HomeಮುಖಪುಟICICI ಬ್ಯಾಂಕ್-ವಿಡಿಯೋಕಾನ್ ಪ್ರಕರಣ: ಚಂದಾ ಕೊಚ್ಚರ್ ಬಂಧನ 'ಅಕ್ರಮ': ಹೈಕೋರ್ಟ್‌ ತೀರ್ಪು

ICICI ಬ್ಯಾಂಕ್-ವಿಡಿಯೋಕಾನ್ ಪ್ರಕರಣ: ಚಂದಾ ಕೊಚ್ಚರ್ ಬಂಧನ ‘ಅಕ್ರಮ’: ಹೈಕೋರ್ಟ್‌ ತೀರ್ಪು

- Advertisement -
- Advertisement -

ವಿಡಿಯೋಕಾನ್ ಸಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಐಸಿಐಸಿಐ ಬ್ಯಾಂಕ್‌ ಮಾಜಿ ವ್ಯವಸ್ಥಾಪಕ ನಿರ್ದೇಶಕಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದಾ ಕೊಚ್ಚರ್ ಮತ್ತು ಅವರ ಪತಿ ದೀಪಕ್ ಕೊಚ್ಚರ್ ಅವರ ಬಂಧನವನ್ನು ಬಾಂಬೆ ಹೈಕೋರ್ಟ್ “ಅಕ್ರಮ” ಎಂದು ತೀರ್ಪು ನೀಡಿದೆ.

ನ್ಯಾಯಮೂರ್ತಿ ಅನುಜಾ ಪ್ರಭುದೇಸಾಯಿ ಮತ್ತು ನ್ಯಾಯಮೂರ್ತಿ ಎನ್.ಆರ್. ಬೋರ್ಕರ್ ಅವರು ಅದೇ ನ್ಯಾಯಾಲಯದ ಹಿಂದಿನ ಆದೇಶವನ್ನು ಎತ್ತಿ ಹಿಡಿದಿದ್ದು, 2023ರ ಜನವರಿಯಲ್ಲಿ ನೀಡಿದ ಮಧ್ಯಂತರ ಆದೇಶದಲ್ಲಿ ಹೈಕೋರ್ಟ್ ಇಬ್ಬರಿಗೆ ಜಾಮೀನು ನೀಡಿತ್ತು.

ವಿಡಿಯೋಕಾನ್-ಐಸಿಐಸಿಐ ಬ್ಯಾಂಕ್ ಸಾಲ ಪ್ರಕರಣದಲ್ಲಿ ಡಿಸೆಂಬರ್ 2022ರಲ್ಲಿ ಸಿಬಿಐ ಕೊಚ್ಚರ್‌ ಅವರನ್ನು ಬಂಧಿಸಿತ್ತು. ಬಂಧನವನ್ನು ಪ್ರಶ್ನಿಸಿ ಚಂದಾ ಕೊಚ್ಚರ್ ಮತ್ತು ಅವರ ಪತಿ ದೀಪಕ್ ಕೊಚ್ಚರ್ ನ್ಯಾಯಾಲಯದ ಮೊರೆ ಹೋಗಿದ್ದರು ಮತ್ತು ಬಂಧನವನ್ನು  ಕಾನೂನುಬಾಹಿರ ಎಂದು ಘೋಷಿಸಲು ಕೋರಿದ್ದರು. ಜನವರಿ 9, 2023ರಂದು ಹೈಕೋರ್ಟ್ ಈ ಕುರಿತು ಮಧ್ಯಂತರ ಆದೇಶವನ್ನು ನೀಡಿತ್ತು ಮತ್ತು ಸಿಬಿಐಯನ್ನು ತರಾಟೆಗೆ ತೆಗೆದುಕೊಂಡಿತ್ತು.

ಈ ಪ್ರಕರಣದಲ್ಲಿ ಕೊಚ್ಚರ್‌ ದಂಪತಿಗಳಲ್ಲದೆ, ವಿಡಿಯೋಕಾನ್ ಗ್ರೂಪ್ ಸಂಸ್ಥಾಪಕ ವೇಣುಗೋಪಾಲ್ ಧೂತ್ ಅವರನ್ನು ಕೂಡ ಸಿಬಿಐ ಬಂಧಿಸಿತ್ತು. ಅವರಿಗೂ 2023ರ ಜನವರಿಯಲ್ಲಿ ಹೈಕೋರ್ಟ್ ತನ್ನ ಮಧ್ಯಂತರ ಆದೇಶದಲ್ಲಿ ಜಾಮೀನು ನೀಡಿತ್ತು.

ಏನಿದು ಪ್ರಕರಣ?

ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ, ಭಾರತೀಯ ರಿಸರ್ವ್ ಬ್ಯಾಂಕ್ ಮಾರ್ಗಸೂಚಿಗಳು ಮತ್ತು ಖಾಸಗಿ ಸಾಲ ನೀತಿಯನ್ನು ಉಲ್ಲಂಘಿಸಿ, ಧೂತ್‌ ಅವರ ವಿಡಿಯೋಕಾನ್ ಗ್ರೂಪ್ ಕಂಪನಿಗಳಿಗೆ ಐಸಿಐಸಿಐ ಬ್ಯಾಂಕ್ 3,250 ಕೋಟಿ ರೂಪಾಯಿಗಳ ಸಾಲ ಸೌಲಭ್ಯಗಳನ್ನು ಮಂಜೂರು ಮಾಡಿದೆ ಎಂಬುದು ಕೊಚ್ಚರ್‌ಗಳ ವಿರುದ್ಧದ ಸಿಬಿಐ ಪ್ರಕರಣವಾಗಿದೆ.

2019ರಲ್ಲಿ ಸಲ್ಲಿಸಿದ ಪ್ರಥಮ ಮಾಹಿತಿ ವರದಿಯಲ್ಲಿ (ಎಫ್‌ಐಆರ್) ಸಿಬಿಐ ಚಂದಾ ಕೊಚ್ಚರ್‌, ದೀಪಕ್ ಕೊಚ್ಚರ್‌ ಮತ್ತು ಧೂತ್ ಜೊತೆಗೆ ದೀಪಕ್ ಕೊಚ್ಚರ್ ಅವರ ನುಪವರ್ ರಿನ್ಯೂಬಲ್ಸ್ (ಎನ್‌ಆರ್‌ಎಲ್), ಸುಪ್ರೀಂ ಎನರ್ಜಿ, ವಿಡಿಯೋಕಾನ್ ಇಂಟರ್‌ನ್ಯಾಷನಲ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಮತ್ತು ವಿಡಿಯೋಕಾನ್ ಇಂಡಸ್ಟ್ರೀಸ್ ಲಿಮಿಟೆಡ್ ವಿರುದ್ಧ ಆರೋಪಿಸಿತ್ತು. ಕ್ರಿಮಿನಲ್ ಪಿತೂರಿ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ನಿಬಂಧನೆಗಳಿಗೆ ಸಂಬಂಧಿಸಿದ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಈ ಕುರಿತು ಎಫ್‌ಐಆರ್ ದಾಖಲಿಸಲಾಗಿತ್ತು.

2018ರಲ್ಲಿ ಈ ಬಗ್ಗೆ ತನಿಖೆ ಆರಂಭವಾಗಿದ್ದು, ಆ ಸಂದರ್ಭದಲ್ಲಿ ಚಂದಾ ಕೊಚ್ಚರ್‌ ಅವರು ಐಸಿಐಸಿಐ ನಿರ್ದೇಶಕಿ ಸ್ಥಾನದಿಂದ ಕೆಳಗಿಳಿದಿದ್ದರು. 2019ರಲ್ಲಿ ಚಂದಾ ಅವರ ಮನೆ ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದರು. 2012ರಲ್ಲಿ ಐಸಿಐಸಿಐ ಬ್ಯಾಂಕ್‌ನಿಂದ ವಿಡಿಯೋಕಾನ್ ಗ್ರೂಪ್ 3,250 ಕೋಟಿ ರೂಪಾಯಿ ಸಾಲ ಪಡೆದಿದ್ದರು, ಕೆಲ ತಿಂಗಳ ನಂತರ ವಿಡಿಯೋಕಾನ್ ಪ್ರವರ್ತಕ ವೇಣುಗೋಪಾಲ್ ಧೂತ್ ಅವರು ನ್ಯೂಪವರ್‌ನಲ್ಲಿ ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಸಾಲಗಳನ್ನು ನಂತರ ಅನುತ್ಪಾದಕ ಆಸ್ತಿ (ಎನ್​ಪಿಎ) ಎಂದು ಘೋಷಿಸಲಾಗಿತ್ತು. ಇದರಿಂದ ಬ್ಯಾಂಕ್​ಗೆ ಕೋಟ್ಯಂತರ ರೂಪಾಯಿ ನಷ್ಟವಾಗಿತ್ತು.

ಇದನ್ನು ಓದಿ: ಮ್ಯಾನುವಲ್ ಸ್ಕ್ಯಾವೆಂಜಿಂಗ್ ಪ್ರಕರಣದಲ್ಲಿ ಮೃತರ ಕುಟುಂಬಕ್ಕೆ 30 ಲಕ್ಷ ಪರಿಹಾರಕ್ಕೆ ಹೈಕೋರ್ಟ್‌ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...