Homeಮುಖಪುಟಅಪ್ರಾಪ್ತ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಮದುವೆಗೆ ಅವಕಾಶ ನೀಡಿದ ಬಾಂಬೆ ಹೈಕೋರ್ಟ್‌

ಅಪ್ರಾಪ್ತ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಮದುವೆಗೆ ಅವಕಾಶ ನೀಡಿದ ಬಾಂಬೆ ಹೈಕೋರ್ಟ್‌

- Advertisement -
- Advertisement -

ಮುಂಬೈ: ಅಪ್ರಾಪ್ತ ಮುಸ್ಲಿಂ ಯುವಕನನ್ನು ಮದುವೆಯಾಗಲು ನಿರ್ಧರಿಸಿದ ಹಿಂದೂ ಯುವತಿಗೆ ತನ್ನದೇ ಆದ ನಿರ್ಧಾರ ತೆಗೆದುಕೊಳ್ಳಲು ಅವಕಾಶ ನೀಡಲಾಗುವುದು ಎಂದು ಬಾಂಬೆ ಹೈಕೋರ್ಟ್ ಹೇಳಿದೆ.

ಪ್ರಸ್ತುತ ಮುಂಬೈನ  ಹಾಸ್ಟೆಲ್ ವೊಂದರಲ್ಲಿ ಇರುವ ಯುವತಿಯನ್ನು ಯಾರೊಬ್ಬರೂ ವಶಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ನ್ಯಾಯಾಲಯ ಪ್ರತಿಪಾದಿಸಿದೆ.

ನಾವು ಯುವತಿಯ ಅದೃಷ್ಟವನ್ನು ಮಾತ್ರ ಬಯಸುತ್ತೇವೆ. ನಾವು ಆಕೆಗೆ ಎಲ್ಲಾ ಸ್ವಾತಂತ್ರ್ಯವನ್ನು ನೀಡುತ್ತೇವೆ. ಯುವತಿಯು ಏನು ಮಾಡಬೇಕೆಂದು ಬಯಸುತ್ತಿದ್ದರೋ ಅದನ್ನು ಮಾಡಲಿ ಎಂದು ಎಂದು ನ್ಯಾಯಮೂರ್ತಿಗಳಾದ ಭಾರತಿ ಡಾಂಗ್ರೆ ಮತ್ತು ಮಂಜುಷಾ ದೇಶಪಾಂಡೆ ಅವರ ಪೀಠ ಹೇಳಿದೆ.

20 ವರ್ಷದ ಯುವತಿ ಪ್ರಸ್ತುತ ಚೆಂಬೂರಿನ ಸರ್ಕಾರಿ ಮಹಿಳಾ ಕೇಂದ್ರದಲ್ಲಿ (ಹಾಸ್ಟೆಲ್) ನೆಲೆಸಿದ್ದಾಳೆ. ಆಕೆ ತನ್ನ ಮನೆ ತೊರೆದು 19 ವರ್ಷದ ಮುಸ್ಲಿಂ ವ್ಯಕ್ತಿಯೊಂದಿಗೆ ಜೀವನ ನಡೆಸಲು ಪ್ರಾರಂಭಿಸಿದ ನಂತರ ಆಕೆಯ ತಂದೆ ದಾಖಲಿಸಿದ ದೂರಿನ ಮೇರೆಗೆ ನ್ಯಾಯಾಲಯ ಅವಳನ್ನು ಹಾಸ್ಟೆಲ್ ಗೆ ಕಳುಹಿಸಿತ್ತು.

ದೂರಿನ ನಂತರ, ಹುಡುಗಿಯನ್ನು ಠಾಣೆಗೆ ಕರೆಸಲಾಯಿತು. ಅಲ್ಲಿ ಬಜರಂಗದಳದ ಸದಸ್ಯರು ಮತ್ತು ಅವರ ಕುಟುಂಬ ಸದಸ್ಯರು ಹಾಜರಿದ್ದರು. ಪೊಲೀಸ್ ಅಧಿಕಾರಿಗಳು ಅವಳನ್ನು ಬೆದರಿಸಿ ಮತ್ತು ಸಂಬಂಧವನ್ನು ತ್ಯಜಿಸುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಮುಸ್ಲಿಂ ವ್ಯಕ್ತಿಯ ಅರ್ಜಿಯಲ್ಲಿ ಹೇಳಲಾಗಿದೆ.

ಈ ಒತ್ತಡದ ಹೊರತಾಗಿಯೂ, ಹುಡುಗಿ ಅರ್ಜಿದಾರರನ್ನು ಮದುವೆಯಾಗುವ ಬಯಕೆಯನ್ನು ವ್ಯಕ್ತಪಡಿಸಿದಳು ಮತ್ತು ತನ್ನ ಹೆತ್ತವರ ಬಳಿಗೆ ಮರಳಲು ನಿರಾಕರಿಸಿದಳು. ಪರಿಣಾಮವಾಗಿ ಆಕೆಯನ್ನು ಆಶ್ರಯಧಾಮಕ್ಕೆ ಕಳುಹಿಸಲಾಯಿತು.

ನಂತರ ಆ ವ್ಯಕ್ತಿ ಆಕೆಯನ್ನು ಆಶ್ರಯಮನೆಯಿಂದ ಬಿಡುಗಡೆ ಮಾಡುವಂತೆ ಕೋರಿ ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಮತ್ತೊಂದೆಡೆ, ಯುವತಿಯ ತಂದೆ, ವಕೀಲ ಸನಾ ರಯೀಸ್ ಖಾನ್ ಮೂಲಕ ಮಗಳನ್ನು ತನ್ನ ಸುಪರ್ದಿಗೆ ನೀಡುವಂತೆ ಕೋರಿದ್ದರು.

ಯುವತಿಯೊಂದಿಗೆ ಮಾತನಾಡಲು ವಕೀಲ ಖಾನ್‌ಗೆ ನ್ಯಾಯಾಲಯ ಅನುಮತಿ ನೀಡಿತು. ಅವರು ಗುರುವಾರ ಮಹಿಳೆಯನ್ನು ಒಂದು ಗಂಟೆ ಭೇಟಿಯಾಗಿ, ಯುವತಿಯು ಸ್ವಲ್ಪ “ವಿಚಿತ್ರವಾಗಿ” ತೋರುತ್ತಿದ್ದರು ಎಂದು ಶುಕ್ರವಾರ ಪೀಠದ ಮುಂದೆ ಖಾನ್ ಹೇಳಿದರು.

ಒಂದು ಹಂತದಲ್ಲಿ, ಅವಳು ತನ್ನ ಹೆತ್ತವರೊಂದಿಗೆ ಇರಲು ಸಿದ್ಧಳಾಗಿದ್ದಾಳೆಂದು ಹೇಳಿದಳು. ನಂತರ ಅವಳು ಅರ್ಜಿದಾರರೊಂದಿಗೆ ಹೋಗಿ ವಾಸಿಸಲು ಬಯಸುವುದಾಗಿ ಹೇಳಿದಳು. ಅವಳ ಕೈಗಳು ನಡುಗುತ್ತಿದ್ದವು ಮತ್ತು ಅವಳು ಸ್ಥಿರವಾಗಿ ಕಾಣಲಿಲ್ಲ. ಅವಳ ಆಯ್ಕೆಯು ಬಾಹ್ಯ ಒತ್ತಡ ಮತ್ತು ಅನಗತ್ಯ ಪ್ರಭಾವದಿಂದ ಮುಕ್ತವಾಗಿಲ್ಲವೆಂದು ತೋರುತ್ತದೆ.  ಇಂತಹ ಸ್ಥಿತಿಯಲ್ಲಿ, ಅವಳು ತಿಳುವಳಿಕೆಯುಳ್ಳ ನಿರ್ಧಾರವನ್ನು ತೆಗೆದುಕೊಳ್ಳುತ್ತಿರುವಂತೆ ತೋರುತ್ತಿಲ್ಲ ಎಂದು ಖಾನ್ ಪೀಠದ ಮುಂದೆ ಹೇಳಿದರು.

ಅರ್ಜಿದಾರ ಮುಸ್ಲಿಂ ವ್ಯಕ್ತಿಯು 2025ರ ಅಕ್ಟೋಬರ್‌ನಲ್ಲಿ ಮದುವೆಯ ವಯಸ್ಸಿಗೆ ತಲುಪುತ್ತಾನೆ. ಅಲ್ಲಿಯವರೆಗೆ ಅಂದರೆ ಸುಮಾರು  ಎರಡು ವರ್ಷಗಳ ಕಾಲ ಯುವತಿ ಮತ್ತು ಅರ್ಜಿದಾರನು ಕಾಯುವಂತೆ ಖಾನ್ ಸಲಹೆ ನೀಡಿದರು.

ಯುವತಿಯ ತಂದೆಯು ತನ್ನ ಮಗಳಿಗಾಗಿಯ ಬ್ಯೂಟಿ ಸಲೂನ್ ವ್ಯವಹಾರವನ್ನು ಸ್ಥಾಪಿಸಲು ಸಿದ್ಧರಿದ್ದಾರೆ ಮತ್ತು ಈ ಎರಡು ವರ್ಷಗಳವರೆಗೆ ಅರ್ಜಿದಾರರೊಂದಿಗೆ ಯುವತಿಯು ಫೋನ್‌ನಲ್ಲಿ ಮಾತನಾಡಲು ಅನುಮತಿ ನೀಡುತ್ತಾರೆ. ನಂತರ ಯುವತಿಯು ತನ್ನ ಜೀವನದ ಬಗ್ಗೆ ನಿರ್ಧಾರ ತೆಗೆದುಕೊಳ್ಳಬಹುದು ಎಂದು ವಕೀಲರು ಹೇಳಿದರು.

ಇದೀಗ ಅರ್ಜಿದಾರರ ಜೊತೆ ಹೋಗುವ ತನ್ನ ನಿರ್ಧಾರದ ಬಗ್ಗೆ ಯುವತಿ ಅಚಲವಾಗಿದ್ದರೆ, ತಂದೆ ಜೊತೆ ಹೋಗಲು ಯುವತಿ ನಿರಾಕರಿಸುತ್ತಿದ್ದಾರೆ ಎಂದು ಖಾನ್ ಹೇಳಿದರು.

ನಿಸ್ಸಂಶಯವಾಗಿ ಯುವತಿ ವಯಸ್ಕಳಾಗಿರುವುದರಿಂದ, ಯಾರು ಆಕೆಯನ್ನು ವಶಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ.ನಾವು ಅವಳ ಸ್ವತಂತ್ರದ ಆಯ್ಕೆಯನ್ನು ಮಾತ್ರ ಬಯಸುತ್ತೇವೆ.  ಯುವತಿಯು ಏನು ಮಾಡಬೇಕೆಂದು ಬಯಸುತ್ತರೋ ಅದನ್ನು ಮಾಡಲಿ ಎಂದು ಪೀಠ ಹೇಳಿದೆ.

ಅರ್ಜಿದಾರನ ವಿವರವನ್ನು ತಾರ್ಕಿಕತೆಯೊಂದಿಗೆ  ನೋಡಿದ ಪೀಠವು ತರುವಾಯ ಅದನ್ನು ಅಂಗೀಕರಿಸಿತು.

ಇದನ್ನೂ ಓದಿ….ದೇಶ ವಿಭಜನೆಗೆ ಕಾರಣ ವಿ.ಡಿ. ಸಾವರ್ಕರ್ ಹೊರತು ಜಿನ್ನಾ ಅಲ್ಲ – ಡಿಎಂಕೆ ಸಂಸದ ಎ. ರಾಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...