Homeಮುಖಪುಟಸುಶಾಂತ್ ಪ್ರಕರಣ: ರಿಪಬ್ಲಿಕ್ ಟಿವಿಯನ್ನು ತರಾಟೆಗೆ ತೆಗೆದುಕೊಂಡ ಬಾಂಬೆ ಹೈಕೋರ್ಟ್!

ಸುಶಾಂತ್ ಪ್ರಕರಣ: ರಿಪಬ್ಲಿಕ್ ಟಿವಿಯನ್ನು ತರಾಟೆಗೆ ತೆಗೆದುಕೊಂಡ ಬಾಂಬೆ ಹೈಕೋರ್ಟ್!

"ಪ್ರಕರಣವು ಹತ್ಯೆಯೇ ಅಥವಾ ಆತ್ಮಹತ್ಯೆ ಎಂಬ ತನಿಖೆಯಲ್ಲಿದ್ದಾಗ, ಒಂದು ಚಾನೆಲ್ ಇದು ಕೊಲೆ ಎಂದು ಹೇಳುತ್ತಿರುವುದು ತನಿಖಾ ಪತ್ರಿಕೋದ್ಯಮವೇ?" ಎಂದು ನ್ಯಾಯಪೀಠ ಕೇಳಿದೆ.

- Advertisement -
- Advertisement -

ಪ್ರಕರಣವೊಂದರಲ್ಲಿ ಯಾರನ್ನು ಬಂಧಿಸಬೇಕು ಎಂದು ಸಾರ್ವಜನಿಕರನ್ನು ಕೇಳುವುದು ತನಿಖಾ ಪತ್ರಿಕೋದ್ಯಮದ ಭಾಗವೇ ಎಂದು ಬಾಂಬೆ ಹೈಕೋರ್ಟ್ ರಿಪಬ್ಲಿಕ್ ಟಿವಿ ಪರ ವಕೀಲರನ್ನು ತರಾಟೆಗೆ ತೆಗೆದುಕೊಂಡಿದೆ.

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ನಿಧನದ ನಂತರ ಟ್ವಿಟ್ಟರ್‌ನಲ್ಲಿ ರಿಪಬ್ಲಿಕ್ ಚಾನೆಲ್ ನಡೆಸುತ್ತಿರುವ ‘#ಅರೆಸ್ಟ್ ರಿಯಾ’ ಎಂಬ ಹ್ಯಾಶ್‌ಟ್ಯಾಗ್ ಅಭಿಯಾನವನ್ನು ಉಲ್ಲೇಖಿಸಿ ಮುಖ್ಯ ನ್ಯಾಯಮೂರ್ತಿ ದೀಪಂಕರ್ ದತ್ತಾ ಮತ್ತು ನ್ಯಾಯಮೂರ್ತಿ ಜಿ.ಎಸ್.ಕುಲಕರ್ಣಿ ಅವರನ್ನೊಳಗೊಂಡ ನ್ಯಾಯಪೀಠ ಈ ಪ್ರಶ್ನೆಯನ್ನು ಮುಂದಿಟ್ಟಿದೆ.

“ಇದು ತನಿಖಾ ಪತ್ರಿಕೋದ್ಯಮದ ಭಾಗವೇ? ಯಾರನ್ನು ಬಂಧಿಸಬೇಕು ಎಂಬ ಬಗ್ಗೆ ಸಾರ್ವಜನಿಕರ ಅಭಿಪ್ರಾಯ ಕೇಳುತ್ತೀರಾ?” ಎಂದು ನ್ಯಾಯಪೀಠವು ಚಾನೆಲ್‌ನ ವಕೀಲ ಅಡ್ವೊಕೇಟ್ ಮಾಳ್ವಿಕಾ ತ್ರಿವೇದಿ ಅವರನ್ನು ಪ್ರಶ್ನಿಸಿದೆ.

ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ಸಂಬಂಧಿಸಿದ ಸಂಗತಿಗಳನ್ನು ಬಹಿರಂಗಪಡಿಸಲು ಚಾನೆಲ್ ತನಿಖಾ ಪತ್ರಿಕೋದ್ಯಮವನ್ನು ನಡೆಸುತ್ತಿದೆ ಎಂದು ಈ ಹಿಂದೆ ವಕೀಲರು ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಅರ್ನಾಬ್ ರಿಪಬ್ಲಿಕ್ ಚಾನೆಲ್ ವಿರುದ್ಧ PIL: ವಿಚಾರಣೆಗೆ ಒಪ್ಪಿದ ದೆಹಲಿ ಹೈಕೋರ್ಟ್

“ಒಂದು ಪ್ರಕರಣವು ಹತ್ಯೆಯೇ ಅಥವಾ ಆತ್ಮಹತ್ಯೆ ಎಂಬ ತನಿಖೆಯಲ್ಲಿದ್ದಾಗ, ಒಂದು ಚಾನೆಲ್ ಇದು ಕೊಲೆ ಎಂದು ಹೇಳುತ್ತಿರುವುದು ತನಿಖಾ ಪತ್ರಿಕೋದ್ಯಮವೇ? ತನಿಖಾ ಅಧಿಕಾರವನ್ನು ಸಿಆರ್‌ಪಿಸಿ ಅಡಿಯಲ್ಲಿ ಪೊಲೀಸರಿಗೆ ನೀಡಲಾಗುತ್ತದೆ” ಎಂದು ನ್ಯಾಯಪೀಠ ಚಾನೆಲ್‌ ಪರ ವಕೀಲರನ್ನು ತರಾಟೆಗೆ ತೆಗೆದುಕೊಂಡಿದೆ.

“ಮುಂಬೈ ಪೊಲೀಸ್ ತನಿಖೆಯಲ್ಲಿ ಏನೋ ತಪ್ಪಾಗಿದೆ ಹಾಗಾಗಿ ತನಿಖೆಯನ್ನು ಸುಪ್ರೀಂ ಕೋರ್ಟ್ ಕೇಂದ್ರೀಯ ತನಿಖಾ ದಳಕ್ಕೆ ಒಪ್ಪಿಸಿದೆ. ಸುಶಾಂತ್ ಅವರ ಕುಟುಂಬ ಕೂಡ ನ್ಯಾಯ ಕೋರಿದೆ” ಎಂದು ವಕೀಲರು ತಿಳಿಸಿದರು. ಮೃತ ವ್ಯಕ್ತಿ ಸೆಲಬ್ರಿಟಿ ಆಗಿದ್ದ ಕಾರಣ ಸಾರ್ವಜನಿಕರಿಗೆ ನೈಜ ಸಂಗತಿಗಳನ್ನು ತಿಳಿಯುವ ಕುತೂಹಲವಿದೆ ಎಂದು ನ್ಯಾಯಪೀಠಕ್ಕೆ ಹೇಳಿದರು.

ರಿಪಬ್ಲಿಕ್ ಟಿವಿಯ ತನಿಖಾ ವರದಿಗಳೇ ಶೀನಾ ಬೋರಾ ಕೊಲೆ ಪ್ರಕರಣ ಮತ್ತು ಸುನಂದ ಪುಷ್ಕರ್ ಪ್ರಕರಣದ ನೈಜ ಸಂಗತಿಗಳನ್ನು ಬೆಳಕಿಗೆ ತಂದಿದೆ. ರಿಪಬ್ಲಿಕ್ ಟಿವಿ ತನ್ನದೆ ಚೌಕಟ್ಟಿನೊಳಗೆ ವರದಿಗಳನ್ನು ಮಾಡುತ್ತಿದೆ ಎಂದು ತ್ರಿವೇದಿ ಹೇಳಿದ್ದಾರೆ.

ಆದರೆ, ಸುಶಾಂತ್ ಸಾವು ವರದಿಯಾದ ರೀತಿಗೆ ನ್ಯಾಯಪೀಠ ತನ್ನ ಅಸಮ್ಮತಿಯನ್ನು ವ್ಯಕ್ತಪಡಿಸಿತು. “ಕೆಲವು ಆತ್ಮಹತ್ಯೆ ವರದಿಗಳನ್ನು ಮಾಡುವ ಮಾರ್ಗಸೂಚಿಗಳಿವೆ. ಮೃತಪಟ್ಟವರ ಬಗ್ಗೆ ನಿಮಗೆ ಗೌರವವಿಲ್ಲವೇ? ಇಂತಹ ವರದಿಗಳು ತುಂಬಾ ದುರದೃಷ್ಟಕರ” ಎಂದು ನ್ಯಾಯಪೀಠ ಟೀಕಿಸಿತು.

ಸುಶಾಂತ್ ಸಿಂಗ್ ರಜಪೂತ್ ಪ್ರಕರಣದ ವರದಿಯ ಹಿನ್ನೆಲೆಯಲ್ಲಿ ಮಾಧ್ಯಮ ವಿಚಾರಣೆಯ ಬಗ್ಗೆ ನಿಯಮಗಳನ್ನು ಕೋರಿದ್ದ ಪಿಐಎಲ್‌ಗಳನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಗ್ಗೆ ಪತ್ರಕರ್ತ ಅರ್ನಾಬ್ ಗೋಸ್ವಾಮಿ ಮತ್ತು ಅವರ ಚಾನೆಲ್ “ವಿಕೃತ ಮತ್ತು ದಾರಿತಪ್ಪಿಸುವ ಸಂಗತಿಗಳನ್ನು” ವರದಿ ಮಾಡುತ್ತಿದೆ ಎಂದು ಆರೋಪಿಸಿ ದೆಹಲಿ ಹೈಕೋರ್ಟ್‌ನಲ್ಲೂ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.


ಇದನ್ನೂ ಓದಿ:  ರಿಪಬ್ಲಿಕ್ ಟಿವಿಯಲ್ಲಿ TRP ಹಗರಣದ ಸುದ್ದಿ ಪ್ರಸಾರವನ್ನು ತಡೆಯುವಂತೆ ಕೋರ್ಟ್‌ಗೆ‌‌ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...