Homeಮುಖಪುಟಮುಂಬೈ ಕಾಲೇಜಿನ ಹಿಜಾಬ್ ನಿಷೇಧ ನಿರ್ಧಾರ ಎತ್ತಿ ಹಿಡಿದ ಬಾಂಬೆ ಹೈಕೋರ್ಟ್: ವಿದ್ಯಾರ್ಥಿನಿಯರ ಅರ್ಜಿ ವಜಾ

ಮುಂಬೈ ಕಾಲೇಜಿನ ಹಿಜಾಬ್ ನಿಷೇಧ ನಿರ್ಧಾರ ಎತ್ತಿ ಹಿಡಿದ ಬಾಂಬೆ ಹೈಕೋರ್ಟ್: ವಿದ್ಯಾರ್ಥಿನಿಯರ ಅರ್ಜಿ ವಜಾ

- Advertisement -
- Advertisement -

ಕ್ಯಾಂಪಸ್‌ನೊಳಗೆ ಹಿಜಾಬ್, ನಕಾಬ್, ಬುರ್ಖಾ, ಶಾಲು, ಟೋಪಿ ಇತ್ಯಾದಿಗಳನ್ನು ಧರಿಸುವುದನ್ನು ನಿಷೇಧಿಸಿದ್ದ ಮುಂಬೈ ಕಾಲೇಜಿನ ನಿರ್ಧಾರ ಪ್ರಶ್ನಿಸಿ ಒಂಬತ್ತು ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಬುಧವಾರ (ಜೂನ್ 26) ವಜಾಗೊಳಿಸಿದೆ.

ನ್ಯಾಯಮೂರ್ತಿ ಎ.ಎಸ್.ಚಂದೂರ್ಕರ್ ಮತ್ತು ನ್ಯಾಯಮೂರ್ತಿ ರಾಜೇಶ್ ಪಾಟೀಲ್ ಅವರ ವಿಭಾಗೀಯ ಪೀಠ,’ಕಾಲೇಜಿನ ಡ್ರೆಸ್‌ಕೋಡ್‌ ನಿರ್ಧಾರದಲ್ಲಿ ನಾವು ಮಧ್ಯ ಪ್ರವೇಶಿಸುವುದಿಲ್ಲ’ ಎಂದಿದೆ.

ಮುಂಬೈನ ಚೆಂಬೂರ್ ಟ್ರಾಂಬೆ ಎಜುಕೇಶನ್ ಸೊಸೈಟಿಯ ಎನ್‌ಜಿ ಆಚಾರ್ಯ ಮತ್ತು ಡಿಕೆ ಮರಾಠೆ ಕಾಲೇಜಿನ ಎರಡು ಮತ್ತು ಮೂರನೇ ವರ್ಷದ ವಿಜ್ಞಾನ ಪದವಿ ಕೋರ್ಸ್‌ನ ವಿದ್ಯಾರ್ಥಿನಿಯರು ಕಾಲೇಜಿನ ಡ್ರೆಸ್‌ಕೋಡ್‌ ನಿಯಮಗಳಲ್ಲಿ ಹಿಜಾಬ್ ಧಾರಣೆ ನಿಷೇಧಿಸಿರುವುದನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಿದ್ದರು.

ಡ್ರೆಸ್ ಕೋಡ್ ನಮ್ಮ ಮೂಲಭೂತ ಹಕ್ಕುಗಳನ್ನು, ನಿರ್ದಿಷ್ಟವಾಗಿ ಧರ್ಮ, ಗೌಪ್ಯತೆ ಮತ್ತು ವೈಯಕ್ತಿಕ ಆಯ್ಕೆಯನ್ನು ಅಭ್ಯಾಸ ಮಾಡುವ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿದಾರರು ವಾದಿಸಿದ್ದರು.

ಕಳೆದ ವಾರ ವಿಚಾರಣೆಯ ಸಂದರ್ಭದಲ್ಲಿ ಕಾಲೇಜನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಅನಿಲ್ ಅಂತೂರಕರ್ ” ಶಿಕ್ಷಣ ಸಂಸ್ಥೆಯಲ್ಲಿ ಧಾರ್ಮಿಕ ಚಿಹ್ನೆಗಳ ಪ್ರದರ್ಶನ ತಪ್ಪಿಸುವ ಸಲುವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಿಖ್ಖರ ಪೇಟದಂತಹ ಧರ್ಮದ ಮೂಲಭೂತ ಹಕ್ಕಿನ ಭಾಗವೆಂದು ಪರಿಗಣಿಸಲಾದ ವಸ್ತುಗಳಿಗೆ ಅವಕಾಶ ನೀಡಲಾಗಿದೆ” ಎಂದಿದ್ದರು.

“ಕಾಲೇಜಿನ ನಿರ್ಧಾರ ಎಲ್ಲಾ ಧರ್ಮದ ವಿದ್ಯಾರ್ಥಿಗಳಿಗೂ ಅನ್ವಯಿಸುತ್ತದೆ. ಮುಸ್ಲಿಮರನ್ನು ಗುರಿಯಾಗಿಸಿ ನಿಯಮ ರೂಪಿಸಿಲ್ಲ. ಧರ್ಮದ ಮೂಲಭೂತ ಹಕ್ಕುಗಳ ಅಡಿಯಲ್ಲಿ ಬರುವ ಧಾರ್ಮಿಕ ಚಿಹ್ನೆಗಳನ್ನು ಹೊರತು ಇತರ ವಸ್ತುಗಳ ಬಹಿರಂಗ ಪ್ರದರ್ಶನವನ್ನು ತಡೆಯುವುದು ಕಾಲೇಜಿನ ಉದ್ದೇಶವಾಗಿದೆ” ಎಂದು ಹೇಳಿದ್ದರು.

ಅರ್ಜಿದಾರರಾದ ವಿದ್ಯಾರ್ಥಿನಿಯರನ್ನು ಪ್ರತಿನಿಧಿಸಿದ್ದ ವಕೀಲ ಅಲ್ತಾಫ್ ಖಾನ್, “ಜೂನಿಯರ್ ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ಮಾಡಿರುವ ಕರ್ನಾಟಕ ಹೈಕೋರ್ಟ್‌ನ ತೀರ್ಪು ಮತ್ತು ಈ ಪ್ರಕರಣ ವ್ಯತ್ಯಸ್ಥವಾಗಿದೆ. ಈ ಪ್ರಕರಣ ಸಮವಸ್ತ್ರ ಅಲ್ಲದ ಡ್ರೆಸ್‌ ಕೋಡ್‌ ಹೊಂದಿರುವ ಹಿರಿಯ ಕಾಲೇಜು ವಿದ್ಯಾರ್ಥಿಗಳಿಗೆ ಸಂಬಂಧಿಸಿದೆ. ಯಾವುದೇ ಕಾನೂನು ಅಧಿಕಾರವಿಲ್ಲದೆ ವಾಟ್ಸಾಪ್ ಸಂದೇಶದ ಮೂಲಕ ಡ್ರೆಸ್‌ ಕೋಡ್ ಹೇರಲಾಗಿದೆ. ಇದು ಅರ್ಜಿದಾರರ ಆಯ್ಕೆಯ ಹಕ್ಕು, ದೈಹಿಕ ಸಮಗ್ರತೆ ಮತ್ತು ಸ್ವಾಯತ್ತತೆಯನ್ನು ಉಲ್ಲಂಘಿಸುತ್ತದೆ” ಎಂದಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಕಾಲೇಜು ಪರ ವಕೀಲ ಅನಿಲ್ ಅಂತೂರಕರ್ “ಡ್ರೆಸ್ ಕೋಡ್ ಮುಸ್ಲಿಮರಿಗೆ ಮಾತ್ರವಲ್ಲದೆ ಎಲ್ಲಾ ವಿದ್ಯಾರ್ಥಿಗಳಿಗೆ ಅನ್ವಯಿಸುತ್ತದೆ ಎಂದು ಸಮರ್ಥಿಸಿಕೊಂಡಿದ್ದರು. ಹಿಜಾಬ್ ಧರಿಸುವುದು ಇಸ್ಲಾಂನಲ್ಲಿ ಅತ್ಯಗತ್ಯ ಧಾರ್ಮಿಕ ಆಚರಣೆಯಾಗಿದೆ ಎಂದು ಸಾಬೀತುಪಡಿಸಲು ಅರ್ಜಿದಾರರಿಗೆ ಸವಾಲು ಹಾಕಿದ್ದರು. ವಿದ್ಯಾರ್ಥಿಗಳು ಅಧ್ಯಯನದತ್ತ ಗಮನಹರಿಸಬೇಕು. ಧಾರ್ಮಿಕ ಸಂಕೇತಗಳನ್ನು ಪ್ರದರ್ಶಿಸಬಾರದು” ಎಂದು ಅವರು ವಾದಿಸಿದ್ದರು.

“ಅರ್ಜಿದಾರರು ಕಾಲೇಜಿಗೆ ಪ್ರವೇಶ ಪಡೆಯುವಾಗಲೇ ಡ್ರೆಸ್ ಕೋಡ್ ಬಗ್ಗೆ ತಿಳಿದಿದ್ದರು ಎಂದು ಅಂತೂರಕರ್ ಒತ್ತಿ ಹೇಳಿದ್ದರು. ಭವಿಷ್ಯದಲ್ಲಿ ಯಾರಾದರೂ ಇತರ ಧಾರ್ಮಿಕ ಚಿಹ್ನೆಗಳಾದ ಗದಾ (ಮಚ್ಚು) ಅಥವಾ ಭಗವಾ (ಕೇಸರಿ) ಬಟ್ಟೆಗಳನ್ನು ಧರಿಸಿದರೆ, ಅದನ್ನೂ ಕೂಡ ಕಾಲೇಜು ಆಕ್ಷೇಪಿಸುತ್ತದೆ” ಎಂದು ತಿಳಿಸಿದ್ದರು.

ಇದನ್ನೂ ಓದಿ : “ಪ್ರತಿ ಪಕ್ಷಗಳ ಧ್ವನಿಯನ್ನು ಹತ್ತಿಕ್ಕುವುದಿಲ್ಲ ಎಂಬ ನಿರೀಕ್ಷೆಯಿದೆ”: ನೂತನ ಸ್ಪೀಕರ್‌ಗೆ ರಾಹುಲ್ ಗಾಂಧಿ, ಅಖಿಲೇಶ್ ಯಾದವ್ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...