Homeಮುಖಪುಟಬಂಗಾಳದ ಎಲ್ಲೆಡೆ ಬಾಂಬ್ ಫ್ಯಾಕ್ಟರಿ: ಅಮಿತ್ ಶಾ ಸುಳ್ಳು ಬಯಲು ಮಾಡಿದ ಆರ್‌ಟಿಐ ಕಾರ್ಯಕರ್ತ

ಬಂಗಾಳದ ಎಲ್ಲೆಡೆ ಬಾಂಬ್ ಫ್ಯಾಕ್ಟರಿ: ಅಮಿತ್ ಶಾ ಸುಳ್ಳು ಬಯಲು ಮಾಡಿದ ಆರ್‌ಟಿಐ ಕಾರ್ಯಕರ್ತ

ಗೃಹ ಇಲಾಖೆ ಸುಲಭಕ್ಕೆ ಮಾಹಿತಿ ನೀಡಲಿಲ್ಲ. ನಾಲ್ಕು ತಿಂಗಳ ನಂತರ ಲೀಗಲ್ ನೋಟಿಸ್ ಕೊಟ್ಟ ಬಳಿಕವಷ್ಟೇ ಮಾಹಿತಿ ನೀಡಿತು- ಸಾಕೇತ್ ಗೋಖಲೆ

- Advertisement -
- Advertisement -

ಪಶ್ಚಿಮ ಬಂಗಾಳದ ಎಲ್ಲೆಡೆ ಬಾಂಬ್ ಫ್ಯಾಕ್ಟರಿಗಳಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದು ಸಂಪೂರ್ಣ ಸುಳ್ಳು ಎಂದು ಆರ್‌ಟಿಐ ಕಾರ್ಯಕರ್ತ ಸಾಕೇತ್ ಗೋಖಲೆ ಬಯಲು ಮಾಡಿರುವ ಘಟನೆ ನಡೆದಿದೆ.

ಕಳೆದ ಅಕ್ಟೋಬರ್‌ನಲ್ಲಿ ಗೃಹ ಸಚಿವ ಅಮಿತ್ ಶಾ, ಸಿಎನ್‌ಎನ್ ನ್ಯೂಸ್ 18 ಗೆ ನೀಡಿದ ಸಂದರ್ಶನವೊಂದರಲ್ಲಿ “ಪಶ್ಚಿಮ ಬಂಗಾಳದ ಪ್ರತಿ ಜಿಲ್ಲೆಯಲ್ಲೂ ಬಾಂಬ್ ತಯಾರಿಸುವ ಕಾರ್ಖಾನೆಗಳಿವೆ” ಎಂದು ಹೇಳಿದ್ದರು.

(ಈ ವಿಡಿಯೋದ 1.10 ನೇ ನಿಮಿಷದಲ್ಲಿ ಅಮಿತ್‌ ಶಾ ಬಾಂಬ್ ಫ್ಯಾಕ್ಟರಿಗಳ ಬಗ್ಗೆ ಮಾತನಾಡುವುದನ್ನು ನೋಡಬಹುದು.)

ಈ ಕುರಿತು ಸಾಮಾಜಿಕ ಕಾರ್ಯಕರ್ತ ಸಾಕೇತ್ ಗೋಖಲೆ ಗೃಹ ಸಚಿವರ ಈ ಹೇಳಿಕೆಗಳ ಮೂಲ ಒದಗಿಸಬೇಕೆಂದು ಕೋರಿ 4 ಅಂಶಗಳ ಆರ್‌ಟಿಐ ಅರ್ಜಿ ಸಲ್ಲಿಸಿದ್ದರು. ಅದು ಸತ್ಯವೇ ಆಗಿದ್ದರೆ, ದೇಶಕ್ಕೆ ಆಘಾತಕಾರಿಯಾದ ವಿಷಯವಾಗಿತ್ತು ಎಂದು ಅವರು ಹೇಳಿದ್ದಾರೆ.

ಆರ್‌ಟಿಐನಲ್ಲಿ ಕೇಳಿದ್ದು ಇಷ್ಟು: (1) ಅಮಿತ್ ಶಾ ಉಲ್ಲೇಖಿಸಿರುವ ಬಂಗಾಳದ ಬಾಂಬ್ ತಯಾರಿಸುವ ಕಾರ್ಖಾನೆಗಳ ಪಟ್ಟಿ ನೀಡಿ. (2) ಗೃಹ ಸಚಿವಾಲಯ (ಎಂಎಚ್‌ಎ) ಈ ಬಗ್ಗೆ ಅಮಿತ್‌ ಶಾರವರಿಗೆ ವಿವರ ನೀಡಿದೆಯೇ? (3) ಅಮಿತ್‌ ಶಾ ಅವರ ಹೇಳಿಕೆಗಳು ಅಧಿಕೃತ ದಾಖಲೆಗಳನ್ನು ಆಧರಿಸಿವೆಯೇ?

ಈ ಎಲ್ಲದಕ್ಕೂ ಗೃಹ ಸಚಿವಾಲಯದ ಉತ್ತರ ‘ಇಲ್ಲ’ ಎಂಬುದೇ ಆಗಿತ್ತು. ಅಂತಹ ಯಾವುದೇ ಮಾಹಿತಿಯನ್ನು ತಾವು ಹೊಂದಿಲ್ಲ ಎಂದು ಗೃಹ ಇಲಾಖೆ ಅಧಿಕೃತವಾಗಿ ಒಪ್ಪಿಕೊಂಡಿತು.
ಇದಲ್ಲದೆ, ಕಾನೂನು ಮತ್ತು ಸುವ್ಯವಸ್ಥೆ ರಾಜ್ಯಗಳಿಗೆ ಸಂಬಂಧಿಸಿದ ವಿಷಯವಾಗಿದೆ ಎಂದು ಗೃಹ ಸಚಿವಾಲಯ ಹೇಳಿಕೊಂಡಿದೆ.

ತದನಂತರ ಗೋಖಲೆ ತನ್ನ 4 ನೇ ಪ್ರಶ್ನೆಯಲ್ಲಿ “ಈ ಆಪಾದಿತ ಬಾಂಬ್ ಕಾರ್ಖಾನೆಗಳ ಬಗೆಗಿನ ಮಾಹಿತಿಯನ್ನು ಪಶ್ಚಿಮ ಬಂಗಾಳ ಪೊಲೀಸರೊಂದಿಗೆ ಹಂಚಿಕೊಳ್ಳಲಾಗಿದೆಯೇ” ಎಂದು ಕೇಳಿದ್ದರು. ಅದಕ್ಕೆ ಉತ್ತರವಾಗಿ ಇಲ್ಲ ಎಂಬ ಉತ್ತರ ಬಂದಿತ್ತು.

ಈ ಕುರಿತು ಟ್ವಿಟರ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಸಾಕೇತ್ ಗೋಖಲೆ, “ಗೃಹ ಮಂತ್ರಿಗಳು ಅಥವಾ ಗೃಹ ಇಲಾಖೆ ಈ ಬಗ್ಗೆ ಬಂಗಾಳ ಪೊಲೀಸರಿಗೆ ಮಾಹಿತಿ ನೀಡಿಲ್ಲ ಏಕೆ? ಏಕೆಂದರೆ ಅಂತಹ ಯಾವುದೇ ಕಾರ್ಖಾನೆಗಳು ಅಲ್ಲಿ ಅಸ್ತಿತ್ವದಲ್ಲಿಲ್ಲ. ಚುನಾವಣಾ ಲಾಭಕ್ಕಾಗಿ ಪಶ್ಚಿಮ ಬಂಗಾಳ ರಾಜ್ಯವನ್ನು ಅನುಮಾನಿಸುವ ಮತ್ತು ಅವಮಾನಿಸುವ ಸಲುವಾಗಿ ಕೇಂದ್ರ ಗೃಹ ಸಚಿವರು ಆಂತರಿಕ ಭದ್ರತಾ ವಿಷಯಗಳ ಬಗ್ಗೆ ನಕಲಿ ಸುದ್ದಿಗಳನ್ನು ಬಹಿರಂಗವಾಗಿ ಹರಡುತ್ತಿದ್ದಾರೆ ಎಂಬುದು ಆಘಾತಕಾರಿ ಎಂದು ಕಿಡಿಕಾರಿದ್ದಾರೆ.

ಸತ್ಯಗಳು ಕಣ್ಮುಂದೆ ಇರುವಾಗ, ಗೃಹ ಇಲಾಖೆ ನೀಡಿದ ಮಾಹಿತಿಯೂ ಬೇರೆ ಇರುವಾಗ ಫೇಕ್ ನ್ಯೂಸ್ ಹರಡುವ ಗೃಹ ಸಚಿವರನ್ನು ಅದ್ಹೇಗೆ ನಂಬಲು ಸಾಧ್ಯ? ಎಂದು ಅವರು ಪ್ರಶ್ನಿಸಿದ್ದಾರೆ.

ಸಾಕೇತ್ ಗೋಖಲೆ

“ನಾನು ಈ ಮಾಹಿತಿಯನ್ನು ಪಡೆಯುವುದು ಸುಲಭದ ಕೆಲಸವಾಗಿರಲಿಲ್ಲ. ನನ್ನ ಪ್ರಶ್ನೆಗಳಿಗೆ ಗೃಹ ಇಲಾಖೆ ಅಕ್ಟೋಬರ್‌ನಿಂದ ಪ್ರತಿಕ್ರಿಯೆ ನೀಡುವುದನ್ನು ಸ್ಥಗಿತಗೊಳಿಸಿತು. 1 ನೇ ಮನವಿಗೆ ಸಹ ಪ್ರತಿಕ್ರಿಯಿಸಲಾಗಿಲ್ಲ. ಗೃಹ ಇಲಾಕೆಯ ಅಧಿಕಾರಿಯೊಬ್ಬರು ನನ್ನನ್ನು ಕರೆದು “ಇದಕ್ಕೆ ಪ್ರತ್ಯುತ್ತರ ನೀಡದಂತೆ ನಮಗೆ ತಿಳಿಸಲಾಗಿದೆ” ಎಂದು ಹೇಳಿದ್ದರು. ಆದರೆ ಕಳೆದ ವಾರ ನಾನು ಲೀಗಲ್ ನೋಟಿಸ್ ನೀಡಿದ ನಂತರ ಅಂತಿಮವಾಗಿ ಪ್ರತಿಕ್ರಿಯೆ ಸಿಕ್ಕಿತು” ಎಂದು ಗೋಖಲೆ ತಿಳಿಸಿದ್ದಾರೆ.


ಇದನ್ನೂ ಓದಿ: ಎಡಪಕ್ಷಗಳ ಬೃಹತ್ ರ‍್ಯಾಲಿಯ ಫೋಟೊಗಳನ್ನು ಮೋದಿ ರ‍್ಯಾಲಿಯೆಂದು ತಪ್ಪಾಗಿ ಹಂಚಿದ ಬಿಜೆಪಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...