Homeಚಳವಳಿವರವರ ರಾವ್ ಮುಂಬೈ ಬಿಟ್ಟು ಹೋಗದಂತೆ ಹೈಕೋರ್ಟ್ ಷರತ್ತು: ವಿಚಾರಣೆಗೆ ಹಾಜರಾಗದ್ದಕ್ಕೆ ಮಧುಗಿರಿ ಕೋರ್ಟ್ ವಾರೆಂಟ್!

ವರವರ ರಾವ್ ಮುಂಬೈ ಬಿಟ್ಟು ಹೋಗದಂತೆ ಹೈಕೋರ್ಟ್ ಷರತ್ತು: ವಿಚಾರಣೆಗೆ ಹಾಜರಾಗದ್ದಕ್ಕೆ ಮಧುಗಿರಿ ಕೋರ್ಟ್ ವಾರೆಂಟ್!

ಮಧುಗಿರಿ ಕೋರ್ಟ್ ವರವರರಾವ್‌ರವರು ಗೈರು ಹಾಜರಾಗಿರುವ ಕಾರಣ ನೀಡಿ ಅವರ ನಿರೀಕ್ಷಣಾ ಜಾಮೀನು ರದ್ದುಗೊಳಿಸಿ, ಅವರ ಶ್ಯೂರಿಟಿಯನ್ನು ಮುಟ್ಟುಗೋಲು ಹಾಕಿಕೊಂಡು, ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದೆ!

- Advertisement -
- Advertisement -

ಎಲ್ಗರ್‌ ಪರಿಷದ್‌ ಸಮಾವೇಶದಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಲ್ಲಿ ಬಂಧಿತರಾಗಿದ್ದ 82 ವರ್ಷದ ಖ್ಯಾತ ಕವಿ, ಹೋರಾಟಗಾರ ವರವರ ರಾವ್‌ ಅವರು ಸದ್ಯ ಷರತ್ತುಬದ್ಧ ವೈದ್ಯಕೀಯ ಜಾಮೀನಿನ ಮೇಲೆ ಮುಂಬೈನಲ್ಲಿದ್ದಾರೆ. ಅವರು ಮುಂಬೈ ಬಿಟ್ಟು ಹೊರಹೋಗಬಾರದು ಎಂಬುದು ಜಾಮೀನಿನ ಪ್ರಮುಖ ಷರತ್ತುಗಳಲ್ಲೊಂದಾಗಿದೆ. ವರವರ ರಾವ್ ಕುಟುಂಬ ಹಣಕಾಸಿನ ಸಮಸ್ಯೆ ಸೇರಿ ಹಲವು ಕಾರಣಗಳನ್ನು ಮುಂದಿಟ್ಟು ಹೈದರಾಬಾದ್‌ಗೆ ಅವರನ್ನು ಕರೆತರಲು ಮನವಿ ಮಾಡಿದರೂ ಬಾಂಬೆ ಹೈಕೋರ್ಟ್ ಅದಕ್ಕೆ ಅವಕಾಶ ನೀಡಿಲ್ಲ. ಇದೇ ಅಕ್ಟೋಬರ್ 28 ರಂದು ಅವರ ಜಾಮೀನು ಮುಂದುವರಿಕೆಯ ಅರ್ಜಿ ವಿಚಾರಣೆಗೆ ಬರಲಿದೆ.

ಇಂತಹ ಸಂದರ್ಭದಲ್ಲಿ ಅವರ ಮೇಲಿರುವ 2005ರ ಮತ್ತೊಂದು ಪ್ರಕರಣದಲ್ಲಿ ಕರ್ನಾಟಕದ ಮಧುಗಿರಿ ಕೋರ್ಟ್ ಅವರಿಗೆ ಸಮನ್ಸ್ ಕಳುಹಿಸಿದೆ. ವರವರರಾವ್‌ರವರು ವಿಚಾರಣೆಗೆ ಪದೇ ಪದೇ ಗೈರು ಹಾಜರಾಗಿರುವ ಕಾರಣ ನೀಡಿ ಅವರ ನಿರೀಕ್ಷಣಾ ಜಾಮೀನು ರದ್ದುಗೊಳಿಸಿ, ಅವರ ಶ್ಯೂರಿಟಿಯನ್ನು ಮುಟ್ಟುಗೋಲು ಹಾಕಿಕೊಂಡು, ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದೆ!

ಬಾಂಬೆ ಹೈಕೋರ್ಟ್ ವರವರರಾವ್‌ರವರಿಗೆ ಜಾಮೀನು ನೀಡುವಾಗ ಅವರು ಮುಂಬೈ ಬಿಟ್ಟು ಹೊರಹೋಗಬಾರದು ಎಂದು ಷರತ್ತು ವಿಧಿಸಿದೆ. ಆ ಕಾರಣದಿಂದ ಅದೇ ಸಂದರ್ಭದಲ್ಲಿ ಮಧುಗಿರಿ ಕೋರ್ಟ್‌ನಲ್ಲಿ ನಡೆದ ವಿಚಾರಣೆಗೆ ಅವರು ಹಾಜರಾಗಲು ಸಾಧ್ಯವಾಗಿಲ್ಲ. ಹೀಗಿರುವಾಗ ಅವರ ನಿರೀಕ್ಷಣಾ ಜಾಮೀನು ರದ್ದುಗೊಳಿಸಿ, ಅವರ ಶ್ಯೂರಿಟಿಯನ್ನು ಮುಟ್ಟಗೋಲು ಹಾಕಿಕೊಂಡು, ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಲು ಹೇಗೆ ಸಾಧ್ಯ ಎಂಬುದು ಕುಟುಂಬ ಸದಸ್ಯರ ಪ್ರಶ್ನೆಯಾಗಿದೆ.

ಏನಿದು ಪ್ರಕರಣ

2005 ರಲ್ಲಿ ಕರ್ನಾಟಕದ ಚಿಕ್ಕಮಗಳೂರಿನಲ್ಲಿ ನಕ್ಸಲ್ ಮುಖಂಡ ಸಾಕೇತ್ ರಾಜನ್‌ರವರ ಎನ್‌ಕೌಂಟರ್ ಸಂಭವಿಸಿತ್ತು. ಅದನ್ನು ಖಂಡಿಸಿ ಬೆಂಗಳೂರಿನಲ್ಲಿ ಖಂಡನಾ ಸಭೆ ನಡೆಯಿತು. ಅದರಲ್ಲಿ ವರವರರಾವ್ ಮತ್ತು ತೆಲುಗಿನ ಮತ್ತೊಬ್ಬ ಕ್ರಾಂತಿಕಾರಿ ಕವಿ ಗದ್ದರ್‌ರವರು ಭಾಗವಹಿಸಿದ್ದರು. ಆದಾದ ನಂತರ ತುಮಕೂರಿನ ಪಾವಗಡ ತಾಲ್ಲೂಕಿನ ವೆಂಕಟಮ್ಮನಹಳ್ಳಿಯಲ್ಲಿ ನಕ್ಸಲರು ಕೆಎಸ್‌ಆರ್‌ಪಿ ತುಕಡಿ ಮೇಲೆ ದಾಳಿ ಮಾಡಿದ್ದರಿಂದ ಏಳು ಜನ ಪೊಲೀಸರು ಹತ್ಯೆಯಾಗಿದರೆಂಬ ಆರೋಪವಿತ್ತು. ಈ ದಾಳಿಗೆ ವರವರ ರಾವ್ ಮತ್ತು ಗದ್ದರ್‌ರವರು ಬೆಂಗಳೂರಿನಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ್ದೆ ಪ್ರೇರಣೆ ಎಂದು ಆರೋಪಿಸಿ ಅವರ ಮೇಲೆ ಪ್ರಕರಣ ದಾಖಲಾಗಿದೆ. ವಿಚಿತ್ರವೆಂದರೆ ಈ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದ 22 ಜನರು ಪ್ರಕರಣದಿಂದ ಖುಲಾಸೆಯಾಗಿದ್ದರೂ ವರವರರಾವ್ ಮತ್ತು ಗದ್ದರ್ ಮೇಲಿನ ಪ್ರಕರಣದ ವಿಚಾರಣೆ ನಡೆಯುತ್ತಲೇ ಇದೆ!

ವೈದ್ಯಕೀಯ ಚಿಕಿತ್ಸೆಯ ಕಾರಣದಿಂದಾಗಿ 82 ವರ್ಷ ವಯಸ್ಸಿನ ರಾವ್‌ ಅವರಿಗೆ ಆರು ತಿಂಗಳು ಮಧ್ಯಂತರ ಜಾಮೀನನ್ನು ಫೆ.22ರಂದು ಹೈಕೋರ್ಟ್ ನೀಡಿತ್ತು. ಸೆಪ್ಟೆಂಬರ್‌ 5ರಂದು ನ್ಯಾಯಾಂಗ ಬಂಧನಕ್ಕೆ ಮರಳುವಂತೆ ನಿರ್ಧರಿಸಲಾಗಿತ್ತು. ಆದರೆ ಕೋರ್ಟ್‌ ಸಮಯಾವಕಾಶ ಇಲ್ಲದ ಕಾರಣದಿಂದ ಅಕ್ಟೋಬರ್ 28ರವರೆಗೆ ಅವರ ವೈದ್ಯಕೀಯ ಜಾಮೀನು ಅವಧಿ ವಿಸ್ತರಿಸಲಾಗಿದೆ.


ಇದನ್ನೂ ಓದಿ: ಬೆಳದಿಂಗಳು ಕತ್ತಲೆಗೆ ಜಾರಿದಾಗ : ಕ್ರಾಂತಿಕಾರಿ ಕವಿ ವರವರ ರಾವ್ ಜೀವನ ಚಿತ್ರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...