HomeಮುಖಪುಟICICI ಬ್ಯಾಂಕ್-ವಿಡಿಯೋಕಾನ್ ಪ್ರಕರಣ: ಚಂದಾ ಕೊಚ್ಚರ್ ಬಂಧನ 'ಅಕ್ರಮ': ಹೈಕೋರ್ಟ್‌ ತೀರ್ಪು

ICICI ಬ್ಯಾಂಕ್-ವಿಡಿಯೋಕಾನ್ ಪ್ರಕರಣ: ಚಂದಾ ಕೊಚ್ಚರ್ ಬಂಧನ ‘ಅಕ್ರಮ’: ಹೈಕೋರ್ಟ್‌ ತೀರ್ಪು

- Advertisement -
- Advertisement -

ವಿಡಿಯೋಕಾನ್ ಸಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಐಸಿಐಸಿಐ ಬ್ಯಾಂಕ್‌ ಮಾಜಿ ವ್ಯವಸ್ಥಾಪಕ ನಿರ್ದೇಶಕಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದಾ ಕೊಚ್ಚರ್ ಮತ್ತು ಅವರ ಪತಿ ದೀಪಕ್ ಕೊಚ್ಚರ್ ಅವರ ಬಂಧನವನ್ನು ಬಾಂಬೆ ಹೈಕೋರ್ಟ್ “ಅಕ್ರಮ” ಎಂದು ತೀರ್ಪು ನೀಡಿದೆ.

ನ್ಯಾಯಮೂರ್ತಿ ಅನುಜಾ ಪ್ರಭುದೇಸಾಯಿ ಮತ್ತು ನ್ಯಾಯಮೂರ್ತಿ ಎನ್.ಆರ್. ಬೋರ್ಕರ್ ಅವರು ಅದೇ ನ್ಯಾಯಾಲಯದ ಹಿಂದಿನ ಆದೇಶವನ್ನು ಎತ್ತಿ ಹಿಡಿದಿದ್ದು, 2023ರ ಜನವರಿಯಲ್ಲಿ ನೀಡಿದ ಮಧ್ಯಂತರ ಆದೇಶದಲ್ಲಿ ಹೈಕೋರ್ಟ್ ಇಬ್ಬರಿಗೆ ಜಾಮೀನು ನೀಡಿತ್ತು.

ವಿಡಿಯೋಕಾನ್-ಐಸಿಐಸಿಐ ಬ್ಯಾಂಕ್ ಸಾಲ ಪ್ರಕರಣದಲ್ಲಿ ಡಿಸೆಂಬರ್ 2022ರಲ್ಲಿ ಸಿಬಿಐ ಕೊಚ್ಚರ್‌ ಅವರನ್ನು ಬಂಧಿಸಿತ್ತು. ಬಂಧನವನ್ನು ಪ್ರಶ್ನಿಸಿ ಚಂದಾ ಕೊಚ್ಚರ್ ಮತ್ತು ಅವರ ಪತಿ ದೀಪಕ್ ಕೊಚ್ಚರ್ ನ್ಯಾಯಾಲಯದ ಮೊರೆ ಹೋಗಿದ್ದರು ಮತ್ತು ಬಂಧನವನ್ನು  ಕಾನೂನುಬಾಹಿರ ಎಂದು ಘೋಷಿಸಲು ಕೋರಿದ್ದರು. ಜನವರಿ 9, 2023ರಂದು ಹೈಕೋರ್ಟ್ ಈ ಕುರಿತು ಮಧ್ಯಂತರ ಆದೇಶವನ್ನು ನೀಡಿತ್ತು ಮತ್ತು ಸಿಬಿಐಯನ್ನು ತರಾಟೆಗೆ ತೆಗೆದುಕೊಂಡಿತ್ತು.

ಈ ಪ್ರಕರಣದಲ್ಲಿ ಕೊಚ್ಚರ್‌ ದಂಪತಿಗಳಲ್ಲದೆ, ವಿಡಿಯೋಕಾನ್ ಗ್ರೂಪ್ ಸಂಸ್ಥಾಪಕ ವೇಣುಗೋಪಾಲ್ ಧೂತ್ ಅವರನ್ನು ಕೂಡ ಸಿಬಿಐ ಬಂಧಿಸಿತ್ತು. ಅವರಿಗೂ 2023ರ ಜನವರಿಯಲ್ಲಿ ಹೈಕೋರ್ಟ್ ತನ್ನ ಮಧ್ಯಂತರ ಆದೇಶದಲ್ಲಿ ಜಾಮೀನು ನೀಡಿತ್ತು.

ಏನಿದು ಪ್ರಕರಣ?

ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ, ಭಾರತೀಯ ರಿಸರ್ವ್ ಬ್ಯಾಂಕ್ ಮಾರ್ಗಸೂಚಿಗಳು ಮತ್ತು ಖಾಸಗಿ ಸಾಲ ನೀತಿಯನ್ನು ಉಲ್ಲಂಘಿಸಿ, ಧೂತ್‌ ಅವರ ವಿಡಿಯೋಕಾನ್ ಗ್ರೂಪ್ ಕಂಪನಿಗಳಿಗೆ ಐಸಿಐಸಿಐ ಬ್ಯಾಂಕ್ 3,250 ಕೋಟಿ ರೂಪಾಯಿಗಳ ಸಾಲ ಸೌಲಭ್ಯಗಳನ್ನು ಮಂಜೂರು ಮಾಡಿದೆ ಎಂಬುದು ಕೊಚ್ಚರ್‌ಗಳ ವಿರುದ್ಧದ ಸಿಬಿಐ ಪ್ರಕರಣವಾಗಿದೆ.

2019ರಲ್ಲಿ ಸಲ್ಲಿಸಿದ ಪ್ರಥಮ ಮಾಹಿತಿ ವರದಿಯಲ್ಲಿ (ಎಫ್‌ಐಆರ್) ಸಿಬಿಐ ಚಂದಾ ಕೊಚ್ಚರ್‌, ದೀಪಕ್ ಕೊಚ್ಚರ್‌ ಮತ್ತು ಧೂತ್ ಜೊತೆಗೆ ದೀಪಕ್ ಕೊಚ್ಚರ್ ಅವರ ನುಪವರ್ ರಿನ್ಯೂಬಲ್ಸ್ (ಎನ್‌ಆರ್‌ಎಲ್), ಸುಪ್ರೀಂ ಎನರ್ಜಿ, ವಿಡಿಯೋಕಾನ್ ಇಂಟರ್‌ನ್ಯಾಷನಲ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಮತ್ತು ವಿಡಿಯೋಕಾನ್ ಇಂಡಸ್ಟ್ರೀಸ್ ಲಿಮಿಟೆಡ್ ವಿರುದ್ಧ ಆರೋಪಿಸಿತ್ತು. ಕ್ರಿಮಿನಲ್ ಪಿತೂರಿ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ನಿಬಂಧನೆಗಳಿಗೆ ಸಂಬಂಧಿಸಿದ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಈ ಕುರಿತು ಎಫ್‌ಐಆರ್ ದಾಖಲಿಸಲಾಗಿತ್ತು.

2018ರಲ್ಲಿ ಈ ಬಗ್ಗೆ ತನಿಖೆ ಆರಂಭವಾಗಿದ್ದು, ಆ ಸಂದರ್ಭದಲ್ಲಿ ಚಂದಾ ಕೊಚ್ಚರ್‌ ಅವರು ಐಸಿಐಸಿಐ ನಿರ್ದೇಶಕಿ ಸ್ಥಾನದಿಂದ ಕೆಳಗಿಳಿದಿದ್ದರು. 2019ರಲ್ಲಿ ಚಂದಾ ಅವರ ಮನೆ ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದರು. 2012ರಲ್ಲಿ ಐಸಿಐಸಿಐ ಬ್ಯಾಂಕ್‌ನಿಂದ ವಿಡಿಯೋಕಾನ್ ಗ್ರೂಪ್ 3,250 ಕೋಟಿ ರೂಪಾಯಿ ಸಾಲ ಪಡೆದಿದ್ದರು, ಕೆಲ ತಿಂಗಳ ನಂತರ ವಿಡಿಯೋಕಾನ್ ಪ್ರವರ್ತಕ ವೇಣುಗೋಪಾಲ್ ಧೂತ್ ಅವರು ನ್ಯೂಪವರ್‌ನಲ್ಲಿ ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಸಾಲಗಳನ್ನು ನಂತರ ಅನುತ್ಪಾದಕ ಆಸ್ತಿ (ಎನ್​ಪಿಎ) ಎಂದು ಘೋಷಿಸಲಾಗಿತ್ತು. ಇದರಿಂದ ಬ್ಯಾಂಕ್​ಗೆ ಕೋಟ್ಯಂತರ ರೂಪಾಯಿ ನಷ್ಟವಾಗಿತ್ತು.

ಇದನ್ನು ಓದಿ: ಮ್ಯಾನುವಲ್ ಸ್ಕ್ಯಾವೆಂಜಿಂಗ್ ಪ್ರಕರಣದಲ್ಲಿ ಮೃತರ ಕುಟುಂಬಕ್ಕೆ 30 ಲಕ್ಷ ಪರಿಹಾರಕ್ಕೆ ಹೈಕೋರ್ಟ್‌ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...