Homeಮುಖಪುಟಪಶ್ಚಿಮ ಬಂಗಾಳ: ’ಸಚಿವರ ಮೇಲಿನ ಬಾಂಬ್ ದಾಳಿ ಪಿತೂರಿಯ ಭಾಗ’ ಎಂದ ಮಮತಾ

ಪಶ್ಚಿಮ ಬಂಗಾಳ: ’ಸಚಿವರ ಮೇಲಿನ ಬಾಂಬ್ ದಾಳಿ ಪಿತೂರಿಯ ಭಾಗ’ ಎಂದ ಮಮತಾ

- Advertisement -
- Advertisement -

ಪಶ್ಚಿಮ ಬಂಗಾಳ ಕಾರ್ಮಿಕ ಸಚಿವ ಜಾಕೀರ್ ಹುಸೇನ್ ಮೇಲೆ ಬುಧವಾರ (ಫೆ.17) ರಾತ್ರಿ ಕಚ್ಚಾ ಬಾಂಬ್ ದಾಳಿ ನಡೆದಿದ್ದು, ಸಚಿವರು ಗಾಯಗೊಂಡಿದ್ದಾರೆ. ಈ ಬಾಂಬ್ ದಾಳಿ ಪಿತೂರಿಯ ಭಾಗವಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಮುರ್ಷಿದಾಬಾದ್ ಜಿಲ್ಲೆಯ ನಿಮ್ತಿತಾ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ದಾಳಿ ನಡೆದಿದ್ದು, ಸಚಿವರು ಕೊಲ್ಕತ್ತಾಗೆ ರೈಲು ಹತ್ತಲು ತೆರಳುತ್ತಿದ್ದರು. ಈ ವೇಳೆ ಅಪರಿಚಿತ ವ್ಯಕ್ತಿಗಳು ಕಚ್ಚಾ ಬಾಂಬ್‌ಗಳನ್ನು ಎಸೆದ ಹಿನ್ನೆಲೆಯಲ್ಲಿ ಸಚಿವರು ಗಾಯಗೊಂಡಿದ್ದಾರೆ. ಅವರು ಒಂದು ಕೈ ಮತ್ತು ಕಾಲಿಗೆ ಗಾಯಗಳಾಗಿದ್ದು, ಸದ್ಯ ಜಾಕೀರ್ ಹುಸೇನ್ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರೊಬ್ಬರು ತಿಳಿಸಿದ್ದಾರೆ.

ಸಚಿವರ ಮೇಲೆ ಬೇರೆ ಪಕ್ಷಕ್ಕೆ ಸೇರ್ಪಡೆಯಾಗುವಂತೆ ಕೆಲವರು ಒತ್ತಡ ಹೇರುತ್ತಿದ್ದರು. ಈ ಪಿತೂರಿಯ ಭಾಗವಾಗಿ ಬಾಂಬ್ ದಾಳಿ ನಡೆದಿದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಜೊತೆಗೆ ಅಹಿತಕರ ಘಟನೆ ರೈಲ್ವೇ ನಿಲ್ದಾಣದ ಆವರಣದಲ್ಲಿ ನಡೆದಿದ್ದರಿಂದ  ಭಾರತೀಯ ರೈಲ್ವೇ ಇಲಾಖೆ ಘಟನೆಯ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಪಂಜಾಬ್ ಸ್ಥಳೀಯ ಚುನಾವಣೆ – ಕಾಂಗ್ರೆಸ್‌ಗೆ ಭರ್ಜರಿ ಜಯ, ಬಿಜೆಪಿಗೆ ಮುಖಭಂಗ

ಸದ್ಯ ಈ ಪ್ರಕರಣವನ್ನು ಪಶ್ಚಿಮ ಬಂಗಾಳ ಸಿಐಡಿ ವಹಿಸಿಕೊಂಡಿದೆ. ರೈಲ್ವೆ ನಿಲ್ದಾಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಅಲ್ಲಿ ತನಿಖೆ ನಡೆಯುತ್ತಿದೆ. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಕಾವು ಏರುತ್ತಿರುವಾಗಲೇ ಈ ಅಹಿತಕರ ಘಟನೆ ನಡೆದಿದೆ.

ಬುಧವಾರ (ಫೆ.17) ರಾತ್ರಿ 10 ಗಂಟೆ ಸುಮಾರಿಗೆ ಕೊಲ್ಕತ್ತಾಗೆ ರೈಲು ಹತ್ತಲು ನಿಲ್ದಾಣದಲ್ಲಿ ಕಾಯುತ್ತಿದ್ದ ಕಾರ್ಮಿಕ ಸಚಿವ ಜಾಕೀರ್‌ ಹುಸೇನ್ ಮೇಲೆ ದಾಳಿ ನಡೆದಿದೆ ಎಂದು ಬಂಗಾಳ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

’ಘಟನೆಯಲ್ಲಿ ಸಚಿವ ಜಕೀರ್ ಹುಸೇನ್ ಸೇರಿದಂತೆ ಸುಮಾರು 26 ಜನರು ಗಾಯಗೊಂಡಿದ್ದಾರೆ. ಅವರಲ್ಲಿ 14 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪೊಲೀಸ್ ತನಿಖೆ ನಡೆಯುತ್ತಿದೆ. ಘಟನೆಯ ತನಿಖೆಗೆ ಸಿಐಡಿ, ಎಸ್‌ಟಿಎಫ್ ಮತ್ತು ಸಿಐಎಫ್ ಕೂಡ ಸೇರಿಕೊಂಡಿದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ’ ಎಂದು ಸಚಿವ ಫಿರ್ಹಾದ್ ಹಕೀಮ್ ತಿಳಿಸಿದ್ದಾರೆ.

’ತನಿಖೆಗೆ ರೈಲ್ವೆ ಇಲಾಖೆ ಸಹಾಯ ಮಾಡುತ್ತದೆ ಎಂದು ನಾನು ಭಾವಿಸುತ್ತೇನೆ. ಪಕ್ಷದ ಪರವಾಗಿ, ಅಪರಾಧಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ತರಬೇಕೆಂದು ನಾವು ಬಯಸುತ್ತೇವೆ” ಎಂದು ಫಿರ್ಹಾದ್ ಹಕೀಮ್ ಹೇಳಿದ್ದಾರೆ.


ಇದನ್ನೂ ಓದಿ: ರಾಮಮಂದಿರಕ್ಕೆ ದೇಣಿಗೆ ನೀಡಲು ನಿರಾಕರಿಸಿದ್ದಕ್ಕೆ ಬೆದರಿಕೆ: ಕುಮಾರಸ್ವಾಮಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...