Homeಮುಖಪುಟವಿಮಾನಗಳಿಗೆ ಬಾಂಬ್ ಬೆದರಿಕೆ | ಲಂಡನ್ ಮತ್ತು ಜರ್ಮನಿಯಲ್ಲಿ ದುಷ್ಕರ್ಮಿಗಳು?

ವಿಮಾನಗಳಿಗೆ ಬಾಂಬ್ ಬೆದರಿಕೆ | ಲಂಡನ್ ಮತ್ತು ಜರ್ಮನಿಯಲ್ಲಿ ದುಷ್ಕರ್ಮಿಗಳು?

- Advertisement -
- Advertisement -

ವಿಮಾನಗಳಿಗೆ ಸರಣಿ ಬಾಂಬ್ ಬೆದರಿಕೆಗಳು ಬಂದ ಹಿನ್ನಲೆ ತನಿಖೆ ನಡೆಸಿದ್ದ ಕೇಂದ್ರ ಗುಪ್ತಚರ ಸಂಸ್ಥೆಗಳು, ಬೆದರಿಕೆಗಳು ಲಂಡನ್ ಮತ್ತು ಜರ್ಮನಿಯಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿದ ಐಪಿ ವಿಳಾಸಗಳಿಂದ ಬಂದಿದೆ ಎಂದು ಪತ್ತೆ ಹಚ್ಚಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ವಿಮಾನಗಳಿಗೆ ಬಾಂಬ್ ಬೆದರಿಕೆ

ಈ ವಾರ 20ಕ್ಕೂ ಹೆಚ್ಚು ಆಂತರಿಕ ಮತ್ತು ಅಂತರಾಷ್ಟ್ರೀಯ ವಿಮಾನಗಳಿಗೆ ಬಾಂಬ್ ಬೆದರಿಕೆ ಬಂದಿವೆ. ಸೋಮವಾರ ಮೂರು ಅಂತರಾಷ್ಟ್ರೀಯ ವಿಮಾನಗಳಿಗೆ ಬಾಂಬ್ ಬೆದರಿಕೆಗಳು ಬಂದಿದ್ದು, ಮಂಗಳವಾರ ಮತ್ತೊಂದು 10 ವಿಮಾನಗಳಿಗೆ ಇದೇ ರೀತಿಯ ಬೆದರಿಕೆಗಳು ಬಂದಿದ್ದವು. ಅದಾಗಿ ಒಂದು ದಿನದ ನಂತರ ಕನಿಷ್ಠ ಆರು ಅಂತಹದ್ದೆ ಬೆದರಿಕೆಗಳು ಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ಎಲ್ಲಾ ಬೆದರಿಕೆಗಳು ಸಾಮಾಜಿಕ ಮಾಧ್ಯಮಗಳ ಮೂಲಕ ಬಂದಿದ್ದು, ಭದ್ರತಾ ತಪಾಸಣೆಯ ನಂತರ, ಅವುಗಳನ್ನು ಹುಸಿ ಬಾಂಬ್ ಬೆದರಿಕೆ ಎಂದು ಘೋಷಿಸಲಾಗಿದೆ. ಈ ಬಗ್ಗೆ ಕೇಂದ್ರೀಯ ಗುಪ್ತಚರ ಏಜೆನ್ಸಿಗಳು ತನಿಖೆ ನಡೆಸಲು ಪ್ರಾರಂಭಿಸಿದಾಗ, ಮೊದಲಿಗೆ ಎಲ್ಲಾ ಪೋಸ್ಟ್‌ಗಳನ್ನು ರಚಿಸಲಾದ ಐಪಿ ವಿಳಾಸಗಳನ್ನು ಹಂಚಿಕೊಳ್ಳಲು X ಅನ್ನು ಕೇಳಿದ್ದಾರೆ. ಜೊತೆಗೆ ಎಲ್ಲಾ ಖಾತೆಗಳನ್ನು ನಿಷ್ಕ್ರಿಯಗೊಳಿಸಲು ಕೇಳಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ವಿಮಾನಗಳಿಗೆ ಬಾಂಬ್ ಬೆದರಿಕೆ

“ನಾವು ಪ್ರಾಥಮಿಕ ವರದಿಗಳನ್ನು ಪಡೆದಿದ್ದೇವೆ ಮತ್ತು ಮೂರು ಪ್ರತ್ಯೇಕ ಹ್ಯಾಂಡಲ್‌ಗಳಿಂದ ಈ ಪೋಸ್ಟ್‌ಗಳನ್ನು ಮಾಡಲಾಗಿದೆ ಎಂದು ಅವರು ನಮಗೆ ತಿಳಿಸಿದ್ದಾರೆ. ಈ ಮೂರು ಹ್ಯಾಂಡಲ್‌ಗಳಲ್ಲಿ, ಅವರು ಎರಡು IP ವಿಳಾಸಗಳನ್ನು ಪತ್ತೆಹಚ್ಚಿದ್ದಾರೆ; ಇದು ಲಂಡನ್ ಮತ್ತು ಜರ್ಮನಿಯ ಎರಡು ಸಾಮಾನ್ಯ ಐಪಿಗಳು. ವರ್ಚುವಲ್ ಖಾಸಗಿ ನೆಟ್‌ವರ್ಕ್ (VPN) ಅನ್ನು ಬಳಸಿ ಬಳಕೆದಾರರು ಈ ಟ್ವೀಟ್ ಮಾಡಿದ್ದಾರೆ. ಇನ್ನೊಂದು ಹ್ಯಾಂಡಲ್‌ನ ವಿವರಗಳಿಗಾಗಿ ಇನ್ನೂ ಕಾಯುತ್ತಿದ್ದೇವೆ” ಎಂದು ಮೂಲವೊಂದನ್ನು ಉಲ್ಲೇಖಿಸಿ ಹೇಳಿದ್ದಾರೆ. ಸಾಮಾನ್ಯವಾಗಿ ವಿಪಿಎನ್‌ ಬಳಕೆದಾರರ ಗುರುತು ಮರೆಮಾಚುತ್ತದೆ.

“ಈ ತಿಂಗಳು ಇಲ್ಲಿಯವರೆಗೆ, ವರದಿಯಾದ ಬಾಂಬ್ ಬೆದರಿಕೆಗಳನ್ನು ಒಳಗೊಂಡ ಏಳು ಘಟನೆಗಳಿಗೆ ಐಜಿಐ ವಿಮಾನ ನಿಲ್ದಾಣ ಪೊಲೀಸರು ಪ್ರತಿಕ್ರಿಯಿಸಿದ್ದಾರೆ. ಸಂಪೂರ್ಣ ಪರಿಶೀಲನೆ ಮತ್ತು ತಪಾಸಣೆಯ ನಂತರ, ಎಲ್ಲಾ ಬೆದರಿಕೆಗಳು ಹುಸಿ ಎಂದು ದೃಢಪಡಿಸಲಾಯಿತು. ಬೆದರಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮವನ್ನು ಪ್ರಾರಂಭಿಸಲಾಗಿದೆ” ಎಂದು ಉಪ ಪೊಲೀಸ್ ಆಯುಕ್ತ (ಐಜಿಐ ವಿಮಾನ ನಿಲ್ದಾಣ) ಉಷಾ ರಂಗನಾನಿ ಹೇಳಿದ್ದಾರೆ.

ಈ ಮಧ್ಯೆ ನಾಗರಿಕ ವಿಮಾನಯಾನ ಸಚಿವಾಲಯದ (MoCA) ಹಿರಿಯ ಅಧಿಕಾರಿಗಳು, ಇಂತಹ ಬೆದರಿಕೆಗಳ ಹಿಂದೆ ಇರುವವರಿಗೆ, ಭಾರತೀಯ ವಿಮಾನಯಾನ ಸಂಸ್ಥೆಗಳ ವಿಮಾನಗಳಲ್ಲಿ ಹಾರಾಟ ನಿಷೇಧ ಪಟ್ಟಿಗೆ ಸೇರಿಸುವುದು ಸೇರಿದಂತೆ ಕಠಿಣ ಶಿಕ್ಷೆಯನ್ನು ಜಾರಿ ಮಾಡಲು ನಿಯಮಗಳ ನ್ನು ಮತ್ತಷ್ಟು ಬಿಗಿಗೊಳಿಸುವ ಬಗ್ಗೆ ಚಿಂತಿಸುತ್ತಿದ್ದಾರೆ.

ಇದನ್ನೂ ಓದಿ: ಅಸ್ಸಾಂ | ಹಳಿತಪ್ಪಿದ ಲೋಕಮಾನ್ಯ ತಿಲಕ್ ಎಕ್ಸ್‌ಪ್ರೆಸ್‌ನ 8 ಬೋಗಿಗಳು!

ಅಸ್ಸಾಂ | ಹಳಿತಪ್ಪಿದ ಲೋಕಮಾನ್ಯ ತಿಲಕ್ ಎಕ್ಸ್‌ಪ್ರೆಸ್‌ನ 8 ಬೋಗಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...