Homeಚಳವಳಿವರವರ ರಾವ್ ಮುಂಬೈ ಬಿಟ್ಟು ಹೋಗದಂತೆ ಹೈಕೋರ್ಟ್ ಷರತ್ತು: ವಿಚಾರಣೆಗೆ ಹಾಜರಾಗದ್ದಕ್ಕೆ ಮಧುಗಿರಿ ಕೋರ್ಟ್ ವಾರೆಂಟ್!

ವರವರ ರಾವ್ ಮುಂಬೈ ಬಿಟ್ಟು ಹೋಗದಂತೆ ಹೈಕೋರ್ಟ್ ಷರತ್ತು: ವಿಚಾರಣೆಗೆ ಹಾಜರಾಗದ್ದಕ್ಕೆ ಮಧುಗಿರಿ ಕೋರ್ಟ್ ವಾರೆಂಟ್!

ಮಧುಗಿರಿ ಕೋರ್ಟ್ ವರವರರಾವ್‌ರವರು ಗೈರು ಹಾಜರಾಗಿರುವ ಕಾರಣ ನೀಡಿ ಅವರ ನಿರೀಕ್ಷಣಾ ಜಾಮೀನು ರದ್ದುಗೊಳಿಸಿ, ಅವರ ಶ್ಯೂರಿಟಿಯನ್ನು ಮುಟ್ಟುಗೋಲು ಹಾಕಿಕೊಂಡು, ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದೆ!

- Advertisement -
- Advertisement -

ಎಲ್ಗರ್‌ ಪರಿಷದ್‌ ಸಮಾವೇಶದಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಲ್ಲಿ ಬಂಧಿತರಾಗಿದ್ದ 82 ವರ್ಷದ ಖ್ಯಾತ ಕವಿ, ಹೋರಾಟಗಾರ ವರವರ ರಾವ್‌ ಅವರು ಸದ್ಯ ಷರತ್ತುಬದ್ಧ ವೈದ್ಯಕೀಯ ಜಾಮೀನಿನ ಮೇಲೆ ಮುಂಬೈನಲ್ಲಿದ್ದಾರೆ. ಅವರು ಮುಂಬೈ ಬಿಟ್ಟು ಹೊರಹೋಗಬಾರದು ಎಂಬುದು ಜಾಮೀನಿನ ಪ್ರಮುಖ ಷರತ್ತುಗಳಲ್ಲೊಂದಾಗಿದೆ. ವರವರ ರಾವ್ ಕುಟುಂಬ ಹಣಕಾಸಿನ ಸಮಸ್ಯೆ ಸೇರಿ ಹಲವು ಕಾರಣಗಳನ್ನು ಮುಂದಿಟ್ಟು ಹೈದರಾಬಾದ್‌ಗೆ ಅವರನ್ನು ಕರೆತರಲು ಮನವಿ ಮಾಡಿದರೂ ಬಾಂಬೆ ಹೈಕೋರ್ಟ್ ಅದಕ್ಕೆ ಅವಕಾಶ ನೀಡಿಲ್ಲ. ಇದೇ ಅಕ್ಟೋಬರ್ 28 ರಂದು ಅವರ ಜಾಮೀನು ಮುಂದುವರಿಕೆಯ ಅರ್ಜಿ ವಿಚಾರಣೆಗೆ ಬರಲಿದೆ.

ಇಂತಹ ಸಂದರ್ಭದಲ್ಲಿ ಅವರ ಮೇಲಿರುವ 2005ರ ಮತ್ತೊಂದು ಪ್ರಕರಣದಲ್ಲಿ ಕರ್ನಾಟಕದ ಮಧುಗಿರಿ ಕೋರ್ಟ್ ಅವರಿಗೆ ಸಮನ್ಸ್ ಕಳುಹಿಸಿದೆ. ವರವರರಾವ್‌ರವರು ವಿಚಾರಣೆಗೆ ಪದೇ ಪದೇ ಗೈರು ಹಾಜರಾಗಿರುವ ಕಾರಣ ನೀಡಿ ಅವರ ನಿರೀಕ್ಷಣಾ ಜಾಮೀನು ರದ್ದುಗೊಳಿಸಿ, ಅವರ ಶ್ಯೂರಿಟಿಯನ್ನು ಮುಟ್ಟುಗೋಲು ಹಾಕಿಕೊಂಡು, ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದೆ!

ಬಾಂಬೆ ಹೈಕೋರ್ಟ್ ವರವರರಾವ್‌ರವರಿಗೆ ಜಾಮೀನು ನೀಡುವಾಗ ಅವರು ಮುಂಬೈ ಬಿಟ್ಟು ಹೊರಹೋಗಬಾರದು ಎಂದು ಷರತ್ತು ವಿಧಿಸಿದೆ. ಆ ಕಾರಣದಿಂದ ಅದೇ ಸಂದರ್ಭದಲ್ಲಿ ಮಧುಗಿರಿ ಕೋರ್ಟ್‌ನಲ್ಲಿ ನಡೆದ ವಿಚಾರಣೆಗೆ ಅವರು ಹಾಜರಾಗಲು ಸಾಧ್ಯವಾಗಿಲ್ಲ. ಹೀಗಿರುವಾಗ ಅವರ ನಿರೀಕ್ಷಣಾ ಜಾಮೀನು ರದ್ದುಗೊಳಿಸಿ, ಅವರ ಶ್ಯೂರಿಟಿಯನ್ನು ಮುಟ್ಟಗೋಲು ಹಾಕಿಕೊಂಡು, ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಲು ಹೇಗೆ ಸಾಧ್ಯ ಎಂಬುದು ಕುಟುಂಬ ಸದಸ್ಯರ ಪ್ರಶ್ನೆಯಾಗಿದೆ.

ಏನಿದು ಪ್ರಕರಣ

2005 ರಲ್ಲಿ ಕರ್ನಾಟಕದ ಚಿಕ್ಕಮಗಳೂರಿನಲ್ಲಿ ನಕ್ಸಲ್ ಮುಖಂಡ ಸಾಕೇತ್ ರಾಜನ್‌ರವರ ಎನ್‌ಕೌಂಟರ್ ಸಂಭವಿಸಿತ್ತು. ಅದನ್ನು ಖಂಡಿಸಿ ಬೆಂಗಳೂರಿನಲ್ಲಿ ಖಂಡನಾ ಸಭೆ ನಡೆಯಿತು. ಅದರಲ್ಲಿ ವರವರರಾವ್ ಮತ್ತು ತೆಲುಗಿನ ಮತ್ತೊಬ್ಬ ಕ್ರಾಂತಿಕಾರಿ ಕವಿ ಗದ್ದರ್‌ರವರು ಭಾಗವಹಿಸಿದ್ದರು. ಆದಾದ ನಂತರ ತುಮಕೂರಿನ ಪಾವಗಡ ತಾಲ್ಲೂಕಿನ ವೆಂಕಟಮ್ಮನಹಳ್ಳಿಯಲ್ಲಿ ನಕ್ಸಲರು ಕೆಎಸ್‌ಆರ್‌ಪಿ ತುಕಡಿ ಮೇಲೆ ದಾಳಿ ಮಾಡಿದ್ದರಿಂದ ಏಳು ಜನ ಪೊಲೀಸರು ಹತ್ಯೆಯಾಗಿದರೆಂಬ ಆರೋಪವಿತ್ತು. ಈ ದಾಳಿಗೆ ವರವರ ರಾವ್ ಮತ್ತು ಗದ್ದರ್‌ರವರು ಬೆಂಗಳೂರಿನಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ್ದೆ ಪ್ರೇರಣೆ ಎಂದು ಆರೋಪಿಸಿ ಅವರ ಮೇಲೆ ಪ್ರಕರಣ ದಾಖಲಾಗಿದೆ. ವಿಚಿತ್ರವೆಂದರೆ ಈ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದ 22 ಜನರು ಪ್ರಕರಣದಿಂದ ಖುಲಾಸೆಯಾಗಿದ್ದರೂ ವರವರರಾವ್ ಮತ್ತು ಗದ್ದರ್ ಮೇಲಿನ ಪ್ರಕರಣದ ವಿಚಾರಣೆ ನಡೆಯುತ್ತಲೇ ಇದೆ!

ವೈದ್ಯಕೀಯ ಚಿಕಿತ್ಸೆಯ ಕಾರಣದಿಂದಾಗಿ 82 ವರ್ಷ ವಯಸ್ಸಿನ ರಾವ್‌ ಅವರಿಗೆ ಆರು ತಿಂಗಳು ಮಧ್ಯಂತರ ಜಾಮೀನನ್ನು ಫೆ.22ರಂದು ಹೈಕೋರ್ಟ್ ನೀಡಿತ್ತು. ಸೆಪ್ಟೆಂಬರ್‌ 5ರಂದು ನ್ಯಾಯಾಂಗ ಬಂಧನಕ್ಕೆ ಮರಳುವಂತೆ ನಿರ್ಧರಿಸಲಾಗಿತ್ತು. ಆದರೆ ಕೋರ್ಟ್‌ ಸಮಯಾವಕಾಶ ಇಲ್ಲದ ಕಾರಣದಿಂದ ಅಕ್ಟೋಬರ್ 28ರವರೆಗೆ ಅವರ ವೈದ್ಯಕೀಯ ಜಾಮೀನು ಅವಧಿ ವಿಸ್ತರಿಸಲಾಗಿದೆ.


ಇದನ್ನೂ ಓದಿ: ಬೆಳದಿಂಗಳು ಕತ್ತಲೆಗೆ ಜಾರಿದಾಗ : ಕ್ರಾಂತಿಕಾರಿ ಕವಿ ವರವರ ರಾವ್ ಜೀವನ ಚಿತ್ರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...