Homeಮುಖಪುಟಬಾಲಿವುಡ್ ಡ್ರಗ್ ಮಾಫಿಯಾ: ಜಯಾ ಬಚ್ಚನ್ ಪರ ನಿಂತ ನಟಿ, ಬಿಜೆಪಿ ಸಂಸದೆ ಹೇಮಾ ಮಾಲಿನಿ

ಬಾಲಿವುಡ್ ಡ್ರಗ್ ಮಾಫಿಯಾ: ಜಯಾ ಬಚ್ಚನ್ ಪರ ನಿಂತ ನಟಿ, ಬಿಜೆಪಿ ಸಂಸದೆ ಹೇಮಾ ಮಾಲಿನಿ

ನನಗೆ ಈ ಉದ್ಯಮದಿಂದ ಹೆಸರು, ಖ್ಯಾತಿ, ಗೌರವ ಎಲ್ಲವೂ ಸಿಕ್ಕಿದೆ. ಬಾಲಿವುಡ್ ಯಾವಾಗಲೂ ಉನ್ನತ ಗೌರವ ಸ್ಥಾನದಲ್ಲಿಯೇ ಉಳಿಯಲಿದೆ. ಡ್ರಗ್ಸ್ ಮತ್ತು ಸ್ವಜನ ಪಕ್ಷಪಾತದಂತಹ ಆರೋಪಗಳಿಂದ ಅದನ್ನು ಕೆಳಗಿಳಿಸಲು ಸಾಧ್ಯವಿಲ್ಲ- ಹೇಮಾ ಮಾಲಿನಿ

- Advertisement -
- Advertisement -

ಡ್ರಗ್ ಮಾಫಿಯಾಗೆ ಸಂಬಂಧಿಸಿದಂತೆ ಬಾಲಿವುಡ್ ಚಿತ್ರ ಉದ್ಯಮದ ಮೇಲೆ ಮಾಡುತ್ತಿರುವ ದಾಳಿ ಮತ್ತು ಆರೋಪಗಳು ನಿಜವಾಗಿಯೂ ನೋವನ್ನುಂಟುಮಾಡುತ್ತಿವೆ ಎಂದು ಬಿಜೆಪಿ ಸಂಸದೆ ಮತ್ತು ಹಿರಿಯ ಬಾಲಿವುಡ್ ನಟಿ ಹೇಮಾ ಮಾಲಿನಿ ವಿಷಾದ ವ್ಯಕ್ತಪಡಿಸಿದರು. “ನನಗೆ ಈ ಉದ್ಯಮದಿಂದ ಹೆಸರು, ಖ್ಯಾತಿ, ಗೌರವ ಎಲ್ಲವೂ ಸಿಕ್ಕಿದೆ. ಬಾಲಿವುಡ್ ಯಾವಾಗಲೂ ಉನ್ನತ ಸ್ಥಾನದಲ್ಲಿಯೇ ಉಳಿಯಲಿದೆ. ಡ್ರಗ್ಸ್ ಮತ್ತು ಸ್ವಜನ ಪಕ್ಷಪಾತದಂತಹ ಆರೋಪಗಳಿಂದ ಅದರ ಗೌರವವನ್ನು ಕೆಳಗಿಳಿಸಲು ಸಾಧ್ಯವಿಲ್ಲ” ಎಂದು ಹೇಳಿದರು.

ಸುಶಾಂತ್ ಸಿಂಗ್ ರಜಪೂತ್ ಸಾವಿನ ತನಿಖೆ ಮತ್ತು ಮಾದಕವಸ್ತು ಸೇವನೆಗೆ ಸಂಬಂಧಿಸಿದಂತೆ ಬಾಲಿವುಡ್ ಚಲನಚಿತ್ರೋದ್ಯಮವನ್ನು ಕೆಣಕುವ ಪ್ರಯತ್ನವನ್ನು ಮಾಡುತ್ತಿದ್ದಾರೆ ಎಂದು ಜಯಾ ಬಚ್ಚನ್ ಸಂಸತ್ತಿನಲ್ಲಿ ಹೇಳಿದ ಒಂದು ದಿನದ ನಂತರ ಹೇಮಾ ಮಾಲಿನಿ ಎನ್‌ಡಿಟಿವಿಯೊಂದಿಗಿನ ಸಂದರ್ಶನದಲ್ಲಿ ಈ ಮಾತನ್ನು ಹೇಳಿದರು.

“ಸಿನಿಮಾ ಕ್ಷೇತ್ರದಲ್ಲಿ ಮಾದಕವಸ್ತು ವ್ಯಸನದ ಸಮಸ್ಯೆ ಇದೆ” ಎಂದು ಬಿಜೆಪಿ ಸಂಸದ ಮತ್ತು ನಟ ರವಿ ಕಿಶನ್ ಆರೋಪಿಸಿದ್ದರು. ಇತ್ತೀಚೆಗೆ ಬಾಲಿವುಡ್ ಅನ್ನು ‘ಚರಂಡಿ’ಗೆ ಹೋಲಿಸಿ ಕಂಗನಾ ರಣಾವತ್ ಟೀಕಿಸಿದ್ದರು.

ಇದನ್ನೂ ಓದಿ: ಡ್ರಗ್ಸ್ ಕೇಸ್: ನಟ ದಿಗಂತ್, ನಟಿ ಐಂದ್ರಿತಾಗೆ ಸಿಸಿಬಿ ನೋಟಿಸ್

ಇದಕ್ಕೆ ಪ್ರತಿಕ್ರಿಯೆಯಾಗಿ ಜಯಾ ಬಚ್ಚನ್, “ಇದೇ ಕ್ಷೇತ್ರದಲ್ಲಿ ಇದ್ದು, ಹೆಸರು ಮಾಡಿರುವವರೂ ಸಹ ಈಗ ಈ ಕ್ಷೇತ್ರವನ್ನು ಚರಂಡಿ ಎನ್ನುತ್ತಿದ್ದಾರೆ. ಇನ್ನು, ಸಿನಿಮಾ ಕ್ಷೇತ್ರದಿಂದ ಬಂದು ಈಗ ಸಂಸದರಾಗಿರುವವರೊಬ್ಬರು ಇದರ ಬಗ್ಗೆ ಮಾತನಾಡಿದ್ದಾರೆ” ಎಂದು ಯಾರ ಹೆಸರನ್ನೂ ಹೇಳದೇ ತಿರುಗೇಟು ನೀಡಿದ್ದರು.

“ಸಿನಿಮಾ ಕ್ಷೇತ್ರವು ನಿತ್ಯ 5 ಲಕ್ಷ ಜನರಿಗೆ ನೇರ ಉದ್ಯೋಗ ನೀಡುತ್ತಿದೆ. ಪರೋಕ್ಷವಾಗಿ ಸುಮಾರು 50 ಲಕ್ಷ ಜನರಿಗೆ ಉದ್ಯೋಗವನ್ನು ನೀಡಿದೆ. ಈ ಸಾಂಕ್ರಾಮಿಕ ಪಿಡುಗಿನ ಕಾರಣದಿಂದಾಗಿ ಆರ್ಥಿಕ ಸಂಕಷ್ಟ ಎದುರಾಗಿದೆ. ಈ ಸಂದರ್ಭದಲ್ಲಿ ಜನರ ದಿಕ್ಕುತಪ್ಪಿಸಲು ಸಾಮಾಜಿಕ ಜಾಲತಾಣಗಳಲ್ಲಿ ಸಿನಿಮಾ ಕ್ಷೇತ್ರವನ್ನು ಟೀಕಿಸಲಾಗುತ್ತಿದೆ. ನಮಗೆ ಸರ್ಕಾರದ ಬೆಂಬಲವೂ ಸಿಗುತ್ತಿಲ್ಲ” ಎಂದು ಹೇಳಿದ್ದರು.

ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ನೋಟಿಸ್

ಹೇಮಾ ಮಾಲಿನಿ, ರಾಜಕೀಯದಲ್ಲಿ ಜಯ ಬಚ್ಚನ್ ಅವರ ಪ್ರತಿಸ್ಪರ್ಧಿಯಾಗಿದ್ದರೂ, ಅವರ ಹೇಳಿಕೆಯನ್ನು ಬೆಂಬಲಿಸಿ, “ಬಾಲಿವುಡ್ ಒಂದು ಸುಂದರವಾದ ಸ್ಥಳ. ಸೃಜನಶೀಲ ಜಗತ್ತು. ಇದು ಕಲೆ ಮತ್ತು ಸಂಸ್ಕೃತಿಯ ಉದ್ಯಮ. ಜನರು ಇದರ ಬಗ್ಗೆ ಕೆಟ್ಟದಾಗಿ ಮಾತನಾಡುವುದನ್ನು, ಡ್ರಗ್ಸ್ ಬಗೆಗಿನ ವಿಷಯಗಳ ಬಗ್ಗೆ ಕೇಳಿದಾಗ ವೈಯಕ್ತಿಕವಾಗಿ ತುಂಬಾ ನೋವುಂಟಾಗುತ್ತದೆ. ಡ್ರಗ್ಸ್ ಜಾಲ ಇಲ್ಲಿ ಬಿಟ್ಟು ಬೇರೆಲ್ಲಿಯೂ ಸಂಭವಿಸುದಿಲ್ಲವೇ? ಕಪ್ಪು ಕಲೆಯಿದ್ದರೆ, ಅದನ್ನು ತೊಳೆಯಿರಿ. ಅದು ಇಲ್ಲವಾಗುತ್ತದೆ. ಬಾಲಿವುಡ್‌ಗೆ ಅಂಟಿರುವ ಡ್ರಗ್ಸ್ ಕಲೆ ಕೂಡಾ ಹಾಗೆಯೇ, ತೊಳೆದರೆ ಹೋಗುತ್ತದೆ” ಎಂದು ಹೇಳಿದರು.

ಮುಂದುವರರಿದು, “ಅನೇಕ ಕಲಾವಿದರು ಉದ್ಯಮವನ್ನು ಕಟ್ಟಲು ತುಂಬಾ ಶ್ರಮಿಸಿದ್ದಾರೆ. ಎಷ್ಟೋ ಕಲಾವಿದರನ್ನು ದೇವರಂತೆ ಆರಾಧಿಸುತ್ತಿದ್ದರು. ರಾಜ್ ಕಪೂರ್, ಧರ್ಮೇಂದ್ರ (ಹೇಮಾ ಮಾಲಿನಿ ಅವರ ಪತಿ), ಅಮಿತ್ ಜೀ ಮುಂತಾದವರುಗಳಿಂದ ಉದ್ಯಮವನ್ನು ಶ್ರೇಷ್ಠ ಮಟ್ಟಕ್ಕೆ ಕೊಂಡೊಯ್ದಿದ್ದರು. ಆದರೆ ಈ ಸಂದರ್ಭದಲ್ಲಿ ಹೀಗೆ ಉದ್ಯಮವನ್ನು ಅಪಹಾಸ್ಯ ಮಾಡುವುದನ್ನು ನಾವು ಸ್ವೀಕರಿಸಲು ಸಾಧ್ಯವಿಲ್ಲ. ಒಂದೆರಡು ಪ್ರಕರಣಗಳನ್ನು ಉಲ್ಲೇಖಿಸಿ ಇಡೀ ಉದ್ಯಮವನ್ನು ದೂಷಿಸುವುದು ಸರಿಯಲ್ಲ. ಇದನ್ನು ಒಪ್ಪಲೂ ಸಾಧ್ಯವಿಲ್ಲ” ಎಂದು ತಮ್ಮ ಅಭಿಪ್ರಾಯ ತಿಳಿಸಿದರು.

ನಟಿ ಮತ್ತು ಸಂಸದೆ ಜಯಾ ಬಚ್ಚನ್ ಅವರನ್ನು ಬೆಂಬಲಿಸಿ ಅಥವಾ ಅವರ ಪರ ನಿಂತು ಹೇಳಿಕೆ ನೀಡುತ್ತಿರುವವರ ಸಾಲಿನಲ್ಲಿ ಈಗ ಹೇಮಾ ಮಾಲಿನಿ ಕೂಡ ಒಬ್ಬರಾಗಿದ್ದಾರೆ.


ಇದನ್ನೂ ಓದಿ: ಬಾಲಿವುಡ್ ಡ್ರಗ್ ಮಾಫಿಯಾ: ಜಯಾ ಬಚ್ಚನ್ ವಿರುದ್ಧ ನೆಟ್ಟಿಗರ ಆಕ್ರೋಶ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...