Homeಮುಖಪುಟಅಪ್ರಾಪ್ತ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಮದುವೆಗೆ ಅವಕಾಶ ನೀಡಿದ ಬಾಂಬೆ ಹೈಕೋರ್ಟ್‌

ಅಪ್ರಾಪ್ತ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಮದುವೆಗೆ ಅವಕಾಶ ನೀಡಿದ ಬಾಂಬೆ ಹೈಕೋರ್ಟ್‌

- Advertisement -
- Advertisement -

ಮುಂಬೈ: ಅಪ್ರಾಪ್ತ ಮುಸ್ಲಿಂ ಯುವಕನನ್ನು ಮದುವೆಯಾಗಲು ನಿರ್ಧರಿಸಿದ ಹಿಂದೂ ಯುವತಿಗೆ ತನ್ನದೇ ಆದ ನಿರ್ಧಾರ ತೆಗೆದುಕೊಳ್ಳಲು ಅವಕಾಶ ನೀಡಲಾಗುವುದು ಎಂದು ಬಾಂಬೆ ಹೈಕೋರ್ಟ್ ಹೇಳಿದೆ.

ಪ್ರಸ್ತುತ ಮುಂಬೈನ  ಹಾಸ್ಟೆಲ್ ವೊಂದರಲ್ಲಿ ಇರುವ ಯುವತಿಯನ್ನು ಯಾರೊಬ್ಬರೂ ವಶಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ನ್ಯಾಯಾಲಯ ಪ್ರತಿಪಾದಿಸಿದೆ.

ನಾವು ಯುವತಿಯ ಅದೃಷ್ಟವನ್ನು ಮಾತ್ರ ಬಯಸುತ್ತೇವೆ. ನಾವು ಆಕೆಗೆ ಎಲ್ಲಾ ಸ್ವಾತಂತ್ರ್ಯವನ್ನು ನೀಡುತ್ತೇವೆ. ಯುವತಿಯು ಏನು ಮಾಡಬೇಕೆಂದು ಬಯಸುತ್ತಿದ್ದರೋ ಅದನ್ನು ಮಾಡಲಿ ಎಂದು ಎಂದು ನ್ಯಾಯಮೂರ್ತಿಗಳಾದ ಭಾರತಿ ಡಾಂಗ್ರೆ ಮತ್ತು ಮಂಜುಷಾ ದೇಶಪಾಂಡೆ ಅವರ ಪೀಠ ಹೇಳಿದೆ.

20 ವರ್ಷದ ಯುವತಿ ಪ್ರಸ್ತುತ ಚೆಂಬೂರಿನ ಸರ್ಕಾರಿ ಮಹಿಳಾ ಕೇಂದ್ರದಲ್ಲಿ (ಹಾಸ್ಟೆಲ್) ನೆಲೆಸಿದ್ದಾಳೆ. ಆಕೆ ತನ್ನ ಮನೆ ತೊರೆದು 19 ವರ್ಷದ ಮುಸ್ಲಿಂ ವ್ಯಕ್ತಿಯೊಂದಿಗೆ ಜೀವನ ನಡೆಸಲು ಪ್ರಾರಂಭಿಸಿದ ನಂತರ ಆಕೆಯ ತಂದೆ ದಾಖಲಿಸಿದ ದೂರಿನ ಮೇರೆಗೆ ನ್ಯಾಯಾಲಯ ಅವಳನ್ನು ಹಾಸ್ಟೆಲ್ ಗೆ ಕಳುಹಿಸಿತ್ತು.

ದೂರಿನ ನಂತರ, ಹುಡುಗಿಯನ್ನು ಠಾಣೆಗೆ ಕರೆಸಲಾಯಿತು. ಅಲ್ಲಿ ಬಜರಂಗದಳದ ಸದಸ್ಯರು ಮತ್ತು ಅವರ ಕುಟುಂಬ ಸದಸ್ಯರು ಹಾಜರಿದ್ದರು. ಪೊಲೀಸ್ ಅಧಿಕಾರಿಗಳು ಅವಳನ್ನು ಬೆದರಿಸಿ ಮತ್ತು ಸಂಬಂಧವನ್ನು ತ್ಯಜಿಸುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಮುಸ್ಲಿಂ ವ್ಯಕ್ತಿಯ ಅರ್ಜಿಯಲ್ಲಿ ಹೇಳಲಾಗಿದೆ.

ಈ ಒತ್ತಡದ ಹೊರತಾಗಿಯೂ, ಹುಡುಗಿ ಅರ್ಜಿದಾರರನ್ನು ಮದುವೆಯಾಗುವ ಬಯಕೆಯನ್ನು ವ್ಯಕ್ತಪಡಿಸಿದಳು ಮತ್ತು ತನ್ನ ಹೆತ್ತವರ ಬಳಿಗೆ ಮರಳಲು ನಿರಾಕರಿಸಿದಳು. ಪರಿಣಾಮವಾಗಿ ಆಕೆಯನ್ನು ಆಶ್ರಯಧಾಮಕ್ಕೆ ಕಳುಹಿಸಲಾಯಿತು.

ನಂತರ ಆ ವ್ಯಕ್ತಿ ಆಕೆಯನ್ನು ಆಶ್ರಯಮನೆಯಿಂದ ಬಿಡುಗಡೆ ಮಾಡುವಂತೆ ಕೋರಿ ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಮತ್ತೊಂದೆಡೆ, ಯುವತಿಯ ತಂದೆ, ವಕೀಲ ಸನಾ ರಯೀಸ್ ಖಾನ್ ಮೂಲಕ ಮಗಳನ್ನು ತನ್ನ ಸುಪರ್ದಿಗೆ ನೀಡುವಂತೆ ಕೋರಿದ್ದರು.

ಯುವತಿಯೊಂದಿಗೆ ಮಾತನಾಡಲು ವಕೀಲ ಖಾನ್‌ಗೆ ನ್ಯಾಯಾಲಯ ಅನುಮತಿ ನೀಡಿತು. ಅವರು ಗುರುವಾರ ಮಹಿಳೆಯನ್ನು ಒಂದು ಗಂಟೆ ಭೇಟಿಯಾಗಿ, ಯುವತಿಯು ಸ್ವಲ್ಪ “ವಿಚಿತ್ರವಾಗಿ” ತೋರುತ್ತಿದ್ದರು ಎಂದು ಶುಕ್ರವಾರ ಪೀಠದ ಮುಂದೆ ಖಾನ್ ಹೇಳಿದರು.

ಒಂದು ಹಂತದಲ್ಲಿ, ಅವಳು ತನ್ನ ಹೆತ್ತವರೊಂದಿಗೆ ಇರಲು ಸಿದ್ಧಳಾಗಿದ್ದಾಳೆಂದು ಹೇಳಿದಳು. ನಂತರ ಅವಳು ಅರ್ಜಿದಾರರೊಂದಿಗೆ ಹೋಗಿ ವಾಸಿಸಲು ಬಯಸುವುದಾಗಿ ಹೇಳಿದಳು. ಅವಳ ಕೈಗಳು ನಡುಗುತ್ತಿದ್ದವು ಮತ್ತು ಅವಳು ಸ್ಥಿರವಾಗಿ ಕಾಣಲಿಲ್ಲ. ಅವಳ ಆಯ್ಕೆಯು ಬಾಹ್ಯ ಒತ್ತಡ ಮತ್ತು ಅನಗತ್ಯ ಪ್ರಭಾವದಿಂದ ಮುಕ್ತವಾಗಿಲ್ಲವೆಂದು ತೋರುತ್ತದೆ.  ಇಂತಹ ಸ್ಥಿತಿಯಲ್ಲಿ, ಅವಳು ತಿಳುವಳಿಕೆಯುಳ್ಳ ನಿರ್ಧಾರವನ್ನು ತೆಗೆದುಕೊಳ್ಳುತ್ತಿರುವಂತೆ ತೋರುತ್ತಿಲ್ಲ ಎಂದು ಖಾನ್ ಪೀಠದ ಮುಂದೆ ಹೇಳಿದರು.

ಅರ್ಜಿದಾರ ಮುಸ್ಲಿಂ ವ್ಯಕ್ತಿಯು 2025ರ ಅಕ್ಟೋಬರ್‌ನಲ್ಲಿ ಮದುವೆಯ ವಯಸ್ಸಿಗೆ ತಲುಪುತ್ತಾನೆ. ಅಲ್ಲಿಯವರೆಗೆ ಅಂದರೆ ಸುಮಾರು  ಎರಡು ವರ್ಷಗಳ ಕಾಲ ಯುವತಿ ಮತ್ತು ಅರ್ಜಿದಾರನು ಕಾಯುವಂತೆ ಖಾನ್ ಸಲಹೆ ನೀಡಿದರು.

ಯುವತಿಯ ತಂದೆಯು ತನ್ನ ಮಗಳಿಗಾಗಿಯ ಬ್ಯೂಟಿ ಸಲೂನ್ ವ್ಯವಹಾರವನ್ನು ಸ್ಥಾಪಿಸಲು ಸಿದ್ಧರಿದ್ದಾರೆ ಮತ್ತು ಈ ಎರಡು ವರ್ಷಗಳವರೆಗೆ ಅರ್ಜಿದಾರರೊಂದಿಗೆ ಯುವತಿಯು ಫೋನ್‌ನಲ್ಲಿ ಮಾತನಾಡಲು ಅನುಮತಿ ನೀಡುತ್ತಾರೆ. ನಂತರ ಯುವತಿಯು ತನ್ನ ಜೀವನದ ಬಗ್ಗೆ ನಿರ್ಧಾರ ತೆಗೆದುಕೊಳ್ಳಬಹುದು ಎಂದು ವಕೀಲರು ಹೇಳಿದರು.

ಇದೀಗ ಅರ್ಜಿದಾರರ ಜೊತೆ ಹೋಗುವ ತನ್ನ ನಿರ್ಧಾರದ ಬಗ್ಗೆ ಯುವತಿ ಅಚಲವಾಗಿದ್ದರೆ, ತಂದೆ ಜೊತೆ ಹೋಗಲು ಯುವತಿ ನಿರಾಕರಿಸುತ್ತಿದ್ದಾರೆ ಎಂದು ಖಾನ್ ಹೇಳಿದರು.

ನಿಸ್ಸಂಶಯವಾಗಿ ಯುವತಿ ವಯಸ್ಕಳಾಗಿರುವುದರಿಂದ, ಯಾರು ಆಕೆಯನ್ನು ವಶಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ.ನಾವು ಅವಳ ಸ್ವತಂತ್ರದ ಆಯ್ಕೆಯನ್ನು ಮಾತ್ರ ಬಯಸುತ್ತೇವೆ.  ಯುವತಿಯು ಏನು ಮಾಡಬೇಕೆಂದು ಬಯಸುತ್ತರೋ ಅದನ್ನು ಮಾಡಲಿ ಎಂದು ಪೀಠ ಹೇಳಿದೆ.

ಅರ್ಜಿದಾರನ ವಿವರವನ್ನು ತಾರ್ಕಿಕತೆಯೊಂದಿಗೆ  ನೋಡಿದ ಪೀಠವು ತರುವಾಯ ಅದನ್ನು ಅಂಗೀಕರಿಸಿತು.

ಇದನ್ನೂ ಓದಿ….ದೇಶ ವಿಭಜನೆಗೆ ಕಾರಣ ವಿ.ಡಿ. ಸಾವರ್ಕರ್ ಹೊರತು ಜಿನ್ನಾ ಅಲ್ಲ – ಡಿಎಂಕೆ ಸಂಸದ ಎ. ರಾಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...

ಪಶ್ಚಿಮ ಬಂಗಾಳ| ದುರ್ಗಾಪೂಜೆ ಸಂದರ್ಭದಲ್ಲಿ ಮಾಂಸ ಮಾರಾಟ ನಿಷೇಧ ಆದೇಶ ಹೊರಡಿಸಿದ ವಿಎಚ್‌ಪಿ; ಬಲಪಂಥೀಯ ಸಂಘನೆಯ ಅಧಿಕಾರ ಪ್ರಶ್ನಿಸಿದ ವಿಪಕ್ಷಗಳು

ಪಶ್ಚಿಮ ಬಂಗಾಳದಲ್ಲಿ ದುರ್ಗಾಪೂಜೆ ಆಚರಣೆಗೆ ಸಂಬಂಧಿಸಿದಂತೆ ಬಲಪಂಥೀಯ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹೊರಡಿಸಿರುವ ಮಾರ್ಗಸೂಚಿಯು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಪೂಜಾ ಮಂಟಪಗಳ ಸುತ್ತಮುತ್ತ ಸಸ್ಯಾಹಾರಿ ಅಲ್ಲದ ಮಾಂಸ ಮತ್ತು ಮೀನು...

ನ್ಯೂಯಾರ್ಕ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ: RSS ಮತ್ತು ಸಂಸ್ಥೆಯ ನಂಟಿನ ರಹಸ್ಯ ಬಯಲು

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಶನಿವಾರ ನ್ಯೂಯಾರ್ಕ್‌ನ ಪ್ರಸಿದ್ಧ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ ‘ಯೂನಿವರ್ಸಲ್ ಒನ್‌ನೆಸ್ ಸೆಲೆಬ್ರೇಷನ್ಸ್’ ಎಂಬ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವರದಿಗಳ ಪ್ರಕಾರ,...

ಮೋಹನ್ ಭಾಗವತ್ ನ್ಯೂಯಾರ್ಕ್ ಕಾರ್ಯಕ್ರಮಕ್ಕೆ ವಿರೋಧ : ಅಮೆರಿಕದ 61 ಸಂಘಟನೆಗಳಿಂದ ಪ್ರತಿಭಟನೆ

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಭಾಷಣ ಮಾಡಲಿರುವ, ಶನಿವಾರ (ಆ.29) ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ 'ಯೂನಿವರ್ಸಲ್ ಒನ್ನೆಸ್ ಸೆಲೆಬ್ರೇಷನ್ಸ್' ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ನ್ಯೂಯಾರ್ಕ್ ಮೇಯರ್ ಝೊಹ್ರಾನ್ ಮಮ್ದಾನಿ ಅವರು...

ಶಿವಮೊಗ್ಗ| ಈದ್-ಎ-ಮಿಲಾದ್ ರ್‍ಯಾಲಿಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ: ಮೂವರ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗದ ಆರ್‌ಎಂಎಲ್ ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಗಾಗಿ ನಿರ್ಮಿಸಲಾಗಿದ್ದ ಕಟೌಟ್ ಒಂದರ ಮೇಲೆ ಫೆಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಆರೋಪದ ಮೇಲೆ ಪೊಲೀಸರು ಮೂವರು ಮುಸ್ಲಿಂ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ನಿಹಾಲ್ ಉರುಫ್ ಬೆಕ್ಕು,...

ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ FIR: ಹೈಕೋರ್ಟ್ ಆದೇಶ ಉಲ್ಲಂಘನೆ ಆರೋಪ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಕೋಲ್ಕತ್ತಾ ಪೊಲೀಸರು ಸ್ವಯಂಪ್ರೇರಿತ (Suo Motu) ದೂರು ದಾಖಲಿಸಿಕೊಂಡಿದ್ದಾರೆ. ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಟಿಎಂಸಿ ವಿದ್ಯಾರ್ಥಿ...

ಈದ್ ಮಿಲಾದ್ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನ; ಭಜರಂಗದಳ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು

ಈದ್-ಎ-ಮಿಲಾದ್ ಪೋಸ್ಟರ್‌ಗಳ ವಿಚಾರವಾಗಿ ಗುಂಪುಗಳ ನಡುವೆ ಶತ್ರುತ್ವ ಸೃಷ್ಟಿಸಲು ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನಿಸಿದ ಆರೋಪದ ಮೇಲೆ ಕಲಬುರಗಿಯಲ್ಲಿ ಭಜರಂಗದಳದ ಕಾರ್ಯಕರ್ತನೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಯ ಭಾಗವಾಗಿ...

ವೆನೆಜುವೆಲಾ ತೈಲ ನಿಕ್ಷೇಪಗಳ ಮೇಲೆ ಅಮೆರಿಕ ನಿಯಂತ್ರಣ: ಜಾಗತಿಕ ರಾಜಕಾರಣದಲ್ಲಿ ತಲ್ಲಣ!

ವಾಷಿಂಗ್ಟನ್/ಕಾರಕಾಸ್: ವಿಶ್ವದಲ್ಲೇ ಅತಿ ಹೆಚ್ಚು ಕಚ್ಚಾ ತೈಲ ನಿಕ್ಷೇಪ ಹೊಂದಿರುವ ವೆನೆಜುವೆಲಾ ದೇಶದ 65 ಬಿಲಿಯನ್ ಬ್ಯಾರೆಲ್‌ಗಿಂತ ಹೆಚ್ಚು ಸಾಬೀತಾದ ತೈಲ ನಿಕ್ಷೇಪಗಳ ಮೇಲೆ ಬಹುಮತ ನಿಯಂತ್ರಣ ಸಾಧಿಸುವ ಒಪ್ಪಂದವನ್ನು ಅಮೆರಿಕ ಮಾಡಿಕೊಂಡಿದೆ....

ನೈತಿಕ ಹೊಣೆ ಹೊತ್ತು ನಾಗೇಂದ್ರ ರಾಜೀನಾಮೆ ನೀಡಿದ್ದಾರೆ; ಇದು ಬಿಜೆಪಿಯ ಗೆಲುವಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

ಸಚಿವರಾಗಿದ್ದ ಬಿ. ನಾಗೇಂದ್ರ ಅವರು ಸಾರ್ವಜನಿಕ ಜೀವನದಲ್ಲಿ ನೈತಿಕ ಹೊಣೆಗಾರಿಕೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಇದು ಬಿಜೆಪಿಯ ಗೆಲುವೂ ಅಲ್ಲ, ವಿಪಕ್ಷ ನಾಯಕರ ಹೋರಾಟದ ಗೆಲುವೂ ಅಲ್ಲ. ಇದೊಂದು ದಲಿತ ಸಮುದಾಯ ನಾಯಕರ...