Homeಮುಖಪುಟಅಪ್ರಾಪ್ತ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಮದುವೆಗೆ ಅವಕಾಶ ನೀಡಿದ ಬಾಂಬೆ ಹೈಕೋರ್ಟ್‌

ಅಪ್ರಾಪ್ತ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಮದುವೆಗೆ ಅವಕಾಶ ನೀಡಿದ ಬಾಂಬೆ ಹೈಕೋರ್ಟ್‌

- Advertisement -
- Advertisement -

ಮುಂಬೈ: ಅಪ್ರಾಪ್ತ ಮುಸ್ಲಿಂ ಯುವಕನನ್ನು ಮದುವೆಯಾಗಲು ನಿರ್ಧರಿಸಿದ ಹಿಂದೂ ಯುವತಿಗೆ ತನ್ನದೇ ಆದ ನಿರ್ಧಾರ ತೆಗೆದುಕೊಳ್ಳಲು ಅವಕಾಶ ನೀಡಲಾಗುವುದು ಎಂದು ಬಾಂಬೆ ಹೈಕೋರ್ಟ್ ಹೇಳಿದೆ.

ಪ್ರಸ್ತುತ ಮುಂಬೈನ  ಹಾಸ್ಟೆಲ್ ವೊಂದರಲ್ಲಿ ಇರುವ ಯುವತಿಯನ್ನು ಯಾರೊಬ್ಬರೂ ವಶಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ನ್ಯಾಯಾಲಯ ಪ್ರತಿಪಾದಿಸಿದೆ.

ನಾವು ಯುವತಿಯ ಅದೃಷ್ಟವನ್ನು ಮಾತ್ರ ಬಯಸುತ್ತೇವೆ. ನಾವು ಆಕೆಗೆ ಎಲ್ಲಾ ಸ್ವಾತಂತ್ರ್ಯವನ್ನು ನೀಡುತ್ತೇವೆ. ಯುವತಿಯು ಏನು ಮಾಡಬೇಕೆಂದು ಬಯಸುತ್ತಿದ್ದರೋ ಅದನ್ನು ಮಾಡಲಿ ಎಂದು ಎಂದು ನ್ಯಾಯಮೂರ್ತಿಗಳಾದ ಭಾರತಿ ಡಾಂಗ್ರೆ ಮತ್ತು ಮಂಜುಷಾ ದೇಶಪಾಂಡೆ ಅವರ ಪೀಠ ಹೇಳಿದೆ.

20 ವರ್ಷದ ಯುವತಿ ಪ್ರಸ್ತುತ ಚೆಂಬೂರಿನ ಸರ್ಕಾರಿ ಮಹಿಳಾ ಕೇಂದ್ರದಲ್ಲಿ (ಹಾಸ್ಟೆಲ್) ನೆಲೆಸಿದ್ದಾಳೆ. ಆಕೆ ತನ್ನ ಮನೆ ತೊರೆದು 19 ವರ್ಷದ ಮುಸ್ಲಿಂ ವ್ಯಕ್ತಿಯೊಂದಿಗೆ ಜೀವನ ನಡೆಸಲು ಪ್ರಾರಂಭಿಸಿದ ನಂತರ ಆಕೆಯ ತಂದೆ ದಾಖಲಿಸಿದ ದೂರಿನ ಮೇರೆಗೆ ನ್ಯಾಯಾಲಯ ಅವಳನ್ನು ಹಾಸ್ಟೆಲ್ ಗೆ ಕಳುಹಿಸಿತ್ತು.

ದೂರಿನ ನಂತರ, ಹುಡುಗಿಯನ್ನು ಠಾಣೆಗೆ ಕರೆಸಲಾಯಿತು. ಅಲ್ಲಿ ಬಜರಂಗದಳದ ಸದಸ್ಯರು ಮತ್ತು ಅವರ ಕುಟುಂಬ ಸದಸ್ಯರು ಹಾಜರಿದ್ದರು. ಪೊಲೀಸ್ ಅಧಿಕಾರಿಗಳು ಅವಳನ್ನು ಬೆದರಿಸಿ ಮತ್ತು ಸಂಬಂಧವನ್ನು ತ್ಯಜಿಸುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಮುಸ್ಲಿಂ ವ್ಯಕ್ತಿಯ ಅರ್ಜಿಯಲ್ಲಿ ಹೇಳಲಾಗಿದೆ.

ಈ ಒತ್ತಡದ ಹೊರತಾಗಿಯೂ, ಹುಡುಗಿ ಅರ್ಜಿದಾರರನ್ನು ಮದುವೆಯಾಗುವ ಬಯಕೆಯನ್ನು ವ್ಯಕ್ತಪಡಿಸಿದಳು ಮತ್ತು ತನ್ನ ಹೆತ್ತವರ ಬಳಿಗೆ ಮರಳಲು ನಿರಾಕರಿಸಿದಳು. ಪರಿಣಾಮವಾಗಿ ಆಕೆಯನ್ನು ಆಶ್ರಯಧಾಮಕ್ಕೆ ಕಳುಹಿಸಲಾಯಿತು.

ನಂತರ ಆ ವ್ಯಕ್ತಿ ಆಕೆಯನ್ನು ಆಶ್ರಯಮನೆಯಿಂದ ಬಿಡುಗಡೆ ಮಾಡುವಂತೆ ಕೋರಿ ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಮತ್ತೊಂದೆಡೆ, ಯುವತಿಯ ತಂದೆ, ವಕೀಲ ಸನಾ ರಯೀಸ್ ಖಾನ್ ಮೂಲಕ ಮಗಳನ್ನು ತನ್ನ ಸುಪರ್ದಿಗೆ ನೀಡುವಂತೆ ಕೋರಿದ್ದರು.

ಯುವತಿಯೊಂದಿಗೆ ಮಾತನಾಡಲು ವಕೀಲ ಖಾನ್‌ಗೆ ನ್ಯಾಯಾಲಯ ಅನುಮತಿ ನೀಡಿತು. ಅವರು ಗುರುವಾರ ಮಹಿಳೆಯನ್ನು ಒಂದು ಗಂಟೆ ಭೇಟಿಯಾಗಿ, ಯುವತಿಯು ಸ್ವಲ್ಪ “ವಿಚಿತ್ರವಾಗಿ” ತೋರುತ್ತಿದ್ದರು ಎಂದು ಶುಕ್ರವಾರ ಪೀಠದ ಮುಂದೆ ಖಾನ್ ಹೇಳಿದರು.

ಒಂದು ಹಂತದಲ್ಲಿ, ಅವಳು ತನ್ನ ಹೆತ್ತವರೊಂದಿಗೆ ಇರಲು ಸಿದ್ಧಳಾಗಿದ್ದಾಳೆಂದು ಹೇಳಿದಳು. ನಂತರ ಅವಳು ಅರ್ಜಿದಾರರೊಂದಿಗೆ ಹೋಗಿ ವಾಸಿಸಲು ಬಯಸುವುದಾಗಿ ಹೇಳಿದಳು. ಅವಳ ಕೈಗಳು ನಡುಗುತ್ತಿದ್ದವು ಮತ್ತು ಅವಳು ಸ್ಥಿರವಾಗಿ ಕಾಣಲಿಲ್ಲ. ಅವಳ ಆಯ್ಕೆಯು ಬಾಹ್ಯ ಒತ್ತಡ ಮತ್ತು ಅನಗತ್ಯ ಪ್ರಭಾವದಿಂದ ಮುಕ್ತವಾಗಿಲ್ಲವೆಂದು ತೋರುತ್ತದೆ.  ಇಂತಹ ಸ್ಥಿತಿಯಲ್ಲಿ, ಅವಳು ತಿಳುವಳಿಕೆಯುಳ್ಳ ನಿರ್ಧಾರವನ್ನು ತೆಗೆದುಕೊಳ್ಳುತ್ತಿರುವಂತೆ ತೋರುತ್ತಿಲ್ಲ ಎಂದು ಖಾನ್ ಪೀಠದ ಮುಂದೆ ಹೇಳಿದರು.

ಅರ್ಜಿದಾರ ಮುಸ್ಲಿಂ ವ್ಯಕ್ತಿಯು 2025ರ ಅಕ್ಟೋಬರ್‌ನಲ್ಲಿ ಮದುವೆಯ ವಯಸ್ಸಿಗೆ ತಲುಪುತ್ತಾನೆ. ಅಲ್ಲಿಯವರೆಗೆ ಅಂದರೆ ಸುಮಾರು  ಎರಡು ವರ್ಷಗಳ ಕಾಲ ಯುವತಿ ಮತ್ತು ಅರ್ಜಿದಾರನು ಕಾಯುವಂತೆ ಖಾನ್ ಸಲಹೆ ನೀಡಿದರು.

ಯುವತಿಯ ತಂದೆಯು ತನ್ನ ಮಗಳಿಗಾಗಿಯ ಬ್ಯೂಟಿ ಸಲೂನ್ ವ್ಯವಹಾರವನ್ನು ಸ್ಥಾಪಿಸಲು ಸಿದ್ಧರಿದ್ದಾರೆ ಮತ್ತು ಈ ಎರಡು ವರ್ಷಗಳವರೆಗೆ ಅರ್ಜಿದಾರರೊಂದಿಗೆ ಯುವತಿಯು ಫೋನ್‌ನಲ್ಲಿ ಮಾತನಾಡಲು ಅನುಮತಿ ನೀಡುತ್ತಾರೆ. ನಂತರ ಯುವತಿಯು ತನ್ನ ಜೀವನದ ಬಗ್ಗೆ ನಿರ್ಧಾರ ತೆಗೆದುಕೊಳ್ಳಬಹುದು ಎಂದು ವಕೀಲರು ಹೇಳಿದರು.

ಇದೀಗ ಅರ್ಜಿದಾರರ ಜೊತೆ ಹೋಗುವ ತನ್ನ ನಿರ್ಧಾರದ ಬಗ್ಗೆ ಯುವತಿ ಅಚಲವಾಗಿದ್ದರೆ, ತಂದೆ ಜೊತೆ ಹೋಗಲು ಯುವತಿ ನಿರಾಕರಿಸುತ್ತಿದ್ದಾರೆ ಎಂದು ಖಾನ್ ಹೇಳಿದರು.

ನಿಸ್ಸಂಶಯವಾಗಿ ಯುವತಿ ವಯಸ್ಕಳಾಗಿರುವುದರಿಂದ, ಯಾರು ಆಕೆಯನ್ನು ವಶಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ.ನಾವು ಅವಳ ಸ್ವತಂತ್ರದ ಆಯ್ಕೆಯನ್ನು ಮಾತ್ರ ಬಯಸುತ್ತೇವೆ.  ಯುವತಿಯು ಏನು ಮಾಡಬೇಕೆಂದು ಬಯಸುತ್ತರೋ ಅದನ್ನು ಮಾಡಲಿ ಎಂದು ಪೀಠ ಹೇಳಿದೆ.

ಅರ್ಜಿದಾರನ ವಿವರವನ್ನು ತಾರ್ಕಿಕತೆಯೊಂದಿಗೆ  ನೋಡಿದ ಪೀಠವು ತರುವಾಯ ಅದನ್ನು ಅಂಗೀಕರಿಸಿತು.

ಇದನ್ನೂ ಓದಿ….ದೇಶ ವಿಭಜನೆಗೆ ಕಾರಣ ವಿ.ಡಿ. ಸಾವರ್ಕರ್ ಹೊರತು ಜಿನ್ನಾ ಅಲ್ಲ – ಡಿಎಂಕೆ ಸಂಸದ ಎ. ರಾಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...