Homeಮುಖಪುಟಅಪ್ರಾಪ್ತ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಮದುವೆಗೆ ಅವಕಾಶ ನೀಡಿದ ಬಾಂಬೆ ಹೈಕೋರ್ಟ್‌

ಅಪ್ರಾಪ್ತ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಮದುವೆಗೆ ಅವಕಾಶ ನೀಡಿದ ಬಾಂಬೆ ಹೈಕೋರ್ಟ್‌

- Advertisement -
- Advertisement -

ಮುಂಬೈ: ಅಪ್ರಾಪ್ತ ಮುಸ್ಲಿಂ ಯುವಕನನ್ನು ಮದುವೆಯಾಗಲು ನಿರ್ಧರಿಸಿದ ಹಿಂದೂ ಯುವತಿಗೆ ತನ್ನದೇ ಆದ ನಿರ್ಧಾರ ತೆಗೆದುಕೊಳ್ಳಲು ಅವಕಾಶ ನೀಡಲಾಗುವುದು ಎಂದು ಬಾಂಬೆ ಹೈಕೋರ್ಟ್ ಹೇಳಿದೆ.

ಪ್ರಸ್ತುತ ಮುಂಬೈನ  ಹಾಸ್ಟೆಲ್ ವೊಂದರಲ್ಲಿ ಇರುವ ಯುವತಿಯನ್ನು ಯಾರೊಬ್ಬರೂ ವಶಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ನ್ಯಾಯಾಲಯ ಪ್ರತಿಪಾದಿಸಿದೆ.

ನಾವು ಯುವತಿಯ ಅದೃಷ್ಟವನ್ನು ಮಾತ್ರ ಬಯಸುತ್ತೇವೆ. ನಾವು ಆಕೆಗೆ ಎಲ್ಲಾ ಸ್ವಾತಂತ್ರ್ಯವನ್ನು ನೀಡುತ್ತೇವೆ. ಯುವತಿಯು ಏನು ಮಾಡಬೇಕೆಂದು ಬಯಸುತ್ತಿದ್ದರೋ ಅದನ್ನು ಮಾಡಲಿ ಎಂದು ಎಂದು ನ್ಯಾಯಮೂರ್ತಿಗಳಾದ ಭಾರತಿ ಡಾಂಗ್ರೆ ಮತ್ತು ಮಂಜುಷಾ ದೇಶಪಾಂಡೆ ಅವರ ಪೀಠ ಹೇಳಿದೆ.

20 ವರ್ಷದ ಯುವತಿ ಪ್ರಸ್ತುತ ಚೆಂಬೂರಿನ ಸರ್ಕಾರಿ ಮಹಿಳಾ ಕೇಂದ್ರದಲ್ಲಿ (ಹಾಸ್ಟೆಲ್) ನೆಲೆಸಿದ್ದಾಳೆ. ಆಕೆ ತನ್ನ ಮನೆ ತೊರೆದು 19 ವರ್ಷದ ಮುಸ್ಲಿಂ ವ್ಯಕ್ತಿಯೊಂದಿಗೆ ಜೀವನ ನಡೆಸಲು ಪ್ರಾರಂಭಿಸಿದ ನಂತರ ಆಕೆಯ ತಂದೆ ದಾಖಲಿಸಿದ ದೂರಿನ ಮೇರೆಗೆ ನ್ಯಾಯಾಲಯ ಅವಳನ್ನು ಹಾಸ್ಟೆಲ್ ಗೆ ಕಳುಹಿಸಿತ್ತು.

ದೂರಿನ ನಂತರ, ಹುಡುಗಿಯನ್ನು ಠಾಣೆಗೆ ಕರೆಸಲಾಯಿತು. ಅಲ್ಲಿ ಬಜರಂಗದಳದ ಸದಸ್ಯರು ಮತ್ತು ಅವರ ಕುಟುಂಬ ಸದಸ್ಯರು ಹಾಜರಿದ್ದರು. ಪೊಲೀಸ್ ಅಧಿಕಾರಿಗಳು ಅವಳನ್ನು ಬೆದರಿಸಿ ಮತ್ತು ಸಂಬಂಧವನ್ನು ತ್ಯಜಿಸುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಮುಸ್ಲಿಂ ವ್ಯಕ್ತಿಯ ಅರ್ಜಿಯಲ್ಲಿ ಹೇಳಲಾಗಿದೆ.

ಈ ಒತ್ತಡದ ಹೊರತಾಗಿಯೂ, ಹುಡುಗಿ ಅರ್ಜಿದಾರರನ್ನು ಮದುವೆಯಾಗುವ ಬಯಕೆಯನ್ನು ವ್ಯಕ್ತಪಡಿಸಿದಳು ಮತ್ತು ತನ್ನ ಹೆತ್ತವರ ಬಳಿಗೆ ಮರಳಲು ನಿರಾಕರಿಸಿದಳು. ಪರಿಣಾಮವಾಗಿ ಆಕೆಯನ್ನು ಆಶ್ರಯಧಾಮಕ್ಕೆ ಕಳುಹಿಸಲಾಯಿತು.

ನಂತರ ಆ ವ್ಯಕ್ತಿ ಆಕೆಯನ್ನು ಆಶ್ರಯಮನೆಯಿಂದ ಬಿಡುಗಡೆ ಮಾಡುವಂತೆ ಕೋರಿ ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಮತ್ತೊಂದೆಡೆ, ಯುವತಿಯ ತಂದೆ, ವಕೀಲ ಸನಾ ರಯೀಸ್ ಖಾನ್ ಮೂಲಕ ಮಗಳನ್ನು ತನ್ನ ಸುಪರ್ದಿಗೆ ನೀಡುವಂತೆ ಕೋರಿದ್ದರು.

ಯುವತಿಯೊಂದಿಗೆ ಮಾತನಾಡಲು ವಕೀಲ ಖಾನ್‌ಗೆ ನ್ಯಾಯಾಲಯ ಅನುಮತಿ ನೀಡಿತು. ಅವರು ಗುರುವಾರ ಮಹಿಳೆಯನ್ನು ಒಂದು ಗಂಟೆ ಭೇಟಿಯಾಗಿ, ಯುವತಿಯು ಸ್ವಲ್ಪ “ವಿಚಿತ್ರವಾಗಿ” ತೋರುತ್ತಿದ್ದರು ಎಂದು ಶುಕ್ರವಾರ ಪೀಠದ ಮುಂದೆ ಖಾನ್ ಹೇಳಿದರು.

ಒಂದು ಹಂತದಲ್ಲಿ, ಅವಳು ತನ್ನ ಹೆತ್ತವರೊಂದಿಗೆ ಇರಲು ಸಿದ್ಧಳಾಗಿದ್ದಾಳೆಂದು ಹೇಳಿದಳು. ನಂತರ ಅವಳು ಅರ್ಜಿದಾರರೊಂದಿಗೆ ಹೋಗಿ ವಾಸಿಸಲು ಬಯಸುವುದಾಗಿ ಹೇಳಿದಳು. ಅವಳ ಕೈಗಳು ನಡುಗುತ್ತಿದ್ದವು ಮತ್ತು ಅವಳು ಸ್ಥಿರವಾಗಿ ಕಾಣಲಿಲ್ಲ. ಅವಳ ಆಯ್ಕೆಯು ಬಾಹ್ಯ ಒತ್ತಡ ಮತ್ತು ಅನಗತ್ಯ ಪ್ರಭಾವದಿಂದ ಮುಕ್ತವಾಗಿಲ್ಲವೆಂದು ತೋರುತ್ತದೆ.  ಇಂತಹ ಸ್ಥಿತಿಯಲ್ಲಿ, ಅವಳು ತಿಳುವಳಿಕೆಯುಳ್ಳ ನಿರ್ಧಾರವನ್ನು ತೆಗೆದುಕೊಳ್ಳುತ್ತಿರುವಂತೆ ತೋರುತ್ತಿಲ್ಲ ಎಂದು ಖಾನ್ ಪೀಠದ ಮುಂದೆ ಹೇಳಿದರು.

ಅರ್ಜಿದಾರ ಮುಸ್ಲಿಂ ವ್ಯಕ್ತಿಯು 2025ರ ಅಕ್ಟೋಬರ್‌ನಲ್ಲಿ ಮದುವೆಯ ವಯಸ್ಸಿಗೆ ತಲುಪುತ್ತಾನೆ. ಅಲ್ಲಿಯವರೆಗೆ ಅಂದರೆ ಸುಮಾರು  ಎರಡು ವರ್ಷಗಳ ಕಾಲ ಯುವತಿ ಮತ್ತು ಅರ್ಜಿದಾರನು ಕಾಯುವಂತೆ ಖಾನ್ ಸಲಹೆ ನೀಡಿದರು.

ಯುವತಿಯ ತಂದೆಯು ತನ್ನ ಮಗಳಿಗಾಗಿಯ ಬ್ಯೂಟಿ ಸಲೂನ್ ವ್ಯವಹಾರವನ್ನು ಸ್ಥಾಪಿಸಲು ಸಿದ್ಧರಿದ್ದಾರೆ ಮತ್ತು ಈ ಎರಡು ವರ್ಷಗಳವರೆಗೆ ಅರ್ಜಿದಾರರೊಂದಿಗೆ ಯುವತಿಯು ಫೋನ್‌ನಲ್ಲಿ ಮಾತನಾಡಲು ಅನುಮತಿ ನೀಡುತ್ತಾರೆ. ನಂತರ ಯುವತಿಯು ತನ್ನ ಜೀವನದ ಬಗ್ಗೆ ನಿರ್ಧಾರ ತೆಗೆದುಕೊಳ್ಳಬಹುದು ಎಂದು ವಕೀಲರು ಹೇಳಿದರು.

ಇದೀಗ ಅರ್ಜಿದಾರರ ಜೊತೆ ಹೋಗುವ ತನ್ನ ನಿರ್ಧಾರದ ಬಗ್ಗೆ ಯುವತಿ ಅಚಲವಾಗಿದ್ದರೆ, ತಂದೆ ಜೊತೆ ಹೋಗಲು ಯುವತಿ ನಿರಾಕರಿಸುತ್ತಿದ್ದಾರೆ ಎಂದು ಖಾನ್ ಹೇಳಿದರು.

ನಿಸ್ಸಂಶಯವಾಗಿ ಯುವತಿ ವಯಸ್ಕಳಾಗಿರುವುದರಿಂದ, ಯಾರು ಆಕೆಯನ್ನು ವಶಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ.ನಾವು ಅವಳ ಸ್ವತಂತ್ರದ ಆಯ್ಕೆಯನ್ನು ಮಾತ್ರ ಬಯಸುತ್ತೇವೆ.  ಯುವತಿಯು ಏನು ಮಾಡಬೇಕೆಂದು ಬಯಸುತ್ತರೋ ಅದನ್ನು ಮಾಡಲಿ ಎಂದು ಪೀಠ ಹೇಳಿದೆ.

ಅರ್ಜಿದಾರನ ವಿವರವನ್ನು ತಾರ್ಕಿಕತೆಯೊಂದಿಗೆ  ನೋಡಿದ ಪೀಠವು ತರುವಾಯ ಅದನ್ನು ಅಂಗೀಕರಿಸಿತು.

ಇದನ್ನೂ ಓದಿ….ದೇಶ ವಿಭಜನೆಗೆ ಕಾರಣ ವಿ.ಡಿ. ಸಾವರ್ಕರ್ ಹೊರತು ಜಿನ್ನಾ ಅಲ್ಲ – ಡಿಎಂಕೆ ಸಂಸದ ಎ. ರಾಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...