Homeಮುಖಪುಟಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಸೇರಿದಂತೆ ಹಲವು ತಮಿಳು ನಟರಿಗೆ ಬಾಂಬ್ ಬೆದರಿಕೆ

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಸೇರಿದಂತೆ ಹಲವು ತಮಿಳು ನಟರಿಗೆ ಬಾಂಬ್ ಬೆದರಿಕೆ

- Advertisement -
- Advertisement -

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮತ್ತು ನಟರಾದ ಅಜಿತ್ ಕುಮಾರ್, ಅರವಿಂದ್ ಸ್ವಾಮಿ ಮತ್ತು ಖುಷ್ಬು ಅವರ ನಿವಾಸಕ್ಕೆ ಬಾಂಬ್ ಇಡಲಾಗಿದೆ ಎಂದು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಪೊಲೀಸ್ ಮಹಾನಿರ್ದೇಶಕರ (ಡಿಜಿಪಿ) ಕಚೇರಿಗೆ ಬೆದರಿಕೆ ಇಮೇಲ್ ಕಳುಹಿಸಲಾಗಿದ್ದು, ತಕ್ಷಣ ಕಾರ್ಯಪ್ರವರತ್ತರಾದ ಪೊಲೀಸರು ನಾಲ್ಕೂ ಸ್ಥಳಗಳಲ್ಲಿ ಭದ್ರತಾ ತಪಾಸಣೆ ನಡೆಸಿದ್ದಾರೆ.

ಕಳೆದ ವಾರ ಚೆನ್ನೈನ ಇಂಜಂಬಕ್ಕಂನಲ್ಲಿರುವ ಅಜಿತ್ ಕುಮಾರ್ ಅವರ ನಿವಾಸಕ್ಕೂ ಅಪರಿಚಿತ ವ್ಯಕ್ತಿಯಿಂದ ಬಾಂಬ್ ಬೆದರಿಕೆ ಬಂದಿತ್ತು ಎಂಬುದನ್ನು ಗಮನಿಸಬೇಕು.

ಬೆದರಿಕೆ ಮೇಲ್ ಬಂದ ಕೂಡಲೇ, ಅಧಿಕಾರಿಗಳು ಮನೆ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಸಂಪೂರ್ಣ ಶೋಧ ನಡೆಸಿದರು. ಆದರೆ, ತಪಾಸಣೆಯ ಸಮಯದಲ್ಲಿ ಯಾವುದೇ ಸ್ಫೋಟಕಗಳು ಕಂಡುಬಂದಿಲ್ಲ. ಬೆದರಿಕೆ ಕಳುಹಿಸಿದವರ ಬಗ್ಗೆ ಅಧಿಕಾರಿಗಳು ವಿವರಗಳನ್ನು ಬಹಿರಂಗಪಡಿಸಲಿಲ್ಲ.

ಪೂರ್ವ ಕರಾವಳಿ ರಸ್ತೆ (ಇಸಿಆರ್) ನಲ್ಲಿರುವ ನಟ ಅಜಿತ್ ಮನೆಯಲ್ಲಿ ಪೊಲೀಸ್ ಅಧಿಕಾರಿಗಳು ಬಾಂಬ್ ಸ್ಕ್ವಾಡ್ ಅನ್ನು ನಿಯೋಜಿಸಿದರು. ಶೋಧ ಕಾರ್ಯಾಚರಣೆ ಕೆಲವು ಗಂಟೆಗಳ ಕಾಲ ನಡೆಯಿತು, ನಂತರ ತನಿಖಾಧಿಕಾರಿಗಳು ಇದು ಹುಸಿ ಬೆದರಿಕೆ ಎಂದು ದೃಢಪಡಿಸಿದರು.

ಡಿಜಿಪಿ ಕಚೇರಿಗೂ ಬಾಂಬ್ ಬೆದರಿಕೆ

ಇದಲ್ಲದೆ, ಅರುಣ್ ವಿಜಯ್ ಅವರ ಎಕ್ಕಾಟ್ಟುತಂಗಲ್‌ನಲ್ಲಿರುವ ನಿವಾಸದಲ್ಲಿ ಬಾಂಬ್ ಇಡಲಾಗಿದೆ ಎಂದು ಹೇಳಿಕೊಂಡು ಡಿಜಿಪಿ ಕಚೇರಿಗೆ ಅಪರಿಚಿತ ವ್ಯಕ್ತಿಯಿಂದ ಇಮೇಲ್ ಬಂದಿತ್ತು. ಮಾಹಿತಿ ಪಡೆದ ಕೂಡಲೇ, ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ತಜ್ಞರು ಆಸ್ತಿಯನ್ನು ಶೋಧಿಸಿದಾಗ ಯಾವುದೇ ಸ್ಫೋಟಕ ವಸ್ತುಗಳು ಕಂಡುಬಂದಿಲ್ಲ.

ಮತ್ತೊಂದು ಬೆಳವಣಿಗೆಯಲ್ಲಿ, ಸಂಗೀತ ಸಂಯೋಜಕ ಇಳಯರಾಜ ಅವರ ಟಿ ನಗರ ಸ್ಟುಡಿಯೋ ಕೂಡ ಹುಸಿ ಬಾಂಬ್ ಎಚ್ಚರಿಕೆಗೆ ಗುರಿಯಾಗಿದೆ. ಇದು ಅಂತಹದ್ದೇ ಘಟನೆಗಳಿಂದ ಪ್ರಭಾವಿತರಾದ ಉನ್ನತ ವ್ಯಕ್ತಿಗಳ ಪಟ್ಟಿಗೆ ಸೇರ್ಪಡೆಯಾಗಿದೆ.

ಕೊಪ್ಪಳ| ಮಹಿಳೆಗೆ ಮದ್ಯ ಕುಡಿಸಿ ನಾಲ್ವರಿಂದ ಸಾಮೂಹಿಕ ಅತ್ಯಾಚಾರ; ಆರೋಪಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...