Homeಮುಖಪುಟವಿವಾದಗಳಿಂದ ಸುದ್ದಿಯಾಗಿದ್ದ ಗಂಗೂಬಾಯಿ ಕಾಥಿಯಾವಾಡಿ ಚಿತ್ರ ಬಿಡುಗಡೆ ದಿನಾಂಕ ಫಿಕ್ಸ್

ವಿವಾದಗಳಿಂದ ಸುದ್ದಿಯಾಗಿದ್ದ ಗಂಗೂಬಾಯಿ ಕಾಥಿಯಾವಾಡಿ ಚಿತ್ರ ಬಿಡುಗಡೆ ದಿನಾಂಕ ಫಿಕ್ಸ್

- Advertisement -
- Advertisement -

ಬಾಲಿವುಡ್ ನಟಿ ಆಲಿಯಾ ಭಟ್ ಅಭಿನಯದ ಮತ್ತು ಚಲನಚಿತ್ರ ನಿರ್ಮಾಪಕ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಬಹುನಿರೀಕ್ಷಿತ ಗಂಗೂಬಾಯಿ ಕಾಥಿಯಾವಾಡಿ ಚಲನಚಿತ್ರ ಬಿಡುಗಡೆಗೆ ಕೊನೆಗೂ ದಿನಾಂಕ ನಿಗದಿಯಾಗಿದೆ.

ವಿವಾದಗಳಿಂದ ಸುದ್ದಿಯಾಗಿದ್ದ ಈ ಚಿತ್ರವು ಮುಂದಿನ ವರ್ಷ ಜನವರಿ 6 ರಂದು ಚಿತ್ರಮಂದಿರಗಳಿಗೆ ಲಗ್ಗೆ ಇಡಲಿದೆ ಎಂದು ಚಿತ್ರ ತಂಡ ಘೋಷಿಸಿದೆ.  ಕೊರೊನಾ ಕಾರಣದಿಮದ ಮುಚ್ಚಲ್ಪಟ್ಟಿದ್ದ ಚಿತ್ರಮಂದಿರಗಳು ತೆರೆಯುವ ಘೋಷಣೆಯಾಗುತ್ತಿದಂತೆ ಸಾಲು ಸಾಲು ಚಿತ್ರಗಳು ತೆರೆ ಕಾಣಲು ಸಜ್ಜಾಗಿವೆ.

ಗಂಗೂಬಾಯಿ ಕಾಥಿಯಾವಾಡಿ ಚಿತ್ರ ಈ ವರ್ಷದ ಜುಲೈ 30 ರಂದು ಬಿಡುಗಡೆಯಾಗಬೇಕಿತ್ತು, ಆದರೆ ಮುಂದೂಡಲ್ಪಟ್ಟಿತ್ತು. ಈ ಚಿತ್ರ ಓಟಿಟಿ ವೇದಿಕೆಗಳಲ್ಲಿ ಬಿಡುಗಡೆಯಾಗುವ ವದಂತಿಗಳು ಹರಡಿದ್ದ ಹಿನ್ನೆಲೆ ಸ್ಪಷ್ಟನೆ ನೀಡಿದ್ದ ಚಿತ್ರ ನಿರ್ಮಾಣ ಸಂಸ್ಥೆ ಪಿಇಎನ್ ಇಂಡಿಯಾ ಲಿಮಿಟೆಡ್ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿತ್ತು.

ಇದನ್ನೂ ಓದಿ: ಕನ್ನಡದ ಮೊದಲ ಲೆಸ್ಬಿಯನ್ ಚಿತ್ರ ’ನಾನು ಲೇಡಿಸ್’ ತಸ್ವೀರ್ ದಕ್ಷಿಣ ಏಷ್ಯಾ ಚಿತ್ರೋತ್ಸವಕ್ಕೆ ಆಯ್ಕೆ

ಗಂಗೂಬಾಯಿ ಕಾಥಿಯಾವಾಡಿ ಚಿತ್ರದಲ್ಲಿ ನಟಿ ಆಲಿಯಾ ಭಟ್ ಗಂಗೂಬಾಯಿಯಾಗಿ ಕಾಣಿಸಿಕೊಂಡಿದ್ದಾರೆ. 1960 ರ ಸಮಯದಲ್ಲಿ ಮುಂಬೈನ ಕಾಮಾಟಿಪುರದ ಅತ್ಯಂತ ಶಕ್ತಿಶಾಲಿ, ಪ್ರೀತಿಪಾತ್ರ ಮತ್ತು ಗೌರವಾನ್ವಿತರಲ್ಲಿ ಒಬ್ಬರು ಗಂಗೂಬಾಯಿ ಎನ್ನಲಾಗಿದೆ. ಈ ಚಲನಚಿತ್ರವು ಎಸ್. ಹುಸೇನ್ ಜೈದಿ ಅವರ “ದಿ ಮಾಫಿಯಾ ಕ್ವೀನ್ಸ್ ಆಫ್ ಮುಂಬಯಿ” ಕಾದಂಬರಿಯಿಂದ ಸ್ಫೂರ್ತಿ ಪಡೆದಿದೆ.

ಈ ವರ್ಷದ ಮಾರ್ಚ್‌ನಲ್ಲಿ ಗಂಗೂಬಾಯಿ ಕಾಥಿಯಾವಾಡಿಯವರ ದತ್ತು ಪುತ್ರ ಎಂದು ಹೇಳಿಕೊಳ್ಳುವ ಬಾಬೂಜೀ ಶಾ, ಬಾಲಿವುಡ್ ನಟಿ ಆಲಿಯಾ ಭಟ್, ಚಲನಚಿತ್ರ ನಿರ್ಮಾಪಕ ಸಂಜಯ್ ಲೀಲಾ ಬನ್ಸಾಲಿ ಮತ್ತು ಬನ್ಸಾಲಿ ಪ್ರೊಡಕ್ಷನ್ಸ್ ಪ್ರೈವೇಟ್ ಲಿಮಿಟೆಡ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಈ ಚಲನಚಿತ್ರವು “ದಿ ಮಾಫಿಯಾ ಕ್ವೀನ್ಸ್ ಆಫ್ ಮುಂಬಯಿ” ಕಾದಂಬರಿಯಿಂದ ಸ್ಫೂರ್ತಿ ಪಡೆದಿದೆ ಎಂದು ಬಾಬೂಜೀ ಶಾ ಹೇಳಿದ್ದಾರೆ. ಈ ಕಾದಂಬರಿಯ ಕೆಲವು ಭಾಗಗಳು ಮಾನಹಾನಿಕರವಾಗಿದ್ದು, ಗಂಗೂಬಾಯಿ ಕಾಥಿಯಾವಾಡಿಯವರ ಪ್ರತಿಷ್ಠೆಗೆ ಕಳಂಕ ತರುತ್ತವೆ. ಆಕೆಯ ಖಾಸಗಿತನದ ಹಕ್ಕಿಗೆ ಧಕ್ಕೆ ತಂದಿವೆ ಎಂದು ಆರೋಪಿಸಿದ್ದರು.

All about 'Matriarch of Kamathipura' Gangubai Kathiawadi, the woman who Alia Bhatt plays in Sanjay Leela Bhansali's film

ವಿಚಾರಣೆಯಲ್ಲಿ ಬನ್ಸಾಲಿ ಮತ್ತು ಆಲಿಯಾ ಭಟ್ ಪರ ಹಾಜರಾಗಿದ್ದ ಹಿರಿಯ ವಕೀಲ ಆಬಾದ್ ಪೊಂಡಾ, ಬಾಬೂಜೀ ಶಾ ಅಸ್ತಿತ್ವದ ಬಗ್ಗೆ ತಮಗೆ ಯಾವುದೇ ಮಾಹಿತಿಯಿಲ್ಲ ಎಂದು ವಾದಿಸಿದ್ದರು. ಇತ್ತ ಮತ್ತೊಂದು ಹೈಕೋರ್ಟ್ ಪೀಠ ಚಲನಚಿತ್ರ ಬಿಡುಗಡೆಗೆ ತಡೆ ನೀಡಲು ನಿರಾಕರಿಸಿತ್ತು. ಈಗ ಚಿತ್ರತಂಡ ಬಿಡುಗಡೆ ದಿನಾಂಕ ಘೋಷಿಸಿದೆ.


ಇದನ್ನೂ ಓದಿ: ಗಂಗೂಬಾಯಿ ಕಾಥಿಯಾವಾಡಿ ಚಿತ್ರ ವಿವಾದ: ಆಲಿಯಾ ಭಟ್, ಬನ್ಸಾಲಿ ವಿಚಾರಣೆಗೆ ಮಧ್ಯಂತರ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...