Homeಮುಖಪುಟಪ್ರಧಾನಿ ಭೇಟಿ ನೀಡಿದ ಒಂದು ದಿನದ ನಂತರ ಮಣಿಪುರದಲ್ಲಿ ಬಾಂಬ್ ಸ್ಪೋಟ; ಒಬ್ಬ ಯೋಧ ಸಾವು

ಪ್ರಧಾನಿ ಭೇಟಿ ನೀಡಿದ ಒಂದು ದಿನದ ನಂತರ ಮಣಿಪುರದಲ್ಲಿ ಬಾಂಬ್ ಸ್ಪೋಟ; ಒಬ್ಬ ಯೋಧ ಸಾವು

- Advertisement -
- Advertisement -

ಮಣಿಪುರದ ದಕ್ಷಿಣ ಭಾಗದ ಸಮೀಪವಿರುವ ಗುಡ್ಡಗಾಡು ಪ್ರದೇಶವಾಗಿರುವ ತೌಬಲ್ ಜಿಲ್ಲೆಯ ಲಿಲಾಂಗ್ ಉಸೊಯಿಪೋಕ್ಪಿ ಸಂಗೊಮ್ಸಾಂಗ್‌ನಲ್ಲಿ ಎರಡು ಸುಧಾರಿತ ಸ್ಫೋಟಕ ಸಾಧನಗಳು (ಐಇಡಿ) ಸ್ಫೋಟಗೊಂಡ ಪರಿಣಾಮ ಅಸ್ಸಾಂ ರೈಫಲ್ಸ್‌ನ ಸದಸ್ಯರೊಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ. ಮೃತ ಯೋಧನನ್ನು ಅರುಣಾಚಲ ಪ್ರದೇಶದ ರೈಫಲ್‌ಮನ್ ಎಲ್.ವಾಂಗ್ಚು (30) ಎಂದು ಗುರುತಿಸಲಾಗಿದೆ.

ಅಸ್ಸಾಂ ರೈಫಲ್ಸ್‌-16 ಬೆಟಾಲಿಯನ್‌ನ ಪಡೆಗಳು ರಾಜ್ಯದ ದಕ್ಷಿಣ ಭಾಗದ ಗುಡ್ಡಗಾಡು ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದವು. ಈ ವೇಳೆ ಕೆಲವು ಪ್ಯಾರಾ ಮಿಲಿಟರಿ ಸೈನಿಕರು ನೀರು ಸರಬರಾಜು ಪಂಪ್‌ನ ಬಳಿ ವಿಶ್ರಾಂತಿ ಪಡೆಯುತ್ತಿದ್ದಾಗ ಸ್ಫೋಟಗಳು ಸಂಭವಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ವರದಿಗಳ ಪ್ರಕಾರ, ಸೈನಿಕರು ಹೆಚ್ಚಾಗಿ ಬಳಸುತ್ತಿದ್ದ ಪಂಪ್ ಬಳಿ ಐಇಡಿ ಸ್ಫೋಟಗೊಳ್ಳುವ ರೀತಿಯಲ್ಲಿ ಇರಿಸಲಾಗಿತ್ತು.

ಇದನ್ನೂ ಓದಿ:ಪಂಜಾಬ್: ಪ್ರಧಾನಿ ಕಾರ್ಯಕ್ರಮ ರದ್ದು; ಏನಂತಾರೆ ನೆಟ್ಟಿಗರು?

ಗಾಯಗೊಂಡ ಯೋಧ ಪಿಂಕು ದಾಸ್ ಅವರನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮುಂಬರುವ ಚುನಾವಣೆಗಾಗಿ ಬಿಜೆಪಿ ಪರ ಪ್ರಚಾರದ ಭಾಗವಾಗಿ ಮಣಿಪುರಕ್ಕೆ ಭೇಟಿ ನೀಡಿದ ಒಂದು ದಿನದ ನಂತರ ಈ ಸ್ಫೋಟಗಳು ಸಂಭವಿಸಿವೆ.

ನವೆಂಬರ್ 13 ರಂದು ಈ ಪ್ರದೇಶದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ನಂತರ ಸೇನೆ ಮತ್ತು ಅಸ್ಸಾಂ ರೈಫಲ್ಸ್‌ ಹೆಚ್ಚಿನ ಜಾಗರೂಕತೆಯನ್ನು ವಹಿಸುತ್ತಿವೆ. ಮಯನ್ಮಾರ್ ಗಡಿಯಲ್ಲಿರುವ ಚುರಾಚಂದ್‌ಪುರ ಜಿಲ್ಲೆಯಲ್ಲಿ ಅಸ್ಸಾಂ ರೈಫಲ್ಸ್್‌ನ ಕರ್ನಲ್, ಅವರ ಪತ್ನಿ ಮತ್ತು ಮಗ ಮತ್ತು ನಾಲ್ಕು ಪ್ಯಾರಾ ಮಿಲಿಟರಿ ಪಡೆಯ ಸಿಬ್ಬಂದಿಯನ್ನು ಈ ಭಯೋತ್ಪಾದಕ ದಾಳಿಯಲ್ಲಿ ಕೊಲ್ಲಲಾಗಿತ್ತು.

ಈ ದಾಳಿಯನ್ನು ಮಣಿಪುರದ ಪೀಪಲ್ಸ್ ಲಿಬರೇಶನ್ ಆರ್ಮಿ ಮತ್ತು ಮಣಿಪುರ ನಾಗಾ ಪೀಪಲ್ಸ್ ಫ್ರಂಟ್ ಮಾಡಿರುವುದಾಗಿ ಹೇಳಿಕೊಂಡಿವೆ.

ಇದನ್ನೂ ಓದಿ:Explained: ಹೋಮ್‌‌‌ ಐಸೋಲೇಶನ್‌ ರೋಗಿಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ

ಅಲ್ಲಿಂದೀಚೆಗೆ ತೀವ್ರತರವಾದ ಭಯೋತ್ಪಾದಕ ದಾಳಿಗಳು ನಡೆದಿವೆ, ಇನ್ನು ಕೆಲವೇ ತಿಂಗಳುಗಳಲ್ಲಿ ವಿಧಾನಸಭೆ ಚುನಾವಣೆಗಳು ನಡೆಯಲಿರುವ ಕಾರಣ ಉದ್ವಿಗ್ನತೆ ಹೆಚ್ಚುತ್ತಿದೆ. ತೌಬಲ್‌ನಲ್ಲಿ ನಡೆದ ಬಾಂಬ್ ಸ್ಫೋಟವು, ಮಣಿಪುರದಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ ನಡೆದ ನಾಲ್ಕನೇ ಸ್ಫೋಟವಾಗಿದೆ.

ಭದ್ರತಾ ಅಧಿಕಾರಿಗಳು ಸಾಮಾನ್ಯವಾಗಿ ರಾತ್ರಿಯಲ್ಲಿ ಸ್ಫೋಟಿಸುವ ಮತ್ತು ಆಗಾಗ್ಗೆ ಆಸ್ತಿಪಾಸ್ತಿ ಹಾನಿಯನ್ನು ಉಂಟುಮಾಡುವ ಸ್ಫೋಟಗಳ ಮಾದರಿಯನ್ನು ಗಮನಿಸಿದ್ದಾರೆ. ಕಳೆದ ವರ್ಷ ನವೆಂಬರ್ 18, ಡಿಸೆಂಬರ್ 15 ಮತ್ತು 29 ರಂದು ಈ ಸ್ಪೋಟಗಳು ನಡೆದಿದ್ದವು. ಈ ಸ್ಪೋಟವನ್ನು ತಾವೆ ಮಾಡಿದ್ದಾಗಿ ಯಾವುದೇ ಭಯೋತ್ಪಾದಕ ಗುಂಪು ಅಥವಾ ಬಂಡೂಕೋರ ಸಂಘಟನೆಗಳು ಒಪ್ಪಿಕೊಂಡಿಲ್ಲ. ಈ ದಾಳಿಯ ಆರೋಪಿಗಳನ್ನು ಭದ್ರತಾ ಪಡೆಗಳು ಇನ್ನೂ ಗುರುತಿಸಿಲ್ಲ.

ಇದನ್ನೂ ಓದಿ:ಪಂಜಾಬ್ ಕೋರ್ಟ್ ಸ್ಪೋಟ ಪ್ರಕರಣಕ್ಕೆ ತಿರುವು: ಮೃತಪಟ್ಟ ಮಾಜಿ ಪೊಲೀಸ್ ಆರೋಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...