Homeಕರ್ನಾಟಕಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪ್ರಕರಣ: ಶಂಕಿತ ಭಯೋತ್ಪಾದಕ ಆದಿತ್ಯ ರಾವ್‌ ಅಪರಾಧ ಸಾಬೀತು

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪ್ರಕರಣ: ಶಂಕಿತ ಭಯೋತ್ಪಾದಕ ಆದಿತ್ಯ ರಾವ್‌ ಅಪರಾಧ ಸಾಬೀತು

- Advertisement -
- Advertisement -

ಕಳೆದ ವರ್ಷ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್‌ ಇಟ್ಟಿದ್ದ ಶಂಕಿತ ಭಯೋತ್ಪಾದಕ ಆದಿತ್ಯ ರಾವ್‌‌‌ ಅಪರಾಧ ಸಾಬೀತಾಗಿದ್ದು, ಸ್ಥಳೀಯ ನ್ಯಾಯಾಲಯವು ಬುಧವಾರ ಆತನಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಮೆಕ್ಯಾನಿಕಲ್ ಇಂಜಿನಿಯರ್ ಕೂಡಾ ಆಗಿದ್ದ ಆದಿತ್ಯ ರಾವ್‌ ವಿಮಾನ ನಿಲ್ದಾಣದ ಟಿಕೆಟ್‌‌ ಕೌಂಟರ್ ಬಳಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಇಟ್ಟಿದ್ದನು. ಈ ಆರೋಪ ಸಾಬೀತಾಗಿದ್ದು ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಪಲ್ಲವಿ ಬಿ.ಆರ್. ಅವರು ಆದಿತ್ಯ ರಾವ್‌ನನ್ನು ಅಪರಾಧಿ ಎಂದು ಪರಿಗಣಿಸಿ 20 ವರ್ಷಗಳ ಜೈಲು ಶಿಕ್ಷೆಯ ಜೊತೆಗೆ 10,000 ರೂ. ದಂಡವನ್ನೂ ವಿಧಿಸಿದ್ದಾರೆ.

ಇದನ್ನೂ ಓದಿ: ನಿಮ್ಮ ಕಾಯ್ದೆಯಿಂದ ರಾಜ್ಯ ಧರ್ಮಾಂಧತೆಯ ಕೇಂದ್ರವಾಗಿದೆ: ಆದಿತ್ಯನಾಥ್‌ಗೆ 104 ಮಾಜಿ IAS ಅಧಿಕಾರಿಗಳ ಪತ್ರ

ಸ್ಫೋಟಕ ವಸ್ತುಗಳ ಕಾಯಿದೆ-1908 ರ ಸೆಕ್ಷನ್ 4 ರ ಅಡಿಯಲ್ಲಿ ಅಪರಾಧಗಳಿಗಾಗಿ ಐದು ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ಕಾನೂನುಬಾಹಿರ ಚಟುವಟಿಕೆಗಳ-ತಡೆಗಟ್ಟುವಿಕೆ-ಕಾಯಿದೆ-1967 (ಯುಎಪಿಎ) ರ ಸೆಕ್ಷನ್ 16 ರ ಅಡಿಯಲ್ಲಿ ಅಪರಾಧಗಳಿಗಾಗಿ 20 ವರ್ಷಗಳ ಕಠಿಣ ಜೈಲು ಶಿಕ್ಷೆಯನ್ನು ವಿಧಿಸಲಾಯಿತು. ದಂಡದ ಮೊತ್ತವನ್ನು ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ ಆರು ತಿಂಗಳ ಸರಳ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.

ಆದಿತ್ಯ ರಾವ್ ಏರ್‌ಪೋರ್ಟ್‌‌ನಲ್ಲಿ ಇಟ್ಟು ಹೋಗಿದ್ದ ಪೆಟ್ಟಿಗೆಯಲ್ಲಿ ಅಮೋನಿಯಂ ನೈಟ್ರೇಟ್, ಸಲ್ಫರ್, ಪೊಟ್ಯಾಸಿಯಮ್ ಕ್ಲೋರೇಟ್ ಮತ್ತು ಚಾಕೋರ್ಟ್‌ನಿಂದ ತಯಾರಿಸಿದ್ದ ಸ್ಪೋಟಕ ಇತ್ತು. ಅದನ್ನು ಬ್ಯಾಗ್‌ನಲ್ಲಿ ಸುತ್ತಿ ಏರ್‌ಪೋರ್ಟ್‌ನ ಡಿಪಾರ್ಚರ್ ಗೇಟ್‌ನ ಟಿಕೆಟ್ ಕೌಂಟರ್ ಬಳಿ ಇಡಲಾಗಿತ್ತು.

ಎಂಬಿಎ ಪದವಿ ಪಡೆದಿರುವ ಆದಿತ್ಯ ರಾವ್ ಘಟನೆಯ ನಂತರ ಬೆಂಗಳೂರಿನಲ್ಲಿ ಪೊಲೀಸರಿಗೆ ಶರಣಾಗಿದ್ದನು. ಬಾಂಬ್‌ ತಯಾರಿಸುವುದನ್ನು ಆನ್‌ಲೈನ್‌ ವಿಡಿಯೊದಲ್ಲಿ ನೋಡಿ ಕಲಿತಿದ್ದಾಗಿ ಆತ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ.

2018 ರಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್‌‌ ಬೆದರಿಕೆಯ ಕರೆ ಮಾಡಿ ಹಲವು ವಿಮಾನಗಳ ವೇಳಾಪಟ್ಟಿಯನ್ನು ಅಡ್ಡಿಪಡಿಸಿದ್ದಕ್ಕಾಗಿ ಬೆಂಗಳೂರು ಪೊಲೀಸರು ಆದಿತ್ಯನನ್ನು ಬಂಧಿಸಿದ್ದರು. ಕೆಐಎಯಲ್ಲಿ ಸೆಕ್ಯುರಿಟಿ ಗಾರ್ಡ್ ಕೆಲಸ ನಿರಾಕರಿಸಲ್ಪಟ್ಟಿದ್ದಕ್ಕೆ ತಾನು ಈ ಕೃತ್ಯ ಎಸಗಿದ್ದಾಗಿ ಆದಿತ್ಯ ಹೇಳಿದ್ದಾನೆ ಎಂದು ವರದಿಯಾಗಿದೆ. ಅಲ್ಲದೆ, ಬೆಂಗಳೂರಿನ ರೈಲ್ವೇ ನಿಲ್ದಾಣಕ್ಕೆ ಕರೆ ಮಾಡಿ ಬೆದರಿಸಿದ್ದಕ್ಕಾಗಿ ಆತನನ್ನು ಹಿಂದೊಮ್ಮೆ ಬಂಧಿಸಲಾಗಿತ್ತು ಎಂದು ವರದಿಯಾಗಿದೆ.

ಇದನ್ನೂ ಓದಿ: ಮಂಗಳೂರು ಬಾಂಬ್ ಇಟ್ಟ ಆರೋಪಿ ಆದಿತ್ಯ ರಾವ್ ಬೆಂಗಳೂರಿನಲ್ಲಿ ಶರಣು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...