Homeಮುಖಪುಟಬಂಗಾಳದ ಎಲ್ಲೆಡೆ ಬಾಂಬ್ ಫ್ಯಾಕ್ಟರಿ: ಅಮಿತ್ ಶಾ ಸುಳ್ಳು ಬಯಲು ಮಾಡಿದ ಆರ್‌ಟಿಐ ಕಾರ್ಯಕರ್ತ

ಬಂಗಾಳದ ಎಲ್ಲೆಡೆ ಬಾಂಬ್ ಫ್ಯಾಕ್ಟರಿ: ಅಮಿತ್ ಶಾ ಸುಳ್ಳು ಬಯಲು ಮಾಡಿದ ಆರ್‌ಟಿಐ ಕಾರ್ಯಕರ್ತ

ಗೃಹ ಇಲಾಖೆ ಸುಲಭಕ್ಕೆ ಮಾಹಿತಿ ನೀಡಲಿಲ್ಲ. ನಾಲ್ಕು ತಿಂಗಳ ನಂತರ ಲೀಗಲ್ ನೋಟಿಸ್ ಕೊಟ್ಟ ಬಳಿಕವಷ್ಟೇ ಮಾಹಿತಿ ನೀಡಿತು- ಸಾಕೇತ್ ಗೋಖಲೆ

- Advertisement -
- Advertisement -

ಪಶ್ಚಿಮ ಬಂಗಾಳದ ಎಲ್ಲೆಡೆ ಬಾಂಬ್ ಫ್ಯಾಕ್ಟರಿಗಳಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದು ಸಂಪೂರ್ಣ ಸುಳ್ಳು ಎಂದು ಆರ್‌ಟಿಐ ಕಾರ್ಯಕರ್ತ ಸಾಕೇತ್ ಗೋಖಲೆ ಬಯಲು ಮಾಡಿರುವ ಘಟನೆ ನಡೆದಿದೆ.

ಕಳೆದ ಅಕ್ಟೋಬರ್‌ನಲ್ಲಿ ಗೃಹ ಸಚಿವ ಅಮಿತ್ ಶಾ, ಸಿಎನ್‌ಎನ್ ನ್ಯೂಸ್ 18 ಗೆ ನೀಡಿದ ಸಂದರ್ಶನವೊಂದರಲ್ಲಿ “ಪಶ್ಚಿಮ ಬಂಗಾಳದ ಪ್ರತಿ ಜಿಲ್ಲೆಯಲ್ಲೂ ಬಾಂಬ್ ತಯಾರಿಸುವ ಕಾರ್ಖಾನೆಗಳಿವೆ” ಎಂದು ಹೇಳಿದ್ದರು.

(ಈ ವಿಡಿಯೋದ 1.10 ನೇ ನಿಮಿಷದಲ್ಲಿ ಅಮಿತ್‌ ಶಾ ಬಾಂಬ್ ಫ್ಯಾಕ್ಟರಿಗಳ ಬಗ್ಗೆ ಮಾತನಾಡುವುದನ್ನು ನೋಡಬಹುದು.)

ಈ ಕುರಿತು ಸಾಮಾಜಿಕ ಕಾರ್ಯಕರ್ತ ಸಾಕೇತ್ ಗೋಖಲೆ ಗೃಹ ಸಚಿವರ ಈ ಹೇಳಿಕೆಗಳ ಮೂಲ ಒದಗಿಸಬೇಕೆಂದು ಕೋರಿ 4 ಅಂಶಗಳ ಆರ್‌ಟಿಐ ಅರ್ಜಿ ಸಲ್ಲಿಸಿದ್ದರು. ಅದು ಸತ್ಯವೇ ಆಗಿದ್ದರೆ, ದೇಶಕ್ಕೆ ಆಘಾತಕಾರಿಯಾದ ವಿಷಯವಾಗಿತ್ತು ಎಂದು ಅವರು ಹೇಳಿದ್ದಾರೆ.

ಆರ್‌ಟಿಐನಲ್ಲಿ ಕೇಳಿದ್ದು ಇಷ್ಟು: (1) ಅಮಿತ್ ಶಾ ಉಲ್ಲೇಖಿಸಿರುವ ಬಂಗಾಳದ ಬಾಂಬ್ ತಯಾರಿಸುವ ಕಾರ್ಖಾನೆಗಳ ಪಟ್ಟಿ ನೀಡಿ. (2) ಗೃಹ ಸಚಿವಾಲಯ (ಎಂಎಚ್‌ಎ) ಈ ಬಗ್ಗೆ ಅಮಿತ್‌ ಶಾರವರಿಗೆ ವಿವರ ನೀಡಿದೆಯೇ? (3) ಅಮಿತ್‌ ಶಾ ಅವರ ಹೇಳಿಕೆಗಳು ಅಧಿಕೃತ ದಾಖಲೆಗಳನ್ನು ಆಧರಿಸಿವೆಯೇ?

ಈ ಎಲ್ಲದಕ್ಕೂ ಗೃಹ ಸಚಿವಾಲಯದ ಉತ್ತರ ‘ಇಲ್ಲ’ ಎಂಬುದೇ ಆಗಿತ್ತು. ಅಂತಹ ಯಾವುದೇ ಮಾಹಿತಿಯನ್ನು ತಾವು ಹೊಂದಿಲ್ಲ ಎಂದು ಗೃಹ ಇಲಾಖೆ ಅಧಿಕೃತವಾಗಿ ಒಪ್ಪಿಕೊಂಡಿತು.
ಇದಲ್ಲದೆ, ಕಾನೂನು ಮತ್ತು ಸುವ್ಯವಸ್ಥೆ ರಾಜ್ಯಗಳಿಗೆ ಸಂಬಂಧಿಸಿದ ವಿಷಯವಾಗಿದೆ ಎಂದು ಗೃಹ ಸಚಿವಾಲಯ ಹೇಳಿಕೊಂಡಿದೆ.

ತದನಂತರ ಗೋಖಲೆ ತನ್ನ 4 ನೇ ಪ್ರಶ್ನೆಯಲ್ಲಿ “ಈ ಆಪಾದಿತ ಬಾಂಬ್ ಕಾರ್ಖಾನೆಗಳ ಬಗೆಗಿನ ಮಾಹಿತಿಯನ್ನು ಪಶ್ಚಿಮ ಬಂಗಾಳ ಪೊಲೀಸರೊಂದಿಗೆ ಹಂಚಿಕೊಳ್ಳಲಾಗಿದೆಯೇ” ಎಂದು ಕೇಳಿದ್ದರು. ಅದಕ್ಕೆ ಉತ್ತರವಾಗಿ ಇಲ್ಲ ಎಂಬ ಉತ್ತರ ಬಂದಿತ್ತು.

ಈ ಕುರಿತು ಟ್ವಿಟರ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಸಾಕೇತ್ ಗೋಖಲೆ, “ಗೃಹ ಮಂತ್ರಿಗಳು ಅಥವಾ ಗೃಹ ಇಲಾಖೆ ಈ ಬಗ್ಗೆ ಬಂಗಾಳ ಪೊಲೀಸರಿಗೆ ಮಾಹಿತಿ ನೀಡಿಲ್ಲ ಏಕೆ? ಏಕೆಂದರೆ ಅಂತಹ ಯಾವುದೇ ಕಾರ್ಖಾನೆಗಳು ಅಲ್ಲಿ ಅಸ್ತಿತ್ವದಲ್ಲಿಲ್ಲ. ಚುನಾವಣಾ ಲಾಭಕ್ಕಾಗಿ ಪಶ್ಚಿಮ ಬಂಗಾಳ ರಾಜ್ಯವನ್ನು ಅನುಮಾನಿಸುವ ಮತ್ತು ಅವಮಾನಿಸುವ ಸಲುವಾಗಿ ಕೇಂದ್ರ ಗೃಹ ಸಚಿವರು ಆಂತರಿಕ ಭದ್ರತಾ ವಿಷಯಗಳ ಬಗ್ಗೆ ನಕಲಿ ಸುದ್ದಿಗಳನ್ನು ಬಹಿರಂಗವಾಗಿ ಹರಡುತ್ತಿದ್ದಾರೆ ಎಂಬುದು ಆಘಾತಕಾರಿ ಎಂದು ಕಿಡಿಕಾರಿದ್ದಾರೆ.

ಸತ್ಯಗಳು ಕಣ್ಮುಂದೆ ಇರುವಾಗ, ಗೃಹ ಇಲಾಖೆ ನೀಡಿದ ಮಾಹಿತಿಯೂ ಬೇರೆ ಇರುವಾಗ ಫೇಕ್ ನ್ಯೂಸ್ ಹರಡುವ ಗೃಹ ಸಚಿವರನ್ನು ಅದ್ಹೇಗೆ ನಂಬಲು ಸಾಧ್ಯ? ಎಂದು ಅವರು ಪ್ರಶ್ನಿಸಿದ್ದಾರೆ.

ಸಾಕೇತ್ ಗೋಖಲೆ

“ನಾನು ಈ ಮಾಹಿತಿಯನ್ನು ಪಡೆಯುವುದು ಸುಲಭದ ಕೆಲಸವಾಗಿರಲಿಲ್ಲ. ನನ್ನ ಪ್ರಶ್ನೆಗಳಿಗೆ ಗೃಹ ಇಲಾಖೆ ಅಕ್ಟೋಬರ್‌ನಿಂದ ಪ್ರತಿಕ್ರಿಯೆ ನೀಡುವುದನ್ನು ಸ್ಥಗಿತಗೊಳಿಸಿತು. 1 ನೇ ಮನವಿಗೆ ಸಹ ಪ್ರತಿಕ್ರಿಯಿಸಲಾಗಿಲ್ಲ. ಗೃಹ ಇಲಾಕೆಯ ಅಧಿಕಾರಿಯೊಬ್ಬರು ನನ್ನನ್ನು ಕರೆದು “ಇದಕ್ಕೆ ಪ್ರತ್ಯುತ್ತರ ನೀಡದಂತೆ ನಮಗೆ ತಿಳಿಸಲಾಗಿದೆ” ಎಂದು ಹೇಳಿದ್ದರು. ಆದರೆ ಕಳೆದ ವಾರ ನಾನು ಲೀಗಲ್ ನೋಟಿಸ್ ನೀಡಿದ ನಂತರ ಅಂತಿಮವಾಗಿ ಪ್ರತಿಕ್ರಿಯೆ ಸಿಕ್ಕಿತು” ಎಂದು ಗೋಖಲೆ ತಿಳಿಸಿದ್ದಾರೆ.


ಇದನ್ನೂ ಓದಿ: ಎಡಪಕ್ಷಗಳ ಬೃಹತ್ ರ‍್ಯಾಲಿಯ ಫೋಟೊಗಳನ್ನು ಮೋದಿ ರ‍್ಯಾಲಿಯೆಂದು ತಪ್ಪಾಗಿ ಹಂಚಿದ ಬಿಜೆಪಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...