Homeಮುಖಪುಟಅಪ್ರಾಪ್ತ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಮದುವೆಗೆ ಅವಕಾಶ ನೀಡಿದ ಬಾಂಬೆ ಹೈಕೋರ್ಟ್‌

ಅಪ್ರಾಪ್ತ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಮದುವೆಗೆ ಅವಕಾಶ ನೀಡಿದ ಬಾಂಬೆ ಹೈಕೋರ್ಟ್‌

- Advertisement -
- Advertisement -

ಮುಂಬೈ: ಅಪ್ರಾಪ್ತ ಮುಸ್ಲಿಂ ಯುವಕನನ್ನು ಮದುವೆಯಾಗಲು ನಿರ್ಧರಿಸಿದ ಹಿಂದೂ ಯುವತಿಗೆ ತನ್ನದೇ ಆದ ನಿರ್ಧಾರ ತೆಗೆದುಕೊಳ್ಳಲು ಅವಕಾಶ ನೀಡಲಾಗುವುದು ಎಂದು ಬಾಂಬೆ ಹೈಕೋರ್ಟ್ ಹೇಳಿದೆ.

ಪ್ರಸ್ತುತ ಮುಂಬೈನ  ಹಾಸ್ಟೆಲ್ ವೊಂದರಲ್ಲಿ ಇರುವ ಯುವತಿಯನ್ನು ಯಾರೊಬ್ಬರೂ ವಶಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ನ್ಯಾಯಾಲಯ ಪ್ರತಿಪಾದಿಸಿದೆ.

ನಾವು ಯುವತಿಯ ಅದೃಷ್ಟವನ್ನು ಮಾತ್ರ ಬಯಸುತ್ತೇವೆ. ನಾವು ಆಕೆಗೆ ಎಲ್ಲಾ ಸ್ವಾತಂತ್ರ್ಯವನ್ನು ನೀಡುತ್ತೇವೆ. ಯುವತಿಯು ಏನು ಮಾಡಬೇಕೆಂದು ಬಯಸುತ್ತಿದ್ದರೋ ಅದನ್ನು ಮಾಡಲಿ ಎಂದು ಎಂದು ನ್ಯಾಯಮೂರ್ತಿಗಳಾದ ಭಾರತಿ ಡಾಂಗ್ರೆ ಮತ್ತು ಮಂಜುಷಾ ದೇಶಪಾಂಡೆ ಅವರ ಪೀಠ ಹೇಳಿದೆ.

20 ವರ್ಷದ ಯುವತಿ ಪ್ರಸ್ತುತ ಚೆಂಬೂರಿನ ಸರ್ಕಾರಿ ಮಹಿಳಾ ಕೇಂದ್ರದಲ್ಲಿ (ಹಾಸ್ಟೆಲ್) ನೆಲೆಸಿದ್ದಾಳೆ. ಆಕೆ ತನ್ನ ಮನೆ ತೊರೆದು 19 ವರ್ಷದ ಮುಸ್ಲಿಂ ವ್ಯಕ್ತಿಯೊಂದಿಗೆ ಜೀವನ ನಡೆಸಲು ಪ್ರಾರಂಭಿಸಿದ ನಂತರ ಆಕೆಯ ತಂದೆ ದಾಖಲಿಸಿದ ದೂರಿನ ಮೇರೆಗೆ ನ್ಯಾಯಾಲಯ ಅವಳನ್ನು ಹಾಸ್ಟೆಲ್ ಗೆ ಕಳುಹಿಸಿತ್ತು.

ದೂರಿನ ನಂತರ, ಹುಡುಗಿಯನ್ನು ಠಾಣೆಗೆ ಕರೆಸಲಾಯಿತು. ಅಲ್ಲಿ ಬಜರಂಗದಳದ ಸದಸ್ಯರು ಮತ್ತು ಅವರ ಕುಟುಂಬ ಸದಸ್ಯರು ಹಾಜರಿದ್ದರು. ಪೊಲೀಸ್ ಅಧಿಕಾರಿಗಳು ಅವಳನ್ನು ಬೆದರಿಸಿ ಮತ್ತು ಸಂಬಂಧವನ್ನು ತ್ಯಜಿಸುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಮುಸ್ಲಿಂ ವ್ಯಕ್ತಿಯ ಅರ್ಜಿಯಲ್ಲಿ ಹೇಳಲಾಗಿದೆ.

ಈ ಒತ್ತಡದ ಹೊರತಾಗಿಯೂ, ಹುಡುಗಿ ಅರ್ಜಿದಾರರನ್ನು ಮದುವೆಯಾಗುವ ಬಯಕೆಯನ್ನು ವ್ಯಕ್ತಪಡಿಸಿದಳು ಮತ್ತು ತನ್ನ ಹೆತ್ತವರ ಬಳಿಗೆ ಮರಳಲು ನಿರಾಕರಿಸಿದಳು. ಪರಿಣಾಮವಾಗಿ ಆಕೆಯನ್ನು ಆಶ್ರಯಧಾಮಕ್ಕೆ ಕಳುಹಿಸಲಾಯಿತು.

ನಂತರ ಆ ವ್ಯಕ್ತಿ ಆಕೆಯನ್ನು ಆಶ್ರಯಮನೆಯಿಂದ ಬಿಡುಗಡೆ ಮಾಡುವಂತೆ ಕೋರಿ ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಮತ್ತೊಂದೆಡೆ, ಯುವತಿಯ ತಂದೆ, ವಕೀಲ ಸನಾ ರಯೀಸ್ ಖಾನ್ ಮೂಲಕ ಮಗಳನ್ನು ತನ್ನ ಸುಪರ್ದಿಗೆ ನೀಡುವಂತೆ ಕೋರಿದ್ದರು.

ಯುವತಿಯೊಂದಿಗೆ ಮಾತನಾಡಲು ವಕೀಲ ಖಾನ್‌ಗೆ ನ್ಯಾಯಾಲಯ ಅನುಮತಿ ನೀಡಿತು. ಅವರು ಗುರುವಾರ ಮಹಿಳೆಯನ್ನು ಒಂದು ಗಂಟೆ ಭೇಟಿಯಾಗಿ, ಯುವತಿಯು ಸ್ವಲ್ಪ “ವಿಚಿತ್ರವಾಗಿ” ತೋರುತ್ತಿದ್ದರು ಎಂದು ಶುಕ್ರವಾರ ಪೀಠದ ಮುಂದೆ ಖಾನ್ ಹೇಳಿದರು.

ಒಂದು ಹಂತದಲ್ಲಿ, ಅವಳು ತನ್ನ ಹೆತ್ತವರೊಂದಿಗೆ ಇರಲು ಸಿದ್ಧಳಾಗಿದ್ದಾಳೆಂದು ಹೇಳಿದಳು. ನಂತರ ಅವಳು ಅರ್ಜಿದಾರರೊಂದಿಗೆ ಹೋಗಿ ವಾಸಿಸಲು ಬಯಸುವುದಾಗಿ ಹೇಳಿದಳು. ಅವಳ ಕೈಗಳು ನಡುಗುತ್ತಿದ್ದವು ಮತ್ತು ಅವಳು ಸ್ಥಿರವಾಗಿ ಕಾಣಲಿಲ್ಲ. ಅವಳ ಆಯ್ಕೆಯು ಬಾಹ್ಯ ಒತ್ತಡ ಮತ್ತು ಅನಗತ್ಯ ಪ್ರಭಾವದಿಂದ ಮುಕ್ತವಾಗಿಲ್ಲವೆಂದು ತೋರುತ್ತದೆ.  ಇಂತಹ ಸ್ಥಿತಿಯಲ್ಲಿ, ಅವಳು ತಿಳುವಳಿಕೆಯುಳ್ಳ ನಿರ್ಧಾರವನ್ನು ತೆಗೆದುಕೊಳ್ಳುತ್ತಿರುವಂತೆ ತೋರುತ್ತಿಲ್ಲ ಎಂದು ಖಾನ್ ಪೀಠದ ಮುಂದೆ ಹೇಳಿದರು.

ಅರ್ಜಿದಾರ ಮುಸ್ಲಿಂ ವ್ಯಕ್ತಿಯು 2025ರ ಅಕ್ಟೋಬರ್‌ನಲ್ಲಿ ಮದುವೆಯ ವಯಸ್ಸಿಗೆ ತಲುಪುತ್ತಾನೆ. ಅಲ್ಲಿಯವರೆಗೆ ಅಂದರೆ ಸುಮಾರು  ಎರಡು ವರ್ಷಗಳ ಕಾಲ ಯುವತಿ ಮತ್ತು ಅರ್ಜಿದಾರನು ಕಾಯುವಂತೆ ಖಾನ್ ಸಲಹೆ ನೀಡಿದರು.

ಯುವತಿಯ ತಂದೆಯು ತನ್ನ ಮಗಳಿಗಾಗಿಯ ಬ್ಯೂಟಿ ಸಲೂನ್ ವ್ಯವಹಾರವನ್ನು ಸ್ಥಾಪಿಸಲು ಸಿದ್ಧರಿದ್ದಾರೆ ಮತ್ತು ಈ ಎರಡು ವರ್ಷಗಳವರೆಗೆ ಅರ್ಜಿದಾರರೊಂದಿಗೆ ಯುವತಿಯು ಫೋನ್‌ನಲ್ಲಿ ಮಾತನಾಡಲು ಅನುಮತಿ ನೀಡುತ್ತಾರೆ. ನಂತರ ಯುವತಿಯು ತನ್ನ ಜೀವನದ ಬಗ್ಗೆ ನಿರ್ಧಾರ ತೆಗೆದುಕೊಳ್ಳಬಹುದು ಎಂದು ವಕೀಲರು ಹೇಳಿದರು.

ಇದೀಗ ಅರ್ಜಿದಾರರ ಜೊತೆ ಹೋಗುವ ತನ್ನ ನಿರ್ಧಾರದ ಬಗ್ಗೆ ಯುವತಿ ಅಚಲವಾಗಿದ್ದರೆ, ತಂದೆ ಜೊತೆ ಹೋಗಲು ಯುವತಿ ನಿರಾಕರಿಸುತ್ತಿದ್ದಾರೆ ಎಂದು ಖಾನ್ ಹೇಳಿದರು.

ನಿಸ್ಸಂಶಯವಾಗಿ ಯುವತಿ ವಯಸ್ಕಳಾಗಿರುವುದರಿಂದ, ಯಾರು ಆಕೆಯನ್ನು ವಶಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ.ನಾವು ಅವಳ ಸ್ವತಂತ್ರದ ಆಯ್ಕೆಯನ್ನು ಮಾತ್ರ ಬಯಸುತ್ತೇವೆ.  ಯುವತಿಯು ಏನು ಮಾಡಬೇಕೆಂದು ಬಯಸುತ್ತರೋ ಅದನ್ನು ಮಾಡಲಿ ಎಂದು ಪೀಠ ಹೇಳಿದೆ.

ಅರ್ಜಿದಾರನ ವಿವರವನ್ನು ತಾರ್ಕಿಕತೆಯೊಂದಿಗೆ  ನೋಡಿದ ಪೀಠವು ತರುವಾಯ ಅದನ್ನು ಅಂಗೀಕರಿಸಿತು.

ಇದನ್ನೂ ಓದಿ….ದೇಶ ವಿಭಜನೆಗೆ ಕಾರಣ ವಿ.ಡಿ. ಸಾವರ್ಕರ್ ಹೊರತು ಜಿನ್ನಾ ಅಲ್ಲ – ಡಿಎಂಕೆ ಸಂಸದ ಎ. ರಾಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...