Homeಮುಖಪುಟಅಪ್ರಾಪ್ತ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಮದುವೆಗೆ ಅವಕಾಶ ನೀಡಿದ ಬಾಂಬೆ ಹೈಕೋರ್ಟ್‌

ಅಪ್ರಾಪ್ತ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಮದುವೆಗೆ ಅವಕಾಶ ನೀಡಿದ ಬಾಂಬೆ ಹೈಕೋರ್ಟ್‌

- Advertisement -
- Advertisement -

ಮುಂಬೈ: ಅಪ್ರಾಪ್ತ ಮುಸ್ಲಿಂ ಯುವಕನನ್ನು ಮದುವೆಯಾಗಲು ನಿರ್ಧರಿಸಿದ ಹಿಂದೂ ಯುವತಿಗೆ ತನ್ನದೇ ಆದ ನಿರ್ಧಾರ ತೆಗೆದುಕೊಳ್ಳಲು ಅವಕಾಶ ನೀಡಲಾಗುವುದು ಎಂದು ಬಾಂಬೆ ಹೈಕೋರ್ಟ್ ಹೇಳಿದೆ.

ಪ್ರಸ್ತುತ ಮುಂಬೈನ  ಹಾಸ್ಟೆಲ್ ವೊಂದರಲ್ಲಿ ಇರುವ ಯುವತಿಯನ್ನು ಯಾರೊಬ್ಬರೂ ವಶಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ನ್ಯಾಯಾಲಯ ಪ್ರತಿಪಾದಿಸಿದೆ.

ನಾವು ಯುವತಿಯ ಅದೃಷ್ಟವನ್ನು ಮಾತ್ರ ಬಯಸುತ್ತೇವೆ. ನಾವು ಆಕೆಗೆ ಎಲ್ಲಾ ಸ್ವಾತಂತ್ರ್ಯವನ್ನು ನೀಡುತ್ತೇವೆ. ಯುವತಿಯು ಏನು ಮಾಡಬೇಕೆಂದು ಬಯಸುತ್ತಿದ್ದರೋ ಅದನ್ನು ಮಾಡಲಿ ಎಂದು ಎಂದು ನ್ಯಾಯಮೂರ್ತಿಗಳಾದ ಭಾರತಿ ಡಾಂಗ್ರೆ ಮತ್ತು ಮಂಜುಷಾ ದೇಶಪಾಂಡೆ ಅವರ ಪೀಠ ಹೇಳಿದೆ.

20 ವರ್ಷದ ಯುವತಿ ಪ್ರಸ್ತುತ ಚೆಂಬೂರಿನ ಸರ್ಕಾರಿ ಮಹಿಳಾ ಕೇಂದ್ರದಲ್ಲಿ (ಹಾಸ್ಟೆಲ್) ನೆಲೆಸಿದ್ದಾಳೆ. ಆಕೆ ತನ್ನ ಮನೆ ತೊರೆದು 19 ವರ್ಷದ ಮುಸ್ಲಿಂ ವ್ಯಕ್ತಿಯೊಂದಿಗೆ ಜೀವನ ನಡೆಸಲು ಪ್ರಾರಂಭಿಸಿದ ನಂತರ ಆಕೆಯ ತಂದೆ ದಾಖಲಿಸಿದ ದೂರಿನ ಮೇರೆಗೆ ನ್ಯಾಯಾಲಯ ಅವಳನ್ನು ಹಾಸ್ಟೆಲ್ ಗೆ ಕಳುಹಿಸಿತ್ತು.

ದೂರಿನ ನಂತರ, ಹುಡುಗಿಯನ್ನು ಠಾಣೆಗೆ ಕರೆಸಲಾಯಿತು. ಅಲ್ಲಿ ಬಜರಂಗದಳದ ಸದಸ್ಯರು ಮತ್ತು ಅವರ ಕುಟುಂಬ ಸದಸ್ಯರು ಹಾಜರಿದ್ದರು. ಪೊಲೀಸ್ ಅಧಿಕಾರಿಗಳು ಅವಳನ್ನು ಬೆದರಿಸಿ ಮತ್ತು ಸಂಬಂಧವನ್ನು ತ್ಯಜಿಸುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಮುಸ್ಲಿಂ ವ್ಯಕ್ತಿಯ ಅರ್ಜಿಯಲ್ಲಿ ಹೇಳಲಾಗಿದೆ.

ಈ ಒತ್ತಡದ ಹೊರತಾಗಿಯೂ, ಹುಡುಗಿ ಅರ್ಜಿದಾರರನ್ನು ಮದುವೆಯಾಗುವ ಬಯಕೆಯನ್ನು ವ್ಯಕ್ತಪಡಿಸಿದಳು ಮತ್ತು ತನ್ನ ಹೆತ್ತವರ ಬಳಿಗೆ ಮರಳಲು ನಿರಾಕರಿಸಿದಳು. ಪರಿಣಾಮವಾಗಿ ಆಕೆಯನ್ನು ಆಶ್ರಯಧಾಮಕ್ಕೆ ಕಳುಹಿಸಲಾಯಿತು.

ನಂತರ ಆ ವ್ಯಕ್ತಿ ಆಕೆಯನ್ನು ಆಶ್ರಯಮನೆಯಿಂದ ಬಿಡುಗಡೆ ಮಾಡುವಂತೆ ಕೋರಿ ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಮತ್ತೊಂದೆಡೆ, ಯುವತಿಯ ತಂದೆ, ವಕೀಲ ಸನಾ ರಯೀಸ್ ಖಾನ್ ಮೂಲಕ ಮಗಳನ್ನು ತನ್ನ ಸುಪರ್ದಿಗೆ ನೀಡುವಂತೆ ಕೋರಿದ್ದರು.

ಯುವತಿಯೊಂದಿಗೆ ಮಾತನಾಡಲು ವಕೀಲ ಖಾನ್‌ಗೆ ನ್ಯಾಯಾಲಯ ಅನುಮತಿ ನೀಡಿತು. ಅವರು ಗುರುವಾರ ಮಹಿಳೆಯನ್ನು ಒಂದು ಗಂಟೆ ಭೇಟಿಯಾಗಿ, ಯುವತಿಯು ಸ್ವಲ್ಪ “ವಿಚಿತ್ರವಾಗಿ” ತೋರುತ್ತಿದ್ದರು ಎಂದು ಶುಕ್ರವಾರ ಪೀಠದ ಮುಂದೆ ಖಾನ್ ಹೇಳಿದರು.

ಒಂದು ಹಂತದಲ್ಲಿ, ಅವಳು ತನ್ನ ಹೆತ್ತವರೊಂದಿಗೆ ಇರಲು ಸಿದ್ಧಳಾಗಿದ್ದಾಳೆಂದು ಹೇಳಿದಳು. ನಂತರ ಅವಳು ಅರ್ಜಿದಾರರೊಂದಿಗೆ ಹೋಗಿ ವಾಸಿಸಲು ಬಯಸುವುದಾಗಿ ಹೇಳಿದಳು. ಅವಳ ಕೈಗಳು ನಡುಗುತ್ತಿದ್ದವು ಮತ್ತು ಅವಳು ಸ್ಥಿರವಾಗಿ ಕಾಣಲಿಲ್ಲ. ಅವಳ ಆಯ್ಕೆಯು ಬಾಹ್ಯ ಒತ್ತಡ ಮತ್ತು ಅನಗತ್ಯ ಪ್ರಭಾವದಿಂದ ಮುಕ್ತವಾಗಿಲ್ಲವೆಂದು ತೋರುತ್ತದೆ.  ಇಂತಹ ಸ್ಥಿತಿಯಲ್ಲಿ, ಅವಳು ತಿಳುವಳಿಕೆಯುಳ್ಳ ನಿರ್ಧಾರವನ್ನು ತೆಗೆದುಕೊಳ್ಳುತ್ತಿರುವಂತೆ ತೋರುತ್ತಿಲ್ಲ ಎಂದು ಖಾನ್ ಪೀಠದ ಮುಂದೆ ಹೇಳಿದರು.

ಅರ್ಜಿದಾರ ಮುಸ್ಲಿಂ ವ್ಯಕ್ತಿಯು 2025ರ ಅಕ್ಟೋಬರ್‌ನಲ್ಲಿ ಮದುವೆಯ ವಯಸ್ಸಿಗೆ ತಲುಪುತ್ತಾನೆ. ಅಲ್ಲಿಯವರೆಗೆ ಅಂದರೆ ಸುಮಾರು  ಎರಡು ವರ್ಷಗಳ ಕಾಲ ಯುವತಿ ಮತ್ತು ಅರ್ಜಿದಾರನು ಕಾಯುವಂತೆ ಖಾನ್ ಸಲಹೆ ನೀಡಿದರು.

ಯುವತಿಯ ತಂದೆಯು ತನ್ನ ಮಗಳಿಗಾಗಿಯ ಬ್ಯೂಟಿ ಸಲೂನ್ ವ್ಯವಹಾರವನ್ನು ಸ್ಥಾಪಿಸಲು ಸಿದ್ಧರಿದ್ದಾರೆ ಮತ್ತು ಈ ಎರಡು ವರ್ಷಗಳವರೆಗೆ ಅರ್ಜಿದಾರರೊಂದಿಗೆ ಯುವತಿಯು ಫೋನ್‌ನಲ್ಲಿ ಮಾತನಾಡಲು ಅನುಮತಿ ನೀಡುತ್ತಾರೆ. ನಂತರ ಯುವತಿಯು ತನ್ನ ಜೀವನದ ಬಗ್ಗೆ ನಿರ್ಧಾರ ತೆಗೆದುಕೊಳ್ಳಬಹುದು ಎಂದು ವಕೀಲರು ಹೇಳಿದರು.

ಇದೀಗ ಅರ್ಜಿದಾರರ ಜೊತೆ ಹೋಗುವ ತನ್ನ ನಿರ್ಧಾರದ ಬಗ್ಗೆ ಯುವತಿ ಅಚಲವಾಗಿದ್ದರೆ, ತಂದೆ ಜೊತೆ ಹೋಗಲು ಯುವತಿ ನಿರಾಕರಿಸುತ್ತಿದ್ದಾರೆ ಎಂದು ಖಾನ್ ಹೇಳಿದರು.

ನಿಸ್ಸಂಶಯವಾಗಿ ಯುವತಿ ವಯಸ್ಕಳಾಗಿರುವುದರಿಂದ, ಯಾರು ಆಕೆಯನ್ನು ವಶಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ.ನಾವು ಅವಳ ಸ್ವತಂತ್ರದ ಆಯ್ಕೆಯನ್ನು ಮಾತ್ರ ಬಯಸುತ್ತೇವೆ.  ಯುವತಿಯು ಏನು ಮಾಡಬೇಕೆಂದು ಬಯಸುತ್ತರೋ ಅದನ್ನು ಮಾಡಲಿ ಎಂದು ಪೀಠ ಹೇಳಿದೆ.

ಅರ್ಜಿದಾರನ ವಿವರವನ್ನು ತಾರ್ಕಿಕತೆಯೊಂದಿಗೆ  ನೋಡಿದ ಪೀಠವು ತರುವಾಯ ಅದನ್ನು ಅಂಗೀಕರಿಸಿತು.

ಇದನ್ನೂ ಓದಿ….ದೇಶ ವಿಭಜನೆಗೆ ಕಾರಣ ವಿ.ಡಿ. ಸಾವರ್ಕರ್ ಹೊರತು ಜಿನ್ನಾ ಅಲ್ಲ – ಡಿಎಂಕೆ ಸಂಸದ ಎ. ರಾಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...