Homeಕರ್ನಾಟಕಬಿಬಿಎಂಪಿ ಬಳಸಿಕೊಂಡು ಮತದಾರರ ಡೇಟಾ ಕದ್ದ ಬೊಮ್ಮಾಯಿ ಸರ್ಕಾರ: ಕಾಂಗ್ರೆಸ್‌ ದೂರು

ಬಿಬಿಎಂಪಿ ಬಳಸಿಕೊಂಡು ಮತದಾರರ ಡೇಟಾ ಕದ್ದ ಬೊಮ್ಮಾಯಿ ಸರ್ಕಾರ: ಕಾಂಗ್ರೆಸ್‌ ದೂರು

- Advertisement -
- Advertisement -

“ಅಕ್ರಮವಾಗಿ ಮತದಾರರ ವಿವರಗಳನ್ನು ಸಂಗ್ರಹಿಸಲು ಚಿಲುಮೆ ಎಂಬ ಕಂಪನಿಗೆ ಬಿಬಿಎಂಪಿ ಅವಕಾಶ ಮಾಡಿಕೊಟ್ಟಿದೆ. ಮತದಾರರ ವಿವರಗಳು ಸೋರಿಕೆಯಾಗಿವೆ” ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಚುನಾವಣೆಗೂ ಮುನ್ನ ನಕಲಿ ಮತದಾರರ ಪಟ್ಟಿ ಪತ್ತೆ ಮತ್ತು ಮತದಾರರ ಪಟ್ಟಿ ಪರಿಷ್ಕರಣೆ ಸಲುವಾಗಿ ಬಿಬಿಎಂಪಿ ಜವಾಬ್ದಾರಿ ಹೊರಿಸಿದ್ದ ಚಿಲುಮೆ ಕಂಪನಿ ಅಕ್ರಮ ಎಸಗಿದೆ. ಬಿಬಿಎಂಪಿಯನ್ನು ಬಳಸಿಕೊಂಡು ಬಸವರಾಜ ಬೊಮ್ಮಾಯಿಯವರ ಸರ್ಕಾರ ಮತದಾರರ ಡೇಟಾ ಕದ್ದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸಚಿವ ಅಶ್ವತ್ಥನಾರಾಯಣ ಅವರ ಸಹಯೋಗ ಹೊಂದಿರುವ ‘ಹೊಂಬಾಳೆ’ ಕಂಪನಿಯ ಒಡೆತನದಲ್ಲಿರುವ ‘ಚಿಲುಮೆ’ ಕಂಪನಿಗೆ ಈ ಜವಾಬ್ದಾರಿ ವಹಿಸುವ ಮೂಲಕ ಬಿಬಿಎಂಪಿ ಕಾನೂನು ಉಲ್ಲಂಘನೆ ಮಾಡಿದೆ” ಎಂದು ಆರೋಪಿಸಿ, ಅದರ ವಿರುದ್ಧ ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಲಿದೆ.

ಗುರುವಾರ ಮಧ್ಯಾಹ್ನ ನಗರ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಮ್ ಅಹ್ಮದ್ ಮತದಾರರ ಪಟ್ಟಿ ಅಕ್ರಮ ಸಂಬಂಧ ಬೆಂಗಳೂರು ನಗರ ಪೊಲೀಸ್ ಕಮಿಷನರ್‌ಗೆ ದೂರು ನೀಡಲಿದ್ದಾರೆ.

ಇದಕ್ಕೂ ಮುನ್ನ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಜಂಟಿ ಪತ್ರಿಕಾಗೋಷ್ಟಿ ನಡೆಸಿದ ಕಾಂಗ್ರೆಸ್ ನಾಯಕರು, ಮತದಾರರ ಪಟ್ಟಿ ವಿಚಾರದಲ್ಲಿ ಬಿಜೆಪಿಯ ಡಾಟಾ ಕಳ್ಳತನದ ಮಾಹಿತಿ ಬಿಡುಗಡೆ ಮಾಡಿದೆ.

“ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಮತದಾರರಿಗೆ ಸಂಬಂಧಿಸಿದ ಡೇಟಾವನ್ನು ಕಳ್ಳತನ ಮಾಡಿದೆ. ಬಿಬಿಎಂಪಿ ಹಾಗೂ ರಾಜ್ಯ ಸರ್ಕಾರ ಇದಕ್ಕೆ ಹೊಣೆಯಾಗಿದೆ” ಎಂದಿದ್ದಾರೆ.

‘ಚಿಲುಮೆ’ ಎನ್ನುವ ಖಾಸಗಿ ಸಂಸ್ಥೆ ಮತದಾರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಬಿಬಿಎಂಪಿ ಅನುಮತಿ ಪಡೆದುಕೊಂಡು ಮತದಾರರ ಸೂಕ್ಷ್ಮ ಮಾಹಿತಿ ಸಂಗ್ರಹ ಮಾಡಿದೆ. ‘ಚಿಲುಮೆ’ ಎನ್‌ಜಿಒ ‘ಡಿಜಿಟಲ್ ಸಮೀಕ್ಷಾ’ ಎಂಬ ಮತದಾರರ ಸಮೀಕ್ಷೆ ಆ್ಯಪ್ ಅನ್ನು ಸಹ ನಿರ್ವಹಿಸುತ್ತಿದೆ. ಚುನಾವಣಾ ಆಯೋಗದ ಮತದಾರರ ನೋಂದಣಿ ಅರ್ಜಿಗಳಾದ ‘ಗರುಡ’ ಮತ್ತು ‘ಮತದಾರರ ಸಹಾಯವಾಣಿ’ಗಳ ಬಗ್ಗೆ ಸಾರ್ವಜನಿಕರಿಗೆ ತಿಳುವಳಿಕೆ ನೀಡುವ ಬದಲು, ಈ ಸಂಸ್ಥೆ ತಮ್ಮ ಸಿಬ್ಬಂದಿ ಮೂಲಕ ಮತದಾರರ ಧರ್ಮ, ಜಾತಿ, ಮಾತೃ ಭಾಷೆ, ಶಿಕ್ಷಣ, ವೈವಾಹಿಕ ಸ್ಥಿತಿ ಮತ್ತು ರಾಜಕೀಯ ಕುಂದುಕೊರತೆಗಳು ಸೇರಿದಂತೆ ‘ಡಿಜಿಟಲ್ ಸಮೀಕ್ಷಾʼದಲ್ಲಿ ವೈಯಕ್ತಿಕ ಮಾಹಿತಿಯನ್ನೂ ಸಂಗ್ರಹಿಸಿ ಅಪ್ಲೋಡ್ ಮಾಡಿದೆ ಎಂದು ವಿವರಿಸಿದ್ದಾರೆ.

“ಕೃಷ್ಣಪ್ಪ ರವಿಕುಮಾರ್ ಇದರ ಕಿಂಗ್ ಪಿನ್ ಆಗಿದ್ದಾರೆ. ಅವರು ಮಾಜಿ ಡಿಸಿಎಂ ಜೊತೆಗೆ ಉತ್ತಮ ಸಂಬಂಧ ಹೊಂದಿದ್ದಾರೆ. ಡಿಎಪಿ ಹೊಂಬಾಳೆ ಪ್ರೈ. ಲಿಮಿಟೆಡ್ ಕೂಡಾ ಇದರಲ್ಲಿ ಭಾಗಿಯಾಗಿದೆ” ಎಂದು ಕಾಂಗ್ರೆಸ್ ನಾಯಕರು ವಿವರಿಸಿದ್ದಾರೆ.

ಏನಿದು ವಿವಾದ?

ಚಿಲುಮೆ ಕಂಪನಿಯು ತಮ್ಮ ಏಜೆಂಟರನ್ನು ಸರ್ಕಾರಿ ಅಧಿಕಾರಿಗಳಂತೆ ಬಿಂಬಿಸಿ  ಬೆಂಗಳೂರಿನ ಸಾವಿರಾರು ಮತದಾರರ ವೈಯಕ್ತಿಕ ಮಾಹಿತಿಯನ್ನು ರಹಸ್ಯವಾಗಿ ಸಂಗ್ರಹಿಸಿದೆ ಎಂದು ‘ದಿ ನ್ಯೂಸ್‌ ಮಿನಿಟ್‌’ ಮತ್ತು ‘ಪ್ರತಿಧ್ವನಿ’ ಸುದ್ದಿಜಾಲತಾಣಗಳು ತನಿಖಾ ವರದಿ ಪ್ರಕಟಿಸಿವೆ.

“ಮತದಾರರ ಪಟ್ಟಿ ನವೀಕರಣ ಕಾರ್ಯಾಚರಣೆಗೆ ಬಿಬಿಎಂಪಿ ನೀಡಿದ ಆದೇಶವನ್ನು ಎನ್‌ಜಿಒ ದುರುಪಯೋಗ ಮಾಡಿಕೊಂಡಿದ್ದು, ಮತದಾರರಿಗೆ ಅನುಮಾನ ಬರಬಾರದೆಂದು ತನ್ನ ಏಜೆಂಟರನ್ನು ಸರ್ಕಾರಿ ಅಧಿಕಾರಿಗಳಂತೆ ಬಿಂಬಿಸಿ ಹಲವು ಸೂಕ್ಷ್ಮ ಮಾಹಿತಿಗಳನ್ನು ಸಂಗ್ರಹಿಸಿಕೊಂಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಚುನಾವಣಾ ಆಯೋಗದ ಅಧಿಕಾರಿಗಳ ಮೂಗಿನ ನೇರದಲ್ಲಿ ಹಲವು ತಿಂಗಳಿಂದ ಈ ಅಕ್ರಮ ಸರ್ವೆ ನಡೆದಿದೆ” ಎಂದು ವರದಿ ಉಲ್ಲೇಖಿಸಿದೆ.

ಇದನ್ನೂ ಓದಿರಿ: ಬಿಜೆಪಿ ಸರ್ಕಾರದ ಹೊಸ ವಿವಾದ: ಸರ್ಕಾರಿ ಶಾಲೆಗಳಿಗೆ ಕೇಸರಿ ಬಣ್ಣ ಬಳಿಯುವುದಕ್ಕೆ ವಿರೋಧ

ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುನ್ನ ಮತದಾರರ ಪಟ್ಟಿಯನ್ನು ಪರಿಷ್ಕರಿಸಲು ಚುನಾವಣಾ ಆಯೋಗದ ವಿಶೇಷ ಮತದಾರರ ಜಾಗೃತಿ ಅಭಿಯಾನವಾದ SVEEP (Systematic Voters Education and Electoral Participation) ಅನ್ನು ನಡೆಸಲು, ‘ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆʼಗೆ ಬಿಬಿಎಂಪಿ ಅನುಮತಿ ನೀಡಿತ್ತು. ಆದರೆ ಚಿಲುಮೆ ಸಂಸ್ಥೆ ಆದೇಶವನ್ನು ದುರುಪಯೋಗಪಡಿಸಿಕೊಂಡಿದ್ದು, ತನ್ನ ನೂರಾರು ಏಜೆಂಟರಿಗೆ ನಕಲಿ ಐಡಿ-ಕಾರ್ಡ್‌ಗಳನ್ನು ನೀಡಿದೆ. ಆ ಐಡಿ ಕಾರ್ಡುಗಳಲ್ಲಿ ತಮ್ಮನ್ನು ಬಿಬಿಎಂಪಿಯ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಎಂದು ಗುರುತಿಸಲಾಗಿದೆ ಎಂದು ತನಿಖಾ ವರದಿ ಬಹಿರಂಗಪಡಿಸಿದೆ.

ಬಿಎಲ್‌ಒ ಒಬ್ಬ ತಳಮಟ್ಟದ ಅಧಿಕಾರಿಯಾಗಿದ್ದು, ಅವರು ಸರ್ಕಾರಿ, ಅರೆ-ಸರ್ಕಾರಿ ಅಥವಾ ನಿವೃತ್ತ ಸರ್ಕಾರಿ ನೌಕರರಾಗಿರಬೇಕು. ಬಿಎಲ್‌ಒಗಳು ತಮ್ಮನ್ನು ನಿಯೋಜಿಸಲಾದ ಮತಗಟ್ಟೆಯ ನಿವಾಸಿಗಳಾಗಿರಬೇಕು. ಆದರೆ, ಚಿಲುಮೆ ತನ್ನ ಏಜೆಂಟರುಗಳಿಗೆ ಬಿಎಲ್‌ಒ ಎಂದು ನಕಲಿ ಗುರುತಿನ ಚೀಟಿ ನೀಡಿ ಫೀಲ್ಡಿಗೆ ಮಾಹಿತಿ ಸಂಗ್ರಹಿಸಲು ಬಿಟ್ಟಿದೆ. ಈ ಏಜೆಂಟ್‌ಗಳು ಮತದಾರರಿಂದ ಅವರ ಜಾತಿ, ಮಾತೃಭಾಷೆ, ವೈವಾಹಿಕ ಸ್ಥಿತಿ, ವಯಸ್ಸು, ಲಿಂಗ, ಉದ್ಯೋಗ ಮತ್ತು ಶಿಕ್ಷಣದ ವಿವರಗಳಂತಹ ವೈಯಕ್ತಿಕ ಮಾಹಿತಿಯನ್ನು ಹಾಗೂ ಆಧಾರ್ ಸಂಖ್ಯೆ, ಫೋನ್ ಸಂಖ್ಯೆ, ವಿಳಾಸ, ಮತದಾರರ ID ಸಂಖ್ಯೆ ಮತ್ತು ಇಮೇಲ್ ವಿಳಾಸದೊಂದಿಗೆ ಸಂಗ್ರಹಿಸಿದ್ದಾರೆ. ಅಲ್ಲದೆ, ಮತದಾರರು ತಮ್ಮ ಚುನಾಯಿತ ಪ್ರತಿನಿಧಿಗಳ ಕಾರ್ಯಕ್ಷಮತೆಯ ಬಗ್ಗೆ ಕೇಳಲಾದ ಪ್ರಶ್ನೆಗಳಿಗೆ ಉತ್ತರವನ್ನೂ ಪಡೆದುಕೊಂಡಿದ್ದಾರೆ ಎಂದು ಈ ತನಿಖಾ ವರದಿಗಳು ಉಲ್ಲೇಖಿಸಿವೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಮತಾ ಕುರಿತು ಆಕ್ಷೇಪಾರ್ಹ ಟೀಕೆ; ಬಿಜೆಪಿ ಅಭ್ಯರ್ಥಿ ಅಭಿಜಿತ್ ಗಂಗೋಪಾಧ್ಯಾಯ ವಿರುದ್ಧ ಚುನಾವಣಾ ಆಯೋಗಕ್ಕೆ...

0
ಸಾರ್ವಜನಿಕ ರ‍್ಯಾಲಿಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಆಕ್ಷೇಪಾರ್ಹ ಟೀಕೆ ಮಾಡಿದ್ದಾರೆ ಎಂದು ಆರೋಪಿಸಿ ತಮ್ಲುಕ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಭಿಜಿತ್ ಗಂಗೋಪಾಧ್ಯಾಯ ವಿರುದ್ಧ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶುಕ್ರವಾರ ಚುನಾವಣಾ...