Homeಮುಖಪುಟಬಂಗಾಳದ ಎಲ್ಲೆಡೆ ಬಾಂಬ್ ಫ್ಯಾಕ್ಟರಿ: ಅಮಿತ್ ಶಾ ಸುಳ್ಳು ಬಯಲು ಮಾಡಿದ ಆರ್‌ಟಿಐ ಕಾರ್ಯಕರ್ತ

ಬಂಗಾಳದ ಎಲ್ಲೆಡೆ ಬಾಂಬ್ ಫ್ಯಾಕ್ಟರಿ: ಅಮಿತ್ ಶಾ ಸುಳ್ಳು ಬಯಲು ಮಾಡಿದ ಆರ್‌ಟಿಐ ಕಾರ್ಯಕರ್ತ

ಗೃಹ ಇಲಾಖೆ ಸುಲಭಕ್ಕೆ ಮಾಹಿತಿ ನೀಡಲಿಲ್ಲ. ನಾಲ್ಕು ತಿಂಗಳ ನಂತರ ಲೀಗಲ್ ನೋಟಿಸ್ ಕೊಟ್ಟ ಬಳಿಕವಷ್ಟೇ ಮಾಹಿತಿ ನೀಡಿತು- ಸಾಕೇತ್ ಗೋಖಲೆ

- Advertisement -
- Advertisement -

ಪಶ್ಚಿಮ ಬಂಗಾಳದ ಎಲ್ಲೆಡೆ ಬಾಂಬ್ ಫ್ಯಾಕ್ಟರಿಗಳಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದು ಸಂಪೂರ್ಣ ಸುಳ್ಳು ಎಂದು ಆರ್‌ಟಿಐ ಕಾರ್ಯಕರ್ತ ಸಾಕೇತ್ ಗೋಖಲೆ ಬಯಲು ಮಾಡಿರುವ ಘಟನೆ ನಡೆದಿದೆ.

ಕಳೆದ ಅಕ್ಟೋಬರ್‌ನಲ್ಲಿ ಗೃಹ ಸಚಿವ ಅಮಿತ್ ಶಾ, ಸಿಎನ್‌ಎನ್ ನ್ಯೂಸ್ 18 ಗೆ ನೀಡಿದ ಸಂದರ್ಶನವೊಂದರಲ್ಲಿ “ಪಶ್ಚಿಮ ಬಂಗಾಳದ ಪ್ರತಿ ಜಿಲ್ಲೆಯಲ್ಲೂ ಬಾಂಬ್ ತಯಾರಿಸುವ ಕಾರ್ಖಾನೆಗಳಿವೆ” ಎಂದು ಹೇಳಿದ್ದರು.

(ಈ ವಿಡಿಯೋದ 1.10 ನೇ ನಿಮಿಷದಲ್ಲಿ ಅಮಿತ್‌ ಶಾ ಬಾಂಬ್ ಫ್ಯಾಕ್ಟರಿಗಳ ಬಗ್ಗೆ ಮಾತನಾಡುವುದನ್ನು ನೋಡಬಹುದು.)

ಈ ಕುರಿತು ಸಾಮಾಜಿಕ ಕಾರ್ಯಕರ್ತ ಸಾಕೇತ್ ಗೋಖಲೆ ಗೃಹ ಸಚಿವರ ಈ ಹೇಳಿಕೆಗಳ ಮೂಲ ಒದಗಿಸಬೇಕೆಂದು ಕೋರಿ 4 ಅಂಶಗಳ ಆರ್‌ಟಿಐ ಅರ್ಜಿ ಸಲ್ಲಿಸಿದ್ದರು. ಅದು ಸತ್ಯವೇ ಆಗಿದ್ದರೆ, ದೇಶಕ್ಕೆ ಆಘಾತಕಾರಿಯಾದ ವಿಷಯವಾಗಿತ್ತು ಎಂದು ಅವರು ಹೇಳಿದ್ದಾರೆ.

ಆರ್‌ಟಿಐನಲ್ಲಿ ಕೇಳಿದ್ದು ಇಷ್ಟು: (1) ಅಮಿತ್ ಶಾ ಉಲ್ಲೇಖಿಸಿರುವ ಬಂಗಾಳದ ಬಾಂಬ್ ತಯಾರಿಸುವ ಕಾರ್ಖಾನೆಗಳ ಪಟ್ಟಿ ನೀಡಿ. (2) ಗೃಹ ಸಚಿವಾಲಯ (ಎಂಎಚ್‌ಎ) ಈ ಬಗ್ಗೆ ಅಮಿತ್‌ ಶಾರವರಿಗೆ ವಿವರ ನೀಡಿದೆಯೇ? (3) ಅಮಿತ್‌ ಶಾ ಅವರ ಹೇಳಿಕೆಗಳು ಅಧಿಕೃತ ದಾಖಲೆಗಳನ್ನು ಆಧರಿಸಿವೆಯೇ?

ಈ ಎಲ್ಲದಕ್ಕೂ ಗೃಹ ಸಚಿವಾಲಯದ ಉತ್ತರ ‘ಇಲ್ಲ’ ಎಂಬುದೇ ಆಗಿತ್ತು. ಅಂತಹ ಯಾವುದೇ ಮಾಹಿತಿಯನ್ನು ತಾವು ಹೊಂದಿಲ್ಲ ಎಂದು ಗೃಹ ಇಲಾಖೆ ಅಧಿಕೃತವಾಗಿ ಒಪ್ಪಿಕೊಂಡಿತು.
ಇದಲ್ಲದೆ, ಕಾನೂನು ಮತ್ತು ಸುವ್ಯವಸ್ಥೆ ರಾಜ್ಯಗಳಿಗೆ ಸಂಬಂಧಿಸಿದ ವಿಷಯವಾಗಿದೆ ಎಂದು ಗೃಹ ಸಚಿವಾಲಯ ಹೇಳಿಕೊಂಡಿದೆ.

ತದನಂತರ ಗೋಖಲೆ ತನ್ನ 4 ನೇ ಪ್ರಶ್ನೆಯಲ್ಲಿ “ಈ ಆಪಾದಿತ ಬಾಂಬ್ ಕಾರ್ಖಾನೆಗಳ ಬಗೆಗಿನ ಮಾಹಿತಿಯನ್ನು ಪಶ್ಚಿಮ ಬಂಗಾಳ ಪೊಲೀಸರೊಂದಿಗೆ ಹಂಚಿಕೊಳ್ಳಲಾಗಿದೆಯೇ” ಎಂದು ಕೇಳಿದ್ದರು. ಅದಕ್ಕೆ ಉತ್ತರವಾಗಿ ಇಲ್ಲ ಎಂಬ ಉತ್ತರ ಬಂದಿತ್ತು.

ಈ ಕುರಿತು ಟ್ವಿಟರ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಸಾಕೇತ್ ಗೋಖಲೆ, “ಗೃಹ ಮಂತ್ರಿಗಳು ಅಥವಾ ಗೃಹ ಇಲಾಖೆ ಈ ಬಗ್ಗೆ ಬಂಗಾಳ ಪೊಲೀಸರಿಗೆ ಮಾಹಿತಿ ನೀಡಿಲ್ಲ ಏಕೆ? ಏಕೆಂದರೆ ಅಂತಹ ಯಾವುದೇ ಕಾರ್ಖಾನೆಗಳು ಅಲ್ಲಿ ಅಸ್ತಿತ್ವದಲ್ಲಿಲ್ಲ. ಚುನಾವಣಾ ಲಾಭಕ್ಕಾಗಿ ಪಶ್ಚಿಮ ಬಂಗಾಳ ರಾಜ್ಯವನ್ನು ಅನುಮಾನಿಸುವ ಮತ್ತು ಅವಮಾನಿಸುವ ಸಲುವಾಗಿ ಕೇಂದ್ರ ಗೃಹ ಸಚಿವರು ಆಂತರಿಕ ಭದ್ರತಾ ವಿಷಯಗಳ ಬಗ್ಗೆ ನಕಲಿ ಸುದ್ದಿಗಳನ್ನು ಬಹಿರಂಗವಾಗಿ ಹರಡುತ್ತಿದ್ದಾರೆ ಎಂಬುದು ಆಘಾತಕಾರಿ ಎಂದು ಕಿಡಿಕಾರಿದ್ದಾರೆ.

ಸತ್ಯಗಳು ಕಣ್ಮುಂದೆ ಇರುವಾಗ, ಗೃಹ ಇಲಾಖೆ ನೀಡಿದ ಮಾಹಿತಿಯೂ ಬೇರೆ ಇರುವಾಗ ಫೇಕ್ ನ್ಯೂಸ್ ಹರಡುವ ಗೃಹ ಸಚಿವರನ್ನು ಅದ್ಹೇಗೆ ನಂಬಲು ಸಾಧ್ಯ? ಎಂದು ಅವರು ಪ್ರಶ್ನಿಸಿದ್ದಾರೆ.

ಸಾಕೇತ್ ಗೋಖಲೆ

“ನಾನು ಈ ಮಾಹಿತಿಯನ್ನು ಪಡೆಯುವುದು ಸುಲಭದ ಕೆಲಸವಾಗಿರಲಿಲ್ಲ. ನನ್ನ ಪ್ರಶ್ನೆಗಳಿಗೆ ಗೃಹ ಇಲಾಖೆ ಅಕ್ಟೋಬರ್‌ನಿಂದ ಪ್ರತಿಕ್ರಿಯೆ ನೀಡುವುದನ್ನು ಸ್ಥಗಿತಗೊಳಿಸಿತು. 1 ನೇ ಮನವಿಗೆ ಸಹ ಪ್ರತಿಕ್ರಿಯಿಸಲಾಗಿಲ್ಲ. ಗೃಹ ಇಲಾಕೆಯ ಅಧಿಕಾರಿಯೊಬ್ಬರು ನನ್ನನ್ನು ಕರೆದು “ಇದಕ್ಕೆ ಪ್ರತ್ಯುತ್ತರ ನೀಡದಂತೆ ನಮಗೆ ತಿಳಿಸಲಾಗಿದೆ” ಎಂದು ಹೇಳಿದ್ದರು. ಆದರೆ ಕಳೆದ ವಾರ ನಾನು ಲೀಗಲ್ ನೋಟಿಸ್ ನೀಡಿದ ನಂತರ ಅಂತಿಮವಾಗಿ ಪ್ರತಿಕ್ರಿಯೆ ಸಿಕ್ಕಿತು” ಎಂದು ಗೋಖಲೆ ತಿಳಿಸಿದ್ದಾರೆ.


ಇದನ್ನೂ ಓದಿ: ಎಡಪಕ್ಷಗಳ ಬೃಹತ್ ರ‍್ಯಾಲಿಯ ಫೋಟೊಗಳನ್ನು ಮೋದಿ ರ‍್ಯಾಲಿಯೆಂದು ತಪ್ಪಾಗಿ ಹಂಚಿದ ಬಿಜೆಪಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...