HomeಮುಖಪುಟICICI ಬ್ಯಾಂಕ್-ವಿಡಿಯೋಕಾನ್ ಪ್ರಕರಣ: ಚಂದಾ ಕೊಚ್ಚರ್ ಬಂಧನ 'ಅಕ್ರಮ': ಹೈಕೋರ್ಟ್‌ ತೀರ್ಪು

ICICI ಬ್ಯಾಂಕ್-ವಿಡಿಯೋಕಾನ್ ಪ್ರಕರಣ: ಚಂದಾ ಕೊಚ್ಚರ್ ಬಂಧನ ‘ಅಕ್ರಮ’: ಹೈಕೋರ್ಟ್‌ ತೀರ್ಪು

- Advertisement -
- Advertisement -

ವಿಡಿಯೋಕಾನ್ ಸಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಐಸಿಐಸಿಐ ಬ್ಯಾಂಕ್‌ ಮಾಜಿ ವ್ಯವಸ್ಥಾಪಕ ನಿರ್ದೇಶಕಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದಾ ಕೊಚ್ಚರ್ ಮತ್ತು ಅವರ ಪತಿ ದೀಪಕ್ ಕೊಚ್ಚರ್ ಅವರ ಬಂಧನವನ್ನು ಬಾಂಬೆ ಹೈಕೋರ್ಟ್ “ಅಕ್ರಮ” ಎಂದು ತೀರ್ಪು ನೀಡಿದೆ.

ನ್ಯಾಯಮೂರ್ತಿ ಅನುಜಾ ಪ್ರಭುದೇಸಾಯಿ ಮತ್ತು ನ್ಯಾಯಮೂರ್ತಿ ಎನ್.ಆರ್. ಬೋರ್ಕರ್ ಅವರು ಅದೇ ನ್ಯಾಯಾಲಯದ ಹಿಂದಿನ ಆದೇಶವನ್ನು ಎತ್ತಿ ಹಿಡಿದಿದ್ದು, 2023ರ ಜನವರಿಯಲ್ಲಿ ನೀಡಿದ ಮಧ್ಯಂತರ ಆದೇಶದಲ್ಲಿ ಹೈಕೋರ್ಟ್ ಇಬ್ಬರಿಗೆ ಜಾಮೀನು ನೀಡಿತ್ತು.

ವಿಡಿಯೋಕಾನ್-ಐಸಿಐಸಿಐ ಬ್ಯಾಂಕ್ ಸಾಲ ಪ್ರಕರಣದಲ್ಲಿ ಡಿಸೆಂಬರ್ 2022ರಲ್ಲಿ ಸಿಬಿಐ ಕೊಚ್ಚರ್‌ ಅವರನ್ನು ಬಂಧಿಸಿತ್ತು. ಬಂಧನವನ್ನು ಪ್ರಶ್ನಿಸಿ ಚಂದಾ ಕೊಚ್ಚರ್ ಮತ್ತು ಅವರ ಪತಿ ದೀಪಕ್ ಕೊಚ್ಚರ್ ನ್ಯಾಯಾಲಯದ ಮೊರೆ ಹೋಗಿದ್ದರು ಮತ್ತು ಬಂಧನವನ್ನು  ಕಾನೂನುಬಾಹಿರ ಎಂದು ಘೋಷಿಸಲು ಕೋರಿದ್ದರು. ಜನವರಿ 9, 2023ರಂದು ಹೈಕೋರ್ಟ್ ಈ ಕುರಿತು ಮಧ್ಯಂತರ ಆದೇಶವನ್ನು ನೀಡಿತ್ತು ಮತ್ತು ಸಿಬಿಐಯನ್ನು ತರಾಟೆಗೆ ತೆಗೆದುಕೊಂಡಿತ್ತು.

ಈ ಪ್ರಕರಣದಲ್ಲಿ ಕೊಚ್ಚರ್‌ ದಂಪತಿಗಳಲ್ಲದೆ, ವಿಡಿಯೋಕಾನ್ ಗ್ರೂಪ್ ಸಂಸ್ಥಾಪಕ ವೇಣುಗೋಪಾಲ್ ಧೂತ್ ಅವರನ್ನು ಕೂಡ ಸಿಬಿಐ ಬಂಧಿಸಿತ್ತು. ಅವರಿಗೂ 2023ರ ಜನವರಿಯಲ್ಲಿ ಹೈಕೋರ್ಟ್ ತನ್ನ ಮಧ್ಯಂತರ ಆದೇಶದಲ್ಲಿ ಜಾಮೀನು ನೀಡಿತ್ತು.

ಏನಿದು ಪ್ರಕರಣ?

ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ, ಭಾರತೀಯ ರಿಸರ್ವ್ ಬ್ಯಾಂಕ್ ಮಾರ್ಗಸೂಚಿಗಳು ಮತ್ತು ಖಾಸಗಿ ಸಾಲ ನೀತಿಯನ್ನು ಉಲ್ಲಂಘಿಸಿ, ಧೂತ್‌ ಅವರ ವಿಡಿಯೋಕಾನ್ ಗ್ರೂಪ್ ಕಂಪನಿಗಳಿಗೆ ಐಸಿಐಸಿಐ ಬ್ಯಾಂಕ್ 3,250 ಕೋಟಿ ರೂಪಾಯಿಗಳ ಸಾಲ ಸೌಲಭ್ಯಗಳನ್ನು ಮಂಜೂರು ಮಾಡಿದೆ ಎಂಬುದು ಕೊಚ್ಚರ್‌ಗಳ ವಿರುದ್ಧದ ಸಿಬಿಐ ಪ್ರಕರಣವಾಗಿದೆ.

2019ರಲ್ಲಿ ಸಲ್ಲಿಸಿದ ಪ್ರಥಮ ಮಾಹಿತಿ ವರದಿಯಲ್ಲಿ (ಎಫ್‌ಐಆರ್) ಸಿಬಿಐ ಚಂದಾ ಕೊಚ್ಚರ್‌, ದೀಪಕ್ ಕೊಚ್ಚರ್‌ ಮತ್ತು ಧೂತ್ ಜೊತೆಗೆ ದೀಪಕ್ ಕೊಚ್ಚರ್ ಅವರ ನುಪವರ್ ರಿನ್ಯೂಬಲ್ಸ್ (ಎನ್‌ಆರ್‌ಎಲ್), ಸುಪ್ರೀಂ ಎನರ್ಜಿ, ವಿಡಿಯೋಕಾನ್ ಇಂಟರ್‌ನ್ಯಾಷನಲ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಮತ್ತು ವಿಡಿಯೋಕಾನ್ ಇಂಡಸ್ಟ್ರೀಸ್ ಲಿಮಿಟೆಡ್ ವಿರುದ್ಧ ಆರೋಪಿಸಿತ್ತು. ಕ್ರಿಮಿನಲ್ ಪಿತೂರಿ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ನಿಬಂಧನೆಗಳಿಗೆ ಸಂಬಂಧಿಸಿದ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಈ ಕುರಿತು ಎಫ್‌ಐಆರ್ ದಾಖಲಿಸಲಾಗಿತ್ತು.

2018ರಲ್ಲಿ ಈ ಬಗ್ಗೆ ತನಿಖೆ ಆರಂಭವಾಗಿದ್ದು, ಆ ಸಂದರ್ಭದಲ್ಲಿ ಚಂದಾ ಕೊಚ್ಚರ್‌ ಅವರು ಐಸಿಐಸಿಐ ನಿರ್ದೇಶಕಿ ಸ್ಥಾನದಿಂದ ಕೆಳಗಿಳಿದಿದ್ದರು. 2019ರಲ್ಲಿ ಚಂದಾ ಅವರ ಮನೆ ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದರು. 2012ರಲ್ಲಿ ಐಸಿಐಸಿಐ ಬ್ಯಾಂಕ್‌ನಿಂದ ವಿಡಿಯೋಕಾನ್ ಗ್ರೂಪ್ 3,250 ಕೋಟಿ ರೂಪಾಯಿ ಸಾಲ ಪಡೆದಿದ್ದರು, ಕೆಲ ತಿಂಗಳ ನಂತರ ವಿಡಿಯೋಕಾನ್ ಪ್ರವರ್ತಕ ವೇಣುಗೋಪಾಲ್ ಧೂತ್ ಅವರು ನ್ಯೂಪವರ್‌ನಲ್ಲಿ ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಸಾಲಗಳನ್ನು ನಂತರ ಅನುತ್ಪಾದಕ ಆಸ್ತಿ (ಎನ್​ಪಿಎ) ಎಂದು ಘೋಷಿಸಲಾಗಿತ್ತು. ಇದರಿಂದ ಬ್ಯಾಂಕ್​ಗೆ ಕೋಟ್ಯಂತರ ರೂಪಾಯಿ ನಷ್ಟವಾಗಿತ್ತು.

ಇದನ್ನು ಓದಿ: ಮ್ಯಾನುವಲ್ ಸ್ಕ್ಯಾವೆಂಜಿಂಗ್ ಪ್ರಕರಣದಲ್ಲಿ ಮೃತರ ಕುಟುಂಬಕ್ಕೆ 30 ಲಕ್ಷ ಪರಿಹಾರಕ್ಕೆ ಹೈಕೋರ್ಟ್‌ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...