Homeಕರ್ನಾಟಕಬಿಬಿಎಂಪಿ ಬಳಸಿಕೊಂಡು ಮತದಾರರ ಡೇಟಾ ಕದ್ದ ಬೊಮ್ಮಾಯಿ ಸರ್ಕಾರ: ಕಾಂಗ್ರೆಸ್‌ ದೂರು

ಬಿಬಿಎಂಪಿ ಬಳಸಿಕೊಂಡು ಮತದಾರರ ಡೇಟಾ ಕದ್ದ ಬೊಮ್ಮಾಯಿ ಸರ್ಕಾರ: ಕಾಂಗ್ರೆಸ್‌ ದೂರು

- Advertisement -
- Advertisement -

“ಅಕ್ರಮವಾಗಿ ಮತದಾರರ ವಿವರಗಳನ್ನು ಸಂಗ್ರಹಿಸಲು ಚಿಲುಮೆ ಎಂಬ ಕಂಪನಿಗೆ ಬಿಬಿಎಂಪಿ ಅವಕಾಶ ಮಾಡಿಕೊಟ್ಟಿದೆ. ಮತದಾರರ ವಿವರಗಳು ಸೋರಿಕೆಯಾಗಿವೆ” ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಚುನಾವಣೆಗೂ ಮುನ್ನ ನಕಲಿ ಮತದಾರರ ಪಟ್ಟಿ ಪತ್ತೆ ಮತ್ತು ಮತದಾರರ ಪಟ್ಟಿ ಪರಿಷ್ಕರಣೆ ಸಲುವಾಗಿ ಬಿಬಿಎಂಪಿ ಜವಾಬ್ದಾರಿ ಹೊರಿಸಿದ್ದ ಚಿಲುಮೆ ಕಂಪನಿ ಅಕ್ರಮ ಎಸಗಿದೆ. ಬಿಬಿಎಂಪಿಯನ್ನು ಬಳಸಿಕೊಂಡು ಬಸವರಾಜ ಬೊಮ್ಮಾಯಿಯವರ ಸರ್ಕಾರ ಮತದಾರರ ಡೇಟಾ ಕದ್ದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸಚಿವ ಅಶ್ವತ್ಥನಾರಾಯಣ ಅವರ ಸಹಯೋಗ ಹೊಂದಿರುವ ‘ಹೊಂಬಾಳೆ’ ಕಂಪನಿಯ ಒಡೆತನದಲ್ಲಿರುವ ‘ಚಿಲುಮೆ’ ಕಂಪನಿಗೆ ಈ ಜವಾಬ್ದಾರಿ ವಹಿಸುವ ಮೂಲಕ ಬಿಬಿಎಂಪಿ ಕಾನೂನು ಉಲ್ಲಂಘನೆ ಮಾಡಿದೆ” ಎಂದು ಆರೋಪಿಸಿ, ಅದರ ವಿರುದ್ಧ ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಲಿದೆ.

ಗುರುವಾರ ಮಧ್ಯಾಹ್ನ ನಗರ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಮ್ ಅಹ್ಮದ್ ಮತದಾರರ ಪಟ್ಟಿ ಅಕ್ರಮ ಸಂಬಂಧ ಬೆಂಗಳೂರು ನಗರ ಪೊಲೀಸ್ ಕಮಿಷನರ್‌ಗೆ ದೂರು ನೀಡಲಿದ್ದಾರೆ.

ಇದಕ್ಕೂ ಮುನ್ನ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಜಂಟಿ ಪತ್ರಿಕಾಗೋಷ್ಟಿ ನಡೆಸಿದ ಕಾಂಗ್ರೆಸ್ ನಾಯಕರು, ಮತದಾರರ ಪಟ್ಟಿ ವಿಚಾರದಲ್ಲಿ ಬಿಜೆಪಿಯ ಡಾಟಾ ಕಳ್ಳತನದ ಮಾಹಿತಿ ಬಿಡುಗಡೆ ಮಾಡಿದೆ.

“ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಮತದಾರರಿಗೆ ಸಂಬಂಧಿಸಿದ ಡೇಟಾವನ್ನು ಕಳ್ಳತನ ಮಾಡಿದೆ. ಬಿಬಿಎಂಪಿ ಹಾಗೂ ರಾಜ್ಯ ಸರ್ಕಾರ ಇದಕ್ಕೆ ಹೊಣೆಯಾಗಿದೆ” ಎಂದಿದ್ದಾರೆ.

‘ಚಿಲುಮೆ’ ಎನ್ನುವ ಖಾಸಗಿ ಸಂಸ್ಥೆ ಮತದಾರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಬಿಬಿಎಂಪಿ ಅನುಮತಿ ಪಡೆದುಕೊಂಡು ಮತದಾರರ ಸೂಕ್ಷ್ಮ ಮಾಹಿತಿ ಸಂಗ್ರಹ ಮಾಡಿದೆ. ‘ಚಿಲುಮೆ’ ಎನ್‌ಜಿಒ ‘ಡಿಜಿಟಲ್ ಸಮೀಕ್ಷಾ’ ಎಂಬ ಮತದಾರರ ಸಮೀಕ್ಷೆ ಆ್ಯಪ್ ಅನ್ನು ಸಹ ನಿರ್ವಹಿಸುತ್ತಿದೆ. ಚುನಾವಣಾ ಆಯೋಗದ ಮತದಾರರ ನೋಂದಣಿ ಅರ್ಜಿಗಳಾದ ‘ಗರುಡ’ ಮತ್ತು ‘ಮತದಾರರ ಸಹಾಯವಾಣಿ’ಗಳ ಬಗ್ಗೆ ಸಾರ್ವಜನಿಕರಿಗೆ ತಿಳುವಳಿಕೆ ನೀಡುವ ಬದಲು, ಈ ಸಂಸ್ಥೆ ತಮ್ಮ ಸಿಬ್ಬಂದಿ ಮೂಲಕ ಮತದಾರರ ಧರ್ಮ, ಜಾತಿ, ಮಾತೃ ಭಾಷೆ, ಶಿಕ್ಷಣ, ವೈವಾಹಿಕ ಸ್ಥಿತಿ ಮತ್ತು ರಾಜಕೀಯ ಕುಂದುಕೊರತೆಗಳು ಸೇರಿದಂತೆ ‘ಡಿಜಿಟಲ್ ಸಮೀಕ್ಷಾʼದಲ್ಲಿ ವೈಯಕ್ತಿಕ ಮಾಹಿತಿಯನ್ನೂ ಸಂಗ್ರಹಿಸಿ ಅಪ್ಲೋಡ್ ಮಾಡಿದೆ ಎಂದು ವಿವರಿಸಿದ್ದಾರೆ.

“ಕೃಷ್ಣಪ್ಪ ರವಿಕುಮಾರ್ ಇದರ ಕಿಂಗ್ ಪಿನ್ ಆಗಿದ್ದಾರೆ. ಅವರು ಮಾಜಿ ಡಿಸಿಎಂ ಜೊತೆಗೆ ಉತ್ತಮ ಸಂಬಂಧ ಹೊಂದಿದ್ದಾರೆ. ಡಿಎಪಿ ಹೊಂಬಾಳೆ ಪ್ರೈ. ಲಿಮಿಟೆಡ್ ಕೂಡಾ ಇದರಲ್ಲಿ ಭಾಗಿಯಾಗಿದೆ” ಎಂದು ಕಾಂಗ್ರೆಸ್ ನಾಯಕರು ವಿವರಿಸಿದ್ದಾರೆ.

ಏನಿದು ವಿವಾದ?

ಚಿಲುಮೆ ಕಂಪನಿಯು ತಮ್ಮ ಏಜೆಂಟರನ್ನು ಸರ್ಕಾರಿ ಅಧಿಕಾರಿಗಳಂತೆ ಬಿಂಬಿಸಿ  ಬೆಂಗಳೂರಿನ ಸಾವಿರಾರು ಮತದಾರರ ವೈಯಕ್ತಿಕ ಮಾಹಿತಿಯನ್ನು ರಹಸ್ಯವಾಗಿ ಸಂಗ್ರಹಿಸಿದೆ ಎಂದು ‘ದಿ ನ್ಯೂಸ್‌ ಮಿನಿಟ್‌’ ಮತ್ತು ‘ಪ್ರತಿಧ್ವನಿ’ ಸುದ್ದಿಜಾಲತಾಣಗಳು ತನಿಖಾ ವರದಿ ಪ್ರಕಟಿಸಿವೆ.

“ಮತದಾರರ ಪಟ್ಟಿ ನವೀಕರಣ ಕಾರ್ಯಾಚರಣೆಗೆ ಬಿಬಿಎಂಪಿ ನೀಡಿದ ಆದೇಶವನ್ನು ಎನ್‌ಜಿಒ ದುರುಪಯೋಗ ಮಾಡಿಕೊಂಡಿದ್ದು, ಮತದಾರರಿಗೆ ಅನುಮಾನ ಬರಬಾರದೆಂದು ತನ್ನ ಏಜೆಂಟರನ್ನು ಸರ್ಕಾರಿ ಅಧಿಕಾರಿಗಳಂತೆ ಬಿಂಬಿಸಿ ಹಲವು ಸೂಕ್ಷ್ಮ ಮಾಹಿತಿಗಳನ್ನು ಸಂಗ್ರಹಿಸಿಕೊಂಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಚುನಾವಣಾ ಆಯೋಗದ ಅಧಿಕಾರಿಗಳ ಮೂಗಿನ ನೇರದಲ್ಲಿ ಹಲವು ತಿಂಗಳಿಂದ ಈ ಅಕ್ರಮ ಸರ್ವೆ ನಡೆದಿದೆ” ಎಂದು ವರದಿ ಉಲ್ಲೇಖಿಸಿದೆ.

ಇದನ್ನೂ ಓದಿರಿ: ಬಿಜೆಪಿ ಸರ್ಕಾರದ ಹೊಸ ವಿವಾದ: ಸರ್ಕಾರಿ ಶಾಲೆಗಳಿಗೆ ಕೇಸರಿ ಬಣ್ಣ ಬಳಿಯುವುದಕ್ಕೆ ವಿರೋಧ

ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುನ್ನ ಮತದಾರರ ಪಟ್ಟಿಯನ್ನು ಪರಿಷ್ಕರಿಸಲು ಚುನಾವಣಾ ಆಯೋಗದ ವಿಶೇಷ ಮತದಾರರ ಜಾಗೃತಿ ಅಭಿಯಾನವಾದ SVEEP (Systematic Voters Education and Electoral Participation) ಅನ್ನು ನಡೆಸಲು, ‘ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆʼಗೆ ಬಿಬಿಎಂಪಿ ಅನುಮತಿ ನೀಡಿತ್ತು. ಆದರೆ ಚಿಲುಮೆ ಸಂಸ್ಥೆ ಆದೇಶವನ್ನು ದುರುಪಯೋಗಪಡಿಸಿಕೊಂಡಿದ್ದು, ತನ್ನ ನೂರಾರು ಏಜೆಂಟರಿಗೆ ನಕಲಿ ಐಡಿ-ಕಾರ್ಡ್‌ಗಳನ್ನು ನೀಡಿದೆ. ಆ ಐಡಿ ಕಾರ್ಡುಗಳಲ್ಲಿ ತಮ್ಮನ್ನು ಬಿಬಿಎಂಪಿಯ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಎಂದು ಗುರುತಿಸಲಾಗಿದೆ ಎಂದು ತನಿಖಾ ವರದಿ ಬಹಿರಂಗಪಡಿಸಿದೆ.

ಬಿಎಲ್‌ಒ ಒಬ್ಬ ತಳಮಟ್ಟದ ಅಧಿಕಾರಿಯಾಗಿದ್ದು, ಅವರು ಸರ್ಕಾರಿ, ಅರೆ-ಸರ್ಕಾರಿ ಅಥವಾ ನಿವೃತ್ತ ಸರ್ಕಾರಿ ನೌಕರರಾಗಿರಬೇಕು. ಬಿಎಲ್‌ಒಗಳು ತಮ್ಮನ್ನು ನಿಯೋಜಿಸಲಾದ ಮತಗಟ್ಟೆಯ ನಿವಾಸಿಗಳಾಗಿರಬೇಕು. ಆದರೆ, ಚಿಲುಮೆ ತನ್ನ ಏಜೆಂಟರುಗಳಿಗೆ ಬಿಎಲ್‌ಒ ಎಂದು ನಕಲಿ ಗುರುತಿನ ಚೀಟಿ ನೀಡಿ ಫೀಲ್ಡಿಗೆ ಮಾಹಿತಿ ಸಂಗ್ರಹಿಸಲು ಬಿಟ್ಟಿದೆ. ಈ ಏಜೆಂಟ್‌ಗಳು ಮತದಾರರಿಂದ ಅವರ ಜಾತಿ, ಮಾತೃಭಾಷೆ, ವೈವಾಹಿಕ ಸ್ಥಿತಿ, ವಯಸ್ಸು, ಲಿಂಗ, ಉದ್ಯೋಗ ಮತ್ತು ಶಿಕ್ಷಣದ ವಿವರಗಳಂತಹ ವೈಯಕ್ತಿಕ ಮಾಹಿತಿಯನ್ನು ಹಾಗೂ ಆಧಾರ್ ಸಂಖ್ಯೆ, ಫೋನ್ ಸಂಖ್ಯೆ, ವಿಳಾಸ, ಮತದಾರರ ID ಸಂಖ್ಯೆ ಮತ್ತು ಇಮೇಲ್ ವಿಳಾಸದೊಂದಿಗೆ ಸಂಗ್ರಹಿಸಿದ್ದಾರೆ. ಅಲ್ಲದೆ, ಮತದಾರರು ತಮ್ಮ ಚುನಾಯಿತ ಪ್ರತಿನಿಧಿಗಳ ಕಾರ್ಯಕ್ಷಮತೆಯ ಬಗ್ಗೆ ಕೇಳಲಾದ ಪ್ರಶ್ನೆಗಳಿಗೆ ಉತ್ತರವನ್ನೂ ಪಡೆದುಕೊಂಡಿದ್ದಾರೆ ಎಂದು ಈ ತನಿಖಾ ವರದಿಗಳು ಉಲ್ಲೇಖಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...