Homeಮುಖಪುಟಬಾಲಿವುಡ್ ಡ್ರಗ್ ಮಾಫಿಯಾ: ಜಯಾ ಬಚ್ಚನ್ ಪರ ನಿಂತ ನಟಿ, ಬಿಜೆಪಿ ಸಂಸದೆ ಹೇಮಾ ಮಾಲಿನಿ

ಬಾಲಿವುಡ್ ಡ್ರಗ್ ಮಾಫಿಯಾ: ಜಯಾ ಬಚ್ಚನ್ ಪರ ನಿಂತ ನಟಿ, ಬಿಜೆಪಿ ಸಂಸದೆ ಹೇಮಾ ಮಾಲಿನಿ

ನನಗೆ ಈ ಉದ್ಯಮದಿಂದ ಹೆಸರು, ಖ್ಯಾತಿ, ಗೌರವ ಎಲ್ಲವೂ ಸಿಕ್ಕಿದೆ. ಬಾಲಿವುಡ್ ಯಾವಾಗಲೂ ಉನ್ನತ ಗೌರವ ಸ್ಥಾನದಲ್ಲಿಯೇ ಉಳಿಯಲಿದೆ. ಡ್ರಗ್ಸ್ ಮತ್ತು ಸ್ವಜನ ಪಕ್ಷಪಾತದಂತಹ ಆರೋಪಗಳಿಂದ ಅದನ್ನು ಕೆಳಗಿಳಿಸಲು ಸಾಧ್ಯವಿಲ್ಲ- ಹೇಮಾ ಮಾಲಿನಿ

- Advertisement -
- Advertisement -

ಡ್ರಗ್ ಮಾಫಿಯಾಗೆ ಸಂಬಂಧಿಸಿದಂತೆ ಬಾಲಿವುಡ್ ಚಿತ್ರ ಉದ್ಯಮದ ಮೇಲೆ ಮಾಡುತ್ತಿರುವ ದಾಳಿ ಮತ್ತು ಆರೋಪಗಳು ನಿಜವಾಗಿಯೂ ನೋವನ್ನುಂಟುಮಾಡುತ್ತಿವೆ ಎಂದು ಬಿಜೆಪಿ ಸಂಸದೆ ಮತ್ತು ಹಿರಿಯ ಬಾಲಿವುಡ್ ನಟಿ ಹೇಮಾ ಮಾಲಿನಿ ವಿಷಾದ ವ್ಯಕ್ತಪಡಿಸಿದರು. “ನನಗೆ ಈ ಉದ್ಯಮದಿಂದ ಹೆಸರು, ಖ್ಯಾತಿ, ಗೌರವ ಎಲ್ಲವೂ ಸಿಕ್ಕಿದೆ. ಬಾಲಿವುಡ್ ಯಾವಾಗಲೂ ಉನ್ನತ ಸ್ಥಾನದಲ್ಲಿಯೇ ಉಳಿಯಲಿದೆ. ಡ್ರಗ್ಸ್ ಮತ್ತು ಸ್ವಜನ ಪಕ್ಷಪಾತದಂತಹ ಆರೋಪಗಳಿಂದ ಅದರ ಗೌರವವನ್ನು ಕೆಳಗಿಳಿಸಲು ಸಾಧ್ಯವಿಲ್ಲ” ಎಂದು ಹೇಳಿದರು.

ಸುಶಾಂತ್ ಸಿಂಗ್ ರಜಪೂತ್ ಸಾವಿನ ತನಿಖೆ ಮತ್ತು ಮಾದಕವಸ್ತು ಸೇವನೆಗೆ ಸಂಬಂಧಿಸಿದಂತೆ ಬಾಲಿವುಡ್ ಚಲನಚಿತ್ರೋದ್ಯಮವನ್ನು ಕೆಣಕುವ ಪ್ರಯತ್ನವನ್ನು ಮಾಡುತ್ತಿದ್ದಾರೆ ಎಂದು ಜಯಾ ಬಚ್ಚನ್ ಸಂಸತ್ತಿನಲ್ಲಿ ಹೇಳಿದ ಒಂದು ದಿನದ ನಂತರ ಹೇಮಾ ಮಾಲಿನಿ ಎನ್‌ಡಿಟಿವಿಯೊಂದಿಗಿನ ಸಂದರ್ಶನದಲ್ಲಿ ಈ ಮಾತನ್ನು ಹೇಳಿದರು.

“ಸಿನಿಮಾ ಕ್ಷೇತ್ರದಲ್ಲಿ ಮಾದಕವಸ್ತು ವ್ಯಸನದ ಸಮಸ್ಯೆ ಇದೆ” ಎಂದು ಬಿಜೆಪಿ ಸಂಸದ ಮತ್ತು ನಟ ರವಿ ಕಿಶನ್ ಆರೋಪಿಸಿದ್ದರು. ಇತ್ತೀಚೆಗೆ ಬಾಲಿವುಡ್ ಅನ್ನು ‘ಚರಂಡಿ’ಗೆ ಹೋಲಿಸಿ ಕಂಗನಾ ರಣಾವತ್ ಟೀಕಿಸಿದ್ದರು.

ಇದನ್ನೂ ಓದಿ: ಡ್ರಗ್ಸ್ ಕೇಸ್: ನಟ ದಿಗಂತ್, ನಟಿ ಐಂದ್ರಿತಾಗೆ ಸಿಸಿಬಿ ನೋಟಿಸ್

ಇದಕ್ಕೆ ಪ್ರತಿಕ್ರಿಯೆಯಾಗಿ ಜಯಾ ಬಚ್ಚನ್, “ಇದೇ ಕ್ಷೇತ್ರದಲ್ಲಿ ಇದ್ದು, ಹೆಸರು ಮಾಡಿರುವವರೂ ಸಹ ಈಗ ಈ ಕ್ಷೇತ್ರವನ್ನು ಚರಂಡಿ ಎನ್ನುತ್ತಿದ್ದಾರೆ. ಇನ್ನು, ಸಿನಿಮಾ ಕ್ಷೇತ್ರದಿಂದ ಬಂದು ಈಗ ಸಂಸದರಾಗಿರುವವರೊಬ್ಬರು ಇದರ ಬಗ್ಗೆ ಮಾತನಾಡಿದ್ದಾರೆ” ಎಂದು ಯಾರ ಹೆಸರನ್ನೂ ಹೇಳದೇ ತಿರುಗೇಟು ನೀಡಿದ್ದರು.

“ಸಿನಿಮಾ ಕ್ಷೇತ್ರವು ನಿತ್ಯ 5 ಲಕ್ಷ ಜನರಿಗೆ ನೇರ ಉದ್ಯೋಗ ನೀಡುತ್ತಿದೆ. ಪರೋಕ್ಷವಾಗಿ ಸುಮಾರು 50 ಲಕ್ಷ ಜನರಿಗೆ ಉದ್ಯೋಗವನ್ನು ನೀಡಿದೆ. ಈ ಸಾಂಕ್ರಾಮಿಕ ಪಿಡುಗಿನ ಕಾರಣದಿಂದಾಗಿ ಆರ್ಥಿಕ ಸಂಕಷ್ಟ ಎದುರಾಗಿದೆ. ಈ ಸಂದರ್ಭದಲ್ಲಿ ಜನರ ದಿಕ್ಕುತಪ್ಪಿಸಲು ಸಾಮಾಜಿಕ ಜಾಲತಾಣಗಳಲ್ಲಿ ಸಿನಿಮಾ ಕ್ಷೇತ್ರವನ್ನು ಟೀಕಿಸಲಾಗುತ್ತಿದೆ. ನಮಗೆ ಸರ್ಕಾರದ ಬೆಂಬಲವೂ ಸಿಗುತ್ತಿಲ್ಲ” ಎಂದು ಹೇಳಿದ್ದರು.

ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ನೋಟಿಸ್

ಹೇಮಾ ಮಾಲಿನಿ, ರಾಜಕೀಯದಲ್ಲಿ ಜಯ ಬಚ್ಚನ್ ಅವರ ಪ್ರತಿಸ್ಪರ್ಧಿಯಾಗಿದ್ದರೂ, ಅವರ ಹೇಳಿಕೆಯನ್ನು ಬೆಂಬಲಿಸಿ, “ಬಾಲಿವುಡ್ ಒಂದು ಸುಂದರವಾದ ಸ್ಥಳ. ಸೃಜನಶೀಲ ಜಗತ್ತು. ಇದು ಕಲೆ ಮತ್ತು ಸಂಸ್ಕೃತಿಯ ಉದ್ಯಮ. ಜನರು ಇದರ ಬಗ್ಗೆ ಕೆಟ್ಟದಾಗಿ ಮಾತನಾಡುವುದನ್ನು, ಡ್ರಗ್ಸ್ ಬಗೆಗಿನ ವಿಷಯಗಳ ಬಗ್ಗೆ ಕೇಳಿದಾಗ ವೈಯಕ್ತಿಕವಾಗಿ ತುಂಬಾ ನೋವುಂಟಾಗುತ್ತದೆ. ಡ್ರಗ್ಸ್ ಜಾಲ ಇಲ್ಲಿ ಬಿಟ್ಟು ಬೇರೆಲ್ಲಿಯೂ ಸಂಭವಿಸುದಿಲ್ಲವೇ? ಕಪ್ಪು ಕಲೆಯಿದ್ದರೆ, ಅದನ್ನು ತೊಳೆಯಿರಿ. ಅದು ಇಲ್ಲವಾಗುತ್ತದೆ. ಬಾಲಿವುಡ್‌ಗೆ ಅಂಟಿರುವ ಡ್ರಗ್ಸ್ ಕಲೆ ಕೂಡಾ ಹಾಗೆಯೇ, ತೊಳೆದರೆ ಹೋಗುತ್ತದೆ” ಎಂದು ಹೇಳಿದರು.

ಮುಂದುವರರಿದು, “ಅನೇಕ ಕಲಾವಿದರು ಉದ್ಯಮವನ್ನು ಕಟ್ಟಲು ತುಂಬಾ ಶ್ರಮಿಸಿದ್ದಾರೆ. ಎಷ್ಟೋ ಕಲಾವಿದರನ್ನು ದೇವರಂತೆ ಆರಾಧಿಸುತ್ತಿದ್ದರು. ರಾಜ್ ಕಪೂರ್, ಧರ್ಮೇಂದ್ರ (ಹೇಮಾ ಮಾಲಿನಿ ಅವರ ಪತಿ), ಅಮಿತ್ ಜೀ ಮುಂತಾದವರುಗಳಿಂದ ಉದ್ಯಮವನ್ನು ಶ್ರೇಷ್ಠ ಮಟ್ಟಕ್ಕೆ ಕೊಂಡೊಯ್ದಿದ್ದರು. ಆದರೆ ಈ ಸಂದರ್ಭದಲ್ಲಿ ಹೀಗೆ ಉದ್ಯಮವನ್ನು ಅಪಹಾಸ್ಯ ಮಾಡುವುದನ್ನು ನಾವು ಸ್ವೀಕರಿಸಲು ಸಾಧ್ಯವಿಲ್ಲ. ಒಂದೆರಡು ಪ್ರಕರಣಗಳನ್ನು ಉಲ್ಲೇಖಿಸಿ ಇಡೀ ಉದ್ಯಮವನ್ನು ದೂಷಿಸುವುದು ಸರಿಯಲ್ಲ. ಇದನ್ನು ಒಪ್ಪಲೂ ಸಾಧ್ಯವಿಲ್ಲ” ಎಂದು ತಮ್ಮ ಅಭಿಪ್ರಾಯ ತಿಳಿಸಿದರು.

ನಟಿ ಮತ್ತು ಸಂಸದೆ ಜಯಾ ಬಚ್ಚನ್ ಅವರನ್ನು ಬೆಂಬಲಿಸಿ ಅಥವಾ ಅವರ ಪರ ನಿಂತು ಹೇಳಿಕೆ ನೀಡುತ್ತಿರುವವರ ಸಾಲಿನಲ್ಲಿ ಈಗ ಹೇಮಾ ಮಾಲಿನಿ ಕೂಡ ಒಬ್ಬರಾಗಿದ್ದಾರೆ.


ಇದನ್ನೂ ಓದಿ: ಬಾಲಿವುಡ್ ಡ್ರಗ್ ಮಾಫಿಯಾ: ಜಯಾ ಬಚ್ಚನ್ ವಿರುದ್ಧ ನೆಟ್ಟಿಗರ ಆಕ್ರೋಶ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...