HomeಮುಖಪುಟICICI ಬ್ಯಾಂಕ್-ವಿಡಿಯೋಕಾನ್ ಪ್ರಕರಣ: ಚಂದಾ ಕೊಚ್ಚರ್ ಬಂಧನ 'ಅಕ್ರಮ': ಹೈಕೋರ್ಟ್‌ ತೀರ್ಪು

ICICI ಬ್ಯಾಂಕ್-ವಿಡಿಯೋಕಾನ್ ಪ್ರಕರಣ: ಚಂದಾ ಕೊಚ್ಚರ್ ಬಂಧನ ‘ಅಕ್ರಮ’: ಹೈಕೋರ್ಟ್‌ ತೀರ್ಪು

- Advertisement -
- Advertisement -

ವಿಡಿಯೋಕಾನ್ ಸಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಐಸಿಐಸಿಐ ಬ್ಯಾಂಕ್‌ ಮಾಜಿ ವ್ಯವಸ್ಥಾಪಕ ನಿರ್ದೇಶಕಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದಾ ಕೊಚ್ಚರ್ ಮತ್ತು ಅವರ ಪತಿ ದೀಪಕ್ ಕೊಚ್ಚರ್ ಅವರ ಬಂಧನವನ್ನು ಬಾಂಬೆ ಹೈಕೋರ್ಟ್ “ಅಕ್ರಮ” ಎಂದು ತೀರ್ಪು ನೀಡಿದೆ.

ನ್ಯಾಯಮೂರ್ತಿ ಅನುಜಾ ಪ್ರಭುದೇಸಾಯಿ ಮತ್ತು ನ್ಯಾಯಮೂರ್ತಿ ಎನ್.ಆರ್. ಬೋರ್ಕರ್ ಅವರು ಅದೇ ನ್ಯಾಯಾಲಯದ ಹಿಂದಿನ ಆದೇಶವನ್ನು ಎತ್ತಿ ಹಿಡಿದಿದ್ದು, 2023ರ ಜನವರಿಯಲ್ಲಿ ನೀಡಿದ ಮಧ್ಯಂತರ ಆದೇಶದಲ್ಲಿ ಹೈಕೋರ್ಟ್ ಇಬ್ಬರಿಗೆ ಜಾಮೀನು ನೀಡಿತ್ತು.

ವಿಡಿಯೋಕಾನ್-ಐಸಿಐಸಿಐ ಬ್ಯಾಂಕ್ ಸಾಲ ಪ್ರಕರಣದಲ್ಲಿ ಡಿಸೆಂಬರ್ 2022ರಲ್ಲಿ ಸಿಬಿಐ ಕೊಚ್ಚರ್‌ ಅವರನ್ನು ಬಂಧಿಸಿತ್ತು. ಬಂಧನವನ್ನು ಪ್ರಶ್ನಿಸಿ ಚಂದಾ ಕೊಚ್ಚರ್ ಮತ್ತು ಅವರ ಪತಿ ದೀಪಕ್ ಕೊಚ್ಚರ್ ನ್ಯಾಯಾಲಯದ ಮೊರೆ ಹೋಗಿದ್ದರು ಮತ್ತು ಬಂಧನವನ್ನು  ಕಾನೂನುಬಾಹಿರ ಎಂದು ಘೋಷಿಸಲು ಕೋರಿದ್ದರು. ಜನವರಿ 9, 2023ರಂದು ಹೈಕೋರ್ಟ್ ಈ ಕುರಿತು ಮಧ್ಯಂತರ ಆದೇಶವನ್ನು ನೀಡಿತ್ತು ಮತ್ತು ಸಿಬಿಐಯನ್ನು ತರಾಟೆಗೆ ತೆಗೆದುಕೊಂಡಿತ್ತು.

ಈ ಪ್ರಕರಣದಲ್ಲಿ ಕೊಚ್ಚರ್‌ ದಂಪತಿಗಳಲ್ಲದೆ, ವಿಡಿಯೋಕಾನ್ ಗ್ರೂಪ್ ಸಂಸ್ಥಾಪಕ ವೇಣುಗೋಪಾಲ್ ಧೂತ್ ಅವರನ್ನು ಕೂಡ ಸಿಬಿಐ ಬಂಧಿಸಿತ್ತು. ಅವರಿಗೂ 2023ರ ಜನವರಿಯಲ್ಲಿ ಹೈಕೋರ್ಟ್ ತನ್ನ ಮಧ್ಯಂತರ ಆದೇಶದಲ್ಲಿ ಜಾಮೀನು ನೀಡಿತ್ತು.

ಏನಿದು ಪ್ರಕರಣ?

ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ, ಭಾರತೀಯ ರಿಸರ್ವ್ ಬ್ಯಾಂಕ್ ಮಾರ್ಗಸೂಚಿಗಳು ಮತ್ತು ಖಾಸಗಿ ಸಾಲ ನೀತಿಯನ್ನು ಉಲ್ಲಂಘಿಸಿ, ಧೂತ್‌ ಅವರ ವಿಡಿಯೋಕಾನ್ ಗ್ರೂಪ್ ಕಂಪನಿಗಳಿಗೆ ಐಸಿಐಸಿಐ ಬ್ಯಾಂಕ್ 3,250 ಕೋಟಿ ರೂಪಾಯಿಗಳ ಸಾಲ ಸೌಲಭ್ಯಗಳನ್ನು ಮಂಜೂರು ಮಾಡಿದೆ ಎಂಬುದು ಕೊಚ್ಚರ್‌ಗಳ ವಿರುದ್ಧದ ಸಿಬಿಐ ಪ್ರಕರಣವಾಗಿದೆ.

2019ರಲ್ಲಿ ಸಲ್ಲಿಸಿದ ಪ್ರಥಮ ಮಾಹಿತಿ ವರದಿಯಲ್ಲಿ (ಎಫ್‌ಐಆರ್) ಸಿಬಿಐ ಚಂದಾ ಕೊಚ್ಚರ್‌, ದೀಪಕ್ ಕೊಚ್ಚರ್‌ ಮತ್ತು ಧೂತ್ ಜೊತೆಗೆ ದೀಪಕ್ ಕೊಚ್ಚರ್ ಅವರ ನುಪವರ್ ರಿನ್ಯೂಬಲ್ಸ್ (ಎನ್‌ಆರ್‌ಎಲ್), ಸುಪ್ರೀಂ ಎನರ್ಜಿ, ವಿಡಿಯೋಕಾನ್ ಇಂಟರ್‌ನ್ಯಾಷನಲ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಮತ್ತು ವಿಡಿಯೋಕಾನ್ ಇಂಡಸ್ಟ್ರೀಸ್ ಲಿಮಿಟೆಡ್ ವಿರುದ್ಧ ಆರೋಪಿಸಿತ್ತು. ಕ್ರಿಮಿನಲ್ ಪಿತೂರಿ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ನಿಬಂಧನೆಗಳಿಗೆ ಸಂಬಂಧಿಸಿದ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಈ ಕುರಿತು ಎಫ್‌ಐಆರ್ ದಾಖಲಿಸಲಾಗಿತ್ತು.

2018ರಲ್ಲಿ ಈ ಬಗ್ಗೆ ತನಿಖೆ ಆರಂಭವಾಗಿದ್ದು, ಆ ಸಂದರ್ಭದಲ್ಲಿ ಚಂದಾ ಕೊಚ್ಚರ್‌ ಅವರು ಐಸಿಐಸಿಐ ನಿರ್ದೇಶಕಿ ಸ್ಥಾನದಿಂದ ಕೆಳಗಿಳಿದಿದ್ದರು. 2019ರಲ್ಲಿ ಚಂದಾ ಅವರ ಮನೆ ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದರು. 2012ರಲ್ಲಿ ಐಸಿಐಸಿಐ ಬ್ಯಾಂಕ್‌ನಿಂದ ವಿಡಿಯೋಕಾನ್ ಗ್ರೂಪ್ 3,250 ಕೋಟಿ ರೂಪಾಯಿ ಸಾಲ ಪಡೆದಿದ್ದರು, ಕೆಲ ತಿಂಗಳ ನಂತರ ವಿಡಿಯೋಕಾನ್ ಪ್ರವರ್ತಕ ವೇಣುಗೋಪಾಲ್ ಧೂತ್ ಅವರು ನ್ಯೂಪವರ್‌ನಲ್ಲಿ ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಸಾಲಗಳನ್ನು ನಂತರ ಅನುತ್ಪಾದಕ ಆಸ್ತಿ (ಎನ್​ಪಿಎ) ಎಂದು ಘೋಷಿಸಲಾಗಿತ್ತು. ಇದರಿಂದ ಬ್ಯಾಂಕ್​ಗೆ ಕೋಟ್ಯಂತರ ರೂಪಾಯಿ ನಷ್ಟವಾಗಿತ್ತು.

ಇದನ್ನು ಓದಿ: ಮ್ಯಾನುವಲ್ ಸ್ಕ್ಯಾವೆಂಜಿಂಗ್ ಪ್ರಕರಣದಲ್ಲಿ ಮೃತರ ಕುಟುಂಬಕ್ಕೆ 30 ಲಕ್ಷ ಪರಿಹಾರಕ್ಕೆ ಹೈಕೋರ್ಟ್‌ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...