ಬೆಂಗಳೂರಿನ ವಿವಿಧ ಪ್ರದೇಶಗಳ 15ಕ್ಕೂ ಹೆಚ್ಚು ಶಾಲೆಗಳಿಗೆ ಕಿಡಿಗೇಡಿಗಳು ಬಾಂಬ್ ಬೆದರಿಕೆ ಹಾಕಿದ್ದಾರೆ ಎಂಬ ಮಾಹಿತಿ ದೊರೆತಿದೆ.
ಬಸವೇಶ್ವರ ನಗರ, ಸದಾಶಿವನಗರ ಮತ್ತು ಯಲಹಂಕದ ಶಾಲೆಗಳಿಗೆ ಈ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ವರದಿಗಳ ಪ್ರಕಾರ, ಬಸವೇಶ್ವರ ನಗರದ ನ್ಯಾಫಲ್, ಚಿತ್ರಕೂಟ, ಕೌಶಲ್ಯ, ವಿದ್ಯಾಶಿಲ್ಪಿ ಶಾಲೆ, ಚಾಮರಾಜಪೇಟೆ ಭವನ್ ಪ್ರೆಸ್ ಸ್ಕೂಲ್, ಇನ್ವೆಂಚರ್ ಶಾಲೆ, ಸದಾಶಿವನಗರದ ನೀವ್ ಶಾಲೆ, ಅನೇಕಲ್ ಗ್ರೀನ್ ಹುಡ್ ಶಾಲೆ, ಬನ್ನೇರುಘಟ್ಟದ ಗ್ಲೋಬಲ್ ಇಂಟರ್ ನ್ಯಾಷನಲ್ ಶಾಲೆ ಮತ್ತು ಯಲಹಂಕದ ಒಂದು ಶಾಲೆಗೆ ಬೆದರಿಕೆ ಸಂದೇಶ ಬಂದಿದೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಕ್ಕಳನ್ನು ಶಾಲೆಯಿಂದ ಮನೆಗೆ ಕಳುಹಿಸಿದ್ದಾರೆ. ಆತಂಕಗೊಂಡ ಪೋಷಕರು ಶಾಲೆಗೆ ದೌಡಾಯಿಸಿ ತಮ್ಮ ಮಕ್ಕಳನ್ನು ಕರೆದೊಯ್ದಿದ್ದಾರೆ.
ಹುಸಿ ಬಾಂಬ್ ಬೆದರಿಕೆ : ಪೊಲೀಸ್ ಆಯುಕ್ತ
“ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಹಾಕಲಾಗಿದೆ. ನಾವು ಬಾಂಬ್ ನಿಷ್ಕೃಯ ದಳವನ್ನು ಕಳುಹಿಸಿ ಪರಿಶೀಲನೆ ನಡೆಸಿದ್ದೇವೆ. ಆತಂಕಪಡುವ ಯಾವುದೇ ವಸ್ತುಗಳು ಪತ್ತೆಯಾಗಿಲ್ಲ” ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಪಿ. ದಯಾನಂದ ತಿಳಿಸಿದ್ದಾರೆ.
ಮಕ್ಕಳ ಸುರಕ್ಷತೆಯ ಬಗ್ಗೆಆದ್ಯತೆ : ಮಧು ಬಂಗಾರಪ್ಪ
“ಬೆಂಗಳೂರಿನ 15ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದೆ. ನಾನು ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದ್ದೇನೆ. ಮಕ್ಕಳ ಸುರಕ್ಷತೆಯ ಬಗ್ಗೆ ಆದ್ಯತೆ ನೀಡಲಾಗಿದೆ” ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಇದನ್ನೂ ಓದಿ : ಚಿಕ್ಕಮಗಳೂರು: ಯುವ ವಕೀಲನ ಮೇಲೆ ಹಲ್ಲೆ; ಪಿಎಸ್ಐ ಸೇರಿ 6 ಪೊಲೀಸರ ಅಮಾನತು