Homeಮುಖಪುಟಸುಶಾಂತ್ ಪ್ರಕರಣ: ರಿಪಬ್ಲಿಕ್ ಟಿವಿಯನ್ನು ತರಾಟೆಗೆ ತೆಗೆದುಕೊಂಡ ಬಾಂಬೆ ಹೈಕೋರ್ಟ್!

ಸುಶಾಂತ್ ಪ್ರಕರಣ: ರಿಪಬ್ಲಿಕ್ ಟಿವಿಯನ್ನು ತರಾಟೆಗೆ ತೆಗೆದುಕೊಂಡ ಬಾಂಬೆ ಹೈಕೋರ್ಟ್!

"ಪ್ರಕರಣವು ಹತ್ಯೆಯೇ ಅಥವಾ ಆತ್ಮಹತ್ಯೆ ಎಂಬ ತನಿಖೆಯಲ್ಲಿದ್ದಾಗ, ಒಂದು ಚಾನೆಲ್ ಇದು ಕೊಲೆ ಎಂದು ಹೇಳುತ್ತಿರುವುದು ತನಿಖಾ ಪತ್ರಿಕೋದ್ಯಮವೇ?" ಎಂದು ನ್ಯಾಯಪೀಠ ಕೇಳಿದೆ.

- Advertisement -
- Advertisement -

ಪ್ರಕರಣವೊಂದರಲ್ಲಿ ಯಾರನ್ನು ಬಂಧಿಸಬೇಕು ಎಂದು ಸಾರ್ವಜನಿಕರನ್ನು ಕೇಳುವುದು ತನಿಖಾ ಪತ್ರಿಕೋದ್ಯಮದ ಭಾಗವೇ ಎಂದು ಬಾಂಬೆ ಹೈಕೋರ್ಟ್ ರಿಪಬ್ಲಿಕ್ ಟಿವಿ ಪರ ವಕೀಲರನ್ನು ತರಾಟೆಗೆ ತೆಗೆದುಕೊಂಡಿದೆ.

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ನಿಧನದ ನಂತರ ಟ್ವಿಟ್ಟರ್‌ನಲ್ಲಿ ರಿಪಬ್ಲಿಕ್ ಚಾನೆಲ್ ನಡೆಸುತ್ತಿರುವ ‘#ಅರೆಸ್ಟ್ ರಿಯಾ’ ಎಂಬ ಹ್ಯಾಶ್‌ಟ್ಯಾಗ್ ಅಭಿಯಾನವನ್ನು ಉಲ್ಲೇಖಿಸಿ ಮುಖ್ಯ ನ್ಯಾಯಮೂರ್ತಿ ದೀಪಂಕರ್ ದತ್ತಾ ಮತ್ತು ನ್ಯಾಯಮೂರ್ತಿ ಜಿ.ಎಸ್.ಕುಲಕರ್ಣಿ ಅವರನ್ನೊಳಗೊಂಡ ನ್ಯಾಯಪೀಠ ಈ ಪ್ರಶ್ನೆಯನ್ನು ಮುಂದಿಟ್ಟಿದೆ.

“ಇದು ತನಿಖಾ ಪತ್ರಿಕೋದ್ಯಮದ ಭಾಗವೇ? ಯಾರನ್ನು ಬಂಧಿಸಬೇಕು ಎಂಬ ಬಗ್ಗೆ ಸಾರ್ವಜನಿಕರ ಅಭಿಪ್ರಾಯ ಕೇಳುತ್ತೀರಾ?” ಎಂದು ನ್ಯಾಯಪೀಠವು ಚಾನೆಲ್‌ನ ವಕೀಲ ಅಡ್ವೊಕೇಟ್ ಮಾಳ್ವಿಕಾ ತ್ರಿವೇದಿ ಅವರನ್ನು ಪ್ರಶ್ನಿಸಿದೆ.

ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ಸಂಬಂಧಿಸಿದ ಸಂಗತಿಗಳನ್ನು ಬಹಿರಂಗಪಡಿಸಲು ಚಾನೆಲ್ ತನಿಖಾ ಪತ್ರಿಕೋದ್ಯಮವನ್ನು ನಡೆಸುತ್ತಿದೆ ಎಂದು ಈ ಹಿಂದೆ ವಕೀಲರು ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಅರ್ನಾಬ್ ರಿಪಬ್ಲಿಕ್ ಚಾನೆಲ್ ವಿರುದ್ಧ PIL: ವಿಚಾರಣೆಗೆ ಒಪ್ಪಿದ ದೆಹಲಿ ಹೈಕೋರ್ಟ್

“ಒಂದು ಪ್ರಕರಣವು ಹತ್ಯೆಯೇ ಅಥವಾ ಆತ್ಮಹತ್ಯೆ ಎಂಬ ತನಿಖೆಯಲ್ಲಿದ್ದಾಗ, ಒಂದು ಚಾನೆಲ್ ಇದು ಕೊಲೆ ಎಂದು ಹೇಳುತ್ತಿರುವುದು ತನಿಖಾ ಪತ್ರಿಕೋದ್ಯಮವೇ? ತನಿಖಾ ಅಧಿಕಾರವನ್ನು ಸಿಆರ್‌ಪಿಸಿ ಅಡಿಯಲ್ಲಿ ಪೊಲೀಸರಿಗೆ ನೀಡಲಾಗುತ್ತದೆ” ಎಂದು ನ್ಯಾಯಪೀಠ ಚಾನೆಲ್‌ ಪರ ವಕೀಲರನ್ನು ತರಾಟೆಗೆ ತೆಗೆದುಕೊಂಡಿದೆ.

“ಮುಂಬೈ ಪೊಲೀಸ್ ತನಿಖೆಯಲ್ಲಿ ಏನೋ ತಪ್ಪಾಗಿದೆ ಹಾಗಾಗಿ ತನಿಖೆಯನ್ನು ಸುಪ್ರೀಂ ಕೋರ್ಟ್ ಕೇಂದ್ರೀಯ ತನಿಖಾ ದಳಕ್ಕೆ ಒಪ್ಪಿಸಿದೆ. ಸುಶಾಂತ್ ಅವರ ಕುಟುಂಬ ಕೂಡ ನ್ಯಾಯ ಕೋರಿದೆ” ಎಂದು ವಕೀಲರು ತಿಳಿಸಿದರು. ಮೃತ ವ್ಯಕ್ತಿ ಸೆಲಬ್ರಿಟಿ ಆಗಿದ್ದ ಕಾರಣ ಸಾರ್ವಜನಿಕರಿಗೆ ನೈಜ ಸಂಗತಿಗಳನ್ನು ತಿಳಿಯುವ ಕುತೂಹಲವಿದೆ ಎಂದು ನ್ಯಾಯಪೀಠಕ್ಕೆ ಹೇಳಿದರು.

ರಿಪಬ್ಲಿಕ್ ಟಿವಿಯ ತನಿಖಾ ವರದಿಗಳೇ ಶೀನಾ ಬೋರಾ ಕೊಲೆ ಪ್ರಕರಣ ಮತ್ತು ಸುನಂದ ಪುಷ್ಕರ್ ಪ್ರಕರಣದ ನೈಜ ಸಂಗತಿಗಳನ್ನು ಬೆಳಕಿಗೆ ತಂದಿದೆ. ರಿಪಬ್ಲಿಕ್ ಟಿವಿ ತನ್ನದೆ ಚೌಕಟ್ಟಿನೊಳಗೆ ವರದಿಗಳನ್ನು ಮಾಡುತ್ತಿದೆ ಎಂದು ತ್ರಿವೇದಿ ಹೇಳಿದ್ದಾರೆ.

ಆದರೆ, ಸುಶಾಂತ್ ಸಾವು ವರದಿಯಾದ ರೀತಿಗೆ ನ್ಯಾಯಪೀಠ ತನ್ನ ಅಸಮ್ಮತಿಯನ್ನು ವ್ಯಕ್ತಪಡಿಸಿತು. “ಕೆಲವು ಆತ್ಮಹತ್ಯೆ ವರದಿಗಳನ್ನು ಮಾಡುವ ಮಾರ್ಗಸೂಚಿಗಳಿವೆ. ಮೃತಪಟ್ಟವರ ಬಗ್ಗೆ ನಿಮಗೆ ಗೌರವವಿಲ್ಲವೇ? ಇಂತಹ ವರದಿಗಳು ತುಂಬಾ ದುರದೃಷ್ಟಕರ” ಎಂದು ನ್ಯಾಯಪೀಠ ಟೀಕಿಸಿತು.

ಸುಶಾಂತ್ ಸಿಂಗ್ ರಜಪೂತ್ ಪ್ರಕರಣದ ವರದಿಯ ಹಿನ್ನೆಲೆಯಲ್ಲಿ ಮಾಧ್ಯಮ ವಿಚಾರಣೆಯ ಬಗ್ಗೆ ನಿಯಮಗಳನ್ನು ಕೋರಿದ್ದ ಪಿಐಎಲ್‌ಗಳನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಗ್ಗೆ ಪತ್ರಕರ್ತ ಅರ್ನಾಬ್ ಗೋಸ್ವಾಮಿ ಮತ್ತು ಅವರ ಚಾನೆಲ್ “ವಿಕೃತ ಮತ್ತು ದಾರಿತಪ್ಪಿಸುವ ಸಂಗತಿಗಳನ್ನು” ವರದಿ ಮಾಡುತ್ತಿದೆ ಎಂದು ಆರೋಪಿಸಿ ದೆಹಲಿ ಹೈಕೋರ್ಟ್‌ನಲ್ಲೂ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.


ಇದನ್ನೂ ಓದಿ:  ರಿಪಬ್ಲಿಕ್ ಟಿವಿಯಲ್ಲಿ TRP ಹಗರಣದ ಸುದ್ದಿ ಪ್ರಸಾರವನ್ನು ತಡೆಯುವಂತೆ ಕೋರ್ಟ್‌ಗೆ‌‌ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...