Homeಮುಖಪುಟಸುಶಾಂತ್ ಪ್ರಕರಣ: ರಿಪಬ್ಲಿಕ್ ಟಿವಿಯನ್ನು ತರಾಟೆಗೆ ತೆಗೆದುಕೊಂಡ ಬಾಂಬೆ ಹೈಕೋರ್ಟ್!

ಸುಶಾಂತ್ ಪ್ರಕರಣ: ರಿಪಬ್ಲಿಕ್ ಟಿವಿಯನ್ನು ತರಾಟೆಗೆ ತೆಗೆದುಕೊಂಡ ಬಾಂಬೆ ಹೈಕೋರ್ಟ್!

"ಪ್ರಕರಣವು ಹತ್ಯೆಯೇ ಅಥವಾ ಆತ್ಮಹತ್ಯೆ ಎಂಬ ತನಿಖೆಯಲ್ಲಿದ್ದಾಗ, ಒಂದು ಚಾನೆಲ್ ಇದು ಕೊಲೆ ಎಂದು ಹೇಳುತ್ತಿರುವುದು ತನಿಖಾ ಪತ್ರಿಕೋದ್ಯಮವೇ?" ಎಂದು ನ್ಯಾಯಪೀಠ ಕೇಳಿದೆ.

- Advertisement -
- Advertisement -

ಪ್ರಕರಣವೊಂದರಲ್ಲಿ ಯಾರನ್ನು ಬಂಧಿಸಬೇಕು ಎಂದು ಸಾರ್ವಜನಿಕರನ್ನು ಕೇಳುವುದು ತನಿಖಾ ಪತ್ರಿಕೋದ್ಯಮದ ಭಾಗವೇ ಎಂದು ಬಾಂಬೆ ಹೈಕೋರ್ಟ್ ರಿಪಬ್ಲಿಕ್ ಟಿವಿ ಪರ ವಕೀಲರನ್ನು ತರಾಟೆಗೆ ತೆಗೆದುಕೊಂಡಿದೆ.

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ನಿಧನದ ನಂತರ ಟ್ವಿಟ್ಟರ್‌ನಲ್ಲಿ ರಿಪಬ್ಲಿಕ್ ಚಾನೆಲ್ ನಡೆಸುತ್ತಿರುವ ‘#ಅರೆಸ್ಟ್ ರಿಯಾ’ ಎಂಬ ಹ್ಯಾಶ್‌ಟ್ಯಾಗ್ ಅಭಿಯಾನವನ್ನು ಉಲ್ಲೇಖಿಸಿ ಮುಖ್ಯ ನ್ಯಾಯಮೂರ್ತಿ ದೀಪಂಕರ್ ದತ್ತಾ ಮತ್ತು ನ್ಯಾಯಮೂರ್ತಿ ಜಿ.ಎಸ್.ಕುಲಕರ್ಣಿ ಅವರನ್ನೊಳಗೊಂಡ ನ್ಯಾಯಪೀಠ ಈ ಪ್ರಶ್ನೆಯನ್ನು ಮುಂದಿಟ್ಟಿದೆ.

“ಇದು ತನಿಖಾ ಪತ್ರಿಕೋದ್ಯಮದ ಭಾಗವೇ? ಯಾರನ್ನು ಬಂಧಿಸಬೇಕು ಎಂಬ ಬಗ್ಗೆ ಸಾರ್ವಜನಿಕರ ಅಭಿಪ್ರಾಯ ಕೇಳುತ್ತೀರಾ?” ಎಂದು ನ್ಯಾಯಪೀಠವು ಚಾನೆಲ್‌ನ ವಕೀಲ ಅಡ್ವೊಕೇಟ್ ಮಾಳ್ವಿಕಾ ತ್ರಿವೇದಿ ಅವರನ್ನು ಪ್ರಶ್ನಿಸಿದೆ.

ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ಸಂಬಂಧಿಸಿದ ಸಂಗತಿಗಳನ್ನು ಬಹಿರಂಗಪಡಿಸಲು ಚಾನೆಲ್ ತನಿಖಾ ಪತ್ರಿಕೋದ್ಯಮವನ್ನು ನಡೆಸುತ್ತಿದೆ ಎಂದು ಈ ಹಿಂದೆ ವಕೀಲರು ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಅರ್ನಾಬ್ ರಿಪಬ್ಲಿಕ್ ಚಾನೆಲ್ ವಿರುದ್ಧ PIL: ವಿಚಾರಣೆಗೆ ಒಪ್ಪಿದ ದೆಹಲಿ ಹೈಕೋರ್ಟ್

“ಒಂದು ಪ್ರಕರಣವು ಹತ್ಯೆಯೇ ಅಥವಾ ಆತ್ಮಹತ್ಯೆ ಎಂಬ ತನಿಖೆಯಲ್ಲಿದ್ದಾಗ, ಒಂದು ಚಾನೆಲ್ ಇದು ಕೊಲೆ ಎಂದು ಹೇಳುತ್ತಿರುವುದು ತನಿಖಾ ಪತ್ರಿಕೋದ್ಯಮವೇ? ತನಿಖಾ ಅಧಿಕಾರವನ್ನು ಸಿಆರ್‌ಪಿಸಿ ಅಡಿಯಲ್ಲಿ ಪೊಲೀಸರಿಗೆ ನೀಡಲಾಗುತ್ತದೆ” ಎಂದು ನ್ಯಾಯಪೀಠ ಚಾನೆಲ್‌ ಪರ ವಕೀಲರನ್ನು ತರಾಟೆಗೆ ತೆಗೆದುಕೊಂಡಿದೆ.

“ಮುಂಬೈ ಪೊಲೀಸ್ ತನಿಖೆಯಲ್ಲಿ ಏನೋ ತಪ್ಪಾಗಿದೆ ಹಾಗಾಗಿ ತನಿಖೆಯನ್ನು ಸುಪ್ರೀಂ ಕೋರ್ಟ್ ಕೇಂದ್ರೀಯ ತನಿಖಾ ದಳಕ್ಕೆ ಒಪ್ಪಿಸಿದೆ. ಸುಶಾಂತ್ ಅವರ ಕುಟುಂಬ ಕೂಡ ನ್ಯಾಯ ಕೋರಿದೆ” ಎಂದು ವಕೀಲರು ತಿಳಿಸಿದರು. ಮೃತ ವ್ಯಕ್ತಿ ಸೆಲಬ್ರಿಟಿ ಆಗಿದ್ದ ಕಾರಣ ಸಾರ್ವಜನಿಕರಿಗೆ ನೈಜ ಸಂಗತಿಗಳನ್ನು ತಿಳಿಯುವ ಕುತೂಹಲವಿದೆ ಎಂದು ನ್ಯಾಯಪೀಠಕ್ಕೆ ಹೇಳಿದರು.

ರಿಪಬ್ಲಿಕ್ ಟಿವಿಯ ತನಿಖಾ ವರದಿಗಳೇ ಶೀನಾ ಬೋರಾ ಕೊಲೆ ಪ್ರಕರಣ ಮತ್ತು ಸುನಂದ ಪುಷ್ಕರ್ ಪ್ರಕರಣದ ನೈಜ ಸಂಗತಿಗಳನ್ನು ಬೆಳಕಿಗೆ ತಂದಿದೆ. ರಿಪಬ್ಲಿಕ್ ಟಿವಿ ತನ್ನದೆ ಚೌಕಟ್ಟಿನೊಳಗೆ ವರದಿಗಳನ್ನು ಮಾಡುತ್ತಿದೆ ಎಂದು ತ್ರಿವೇದಿ ಹೇಳಿದ್ದಾರೆ.

ಆದರೆ, ಸುಶಾಂತ್ ಸಾವು ವರದಿಯಾದ ರೀತಿಗೆ ನ್ಯಾಯಪೀಠ ತನ್ನ ಅಸಮ್ಮತಿಯನ್ನು ವ್ಯಕ್ತಪಡಿಸಿತು. “ಕೆಲವು ಆತ್ಮಹತ್ಯೆ ವರದಿಗಳನ್ನು ಮಾಡುವ ಮಾರ್ಗಸೂಚಿಗಳಿವೆ. ಮೃತಪಟ್ಟವರ ಬಗ್ಗೆ ನಿಮಗೆ ಗೌರವವಿಲ್ಲವೇ? ಇಂತಹ ವರದಿಗಳು ತುಂಬಾ ದುರದೃಷ್ಟಕರ” ಎಂದು ನ್ಯಾಯಪೀಠ ಟೀಕಿಸಿತು.

ಸುಶಾಂತ್ ಸಿಂಗ್ ರಜಪೂತ್ ಪ್ರಕರಣದ ವರದಿಯ ಹಿನ್ನೆಲೆಯಲ್ಲಿ ಮಾಧ್ಯಮ ವಿಚಾರಣೆಯ ಬಗ್ಗೆ ನಿಯಮಗಳನ್ನು ಕೋರಿದ್ದ ಪಿಐಎಲ್‌ಗಳನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಗ್ಗೆ ಪತ್ರಕರ್ತ ಅರ್ನಾಬ್ ಗೋಸ್ವಾಮಿ ಮತ್ತು ಅವರ ಚಾನೆಲ್ “ವಿಕೃತ ಮತ್ತು ದಾರಿತಪ್ಪಿಸುವ ಸಂಗತಿಗಳನ್ನು” ವರದಿ ಮಾಡುತ್ತಿದೆ ಎಂದು ಆರೋಪಿಸಿ ದೆಹಲಿ ಹೈಕೋರ್ಟ್‌ನಲ್ಲೂ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.


ಇದನ್ನೂ ಓದಿ:  ರಿಪಬ್ಲಿಕ್ ಟಿವಿಯಲ್ಲಿ TRP ಹಗರಣದ ಸುದ್ದಿ ಪ್ರಸಾರವನ್ನು ತಡೆಯುವಂತೆ ಕೋರ್ಟ್‌ಗೆ‌‌ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...