawadi, the woman who Alia Bhatt plays in Sanjay Leela Bhansali's film

ವಿಚಾರಣೆಯಲ್ಲಿ ಬನ್ಸಾಲಿ ಮತ್ತು ಆಲಿಯಾ ಭಟ್ ಪರ ಹಾಜರಾಗಿದ್ದ ಹಿರಿಯ ವಕೀಲ ಆಬಾದ್ ಪೊಂಡಾ, ಬಾಬೂಜೀ ಶಾ ಅಸ್ತಿತ್ವದ ಬಗ್ಗೆ ತಮಗೆ ಯಾವುದೇ ಮಾಹಿತಿಯಿಲ್ಲ ಎಂದು ವಾದಿಸಿದ್ದರು. ಇತ್ತ ಮತ್ತೊಂದು ಹೈಕೋರ್ಟ್ ಪೀಠ ಚಲನಚಿತ್ರ ಬಿಡುಗಡೆಗೆ ತಡೆ ನೀಡಲು ನಿರಾಕರಿಸಿತ್ತು. ಈಗ ಚಿತ್ರತಂಡ ಬಿಡುಗಡೆ ದಿನಾಂಕ ಘೋಷಿಸಿದೆ.


ಇದನ್ನೂ ಓದಿ: ಗಂಗೂಬಾಯಿ ಕಾಥಿಯಾವಾಡಿ ಚಿತ್ರ ವಿವಾದ: ಆಲಿಯಾ ಭಟ್, ಬನ್ಸಾಲಿ ವಿಚಾರಣೆಗೆ ಮಧ್ಯಂತರ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...