Homeಮುಖಪುಟಪ್ರಧಾನಿ ಭೇಟಿ ನೀಡಿದ ಒಂದು ದಿನದ ನಂತರ ಮಣಿಪುರದಲ್ಲಿ ಬಾಂಬ್ ಸ್ಪೋಟ; ಒಬ್ಬ ಯೋಧ ಸಾವು

ಪ್ರಧಾನಿ ಭೇಟಿ ನೀಡಿದ ಒಂದು ದಿನದ ನಂತರ ಮಣಿಪುರದಲ್ಲಿ ಬಾಂಬ್ ಸ್ಪೋಟ; ಒಬ್ಬ ಯೋಧ ಸಾವು

- Advertisement -
- Advertisement -

ಮಣಿಪುರದ ದಕ್ಷಿಣ ಭಾಗದ ಸಮೀಪವಿರುವ ಗುಡ್ಡಗಾಡು ಪ್ರದೇಶವಾಗಿರುವ ತೌಬಲ್ ಜಿಲ್ಲೆಯ ಲಿಲಾಂಗ್ ಉಸೊಯಿಪೋಕ್ಪಿ ಸಂಗೊಮ್ಸಾಂಗ್‌ನಲ್ಲಿ ಎರಡು ಸುಧಾರಿತ ಸ್ಫೋಟಕ ಸಾಧನಗಳು (ಐಇಡಿ) ಸ್ಫೋಟಗೊಂಡ ಪರಿಣಾಮ ಅಸ್ಸಾಂ ರೈಫಲ್ಸ್‌ನ ಸದಸ್ಯರೊಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ. ಮೃತ ಯೋಧನನ್ನು ಅರುಣಾಚಲ ಪ್ರದೇಶದ ರೈಫಲ್‌ಮನ್ ಎಲ್.ವಾಂಗ್ಚು (30) ಎಂದು ಗುರುತಿಸಲಾಗಿದೆ.

ಅಸ್ಸಾಂ ರೈಫಲ್ಸ್‌-16 ಬೆಟಾಲಿಯನ್‌ನ ಪಡೆಗಳು ರಾಜ್ಯದ ದಕ್ಷಿಣ ಭಾಗದ ಗುಡ್ಡಗಾಡು ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದವು. ಈ ವೇಳೆ ಕೆಲವು ಪ್ಯಾರಾ ಮಿಲಿಟರಿ ಸೈನಿಕರು ನೀರು ಸರಬರಾಜು ಪಂಪ್‌ನ ಬಳಿ ವಿಶ್ರಾಂತಿ ಪಡೆಯುತ್ತಿದ್ದಾಗ ಸ್ಫೋಟಗಳು ಸಂಭವಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ವರದಿಗಳ ಪ್ರಕಾರ, ಸೈನಿಕರು ಹೆಚ್ಚಾಗಿ ಬಳಸುತ್ತಿದ್ದ ಪಂಪ್ ಬಳಿ ಐಇಡಿ ಸ್ಫೋಟಗೊಳ್ಳುವ ರೀತಿಯಲ್ಲಿ ಇರಿಸಲಾಗಿತ್ತು.

ಇದನ್ನೂ ಓದಿ:ಪಂಜಾಬ್: ಪ್ರಧಾನಿ ಕಾರ್ಯಕ್ರಮ ರದ್ದು; ಏನಂತಾರೆ ನೆಟ್ಟಿಗರು?

ಗಾಯಗೊಂಡ ಯೋಧ ಪಿಂಕು ದಾಸ್ ಅವರನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮುಂಬರುವ ಚುನಾವಣೆಗಾಗಿ ಬಿಜೆಪಿ ಪರ ಪ್ರಚಾರದ ಭಾಗವಾಗಿ ಮಣಿಪುರಕ್ಕೆ ಭೇಟಿ ನೀಡಿದ ಒಂದು ದಿನದ ನಂತರ ಈ ಸ್ಫೋಟಗಳು ಸಂಭವಿಸಿವೆ.

ನವೆಂಬರ್ 13 ರಂದು ಈ ಪ್ರದೇಶದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ನಂತರ ಸೇನೆ ಮತ್ತು ಅಸ್ಸಾಂ ರೈಫಲ್ಸ್‌ ಹೆಚ್ಚಿನ ಜಾಗರೂಕತೆಯನ್ನು ವಹಿಸುತ್ತಿವೆ. ಮಯನ್ಮಾರ್ ಗಡಿಯಲ್ಲಿರುವ ಚುರಾಚಂದ್‌ಪುರ ಜಿಲ್ಲೆಯಲ್ಲಿ ಅಸ್ಸಾಂ ರೈಫಲ್ಸ್್‌ನ ಕರ್ನಲ್, ಅವರ ಪತ್ನಿ ಮತ್ತು ಮಗ ಮತ್ತು ನಾಲ್ಕು ಪ್ಯಾರಾ ಮಿಲಿಟರಿ ಪಡೆಯ ಸಿಬ್ಬಂದಿಯನ್ನು ಈ ಭಯೋತ್ಪಾದಕ ದಾಳಿಯಲ್ಲಿ ಕೊಲ್ಲಲಾಗಿತ್ತು.

ಈ ದಾಳಿಯನ್ನು ಮಣಿಪುರದ ಪೀಪಲ್ಸ್ ಲಿಬರೇಶನ್ ಆರ್ಮಿ ಮತ್ತು ಮಣಿಪುರ ನಾಗಾ ಪೀಪಲ್ಸ್ ಫ್ರಂಟ್ ಮಾಡಿರುವುದಾಗಿ ಹೇಳಿಕೊಂಡಿವೆ.

ಇದನ್ನೂ ಓದಿ:Explained: ಹೋಮ್‌‌‌ ಐಸೋಲೇಶನ್‌ ರೋಗಿಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ

ಅಲ್ಲಿಂದೀಚೆಗೆ ತೀವ್ರತರವಾದ ಭಯೋತ್ಪಾದಕ ದಾಳಿಗಳು ನಡೆದಿವೆ, ಇನ್ನು ಕೆಲವೇ ತಿಂಗಳುಗಳಲ್ಲಿ ವಿಧಾನಸಭೆ ಚುನಾವಣೆಗಳು ನಡೆಯಲಿರುವ ಕಾರಣ ಉದ್ವಿಗ್ನತೆ ಹೆಚ್ಚುತ್ತಿದೆ. ತೌಬಲ್‌ನಲ್ಲಿ ನಡೆದ ಬಾಂಬ್ ಸ್ಫೋಟವು, ಮಣಿಪುರದಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ ನಡೆದ ನಾಲ್ಕನೇ ಸ್ಫೋಟವಾಗಿದೆ.

ಭದ್ರತಾ ಅಧಿಕಾರಿಗಳು ಸಾಮಾನ್ಯವಾಗಿ ರಾತ್ರಿಯಲ್ಲಿ ಸ್ಫೋಟಿಸುವ ಮತ್ತು ಆಗಾಗ್ಗೆ ಆಸ್ತಿಪಾಸ್ತಿ ಹಾನಿಯನ್ನು ಉಂಟುಮಾಡುವ ಸ್ಫೋಟಗಳ ಮಾದರಿಯನ್ನು ಗಮನಿಸಿದ್ದಾರೆ. ಕಳೆದ ವರ್ಷ ನವೆಂಬರ್ 18, ಡಿಸೆಂಬರ್ 15 ಮತ್ತು 29 ರಂದು ಈ ಸ್ಪೋಟಗಳು ನಡೆದಿದ್ದವು. ಈ ಸ್ಪೋಟವನ್ನು ತಾವೆ ಮಾಡಿದ್ದಾಗಿ ಯಾವುದೇ ಭಯೋತ್ಪಾದಕ ಗುಂಪು ಅಥವಾ ಬಂಡೂಕೋರ ಸಂಘಟನೆಗಳು ಒಪ್ಪಿಕೊಂಡಿಲ್ಲ. ಈ ದಾಳಿಯ ಆರೋಪಿಗಳನ್ನು ಭದ್ರತಾ ಪಡೆಗಳು ಇನ್ನೂ ಗುರುತಿಸಿಲ್ಲ.

ಇದನ್ನೂ ಓದಿ:ಪಂಜಾಬ್ ಕೋರ್ಟ್ ಸ್ಪೋಟ ಪ್ರಕರಣಕ್ಕೆ ತಿರುವು: ಮೃತಪಟ್ಟ ಮಾಜಿ ಪೊಲೀಸ್ ಆರೋಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...