Homeಚಳವಳಿವರವರ ರಾವ್ ಮುಂಬೈ ಬಿಟ್ಟು ಹೋಗದಂತೆ ಹೈಕೋರ್ಟ್ ಷರತ್ತು: ವಿಚಾರಣೆಗೆ ಹಾಜರಾಗದ್ದಕ್ಕೆ ಮಧುಗಿರಿ ಕೋರ್ಟ್ ವಾರೆಂಟ್!

ವರವರ ರಾವ್ ಮುಂಬೈ ಬಿಟ್ಟು ಹೋಗದಂತೆ ಹೈಕೋರ್ಟ್ ಷರತ್ತು: ವಿಚಾರಣೆಗೆ ಹಾಜರಾಗದ್ದಕ್ಕೆ ಮಧುಗಿರಿ ಕೋರ್ಟ್ ವಾರೆಂಟ್!

ಮಧುಗಿರಿ ಕೋರ್ಟ್ ವರವರರಾವ್‌ರವರು ಗೈರು ಹಾಜರಾಗಿರುವ ಕಾರಣ ನೀಡಿ ಅವರ ನಿರೀಕ್ಷಣಾ ಜಾಮೀನು ರದ್ದುಗೊಳಿಸಿ, ಅವರ ಶ್ಯೂರಿಟಿಯನ್ನು ಮುಟ್ಟುಗೋಲು ಹಾಕಿಕೊಂಡು, ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದೆ!

- Advertisement -
- Advertisement -

ಎಲ್ಗರ್‌ ಪರಿಷದ್‌ ಸಮಾವೇಶದಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಲ್ಲಿ ಬಂಧಿತರಾಗಿದ್ದ 82 ವರ್ಷದ ಖ್ಯಾತ ಕವಿ, ಹೋರಾಟಗಾರ ವರವರ ರಾವ್‌ ಅವರು ಸದ್ಯ ಷರತ್ತುಬದ್ಧ ವೈದ್ಯಕೀಯ ಜಾಮೀನಿನ ಮೇಲೆ ಮುಂಬೈನಲ್ಲಿದ್ದಾರೆ. ಅವರು ಮುಂಬೈ ಬಿಟ್ಟು ಹೊರಹೋಗಬಾರದು ಎಂಬುದು ಜಾಮೀನಿನ ಪ್ರಮುಖ ಷರತ್ತುಗಳಲ್ಲೊಂದಾಗಿದೆ. ವರವರ ರಾವ್ ಕುಟುಂಬ ಹಣಕಾಸಿನ ಸಮಸ್ಯೆ ಸೇರಿ ಹಲವು ಕಾರಣಗಳನ್ನು ಮುಂದಿಟ್ಟು ಹೈದರಾಬಾದ್‌ಗೆ ಅವರನ್ನು ಕರೆತರಲು ಮನವಿ ಮಾಡಿದರೂ ಬಾಂಬೆ ಹೈಕೋರ್ಟ್ ಅದಕ್ಕೆ ಅವಕಾಶ ನೀಡಿಲ್ಲ. ಇದೇ ಅಕ್ಟೋಬರ್ 28 ರಂದು ಅವರ ಜಾಮೀನು ಮುಂದುವರಿಕೆಯ ಅರ್ಜಿ ವಿಚಾರಣೆಗೆ ಬರಲಿದೆ.

ಇಂತಹ ಸಂದರ್ಭದಲ್ಲಿ ಅವರ ಮೇಲಿರುವ 2005ರ ಮತ್ತೊಂದು ಪ್ರಕರಣದಲ್ಲಿ ಕರ್ನಾಟಕದ ಮಧುಗಿರಿ ಕೋರ್ಟ್ ಅವರಿಗೆ ಸಮನ್ಸ್ ಕಳುಹಿಸಿದೆ. ವರವರರಾವ್‌ರವರು ವಿಚಾರಣೆಗೆ ಪದೇ ಪದೇ ಗೈರು ಹಾಜರಾಗಿರುವ ಕಾರಣ ನೀಡಿ ಅವರ ನಿರೀಕ್ಷಣಾ ಜಾಮೀನು ರದ್ದುಗೊಳಿಸಿ, ಅವರ ಶ್ಯೂರಿಟಿಯನ್ನು ಮುಟ್ಟುಗೋಲು ಹಾಕಿಕೊಂಡು, ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದೆ!

ಬಾಂಬೆ ಹೈಕೋರ್ಟ್ ವರವರರಾವ್‌ರವರಿಗೆ ಜಾಮೀನು ನೀಡುವಾಗ ಅವರು ಮುಂಬೈ ಬಿಟ್ಟು ಹೊರಹೋಗಬಾರದು ಎಂದು ಷರತ್ತು ವಿಧಿಸಿದೆ. ಆ ಕಾರಣದಿಂದ ಅದೇ ಸಂದರ್ಭದಲ್ಲಿ ಮಧುಗಿರಿ ಕೋರ್ಟ್‌ನಲ್ಲಿ ನಡೆದ ವಿಚಾರಣೆಗೆ ಅವರು ಹಾಜರಾಗಲು ಸಾಧ್ಯವಾಗಿಲ್ಲ. ಹೀಗಿರುವಾಗ ಅವರ ನಿರೀಕ್ಷಣಾ ಜಾಮೀನು ರದ್ದುಗೊಳಿಸಿ, ಅವರ ಶ್ಯೂರಿಟಿಯನ್ನು ಮುಟ್ಟಗೋಲು ಹಾಕಿಕೊಂಡು, ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಲು ಹೇಗೆ ಸಾಧ್ಯ ಎಂಬುದು ಕುಟುಂಬ ಸದಸ್ಯರ ಪ್ರಶ್ನೆಯಾಗಿದೆ.

ಏನಿದು ಪ್ರಕರಣ

2005 ರಲ್ಲಿ ಕರ್ನಾಟಕದ ಚಿಕ್ಕಮಗಳೂರಿನಲ್ಲಿ ನಕ್ಸಲ್ ಮುಖಂಡ ಸಾಕೇತ್ ರಾಜನ್‌ರವರ ಎನ್‌ಕೌಂಟರ್ ಸಂಭವಿಸಿತ್ತು. ಅದನ್ನು ಖಂಡಿಸಿ ಬೆಂಗಳೂರಿನಲ್ಲಿ ಖಂಡನಾ ಸಭೆ ನಡೆಯಿತು. ಅದರಲ್ಲಿ ವರವರರಾವ್ ಮತ್ತು ತೆಲುಗಿನ ಮತ್ತೊಬ್ಬ ಕ್ರಾಂತಿಕಾರಿ ಕವಿ ಗದ್ದರ್‌ರವರು ಭಾಗವಹಿಸಿದ್ದರು. ಆದಾದ ನಂತರ ತುಮಕೂರಿನ ಪಾವಗಡ ತಾಲ್ಲೂಕಿನ ವೆಂಕಟಮ್ಮನಹಳ್ಳಿಯಲ್ಲಿ ನಕ್ಸಲರು ಕೆಎಸ್‌ಆರ್‌ಪಿ ತುಕಡಿ ಮೇಲೆ ದಾಳಿ ಮಾಡಿದ್ದರಿಂದ ಏಳು ಜನ ಪೊಲೀಸರು ಹತ್ಯೆಯಾಗಿದರೆಂಬ ಆರೋಪವಿತ್ತು. ಈ ದಾಳಿಗೆ ವರವರ ರಾವ್ ಮತ್ತು ಗದ್ದರ್‌ರವರು ಬೆಂಗಳೂರಿನಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ್ದೆ ಪ್ರೇರಣೆ ಎಂದು ಆರೋಪಿಸಿ ಅವರ ಮೇಲೆ ಪ್ರಕರಣ ದಾಖಲಾಗಿದೆ. ವಿಚಿತ್ರವೆಂದರೆ ಈ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದ 22 ಜನರು ಪ್ರಕರಣದಿಂದ ಖುಲಾಸೆಯಾಗಿದ್ದರೂ ವರವರರಾವ್ ಮತ್ತು ಗದ್ದರ್ ಮೇಲಿನ ಪ್ರಕರಣದ ವಿಚಾರಣೆ ನಡೆಯುತ್ತಲೇ ಇದೆ!

ವೈದ್ಯಕೀಯ ಚಿಕಿತ್ಸೆಯ ಕಾರಣದಿಂದಾಗಿ 82 ವರ್ಷ ವಯಸ್ಸಿನ ರಾವ್‌ ಅವರಿಗೆ ಆರು ತಿಂಗಳು ಮಧ್ಯಂತರ ಜಾಮೀನನ್ನು ಫೆ.22ರಂದು ಹೈಕೋರ್ಟ್ ನೀಡಿತ್ತು. ಸೆಪ್ಟೆಂಬರ್‌ 5ರಂದು ನ್ಯಾಯಾಂಗ ಬಂಧನಕ್ಕೆ ಮರಳುವಂತೆ ನಿರ್ಧರಿಸಲಾಗಿತ್ತು. ಆದರೆ ಕೋರ್ಟ್‌ ಸಮಯಾವಕಾಶ ಇಲ್ಲದ ಕಾರಣದಿಂದ ಅಕ್ಟೋಬರ್ 28ರವರೆಗೆ ಅವರ ವೈದ್ಯಕೀಯ ಜಾಮೀನು ಅವಧಿ ವಿಸ್ತರಿಸಲಾಗಿದೆ.


ಇದನ್ನೂ ಓದಿ: ಬೆಳದಿಂಗಳು ಕತ್ತಲೆಗೆ ಜಾರಿದಾಗ : ಕ್ರಾಂತಿಕಾರಿ ಕವಿ ವರವರ ರಾವ್ ಜೀವನ ಚಿತ್ರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...