Homeಮುಖಪುಟವಿಮಾನಗಳಿಗೆ ಬಾಂಬ್ ಬೆದರಿಕೆ | ಲಂಡನ್ ಮತ್ತು ಜರ್ಮನಿಯಲ್ಲಿ ದುಷ್ಕರ್ಮಿಗಳು?

ವಿಮಾನಗಳಿಗೆ ಬಾಂಬ್ ಬೆದರಿಕೆ | ಲಂಡನ್ ಮತ್ತು ಜರ್ಮನಿಯಲ್ಲಿ ದುಷ್ಕರ್ಮಿಗಳು?

- Advertisement -
- Advertisement -

ವಿಮಾನಗಳಿಗೆ ಸರಣಿ ಬಾಂಬ್ ಬೆದರಿಕೆಗಳು ಬಂದ ಹಿನ್ನಲೆ ತನಿಖೆ ನಡೆಸಿದ್ದ ಕೇಂದ್ರ ಗುಪ್ತಚರ ಸಂಸ್ಥೆಗಳು, ಬೆದರಿಕೆಗಳು ಲಂಡನ್ ಮತ್ತು ಜರ್ಮನಿಯಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿದ ಐಪಿ ವಿಳಾಸಗಳಿಂದ ಬಂದಿದೆ ಎಂದು ಪತ್ತೆ ಹಚ್ಚಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ವಿಮಾನಗಳಿಗೆ ಬಾಂಬ್ ಬೆದರಿಕೆ

ಈ ವಾರ 20ಕ್ಕೂ ಹೆಚ್ಚು ಆಂತರಿಕ ಮತ್ತು ಅಂತರಾಷ್ಟ್ರೀಯ ವಿಮಾನಗಳಿಗೆ ಬಾಂಬ್ ಬೆದರಿಕೆ ಬಂದಿವೆ. ಸೋಮವಾರ ಮೂರು ಅಂತರಾಷ್ಟ್ರೀಯ ವಿಮಾನಗಳಿಗೆ ಬಾಂಬ್ ಬೆದರಿಕೆಗಳು ಬಂದಿದ್ದು, ಮಂಗಳವಾರ ಮತ್ತೊಂದು 10 ವಿಮಾನಗಳಿಗೆ ಇದೇ ರೀತಿಯ ಬೆದರಿಕೆಗಳು ಬಂದಿದ್ದವು. ಅದಾಗಿ ಒಂದು ದಿನದ ನಂತರ ಕನಿಷ್ಠ ಆರು ಅಂತಹದ್ದೆ ಬೆದರಿಕೆಗಳು ಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ಎಲ್ಲಾ ಬೆದರಿಕೆಗಳು ಸಾಮಾಜಿಕ ಮಾಧ್ಯಮಗಳ ಮೂಲಕ ಬಂದಿದ್ದು, ಭದ್ರತಾ ತಪಾಸಣೆಯ ನಂತರ, ಅವುಗಳನ್ನು ಹುಸಿ ಬಾಂಬ್ ಬೆದರಿಕೆ ಎಂದು ಘೋಷಿಸಲಾಗಿದೆ. ಈ ಬಗ್ಗೆ ಕೇಂದ್ರೀಯ ಗುಪ್ತಚರ ಏಜೆನ್ಸಿಗಳು ತನಿಖೆ ನಡೆಸಲು ಪ್ರಾರಂಭಿಸಿದಾಗ, ಮೊದಲಿಗೆ ಎಲ್ಲಾ ಪೋಸ್ಟ್‌ಗಳನ್ನು ರಚಿಸಲಾದ ಐಪಿ ವಿಳಾಸಗಳನ್ನು ಹಂಚಿಕೊಳ್ಳಲು X ಅನ್ನು ಕೇಳಿದ್ದಾರೆ. ಜೊತೆಗೆ ಎಲ್ಲಾ ಖಾತೆಗಳನ್ನು ನಿಷ್ಕ್ರಿಯಗೊಳಿಸಲು ಕೇಳಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ವಿಮಾನಗಳಿಗೆ ಬಾಂಬ್ ಬೆದರಿಕೆ

“ನಾವು ಪ್ರಾಥಮಿಕ ವರದಿಗಳನ್ನು ಪಡೆದಿದ್ದೇವೆ ಮತ್ತು ಮೂರು ಪ್ರತ್ಯೇಕ ಹ್ಯಾಂಡಲ್‌ಗಳಿಂದ ಈ ಪೋಸ್ಟ್‌ಗಳನ್ನು ಮಾಡಲಾಗಿದೆ ಎಂದು ಅವರು ನಮಗೆ ತಿಳಿಸಿದ್ದಾರೆ. ಈ ಮೂರು ಹ್ಯಾಂಡಲ್‌ಗಳಲ್ಲಿ, ಅವರು ಎರಡು IP ವಿಳಾಸಗಳನ್ನು ಪತ್ತೆಹಚ್ಚಿದ್ದಾರೆ; ಇದು ಲಂಡನ್ ಮತ್ತು ಜರ್ಮನಿಯ ಎರಡು ಸಾಮಾನ್ಯ ಐಪಿಗಳು. ವರ್ಚುವಲ್ ಖಾಸಗಿ ನೆಟ್‌ವರ್ಕ್ (VPN) ಅನ್ನು ಬಳಸಿ ಬಳಕೆದಾರರು ಈ ಟ್ವೀಟ್ ಮಾಡಿದ್ದಾರೆ. ಇನ್ನೊಂದು ಹ್ಯಾಂಡಲ್‌ನ ವಿವರಗಳಿಗಾಗಿ ಇನ್ನೂ ಕಾಯುತ್ತಿದ್ದೇವೆ” ಎಂದು ಮೂಲವೊಂದನ್ನು ಉಲ್ಲೇಖಿಸಿ ಹೇಳಿದ್ದಾರೆ. ಸಾಮಾನ್ಯವಾಗಿ ವಿಪಿಎನ್‌ ಬಳಕೆದಾರರ ಗುರುತು ಮರೆಮಾಚುತ್ತದೆ.

“ಈ ತಿಂಗಳು ಇಲ್ಲಿಯವರೆಗೆ, ವರದಿಯಾದ ಬಾಂಬ್ ಬೆದರಿಕೆಗಳನ್ನು ಒಳಗೊಂಡ ಏಳು ಘಟನೆಗಳಿಗೆ ಐಜಿಐ ವಿಮಾನ ನಿಲ್ದಾಣ ಪೊಲೀಸರು ಪ್ರತಿಕ್ರಿಯಿಸಿದ್ದಾರೆ. ಸಂಪೂರ್ಣ ಪರಿಶೀಲನೆ ಮತ್ತು ತಪಾಸಣೆಯ ನಂತರ, ಎಲ್ಲಾ ಬೆದರಿಕೆಗಳು ಹುಸಿ ಎಂದು ದೃಢಪಡಿಸಲಾಯಿತು. ಬೆದರಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮವನ್ನು ಪ್ರಾರಂಭಿಸಲಾಗಿದೆ” ಎಂದು ಉಪ ಪೊಲೀಸ್ ಆಯುಕ್ತ (ಐಜಿಐ ವಿಮಾನ ನಿಲ್ದಾಣ) ಉಷಾ ರಂಗನಾನಿ ಹೇಳಿದ್ದಾರೆ.

ಈ ಮಧ್ಯೆ ನಾಗರಿಕ ವಿಮಾನಯಾನ ಸಚಿವಾಲಯದ (MoCA) ಹಿರಿಯ ಅಧಿಕಾರಿಗಳು, ಇಂತಹ ಬೆದರಿಕೆಗಳ ಹಿಂದೆ ಇರುವವರಿಗೆ, ಭಾರತೀಯ ವಿಮಾನಯಾನ ಸಂಸ್ಥೆಗಳ ವಿಮಾನಗಳಲ್ಲಿ ಹಾರಾಟ ನಿಷೇಧ ಪಟ್ಟಿಗೆ ಸೇರಿಸುವುದು ಸೇರಿದಂತೆ ಕಠಿಣ ಶಿಕ್ಷೆಯನ್ನು ಜಾರಿ ಮಾಡಲು ನಿಯಮಗಳ ನ್ನು ಮತ್ತಷ್ಟು ಬಿಗಿಗೊಳಿಸುವ ಬಗ್ಗೆ ಚಿಂತಿಸುತ್ತಿದ್ದಾರೆ.

ಇದನ್ನೂ ಓದಿ: ಅಸ್ಸಾಂ | ಹಳಿತಪ್ಪಿದ ಲೋಕಮಾನ್ಯ ತಿಲಕ್ ಎಕ್ಸ್‌ಪ್ರೆಸ್‌ನ 8 ಬೋಗಿಗಳು!

ಅಸ್ಸಾಂ | ಹಳಿತಪ್ಪಿದ ಲೋಕಮಾನ್ಯ ತಿಲಕ್ ಎಕ್ಸ್‌ಪ್ರೆಸ್‌ನ 8 ಬೋಗಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...